ದೊಡ್ಡಬಳ್ಳಾಪುರ ವಿವಿಧೆಡೆ ಕಾಮದಹನ


Team Udayavani, Mar 11, 2020, 5:54 PM IST

11-March-24

ದೊಡ್ಡಬಳ್ಳಾಪುರ :ಹೋಳಿ ಹುಣ್ಣಿಮೆಯ ಅಂಗವಾಗಿ ನಗರದ ವಿವಿಧೆಡೆಗಳಲ್ಲಿ ಸೋಮವಾರ ರಾತ್ರಿ ಕಾಮ ದಹನ ಆಚರಿಸಲಾಯಿತು. ಕಾಮನ ಮೂರ್ತಿಯ ಚಿತ್ರಪಟವನ್ನು ಪೂಜಿಸಿ ಮೆರವಣಿಗೆ ನಡೆಸಿದ ಪೇಟೆಯ ನಾಗರಿಕರು, ನಂತರ ಸಂಗ್ರಹಿಸಿ ತಂದ ಸೌದೆ ಉರುವಲುಗಳನ್ನು ದಹಿಸಿ ಕಾಮನ ಹಬ್ಬ ಆಚರಿಸಿದರು.

ನಗರದ ಕಲ್ಲುಪೇಟೆ, ರಂಗಪ್ಪ ಸರ್ಕಲ್‌ ಬಳಿಯ ಶ್ರೀ ಬಾಲಾಂಜನೇಯ ವ್ಯಾಯಾಮ ಶಾಲೆಯ ಬಳಿ, ವೀರಭದ್ರನಪಾಳ್ಯ,ಗಾಣಿಗರ ಪೇಟೆ ಸೇರಿದಂತೆ ವಿವಿಧೆಡೆ ಕಾಮದಹನ ಆಚರಿಸಲಾಯಿತು.

ಆಚರಣೆ ಹಿನ್ನೆಲೆ: ದಾಕ್ಷಾಯಿಣಿ ಅಗ್ನಿಕುಂಡಕ್ಕೆ ಬಿದ್ದ ಮೇಲೆ ಶಿವ ಯೋಗಮುದ್ರೆಯಲ್ಲಿದ್ದು, ಇಹ ಪರದ ಚಿಂತ ಬಿಟ್ಟು ಸದಾ ಧ್ಯಾನಾಸಕ್ತನಾಗಿರುತ್ತಾನೆ. ತಾರಕಾಸುರನನ್ನು ಸಂಹರಿಸಲು ಕುಮಾರ ಸ್ವಾಮಿಯ ಅವತಾರ ಸನ್ನಿಹಿತವಾಗಿದ್ದು, ಈ ವೇಳೆ ಪರಶಿವನನ್ನು ತಪಸ್ಸಿನಿಂದ ಎಚ್ಚರಿಸಲು ಅನಿವಾರ್ಯವಾಗಿರುತ್ತದೆ. ಆದರೆ, ಪರಶಿವನನ್ನು ಎಚ್ಚರಿಸುವ ಧೈರ್ಯ ಯಾರಿಗೂ ಇಲ್ಲದೇ ದೇವತೆಗಲು ಮನ್ಮಥನ ಮೊರೆ ಹೋಗುತ್ತಾರೆ. ಮನ್ಮಥ ಪುಷ್ಪ ಬಾಣದಿಂದ ಶಿವನ ತಪಸ್ಸನ್ನು ಭಂಗ ಮಾಡುತ್ತಾನೆ. ತಪಸ್ಸನ್ನು ಕೆಡಿಸಿದ ಮನ್ಮಥನನ್ನು ಶಿವ ತನ್ನ ಮೂರನೇ ಕಣ್ಣನ್ನು ತೆರೆದು ಮನ್ಮಥನನ್ನು ದಹಿಸುತ್ತಾನೆ.

ಈ ಪುರಾಣ ಕಥೆಯೇ ಕಾಮದಹನಕ್ಕೆ ಪ್ರೇರಣೆಯಾಗಿದೆ. ಮನ್ಮಥನನ್ನು ಮನ್ನಿಸಿದ ಶಿವ ಶಾಂತಿ ಸ್ವರೂಪದಿಂದ ಭಕ್ತರ ಇಷ್ಟಾರ್ಥಗಳನ್ನು ಈಡೇರಿಸುವ ಸಲುವಾಗಿ ಕಾಮನ ಮೂರ್ತಿಯಾಗಿ ಅವತಾರಗೊಂಡ ಪುರಾಣದ ಈ ಕಥೆಯು ಜನಪದರಲ್ಲಿ ಕಾಮಣ್ಣ ಹಬ್ಬವಾಗಿ ಆಚರಿಸಲಾಗುತ್ತಿದೆ. ಕಾಮನ ದಹನದಂತೆ ನಮ್ಮಲ್ಲಿನ ಅರಿಷಡ್‌ ವರ್ಗಗಳು ದಹನವಾಗಲಿ ಎಂಬುದೂ ಇದರ ಆಶಯ. ಲೈಂಗಿಕತೆಗೆ ಮನ್ಮಥನೇ ಆದಿ ದೇವತೆಯಾದ್ದರಿಂದ ಕಾಮದಹನದ ಆಚರಣೆಯ ಸಂದರ್ಭದಲ್ಲಿ ಅಶ್ಲೀಲ ಲೈಂಗಿಕ ಭಾಷೆಯ ಬಳಕೆಯೂ ಉಂಟು. ಆದರೆ ಇದು ಆ ಕ್ಷಣಕ್ಕೆ ಮಾತ್ರ. ಮನ್ಮಥನ ಪೂಜೆ ನೆರವೇರಿಸಿ ಉರುವಲುಗಳನ್ನು ದಹಿಸಿದ ನಂತರ ಯುಗಾದಿ ಅಮಾವಾಸ್ಯೆಯಂದು ಕಾಮನ ಮೂರ್ತಿಯನ್ನು ತಣ್ಣಗೆ ಮಾಡುವ ಪ್ರಕ್ರಿಯೆ ಆರಂಭವಾಗುತ್ತದೆ.

ಸುಮಾರು 15ರಿಂದ 25 ಅಡಿಗಳ ವೆರಗೆ ಕಾಮನ ಮೂರ್ತಿಯನ್ನು ಜೇಡಿ ಮಣ್ಣಿನಿಂದ ಮಾಡಿ ಪೂಜೆ ನೆರವೇರಿಸಲಾಗುತ್ತದೆ. ಸಾಂಪ್ರದಾಯಿಕವಾದ ಈ ಜನಪದ ಆಚರಣೆ ತಾಲೂಕಿನ ವಿವಿದೆಡೆಗಳಲ್ಲಿ ಆಚರಿಸುತ್ತಾರೆ. ಕಾಮದಹನದಲ್ಲಿ ಹೆಚ್ಚಾಗಿ ಉರುವಲು ಬಳಸಲಾಗುತಿತ್ತು. ಆದರೆ, ಇದು ಪರಿಸರಕ್ಕೆ ಮಾರಕ ಎನ್ನುವ ಕಾರಣದಿಂದ ಹೆಚ್ಚೇನೂ ಉರುವಲುಗಳನ್ನು ಬಳಸದೇ ಸಾಂಕೇತಿಕವಾಗಿ ಕಾಮದಹನವನ್ನು ಆಚರಿ ಸುತ್ತಿರುವುದು ಸಾಮಾನ್ಯವಾಗಿದೆ. ಆದರೆ,ಆಚರಣೆಯ ಉತ್ಸಾಹ ಕಡಿಮೆಯಾಗುತ್ತಿರುವುದು ಕಾಣುತ್ತಿದೆ. ಕಾಮದಹನದಲ್ಲಿ ಆಚರಿಸುವ ಹಲವಾರು ಆಚರಣೆಗಳನ್ನು ಕೈಬಿಡಲಾಗಿದ್ದು, ಸಾಂಕೇತಿಕ ಪೂಜೆಯನ್ನಷ್ಟೇ ಮಾಡಲಾಗುತ್ತಿದೆ.  ಇಂದಿನ ಪೀಳಿಗೆ ಇಂತಹ ಜನಪದ ಆಚರಣೆಗಳನ್ನು ಉಳಿಸಿ ಬೆಳೆಸಬೇಕಿದೆ ಎನ್ನುತ್ತಾರೆ ಸಂಜೀವ್‌ ನಾಯಕ್‌.

ಟಾಪ್ ನ್ಯೂಸ್

8-gadag

Gadag: ಭ್ರಷ್ಟ ಅಧಿಕಾರಿಗೆ ಬಿಸಿ ಮುಟ್ಟಿಸಿದ ಲೋಕಾಯುಕ್ತ ಅಧಿಕಾರಿಗಳು

Arunachal Village: ಕೇವಲ ಒಂದು ಮತಕ್ಕಾಗಿ ಚುನಾವಣಾ ಅಧಿಕಾರಿಗಳ 40 ಕಿ.ಮೀ ಕಾಲ್ನಡಿಗೆ!

Arunachal Village: ಕೇವಲ ಒಂದು ಮತಕ್ಕಾಗಿ ಚುನಾವಣಾ ಅಧಿಕಾರಿಗಳ 40 ಕಿ.ಮೀ ಕಾಲ್ನಡಿಗೆ!

SSLC ಪರೀಕ್ಷೆ ವೇಳೆ ಉತ್ತರ ತೋರಿಸಲಿಲ್ಲ ಎಂದು ಸಹಪಾಠಿಗೆ ಚಾಕು ಇರಿದ ವಿದ್ಯಾರ್ಥಿಗಳು

SSLC ಪರೀಕ್ಷೆ ವೇಳೆ ಉತ್ತರ ತೋರಿಸಲಿಲ್ಲ ಎಂದು ಸಹಪಾಠಿಗೆ ಚಾಕು ಇರಿದ ವಿದ್ಯಾರ್ಥಿಗಳು

Shocking: ಮುಸುಧಾರಿಗಳಿಂದ ಗುರುದ್ವಾರದ ಸಿಬಂದಿಯ ಗುಂಡಿಕ್ಕಿ ಹತ್ಯೆ… ಭಯಾನಕ ದೃಶ್ಯ ಸೆರೆ

Shocking: ಮುಸುಧಾರಿಗಳಿಂದ ಗುರುದ್ವಾರದ ಸಿಬ್ಬಂದಿಯ ಗುಂಡಿಕ್ಕಿ ಹತ್ಯೆ.. ಭಯಾನಕ ದೃಶ್ಯ ಸೆರೆ

6-bng

Bengaluru: ಪೇಂಟರ್‌ ಕೊಂದು ಪೊಲೀಸ್‌ ಠಾಣೆಗೆ ಬಂದು ಸಿಕ್ಕಿಬಿದ್ದ ಸ್ನೇಹಿತರು

Loksabha Poll: ತಮಿಳುನಾಡು ಮಾಜಿ ಕಾಂಗ್ರೆಸ್‌ ನಾಯಕ ಈಗ ಬಿಜೆಪಿ ರಾಷ್ಟ್ರೀಯ ವಕ್ತಾರ

Loksabha Poll: ತಮಿಳುನಾಡು ಮಾಜಿ ಕಾಂಗ್ರೆಸ್‌ ನಾಯಕ ಈಗ ಬಿಜೆಪಿ ರಾಷ್ಟ್ರೀಯ ವಕ್ತಾರ

5-bng

Bengaluru: ಪ್ರೀತಿಸಿ ಮದುವೆ ಆಗುವುದಾಗಿ ಅಂಗವಿಕಲ ಯುವತಿಗೆ ವಂಚನೆ


ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು

10

Electricity problem: ಬೇಸಿಗೆ ಬೆನ್ನಲ್ಲೇ ಕಾಡುತ್ತಿದೆ ವಿದ್ಯುತ್‌ ಸಮಸ್ಯೆ

Kanakapura ಚುನಾವಣೆ ಉಸ್ತುವಾರಿ ಹೊಣೆ ನಾನೇ ಹೊತ್ತುಕೊಳ್ಳುವೆ: ಸಿಪಿವೈ

Kanakapura ಚುನಾವಣೆ ಉಸ್ತುವಾರಿ ಹೊಣೆ ನಾನೇ ಹೊತ್ತುಕೊಳ್ಳುವೆ: ಸಿಪಿವೈ

Lok sabha polls: ಬೆಂ. ಗ್ರಾಮಾಂತರ; ಡಾ.ಮಂಜುನಾಥ್‌ ಸ್ಪರ್ಧೆ

Lok sabha polls: ಬೆಂ. ಗ್ರಾಮಾಂತರ; ಡಾ.ಮಂಜುನಾಥ್‌ ಸ್ಪರ್ಧೆ

Bannerghatta Biological Park: ಚಿರತೆ ಮರಿಗಳಿಗೆ ಉದ್ಯಾನವನದ ಸಿಬ್ಬಂದಿ ಆಸರೆ

Bannerghatta Biological Park: ಚಿರತೆ ಮರಿಗಳಿಗೆ ಉದ್ಯಾನವನದ ಸಿಬ್ಬಂದಿ ಆಸರೆ

Road Dispute: ರಸ್ತೆ ವಿವಾದ; ಪೊಲೀಸ್‌ ಠಾಣೆ ಮೆಟ್ಟಿಲೇರಿದ ಪ್ರಕರಣ

Road Dispute: ರಸ್ತೆ ವಿವಾದ; ಪೊಲೀಸ್‌ ಠಾಣೆ ಮೆಟ್ಟಿಲೇರಿದ ಪ್ರಕರಣ

MUST WATCH

udayavani youtube

ಟೌನಶಿಪ್’ನ ಬಾಡಿಗೆ ಮನೆಯೊಂದರಲ್ಲಿ ಕಳ್ಳತನ ರೂ: 47 ಸಾವಿರ ಕಳವು

udayavani youtube

ವಿಶ್ವ ಗುಬ್ಬಚ್ಚಿಗಳ ದಿನ | ಈ ಮನೆ ನೂರಾರು ಗುಬ್ಬಚ್ಚಿಗಳ ತವರು

udayavani youtube

ಬಡವರ ಸೇವೆಯೇ ಶ್ರೀರಾಮ ದೇವರ ಸೇವೆ : ಪೇಜಾವರಶ್ರೀ

udayavani youtube

ಕೆಂಪು ಹರಿವೆ ಸೊಪ್ಪು ಬೆಳೆಯುವ ಸೂಕ್ತ ವಿಧಾನ

udayavani youtube

ರಾಜಕೀಯದತ್ತ ಒಲವು ತೋರಿದ್ರಾ ಚಕ್ರವರ್ತಿ ಸೂಲಿಬೆಲೆ ?

ಹೊಸ ಸೇರ್ಪಡೆ

8-gadag

Gadag: ಭ್ರಷ್ಟ ಅಧಿಕಾರಿಗೆ ಬಿಸಿ ಮುಟ್ಟಿಸಿದ ಲೋಕಾಯುಕ್ತ ಅಧಿಕಾರಿಗಳು

Arunachal Village: ಕೇವಲ ಒಂದು ಮತಕ್ಕಾಗಿ ಚುನಾವಣಾ ಅಧಿಕಾರಿಗಳ 40 ಕಿ.ಮೀ ಕಾಲ್ನಡಿಗೆ!

Arunachal Village: ಕೇವಲ ಒಂದು ಮತಕ್ಕಾಗಿ ಚುನಾವಣಾ ಅಧಿಕಾರಿಗಳ 40 ಕಿ.ಮೀ ಕಾಲ್ನಡಿಗೆ!

SSLC ಪರೀಕ್ಷೆ ವೇಳೆ ಉತ್ತರ ತೋರಿಸಲಿಲ್ಲ ಎಂದು ಸಹಪಾಠಿಗೆ ಚಾಕು ಇರಿದ ವಿದ್ಯಾರ್ಥಿಗಳು

SSLC ಪರೀಕ್ಷೆ ವೇಳೆ ಉತ್ತರ ತೋರಿಸಲಿಲ್ಲ ಎಂದು ಸಹಪಾಠಿಗೆ ಚಾಕು ಇರಿದ ವಿದ್ಯಾರ್ಥಿಗಳು

7-bng

Bengaluru: ಸಾಲ ವಸೂಲಿ ಹೆಸರಲ್ಲಿ ಆಟೋ ವಶ, ಧರ್ಮ ನಿಂದನೆ: ಬಂಧನ

Shocking: ಮುಸುಧಾರಿಗಳಿಂದ ಗುರುದ್ವಾರದ ಸಿಬಂದಿಯ ಗುಂಡಿಕ್ಕಿ ಹತ್ಯೆ… ಭಯಾನಕ ದೃಶ್ಯ ಸೆರೆ

Shocking: ಮುಸುಧಾರಿಗಳಿಂದ ಗುರುದ್ವಾರದ ಸಿಬ್ಬಂದಿಯ ಗುಂಡಿಕ್ಕಿ ಹತ್ಯೆ.. ಭಯಾನಕ ದೃಶ್ಯ ಸೆರೆ

Thanks for visiting Udayavani

You seem to have an Ad Blocker on.
To continue reading, please turn it off or whitelist Udayavani.