ದೀಪಾವಳಿ ಹಬ್ಬ ಲಂಬಾಣಿ ಸಮುದಾಯಕ್ಕೆ ಹೊಸ ವರ್ಷ


Team Udayavani, Nov 5, 2021, 10:34 AM IST

ದೀಪಾವಳಿ ಹಬ್ಬ ಲಂಬಾಣಿ ಸಮುದಾಯಕ್ಕೆ ಹೊಸ ವರ್ಷ

 ದೇವನಹಳ್ಳಿ: ಲಂಬಾಣಿಗರಿಗೆ ದೀಪಾವಳಿ ಹಬ್ಬವು ವಿಶೇಷ ಹಬ್ಬವಾಗಿದ್ದು, ಹೊಸವರ್ಷದ ಪ್ರಾರಂಭದ ಸಂಕೇತವಾಗಿದೆ. ಜಿಲ್ಲೆಯ ಲಂಬಾಣಿ ತಾಂಡಗಳಲ್ಲಿ ದೀಪಾವಳಿ ಹಬ್ಬವನ್ನು ಶ್ರದ್ಧಾಭಕ್ತಿ ಯಿಂದ ಆಚರಿಸಿದರು. ಜಿಲ್ಲೆಯ ದೊಡ್ಡಬಳ್ಳಾಪುರ ಮತ್ತು ನೆಲಮಂಗಲ ತಾಲೂಕುಗಳಲ್ಲಿ ಲಂಬಾಣಿ ತಾಂಡಗಳು ಇವೆ ದೊಡ್ಡಬಳ್ಳಾಪುರ ತಾಲೂಕಿನಲ್ಲಿ 17, ದೇವನ ಹಳ್ಳಿ ವಿಧಾನಸಭಾ ಕ್ಷೇತ್ರದ ತೂಬಗೆರೆ ಹೋಬಳಿ ಯಲ್ಲಿ 6, ನೆಲಮಂಗಲ ತಾಲೂಕಿನಲ್ಲಿ 4 ತಾಂಡಗಳು ಸೇರಿದಂತೆ ಒಟ್ಟು 27 ತಾಂಡಗಳು ಜಿಲ್ಲೆಯಲ್ಲಿವೆ.

ಗಂಗಾಮಾತೆಗೆ ಪೂಜೆ: ಲಂಬಾಣಿ ತಾಂಡದವರು ಸಾಮೂಹಿಕವಾಗಿ ಮಧ್ಯಾಹ್ನದ ಭೋಜನ ನಂತರ ತಾಂಡಾದಲ್ಲಿ ಹರಟೆ, ಮೋಜು, ಮಸ್ತಿ ನಡೆಯುತ್ತದೆ. ಕತ್ತಲಾಗುತ್ತಿದ್ದಂತೆ ಹೆಣ್ಣು ಮಕ್ಕಳು ಒಂಬತ್ತು ದಿನಗಳಿಂದ ಬೆಳೆಸಿದ್ದ ನವಧಾನ್ಯಗಳ ಪೈರು (ತೀಜ್‌) ಮತ್ತು ಮಣ್ಣಿನ ಹಣತೆ ಹೆಚ್ಚಿ ತಟ್ಟೆಯಲ್ಲಿ ಇಟ್ಟು ದೇವಾಲಯಗಳಿಗೆ ನಂತರ ಎಲ್ಲ ಮನೆಗಳಿಗೆ ತೆರಳಿ ಹೊಸ ವರ್ಷದ ಶುಭಾಶಯ ಕೋರುತ್ತಾರೆ. ಇಡೀ ರಾತ್ರಿ ಈ ಪ್ರಕ್ರಿಯೆ ಮುಗಿದ ನಂತರ ಹೆಣ್ಣು ಮಕ್ಕಳು ಮಾರನೇ ದಿನ ಹೊಸ ಉಡುಗೆಯೊಂದಿಗೆ ಪೈರುಗಳನ್ನು ಅಲಂಕರಿಸಿ ತಲೆಯ ಮೇಲೆ ಹೊತ್ತು ನೀರು ತುಂಬಿರುವ ಕೆರೆ ಕುಂಟೆಗಳ ಬಳಿ ತೆರಳಿ ಭಕ್ಷಿಸು ಬಂದ ಹಣದಲ್ಲಿ ಪ್ರಸಾದ ಸಿದ್ಧಪಡಿಸಿ ಗಂಗಾಮಾತೆಗೆ ಪೂಜೆ ಸಲ್ಲಿಸಿ ವಿಸರ್ಜನೆ ಮಾಡುತ್ತಾರೆ.

ಇದನ್ನೂ ಓದಿ:- ಹೊರಬಂತು ‘ಒಂಬತ್ತನೇ ದಿಕ್ಕು’ ಟ್ರೇಲರ್‌: ಹೊಸ ದಿಕ್ಕಿನತ್ತ ಯೋಗಿ ಚಿತ್ತ

ಧೂಪ ಸಮರ್ಪಣೆ: ದಬಕಾರ್‌ ದೀಪಾವಳಿ ಯಲ್ಲಿ ಅತ್ಯಂತ ಮುಖ್ಯವಾದದು ಹಿರಿಯರಿಗೆ ಧೂಪ ಸಲ್ಲಿಸುವುದು. ಹತ್ತಾರು ತಲೆಮಾರಿನ ಅಜ್ಜಂದಿರ, ಅಜ್ಜಿಯರ, ದೊಡ್ಡಪ್ಪ, ಚಿಕ್ಕಪ್ಪಂದಿರ ಹೆಸ ರಿಗೂ ಪ್ರತ್ಯೇಕ ಸಿಹಿ ಖಾದ್ಯ, ತುಪ್ಪ ಧೂಪವನ್ನು ಅಡುಗೆ ಒಲೆಯ ಕೆಂಡದಲ್ಲಿ ಸಮರ್ಪಣೆ ಮಾಡುತ್ತಾರೆ. ವಂಶವೃಕ್ಷ ಆಧಾರಿತ ಪದ್ಧತಿಗೆ ಸೀಮಿತವಾಗಿದ್ದು, ಮದುವೆಯಾಗಿ ಹೋಗಿರುವ ಹೆಣ್ಣು ಮಕ್ಕಳಿಗೆ ಅವಕಾಶವಿಲ್ಲ.

ನವಧಾನ್ಯಗಳ ಬುಟ್ಟಿಗೆ ಪೂಜೆ: ದಸರಾ ನವ ರಾತ್ರಿಯ ವಿವಿಧ ಪೂಜೆಯ ಸಮಾನತೆ ಎಂಬಂತೆ ಲಂಬಾಣಿಗರಲ್ಲಿ ದೀಪಾವಳಿಗೆ ಒಂಬತ್ತು ದಿನ ಮೊದಲೇ ಹಬ್ಬದ ಸಿದ್ಧತೆ ನಡೆಯತ್ತದೆ. ಪ್ರತಿ ತಾಂಡದ ದೇವಾಲಯಗಳಲ್ಲಿ ಋತಿಮತಿಯಾಗದ ಹೆಣ್ಣು ಮಕ್ಕಳು ಬಿದಿರುಬುಟ್ಟಿ ಅಥವಾ ನೂತನ ಪಾತ್ರೆಗಳಲ್ಲಿ ಮಣ್ಣು, ಕೊಟ್ಟಿಗೆ ಗೊಬ್ಬರ ಮಿಶ್ರಣ ಮಾಡಿ ನವಧಾನ್ಯಗಳನ್ನು ಶುಚಿಭೂತರಾಗಿ ಬಿತ್ತನೆ ಮಾಡಿ ಪೂಜೆ ಸಲ್ಲಿಸುತ್ತಾರೆ.

ಪ್ರತಿ ದಿನ ಬಿತ್ತನೆ ಮಾಡಿದ ನವಧಾನ್ಯಗಳ ಬುಟ್ಟಿಗೆ ಪೂಜೆ ಸಲ್ಲಿಸಿ ದೇವಾಲಯಕ್ಕೆ ಪ್ರಾರ್ಥನೆ ಸಲ್ಲಿಸುತ್ತಾರೆ. ತಮ್ಮ ಲಂಬಾಣಿ ಭಾಷೆಯಲ್ಲೇ ಹಾಡುವುದು ನೃತ್ಯ ಮಾಡುವುದು ಸಂಪ್ರದಾಯ ಎಂದು ಲಕ್ಷ್ಮಮ್ಮ ಹೇಳುತ್ತಾರೆ. ದೇವಾಲಯದ ಆವರಣಗಳಲ್ಲಿ, ತಾಂಡದ ನಾಯಕ್‌(ಯಜಮಾನ), ತೋಟಿ (ಡಾವ್‌), ತಳವಾರ(ಕಾರ್‌ಬಾರಿ)ಮನೆಯಂಗಳ ದಲ್ಲಿ ಹೂವುಗಳನ್ನು ಚೆಲ್ಲುವುದು ಸಂಪ್ರದಾಯ. ನಂತರ ಕುಟುಂಬದ ಹಿರಿಯ ಮೃತರಾಗಿ ರುವವ ರಿಗೆ ಧೂಪ(ದಬಕಾರ್‌)ಸಲ್ಲಿಸುವುದು ಮತ್ತು ಮೃತರ ಸಮಾಧಿಗಳಿಗೆ ಪೂಜೆ ನೈವೇದ್ಯ ನಡೆಸು ವುದು ಸಮುದಾಯದಲ್ಲಿ ನಡೆದು ಬಂದಿರು ವುದು ರೂಢಿ ಎಂದು ಹಿರಿಯರು ಹೇಳುತ್ತಾರೆ.

ಟಾಪ್ ನ್ಯೂಸ್

1-aaaa

Vijaypura:ರಾಹುಲ್ ಗಾಂಧಿ ನಿರ್ಗಸುವಾಗ ವೇದಿಕೆಗೆ ಬಂದ ಸಿದ್ದರಾಮಯ್ಯ

1-sadsadad

CBI ತನಿಖೆ; ಸಂದೇಶಖಾಲಿಯಲ್ಲಿ ಬೀಡುಬಿಟ್ಟ ಕಮಾಂಡೋಗಳು; ಸುಪ್ರೀಂ ಮೆಟ್ಟಿಲೇರಿದ ಸರಕಾರ

Bantwal ಕುಮ್ಡೇಲು: ಹಳೆದ್ವೇಷದ ಹಿನ್ನೆಲೆ ಯುವಕನಿಗೆ ಚೂರಿ ಇರಿತ

Bantwal ಕುಮ್ಡೇಲು: ಹಳೆದ್ವೇಷದ ಹಿನ್ನೆಲೆ ಯುವಕನಿಗೆ ಚೂರಿ ಇರಿತ

Road Mishap; ಪಡುಬಿದ್ರಿ: ವಿದ್ಯುತ್ ಕಂಬಕ್ಕೆ ಕಾರು ಢಿಕ್ಕಿ: ಮಹಿಳೆ ಸಾವು

Road Mishap; ಪಡುಬಿದ್ರಿ: ವಿದ್ಯುತ್ ಕಂಬಕ್ಕೆ ಕಾರು ಢಿಕ್ಕಿ: ಮಹಿಳೆ ಸಾವು

Sringeri Sharadamba Temple; ಪ್ರಧಾನಿ ಮೋದಿ ಹೆಸರಲ್ಲಿ ಸಹಸ್ರನಾಮ ಪೂಜೆ

Sringeri Sharadamba Temple; ಪ್ರಧಾನಿ ಮೋದಿ ಹೆಸರಲ್ಲಿ ಸಹಸ್ರನಾಮ ಪೂಜೆ

Mangaluru: ಸಂಪರ್ಕ ಸೇತುವೆ ಇಲ್ಲದೆ ಬೋಟ್ ಮೂಲಕ ಬಂದು ಮತ ಚಲಾಯಿಸಿದ ಜನ

Mangaluru: ಸಂಪರ್ಕ ಸೇತುವೆ ಇಲ್ಲದೆ ಬೋಟ್ ಮೂಲಕ ಬಂದು ಮತ ಚಲಾಯಿಸಿದ ಜನ

INDIA ಒಕ್ಕೂಟ ಅಧಿಕಾರಕ್ಕೆ ಬಂದರೆ ರೈತರ ಸಾಲಮನ್ನಾ, ನಿರುದ್ಯೋಗ ನಿವಾರಣೆಗೆ ಆದ್ಯತೆ: ರಾಹುಲ್

INDIA ಒಕ್ಕೂಟ ಅಧಿಕಾರಕ್ಕೆ ಬಂದರೆ ರೈತರ ಸಾಲಮನ್ನಾ, ನಿರುದ್ಯೋಗ ನಿವಾರಣೆಗೆ ಆದ್ಯತೆ: ರಾಹುಲ್


ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು

ಬೇಸಿಗೆ ಬಿಸಿಯೂಟ: 32,173 ಮಕ್ಕಳ ನೋಂದಣಿ

ಬೇಸಿಗೆ ಬಿಸಿಯೂಟ: 32,173 ಮಕ್ಕಳ ನೋಂದಣಿ

Devanahalli: ಬೇಸಿಗೆ ತಾಪಮಾನ ಹೆಚ್ಚಳ, ಇರಲಿ ಎಚ್ಚರ

Devanahalli: ಬೇಸಿಗೆ ತಾಪಮಾನ ಹೆಚ್ಚಳ, ಇರಲಿ ಎಚ್ಚರ

Doddaballapur: ಜಾತೀಯತೆಗೆ ಮಣೆ ಹಾಕದ ಕ್ಷೇತ್ರದ ‌ಮತದಾರರು

Doddaballapur: ಜಾತೀಯತೆಗೆ ಮಣೆ ಹಾಕದ ಕ್ಷೇತ್ರದ ‌ಮತದಾರರು

Lok Sabha polls: ಲೋಕಸಭೆ ಚುನಾವಣೆಯಲ್ಲಿ ಇಂದಿರಾಗಾಂಧಿ ನೆನಪು

Lok Sabha polls: ಲೋಕಸಭೆ ಚುನಾವಣೆಯಲ್ಲಿ ಇಂದಿರಾಗಾಂಧಿ ನೆನಪು

10

Electricity problem: ಬೇಸಿಗೆ ಬೆನ್ನಲ್ಲೇ ಕಾಡುತ್ತಿದೆ ವಿದ್ಯುತ್‌ ಸಮಸ್ಯೆ

MUST WATCH

udayavani youtube

ವೈಭವದ ಹಿರಿಯಡ್ಕ ಸಿರಿಜಾತ್ರೆ ಸಂಪನ್ನ

udayavani youtube

ಯಾವೆಲ್ಲಾ ಚರ್ಮದ ಕಾಯಿಲೆಗಳಿವೆ ಹಾಗೂ ಪರಿಹಾರಗಳೇನು?

udayavani youtube

Mangaluru ಹೆಬ್ಬಾವಿನ ದೇಹದಲ್ಲಿ ಬರೋಬ್ಬರಿ 11 ಬುಲೆಟ್‌ ಪತ್ತೆ!

udayavani youtube

ನನ್ನ ಕಥೆ ನಿಮ್ಮ ಜೊತೆ

udayavani youtube

‘ಕಸಿ’ ಕಟ್ಟುವ ಸುಲಭ ವಿಧಾನ

ಹೊಸ ಸೇರ್ಪಡೆ

1-aaaa

Vijaypura:ರಾಹುಲ್ ಗಾಂಧಿ ನಿರ್ಗಸುವಾಗ ವೇದಿಕೆಗೆ ಬಂದ ಸಿದ್ದರಾಮಯ್ಯ

ಕೇಂದ್ರದಿಂದ 16 ಲಕ್ಷ ಕೋಟಿ ಉದ್ಯಮಿ ಸಾಲ ಮನ್ನಾ:ಎಸ್‌.ವರಲಕ್ಷ್ಮೀ

ಕೇಂದ್ರದಿಂದ 16 ಲಕ್ಷ ಕೋಟಿ ಉದ್ಯಮಿ ಸಾಲ ಮನ್ನಾ:ಎಸ್‌.ವರಲಕ್ಷ್ಮೀ

1-sadsadad

CBI ತನಿಖೆ; ಸಂದೇಶಖಾಲಿಯಲ್ಲಿ ಬೀಡುಬಿಟ್ಟ ಕಮಾಂಡೋಗಳು; ಸುಪ್ರೀಂ ಮೆಟ್ಟಿಲೇರಿದ ಸರಕಾರ

Bantwal ಕುಮ್ಡೇಲು: ಹಳೆದ್ವೇಷದ ಹಿನ್ನೆಲೆ ಯುವಕನಿಗೆ ಚೂರಿ ಇರಿತ

Bantwal ಕುಮ್ಡೇಲು: ಹಳೆದ್ವೇಷದ ಹಿನ್ನೆಲೆ ಯುವಕನಿಗೆ ಚೂರಿ ಇರಿತ

ಗದಗ: ತೋಟದಾರ್ಯ ಮಠ ಅನ್ನ-ಅಕ್ಷರ ದಾಸೋಹಕ್ಕೆ ಪ್ರಸಿದ್ಧ

ಗದಗ: ತೋಟದಾರ್ಯ ಮಠ ಅನ್ನ-ಅಕ್ಷರ ದಾಸೋಹಕ್ಕೆ ಪ್ರಸಿದ್ಧ

Thanks for visiting Udayavani

You seem to have an Ad Blocker on.
To continue reading, please turn it off or whitelist Udayavani.