ದಾಖಲೆ ಸಂಗ್ರಹ: ಬೆಸ್ಕಾಂ-ರೈತರ ಸಂಘರ್ಷ

ಸಹಾಯಧನ ನೇರ ರೈತರಖಾತೆಗೆ ಎನ್ನುವ ಅಧಿಕಾರಿಗಳು , ಪಂಪ್‌ಸೆಟ್‌ಗೆ ಮೀಟರ್‌ ಅಳವಡಿಸುತ್ತಾರೆ ಎನ್ನುವ ರೈತರು

Team Udayavani, Sep 15, 2020, 12:04 PM IST

ದಾಖಲೆ ಸಂಗ್ರಹ: ಬೆಸ್ಕಾಂ-ರೈತರ ಸಂಘರ್ಷ

ಸಾಂದರ್ಭಿಕ ಚಿತ್ರ

ದೇವನಹಳ್ಳಿ: ಬೆಸ್ಕಾಂ ಇಲಾಖೆ ಕೊಳವೆ ಬಾವಿ ಹೊಂದಿರುವ ರೈತರಿಂದ ದಾಖಲೆ ಕಲೆ ಹಾಕುವ ಪ್ರಕ್ರಿಯೆಗೆ ಮುಂದಾಗಿರುವ ಬೆನ್ನಲ್ಲೇ ಇಲಾಖೆ ಕ್ರಮಕ್ಕೆ ರೈತರಿಂದ ತೀವ್ರ ವಿರೋಧ ವ್ಯಕ್ತವಾಗಿದ್ದು ಸಂಘರ್ಷಕ್ಕೆಕಾರಣವಾಗಿದೆ.

ಮುಂದಿನ ದಿನಗಳಲ್ಲಿ ಬೆಸ್ಕಾಂ ಇಲಾಖೆಯಿಂದ ಹೊಸ ಹೊಸಯೋಜನೆಗಳುಪ್ರಾರಂಭವಾಗುವ ದೃಷ್ಟಿಕೋನದಡಿ ಗ್ರಾಮೀಣ ಭಾಗದ ರೈತರಿಂದ ವಿವಿಧ ದಾಖಲೆ ತೆಗೆದುಕೊಳ್ಳಲು ಬೆಸ್ಕಾಂ ಇಲಾಖೆ ನಿರ್ಧರಿಸಿದೆ ಎಂದು ಅಧಿಕಾರಿಗಳು ತಿಳಿಸಿದ್ದಾರೆ. ಆದರೆ, ರೈತರ ಪಂಪ್‌ಸೆಟ್‌ಗಳಿಗೆ ಬೆಸ್ಕಾಂ ಇಲಾಖೆ ಮೀಟರ್‌ ಅಳವಡಿಸಲು ಕಾರ್ಯಕ್ರಮ ರೂಪಿಸಿಕೊಂಡಿದೆ.ಈಗಾಗಲೇಹೊಸಕೋಟೆ ತಾಲೂಕಿನಲ್ಲಿ ಪಂಪ್‌ಸೆಟ್‌ಗಳಿಗೆ ಮೀಟರ್‌ ಅಳವಡಿಸಿರುವುದರಿಂದ ರೈತರು ಗಲಾಟೆ ಮಾಡಿ, ಮೀಟರ್‌ಗಳನ್ನು ತೆಗೆಸಿದ್ದಾರೆ.

ದೇವನಹಳ್ಳಿ ತಾಲೂಕಿನಲ್ಲಿಯೂ ರೈತರಿಂದ ದಾಖಲೆಗಳನ್ನು ಬೆಸ್ಕಾಂ ಇಲಾಖೆ ಸಂಗ್ರಹಿಸುತ್ತಿದೆ. ಯಾವುದೇ ಕಾರಣಕ್ಕೂ ಪಂಪ್‌ಸೆಟ್‌ಗಳಿಗೆ ಮೀಟರ್‌ ಅಳವಡಿಸಬಾರದು, ರೈತರು ಯಾವುದೇ ಕಾರಣಕ್ಕೂಯಾವುದೇದಾಖಲೆಗಳನ್ನುಬೆಸ್ಕಾಂ ಇಲಾಖೆಗೆ ನೀಡಬೇಡಿ ಎಂದು ತಾಲೂಕು ರೈತ ಸಂಘದ ಪದಾಧಿಕಾರಿಗಳು ತಿಳಿಸಿದ್ದಾರೆ.

ಕೊಳವೆ ಬಾವಿ ಪಂಪ್‌ಸೆಟ್‌ಗಳಿಗೆ ರಾಜ್ಯ ಸರ್ಕಾರ ಸಹಾಯಧನ ನೀಡುತ್ತಿದ್ದು, ಇನ್ನು ಮುಂದೆ ಕೇಂದ್ರ ಸರ್ಕಾರ ಪಂಪ್‌ಸೆಟ್‌ಗಳಿಗೆ ಸಹಾಯಧನ ನೀಡಲು ಮುಂದಾಗುತ್ತಿದೆ. ಪಂಪ್‌ಸೆಟ್‌, ಭಾಗ್ಯಲಕ್ಷ್ಮೀ, ಕುಟೀರ ಯೋಜನೆಯಡಿರೈತರಿಂದಆಧಾರ್‌ಕಾರ್ಡ್‌,ಮೊಬೈಲ್‌ ಸಂಖ್ಯೆ, ಬ್ಯಾಂಕ್‌ ಪುಸ್ತಕ ಮತ್ತು ಆದಾಯ ಪ್ರಮಾಣ ಪತ್ರಗಳ ದಾಖಲೆ ಸಂಗ್ರಹಿಸಲಾಗುತ್ತಿದೆ ಎಂದು ಬೆಸ್ಕಾಂ ಅಧಿಕಾರಿಗಳು ಹೇಳುತ್ತಿದ್ದಾರೆ.

ಈ ಹಿಂದೆ ಕೆಲವು ಯೋಜನೆಗಳಲ್ಲಿ ಬ್ಯಾಂಕು ಖಾತೆಗಳಿಗೆ ಹೋಗುವಾಗ ದುರ್ಬಳಕೆಯಾಗುತ್ತಿರುವ ದೂರು ಕೇಳಿ ಬರುತ್ತಿದ್ದವು. ಇದೀಗ ರೈತರ ಖಾತೆಗಳಿಗೆ ನೇರವಾಗಿ ಸಹಾಯಧನ ಸಂದಾಯವಾಗುವಂತೆಹಾಗೂ ಸರ್ಕಾರ ಮುಂದಿನ ದಿನಗಳಲ್ಲಿ ಹೊಸ ಹೊಸ ಯೋಜನೆ ರೂಪಿಸುವ ಚಿಂತನೆಯಲ್ಲಿ ಇರುವುದರಿಂದ ಅರ್ಹರಿಗೆ ಯೋಜನೆ ತಲುಪಿಸುವ ಉದ್ದೇಶದಿಂದ ದಾಖಲಾತಿ ಸಂಗ್ರಹಿಸಲಾಗುತ್ತಿದೆ. ಬ್ಯಾಂಕುಗಳಿಗೆ ಆಧಾರ್‌ಲಿಂಕ್‌ ಮಾಡುವುದರ ಮೂಲಕ ದುರ್ಬಳಕೆ ಆಗುವುದಕ್ಕೆ ಅವಕಾಶವಿಲ್ಲದೆ ಕಡಿವಾಣ ಹಾಕಲು ಯೋಜನೆ ರೂಪಿಸಿದೆ ಎಂದು ಅಧಿಕಾರಿಗಳು ಮಾಹಿತಿ ನೀಡಿದ್ದಾರೆ. ಆದರೆ, ಇದೊಂದು ಗ್ರಾಮೀಣ ಭಾಗದ ರೈತರಿಗೆ ಎಷ್ಟರ ಮಟ್ಟಿಗೆ ಅನುಕೂಲವಾಗಲಿದೆ ಎಂಬುವುದುಕಾದು ನೋಡಬೇಕಿದೆ.

ರಾಜ್ಯಾದ್ಯಂತ 28 ಲಕ್ಷಕೃಷಿ ಪಂಪ್‌ಸೆಟ್‌ಗಳನ್ನು ನಾಶ ಮಾಡುವ ವಿದ್ಯುತ್‌ಕಾಯ್ದೆಗಳನ್ನು ತಿದ್ದುಪಡಿ ಮಾಡಲು ರಾಜ್ಯ ಸರ್ಕಾರ ಮುಂದಾಗಿದೆ.ಕೂಡಲೇ ಇಂತಹ ತಿದ್ದುಪಡಿ ಕಾಯಿದೆಕೈ ಬಿಡಬೇಕು. ಈಗಾಗಲೇಕೊರೊನಾ ಹಿನ್ನೆಲೆಯಲ್ಲಿ ರೈತರು ಸಂಕಷ್ಟದಲ್ಲಿದ್ದಾರೆ. ಭೂ ಸುಧಾರಣೆಕಾಯಿದೆ, ಎಪಿಎಂಸಿ ಕಾಯಿದೆ,ಕಾರ್ಮಿಕರಿಗೆ ಮಾರಕವಾಗುವಕೈಗಾರಿಕಾಕಾನೂನು ಗಳಿಗೆ ಸರ್ಕಾರಗಳು ತಿದ್ದುಪಡಿ ತಂದು ಸುಗ್ರೀವಾಜ್ಞೆ ಹೊರಡಿವೆ. ಇದುಖಂಡನೀಯ. ಬಿದಲೂರು ರಮೇಶ್‌, ತಾಲೂಕು ರೈತ ಸಂಘದ ಪ್ರಧಾನ ಕಾರ್ಯದರ್ಶಿ

ಈಗಾಗಲೇ ಸರ್ಕಾರ ಉಚಿತ ವಿದ್ಯುತ್‌ನಲ್ಲಿ 7 ತಾಸು ವಿದ್ಯುತ್‌ ಸಮರ್ಪಕವಾಗಿ ನೀಡುತ್ತಿದೆ. ಬೆಸ್ಕಾಂ ಇಲಾಖೆ ಹೊಸಕಾರ್ಯಕ್ರಮಕ್ಕೆ ಮುನ್ನುಡಿ ಬರೆಯುತ್ತಿರುವುದರಿಂದ  ಹೆಚ್ಚು ಅನುಕೂಲವಾಗಬೇಕು. ಕಾರ್ಯಕ್ರಮಗಳ ಸಾಧಕ-ಬಾಧಕಗಳ ಬಗ್ಗೆ ಸರಿಯಾದ ಮಾಹಿತಿ ದೊರೆಯುವಂತೆ ಆಗಬೇಕು. ದ್ವಂದ್ವ ನಿರ್ಧಾರ ಕೈಗೊಳ್ಳಬಾರದು. ನಾರಾಯಣಸ್ವಾಮಿ, ರೈತ ಮುಖಂಡ

ಕೊಳವೆ ಬಾವಿಗಳಕುರಿತು ರೈತರಿಂದಆಧಾರ್‌ಕಾರ್ಡು, ಆದಾಯ ಪ್ರಮಾಣ ಪತ್ರ, ಬ್ಯಾಂಕ್‌ ಪಾಸ್‌ಬುಕ್‌ ಇತರೆ ದಾಖಲೆ ಸಂಗ್ರಹಿಸಲಾಗುತ್ತಿದೆ. ಪಂಪ್‌ಸೆಟ್‌ಗೆ ರಾಜ್ಯ ಸರ್ಕಾರ ನೀಡುತ್ತಿದ್ದ ಸಹಾಯಧನವನ್ನು ಈಗ,ಕೇಂದ್ರ ಸರ್ಕಾರ ನೀಡುತ್ತಿದೆ. ಹೊಸಕಾರ್ಯಕ್ರಮಗಳ ಮೂಲಕ ರೈತರಖಾತೆ ಗಳಿಗೆ ನೇರವಾಗಿ ಸಹಾಯಧನ ಸಂದಾಯವಾಗಲಿದೆ. ಬಸವಣ್ಣ, ಬೆಸ್ಕಾಂ ಕಾರ್ಯಪಾಲಕ ಅಭಿಯಂತರ, ಹೊಸಕೋಟೆ ವಿಭಾಗ

 

ಎಸ್‌.ಮಹೇಶ್‌

ಟಾಪ್ ನ್ಯೂಸ್

Award: ಅಮಿತಾಬ್ ಬಚ್ಚನ್, ಎಆರ್ ರೆಹಮಾನ್ ಗೆ ದೀನನಾಥ್ ಮಂಗೇಶ್ಕರ್ ಪ್ರಶಸ್ತಿ ಗೌರವ

Award: ಅಮಿತಾಬ್ ಬಚ್ಚನ್, ಎಆರ್ ರೆಹಮಾನ್ ಗೆ ದೀನನಾಥ್ ಮಂಗೇಶ್ಕರ್ ಪ್ರಶಸ್ತಿ ಗೌರವ

5-harikrishna

LS Polls: ಹಿಂದೂ ಸಂಸ್ಕೃತಿ, ಪರಂಪರೆ ಉಳಿಸಲು ಬಿಜೆಪಿಯೇ ಶಕ್ತಿ: ಹರಿಕೃಷ್ಣ ಬಂಟ್ವಾಳ

3-dinesh

33 ವರ್ಷಗಳಲ್ಲಿ ದ.ಕ. ಜಿಲ್ಲೆಗೆ ಬಿಜೆಪಿ ಸಂಸದರ ಕೊಡುಗೆ ಏನು? ಸಚಿವ ದಿನೇಶ್‌ ಗುಂಡೂರಾವ್‌

Patna: ಪಾಟ್ನಾದಲ್ಲಿ ನಿತೀಶ್ ಕುಮಾರ್ ಪಕ್ಷದ ನಾಯಕನ ಗುಂಡಿಕ್ಕಿ ಹತ್ಯೆ… ಆರೋಪಿಗಳು ಪರಾರಿ

Patna: ಪಾಟ್ನಾದಲ್ಲಿ ನಿತೀಶ್ ಕುಮಾರ್ ಪಕ್ಷದ ನಾಯಕನ ಗುಂಡಿಕ್ಕಿ ಹತ್ಯೆ… ಆರೋಪಿಗಳು ಪರಾರಿ

Ramakrishna Mission: ರಾಮಕೃಷ್ಣ ಮಠ, ಮಿಷನ್‌ನ ಅಧ್ಯಕ್ಷರಾಗಿ ಕನ್ನಡಿಗ ಸ್ವಾಮೀಜಿ ಆಯ್ಕೆ

Ramakrishna Mission: ರಾಮಕೃಷ್ಣ ಮಠ, ಮಿಷನ್‌ನ ಅಧ್ಯಕ್ಷರಾಗಿ ಕನ್ನಡಿಗ ಸ್ವಾಮೀಜಿ ಆಯ್ಕೆ

Sam Pitroda: ಪಿತ್ರೋಡಾ ಹೇಳಿಕೆ, ನಮ್ಮ ಅಭಿಪ್ರಾಯ ಅಲ್ಲ: ಕಾಂಗ್ರೆಸ್‌

Sam Pitroda: ಪಿತ್ರೋಡಾ ಹೇಳಿಕೆ, ನಮ್ಮ ಅಭಿಪ್ರಾಯ ಅಲ್ಲ: ಕಾಂಗ್ರೆಸ್‌

Lok Sabha Election: ಸೀನಿಯರ್‌ ಖೂಬಾಗೆ ಜ್ಯೂನಿಯರ್‌ ಖಂಡ್ರೆ ಸವಾಲು

Lok Sabha Election: ಸೀನಿಯರ್‌ ಖೂಬಾಗೆ ಜ್ಯೂನಿಯರ್‌ ಖಂಡ್ರೆ ಸವಾಲು


ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು

ಬೇಸಿಗೆ ಬಿಸಿಯೂಟ: 32,173 ಮಕ್ಕಳ ನೋಂದಣಿ

ಬೇಸಿಗೆ ಬಿಸಿಯೂಟ: 32,173 ಮಕ್ಕಳ ನೋಂದಣಿ

Devanahalli: ಬೇಸಿಗೆ ತಾಪಮಾನ ಹೆಚ್ಚಳ, ಇರಲಿ ಎಚ್ಚರ

Devanahalli: ಬೇಸಿಗೆ ತಾಪಮಾನ ಹೆಚ್ಚಳ, ಇರಲಿ ಎಚ್ಚರ

Doddaballapur: ಜಾತೀಯತೆಗೆ ಮಣೆ ಹಾಕದ ಕ್ಷೇತ್ರದ ‌ಮತದಾರರು

Doddaballapur: ಜಾತೀಯತೆಗೆ ಮಣೆ ಹಾಕದ ಕ್ಷೇತ್ರದ ‌ಮತದಾರರು

Lok Sabha polls: ಲೋಕಸಭೆ ಚುನಾವಣೆಯಲ್ಲಿ ಇಂದಿರಾಗಾಂಧಿ ನೆನಪು

Lok Sabha polls: ಲೋಕಸಭೆ ಚುನಾವಣೆಯಲ್ಲಿ ಇಂದಿರಾಗಾಂಧಿ ನೆನಪು

10

Electricity problem: ಬೇಸಿಗೆ ಬೆನ್ನಲ್ಲೇ ಕಾಡುತ್ತಿದೆ ವಿದ್ಯುತ್‌ ಸಮಸ್ಯೆ

MUST WATCH

udayavani youtube

ವೈಭವದ ಹಿರಿಯಡ್ಕ ಸಿರಿಜಾತ್ರೆ ಸಂಪನ್ನ

udayavani youtube

ಯಾವೆಲ್ಲಾ ಚರ್ಮದ ಕಾಯಿಲೆಗಳಿವೆ ಹಾಗೂ ಪರಿಹಾರಗಳೇನು?

udayavani youtube

Mangaluru ಹೆಬ್ಬಾವಿನ ದೇಹದಲ್ಲಿ ಬರೋಬ್ಬರಿ 11 ಬುಲೆಟ್‌ ಪತ್ತೆ!

udayavani youtube

ನನ್ನ ಕಥೆ ನಿಮ್ಮ ಜೊತೆ

udayavani youtube

‘ಕಸಿ’ ಕಟ್ಟುವ ಸುಲಭ ವಿಧಾನ

ಹೊಸ ಸೇರ್ಪಡೆ

4-annamalai

Modi ಕಲ್ಪನೆಯ ವಿಕಸಿತ ಭಾರತಕ್ಕಾಗಿ ಕೋಟ ಅವರನ್ನು ಗೆಲ್ಲಿಸೋಣ: ಅಣ್ಣಾ ಮಲೈ

Award: ಅಮಿತಾಬ್ ಬಚ್ಚನ್, ಎಆರ್ ರೆಹಮಾನ್ ಗೆ ದೀನನಾಥ್ ಮಂಗೇಶ್ಕರ್ ಪ್ರಶಸ್ತಿ ಗೌರವ

Award: ಅಮಿತಾಬ್ ಬಚ್ಚನ್, ಎಆರ್ ರೆಹಮಾನ್ ಗೆ ದೀನನಾಥ್ ಮಂಗೇಶ್ಕರ್ ಪ್ರಶಸ್ತಿ ಗೌರವ

5-harikrishna

LS Polls: ಹಿಂದೂ ಸಂಸ್ಕೃತಿ, ಪರಂಪರೆ ಉಳಿಸಲು ಬಿಜೆಪಿಯೇ ಶಕ್ತಿ: ಹರಿಕೃಷ್ಣ ಬಂಟ್ವಾಳ

3-dinesh

33 ವರ್ಷಗಳಲ್ಲಿ ದ.ಕ. ಜಿಲ್ಲೆಗೆ ಬಿಜೆಪಿ ಸಂಸದರ ಕೊಡುಗೆ ಏನು? ಸಚಿವ ದಿನೇಶ್‌ ಗುಂಡೂರಾವ್‌

Patna: ಪಾಟ್ನಾದಲ್ಲಿ ನಿತೀಶ್ ಕುಮಾರ್ ಪಕ್ಷದ ನಾಯಕನ ಗುಂಡಿಕ್ಕಿ ಹತ್ಯೆ… ಆರೋಪಿಗಳು ಪರಾರಿ

Patna: ಪಾಟ್ನಾದಲ್ಲಿ ನಿತೀಶ್ ಕುಮಾರ್ ಪಕ್ಷದ ನಾಯಕನ ಗುಂಡಿಕ್ಕಿ ಹತ್ಯೆ… ಆರೋಪಿಗಳು ಪರಾರಿ

Thanks for visiting Udayavani

You seem to have an Ad Blocker on.
To continue reading, please turn it off or whitelist Udayavani.