ಮತದಾನದಿಂದ ವಂಚಿತರಾಗಬೇಡಿ


Team Udayavani, Apr 10, 2019, 3:00 AM IST

matadanadinda

ಆನೇಕಲ್‌: ಮತದಾನ ಪ್ರಜಾಪ್ರಭುತ್ವ ವ್ಯವಸ್ಥೆಯಲ್ಲಿ ಮಹತ್ವಪೂರ್ಣ ಅವಕಾಶವಾಗಿದ್ದು, ಪ್ರತಿಯೊಬ್ಬರೂ ಕಡ್ಡಾಯವಾಗಿ ಮತದಾನ ಮಾಡಬೇಕು. ಯಾರು ಕೂಡ ಮತದಾನದಿಂದ ವಂಚಿತರಾಗಬಾರದೆಂದು ಬೆಂಗಳೂರು ನಗರ ಜಿಪಂ ಉಪಕಾರ್ಯದರ್ಶಿ ಡಾ.ಸಿ.ಸಿದ್ಧರಾಮಯ್ಯ ಹೇಳಿದರು.

ತಾಲೂಕಿನ ಹೆಬ್ಬಗೋಡಿಯ ಎಸ್‌ಎಫ್ಎಸ್‌ ಕಾಲೇಜಿನಲ್ಲಿ ಪದವಿ ವಿದ್ಯಾರ್ಥಿಗಳಿಗೆ ತಾಲೂಕು ಸ್ವೀಪ್‌ ಸಮಿತಿ ಹಾಗೂ ಪೊಲೀಸ್‌ ಇಲಾಖೆ ಹಮ್ಮಿಕೊಂಡಿದ್ದ ಮತದಾನ ಜಾಗೃತಿ ಅಭಿಯಾನದಲ್ಲಿ ಇವಿಎಂ ಮತ್ತು ವಿವಿ ಪ್ಯಾಟ್‌ ಪ್ರಾತ್ಯಕ್ಷಿಕೆ ಹಾಗೂ ಅಣಕು ಮತದಾನಕ್ಕೆ ಚಾಲನೆ ನೀಡಿ ಮಾತನಾಡಿದರು.

ಬಲಿಷ್ಠ ಭಾರತ ನಿರ್ಮಿಸಿ: ಲೋಕಸಭಾ ಚುನಾವಣೆಗೆ ಸಂಬಂಧಿಸಿ ಸಾರ್ವಜನಿಕರು, ವಿದ್ಯಾರ್ಥಿಗಳು, ಕಾರ್ಮಿಕರಲ್ಲಿ ಮತದಾನದ ಬಗ್ಗೆ ಅರಿವು ಮೂಡಿಸುವ ನಿಟ್ಟಿನಲ್ಲಿ ಕಾರ್ಯಕ್ರಮ ಆಯೋಜಿಸಲಾಗಿದೆ.

ಚುನಾವಣೆಯಲ್ಲಿ ವಿದ್ಯಾರ್ಥಿಗಳು ಹಾಗೂ ಅವರ ಕುಟುಂಬದವರು ತಪ್ಪದೇ ಮತದಾನ ಮಾಡುವ ಮೂಲಕ ಯೋಗ್ಯ ವ್ಯಕ್ತಿಯನ್ನು ಆಯ್ಕೆ ಮಾಡಿಕೊಳ್ಳಬೇಕು. ರಜೆ ಇದೆ ಎಂದು ಪ್ರವಾಸ ಕೈಗೊಳ್ಳುವುದನ್ನು ಬಿಟ್ಟು ನಿಮ್ಮ ಜವಾಬ್ದಾರಿಯನ್ನು ಅರಿತು ಮತದಾನ ಮಾಡಿ, ಬಲಿಷ್ಠ ಭಾರತ ನಿರ್ಮಾಣಕ್ಕೆ ಆದ್ಯತೆ ನೀಡಬೇಕೆಂದು ಹೇಳಿದರು.

ಚುನಾವಣೆ ಹಬ್ಬದಂತೆ ಆಚರಿಸಿ: ಬೆಂಗಳೂರು ಗ್ರಾಮಾಂತರ ಜಿಲ್ಲಾ ಪೊಲೀಸ್‌ ವರಿಷ್ಠಾಧಿಕಾರಿ ರಾಮ್‌ ನಿವಾಸ್‌ ಸೆಪಟ್‌ ಮಾತನಾಡಿ, ಪ್ರಜಾಪ್ರಭುತ್ವ ವ್ಯವಸ್ಥೆಯಲ್ಲಿ ಮತದಾನ ಪ್ರಮುಖ ಅಂಶವಾಗಿದ್ದು, ನಿಮ್ಮ ನಾಯಕನ ಆಯ್ಕೆ ನಿಮ್ಮ ಕೈಯಲ್ಲಿದೆ.

ಪ್ರತಿಯೊಬ್ಬ ವಿದ್ಯಾರ್ಥಿ ಮತದಾರರಿಗೆ ಮತದಾನದ ಮಹತ್ವವನ್ನು ತಿಳಿಸಿಕೊಡುವ ಮೂಲಕ ಚುನಾವಣೆಯ ದಿನ ಮತ ಚಲಾಯಿಸಬೇಕು. ಪ್ರಪಂಚದಲ್ಲೇ ನಮ್ಮ ಚುನಾವಣೆ ವ್ಯವಸ್ಥೆ ಅತ್ಯುತ್ತಮವಾಗಿದೆ. ಚುನಾವಣೆಯನ್ನು ಪ್ರಜಾಪ್ರಭುತ್ವದ ಹಬ್ಬವನ್ನಾಗಿ ಆಚರಿಸಬೇಕೆಂದು ಹೇಳಿದರು.

ಇದೇ ವೇಳೆ ಲೋಕಸಭಾ ಚುನಾವಣೆಯಲ್ಲಿ ಕಡ್ಡಾಯವಾಗಿ ಮತದಾನ ಮಾಡುತ್ತೇನೆಂದು ಸಹಿ ಸಂಗ್ರಹ ಅಭಿಯಾನ ನಡೆಯಿತು. ಅಧಿಕಾರಿಗಳು, ವಿದ್ಯಾರ್ಥಿಗಳು, ಸಾರ್ವಜನಿಕರು, ಮಾಧ್ಯಮ ಪ್ರತಿನಿಧಿಗಳು ಭಾಗವಹಿಸಿದ್ದರು.

ಸಮಾರಂಭದಲ್ಲಿ ಆನೇಕಲ್‌ ಉಪ ವಿಭಾಗದ ಡಿವೈಎಸ್‌ಪಿ ನಂಜುಂಡೇಗೌಡ, ತಾಲೂಕು ಪಂಚಾಯಿತಿ ಕಾರ್ಯನಿರ್ವಾಹಕ ಅಧಿಕಾರಿ ಟಿ.ಕೆ.ರಮೇಶ್‌, ಹೆಬ್ಬಗೋಡಿ ಇನ್ಸ್‌ಪೆಕ್ಟರ್‌ ಜಗದೀಶ್‌, ಸಿಐಇಡಿಎಸ್‌, ಗಮನ(ಹ್ಯೂಮನ್ಸ್‌ ಕಲೆಕ್ಟಿವ್‌)ಪ್ರತಿನಿಧಿ ಮಮತಾ, ತಾಲೂಕು ಸಂಯೋಜಕ ಕೆ.ಚಂದ್ರಶೇಖರ್‌, ನಾಗರಾಜು, ಕಾಲೇಜು ಪ್ರಾಂಶುಪಾಲರು, ಎಸ್‌ಸಿಸಿ ವಿದ್ಯಾರ್ಥಿಗಳು, ವಿವಿ ಪ್ಯಾಟ್‌ ಯಂತ್ರಗಳ ಮುಖ್ಯ ತರಬೇತುದಾರರು ಮುಂತಾದವರು ಹಾಜರಿದ್ದರು.

ಟಾಪ್ ನ್ಯೂಸ್

Rahul Gandhi 3

BJP ಮಾಧ್ಯಮಗಳಿಂದ ನನಗೆ ನಿತ್ಯ ನಿಂದನೆ: ರಾಹುಲ್‌ ಗಾಂಧಿ ಆರೋಪ

1-qewqeqwe

TIME; ವಿಶ್ವದ 100 ಪ್ರಭಾವಿಗಳ ಪೈಕಿ ಆಲಿಯಾ, ಪ್ರಿಯಂವದ

1-aewr

DRDO; ನಿರ್ಭಯ್‌ ಪರೀಕ್ಷಾರ್ಥ ಉಡಾವಣೆ ಯಶಸ್ವಿ

1eewqe

Iran ವಶದಲ್ಲಿದ್ದ ಹಡಗಿನ ಮಹಿಳಾ ಸಿಬಂದಿ ವಾಪಸ್‌

vachanananda

Panchamasali ಎಂಬ ಕಾರಣಕ್ಕೆ ಯತ್ನಾಳ್‌ಗೆ ಸಿಎಂ ಅವಕಾಶ ನಿರಾಕರಣೆ: ವಚನಾನಂದ ಶ್ರೀ

police crime

Chitradurga: ಅನ್ಯಕೋಮಿನ ಯುವತಿಗೆ ಡ್ರಾಪ್ ನೀಡಿದ್ದಕ್ಕೆ ಹಲ್ಲೆ

1-wewq-eqwe

IPL; ರೋಚಕ ಪಂದ್ಯದಲ್ಲಿ ಪಂಜಾಬ್‌ ಎದುರು 9 ರನ್ ಜಯ ಸಾಧಿಸಿದ ಮುಂಬೈ


ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು

ಬೇಸಿಗೆ ಬಿಸಿಯೂಟ: 32,173 ಮಕ್ಕಳ ನೋಂದಣಿ

ಬೇಸಿಗೆ ಬಿಸಿಯೂಟ: 32,173 ಮಕ್ಕಳ ನೋಂದಣಿ

Devanahalli: ಬೇಸಿಗೆ ತಾಪಮಾನ ಹೆಚ್ಚಳ, ಇರಲಿ ಎಚ್ಚರ

Devanahalli: ಬೇಸಿಗೆ ತಾಪಮಾನ ಹೆಚ್ಚಳ, ಇರಲಿ ಎಚ್ಚರ

Doddaballapur: ಜಾತೀಯತೆಗೆ ಮಣೆ ಹಾಕದ ಕ್ಷೇತ್ರದ ‌ಮತದಾರರು

Doddaballapur: ಜಾತೀಯತೆಗೆ ಮಣೆ ಹಾಕದ ಕ್ಷೇತ್ರದ ‌ಮತದಾರರು

Lok Sabha polls: ಲೋಕಸಭೆ ಚುನಾವಣೆಯಲ್ಲಿ ಇಂದಿರಾಗಾಂಧಿ ನೆನಪು

Lok Sabha polls: ಲೋಕಸಭೆ ಚುನಾವಣೆಯಲ್ಲಿ ಇಂದಿರಾಗಾಂಧಿ ನೆನಪು

10

Electricity problem: ಬೇಸಿಗೆ ಬೆನ್ನಲ್ಲೇ ಕಾಡುತ್ತಿದೆ ವಿದ್ಯುತ್‌ ಸಮಸ್ಯೆ

MUST WATCH

udayavani youtube

‘ಕಸಿ’ ಕಟ್ಟುವ ಸುಲಭ ವಿಧಾನ

udayavani youtube

ಬೇಸಿಗೆಯಲ್ಲಿ ನಮ್ಮನ್ನು ಕಾಡುವ Heat Illnessಏನಿದು ಸಮಸ್ಯೆ ? ಪರಿಹಾರವೇನು ?

udayavani youtube

ದ್ವಾರಕೀಶ್ ನಿಧನಕ್ಕೆ ನಟ ಶಿವರಾಜ್ ಕುಮಾರ್ ಸಂತಾಪ

udayavani youtube

ದೇವೇಗೌಡರಿದ್ದ ವೇದಿಕೆಗೆ ನುಗ್ಗಿದ ಕಾಂಗ್ರೆಸ್‌ ಕಾರ್ಯಕರ್ತೆಯರು

udayavani youtube

ಮಂಗಳೂರಿನಲ್ಲಿ ಪ್ರಧಾನಿ ಶ್ರೀ Narendra Modi ಅವರ ಬೃಹತ್‌ ರೋಡ್‌ ಶೋ

ಹೊಸ ಸೇರ್ಪಡೆ

30

CET Exam: ಮೊದಲ ದಿನ ಸುಸೂತ್ರವಾಗಿ ನಡೆದ ಸಿಇಟಿ

1-wqeqwe

Maharashtra; ರತ್ನಾಗಿರಿ- ಸಿಂಧುದುರ್ಗದಲ್ಲಿ ರಾಣೆ vs ಠಾಕ್ರೆ ಕಾದಾಟ

1-HM

Mathura ನನ್ನನ್ನು ಗೋಪಿಕೆಯೆಂದು ಭಾವಿಸುವೆ: ಬಿಜೆಪಿ ಅಭ್ಯರ್ಥಿ ಹೇಮಾ

Rahul Gandhi 3

BJP ಮಾಧ್ಯಮಗಳಿಂದ ನನಗೆ ನಿತ್ಯ ನಿಂದನೆ: ರಾಹುಲ್‌ ಗಾಂಧಿ ಆರೋಪ

1-qewqeqwe

TIME; ವಿಶ್ವದ 100 ಪ್ರಭಾವಿಗಳ ಪೈಕಿ ಆಲಿಯಾ, ಪ್ರಿಯಂವದ

Thanks for visiting Udayavani

You seem to have an Ad Blocker on.
To continue reading, please turn it off or whitelist Udayavani.