ಜಲಮೂಲಗಳ ಸಂರಕ್ಷಿಸಿಕೊಳ್ಳುವ ಅಗತ್ಯವಿದೆ


Team Udayavani, Feb 6, 2020, 5:51 PM IST

6-February-22

ದೊಡ್ಡಬಳ್ಳಾಪುರ : ವಾತಾವರಣದಲ್ಲಿ ತೇವಾಂಶ ಕಾಪಾಡಿಕೊಳ್ಳಬೇಕಿದ್ದು, ಮಾನವರಂತೆ ಇತರೆ ಜೀವ ಸಂಕುಲಗಳಿಗೂ ಭೂಮಿಯ ಮೇಲೆ ಜೀವಿಸುವ ಹಕ್ಕಿದೆ. ಈ ದಿಸೆಯಲ್ಲಿ ಜೀವ ವೈವಿಧ್ಯದ ಸಂರಕ್ಷಣೆಯಲ್ಲಿ ಇಂದಿನ ಪೀಳಿಗೆಯ ಪಾತ್ರ ಮಹತ್ವದ್ದಾಗಿದೆ ಎಂದು ಉಪ ವಲಯ ಅರಣ್ಯಾಧಿಕಾರಿ ರಾಜಶೇಖರ್‌ ಅಭಿಪ್ರಾಯಪಟ್ಟರು.

ಡಬ್ಲ್ಯೂಡಬ್ಲ್ಯೂ ಎಫ್‌ – ಇಂಡಿಯಾ (ವರ್ಲ್ಡ್ ವೈಡ್‌ ಫಂಡ್‌ ಫಾರ್‌ ನೇಚರ್‌) ಸಂಸ್ಥೆಯ ವತಿಯಿಂದ ತಾಲೂಕಿನ ಶಿವಪುರ ಹಿರಿಯ ಪ್ರಾಥಮಿಕ ಶಾಲೆಯಲ್ಲಿ ಹಮ್ಮಿಕೊಂಡಿದ್ದ ವಿಶ್ವ ತೇವಾಂಶ ಭೂಮಿ ದಿನಾಚರಣೆ (ವರ್ಲ್ಡ್ ವೆಟ್‌ ಲ್ಯಾಂಡ್‌ ಡೇ) ಕಾರ್ಯಕ್ರಮ ಉದ್ಘಾಟಿಸಿ ಅವರು ಮಾತನಾಡಿದರು.

ಜೀವ ಸಂಕುಲಕ್ಕೆ ನೀರಿನ ಅಗತ್ಯವಿದೆ. ಅಂತೆಯೇ ನೀರನ್ನು ಮಿತವಾಗಿ ಬಳಸುವ ಜವಾಬ್ದಾರಿಯಿದೆ. ಕಾಡುಗಳ ನಾಶದಿಂದ ಮಳೆ ಪ್ರಮಾಣ ಕಡಿಮೆಯಾಗಲಿದ್ದು, ಅರಣ್ಯ ಹೆಚ್ಚಾಗಿರಬೇಕು. ಮನೆಗಳ ಮೇಲೆ ತಟ್ಟೆಯಾಕಾರದ ಪಾತ್ರೆಯಲ್ಲಿ ನೀರಿಡುವ ಮೂಲಕ ಪಕ್ಷಿಗಳ ನೀರಿನ ದಾಹವನ್ನು ನೀಗಿಸಲು ಸಲಹೆ ನೀಡಿದರು.

ಡಬ್ಲ್ಯೂಡಬ್ಲ್ಯೂ ಎಫ್‌ ನ ವೈ.ಟಿ.ಲೋಹಿತ್‌ ಮಾತನಾಡಿ, ಜಲಮೂಲಗಳ ಸುಸ್ಥಿರ ಬಳಕೆಗಾಗಿ 2 ಫೆಬ್ರವರಿ 1971 ರಲ್ಲಿ ಇರಾನ್‌ ದೇಶದ ರಾಮ್ಸರ್‌ ನಗರದಲ್ಲಿ ಅಂತಾರಾಷ್ಟ್ರೀಯ ಸಮಾವೇಶವೊಂದು ನಡೆಯಿತು, ಆ ದಿನದ ನೆನೆಪಿಗಾಗಿ ವಿಶ್ವ ತೇವಾಂಶ ಭೂಮಿ ದಿನಾಚರಣೆ ಆಚರಿಸಲಾಗುವುದು. ಈ ವರ್ಷದ ಧ್ಯೇಯ ವಾಕ್ಯ ಕೆರೆಗಳು ಮತ್ತು ಜೀವವೈವಿಧ್ಯತೆ’. ನಮ್ಮ ದೇಶದಲ್ಲಿ ರಾಮ್ಸರ್‌ ಮಾನ್ಯತೆ ಪಡೆದಿರುವ 37 ವಿವಿಧ ವರ್ಗದ ಜಲಮೂಲಗಳಿವೆ. ಜಲಮೂಲಗಳು ಜೀವವ್ಯವಿಧ್ಯತೆಯ ತಾಣವಾಗಿದ್ದು ಭೂಮಿಯ ಮೇಲಿನ ಶೇ.40ರಷ್ಟು ಸಸ್ಯ ಹಾಗೂ ಪ್ರಾಣಿ ವರ್ಗ ನೀರಿನಲ್ಲಿ ಹಾಗು ನೀರಿನ ಮೂಲಗಳ ಸುತ್ತ ಮುತ್ತ ಕೇಂದ್ರೀಕೃತವಾಗಿದೆ. ಇಂದು ಕಾಡುಗಳಿಗಿಂತ ಮೂರು ಪಟ್ಟು ವೇಗವಾಗಿ ಜಲಮೂಲಗಳು ನಾಶವಾಗುತ್ತಿವೆ ಎಂದು ತಿಳಿಸಿದರು.

ಸಂಪನ್ಮೂಲ ವ್ಯಕ್ತಿ ಚಿನ್ಮಯ್‌.ಸಿ ಮಳಿಯೆ ಮಕ್ಕಳಿಗೆ ಜೇಡ, ಕೀಟಗಳು ಹಾಗು ಜಲಮುಲಗಳ ಬಳಿ ಇರುವ ಜೀವವೈವಿಧ್ಯತೆಯ ಮಹತ್ವವನ್ನು ತಿಳಿಸಿಕೊಟ್ಟರು. ಶಾಲೆಯ ಮುಖ್ಯ ಶಿಕ್ಷಕ ನಾಗರಾಜ್, ನವೋದಯ ಚಾರಿಟಬಲ್‌ ಟ್ರಸ್ಟ್‌ನ ಆರ್‌.ಜನಾರ್ಧನ, ಸುನಿಲ್‌ ಗೌಡ ಭಾಗವಹಿಸಿದ್ದರು.

ಟಾಪ್ ನ್ಯೂಸ್

ನಾರಾಯಣ್‌,ಬಟ್ಲರ್‌ ಶತಕ ಮೇಲಾಟ; ರನ್‌ ಚೇಸ್‌ನಲ್ಲಿ ರಾಜಸ್ಥಾನ್‌ ರಾಯಲ್ಸ್‌ಗೆ ಬೃಹತ್‌ ಗೆಲುವು

ನಾರಾಯಣ್‌,ಬಟ್ಲರ್‌ ಶತಕ ಮೇಲಾಟ; ರನ್‌ ಚೇಸ್‌ನಲ್ಲಿ ರಾಜಸ್ಥಾನ್‌ ರಾಯಲ್ಸ್‌ಗೆ ಬೃಹತ್‌ ಗೆಲುವು

ನ್ಯಾಯಾಲಯದಲ್ಲೇ ಕುಸಿದು ಬಿದ್ದ ಆಸ್ಟ್ರೇಲಿಯದ ಮಾಜಿ ಕ್ರಿಕೆಟಿಗ ಮೈಕಲ್‌ ಸ್ಲೇಟರ್‌

ನ್ಯಾಯಾಲಯದಲ್ಲೇ ಕುಸಿದು ಬಿದ್ದ ಆಸ್ಟ್ರೇಲಿಯದ ಮಾಜಿ ಕ್ರಿಕೆಟಿಗ ಮೈಕಲ್‌ ಸ್ಲೇಟರ್‌

FIDE Candidates 2024; ಜಂಟಿ ಅಗ್ರಸ್ಥಾನದಲ್ಲೇ ಉಳಿದ ಗುಕೇಶ್‌

FIDE Candidates 2024; ಜಂಟಿ ಅಗ್ರಸ್ಥಾನದಲ್ಲೇ ಉಳಿದ ಗುಕೇಶ್‌

ಹೃದಯ ಗೆದ್ದ ದಿನೇಶ್‌ ಕಾರ್ತಿಕ್‌; ಟಿ20 ವಿಶ್ವಕಪ್‌ ತಂಡದಲ್ಲಿ ಸ್ಥಾನ?

ಹೃದಯ ಗೆದ್ದ ದಿನೇಶ್‌ ಕಾರ್ತಿಕ್‌; ಟಿ20 ವಿಶ್ವಕಪ್‌ ತಂಡದಲ್ಲಿ ಸ್ಥಾನ?

IPL ಬ್ರೇಕ್‌ ಪಡೆದ ಗ್ಲೆನ್‌ ಮ್ಯಾಕ್ಸ್‌ವೆಲ್‌

IPL ಬ್ರೇಕ್‌ ಪಡೆದ ಗ್ಲೆನ್‌ ಮ್ಯಾಕ್ಸ್‌ವೆಲ್‌

Olympic Games Paris 2024; ಬೆಳಗಿತು ಪ್ಯಾರಿಸ್‌ ಒಲಿಂಪಿಕ್‌ ಜ್ಯೋತಿ

Olympic Games Paris 2024; ಬೆಳಗಿತು ಪ್ಯಾರಿಸ್‌ ಒಲಿಂಪಿಕ್‌ ಜ್ಯೋತಿ

UPSC Exam: 30ಕ್ಕಿಂತ ಅಧಿಕ ಕನ್ನಡಿಗರ ಆಯ್ಕೆ

UPSC Exam: 30ಕ್ಕಿಂತ ಅಧಿಕ ಕನ್ನಡಿಗರ ಆಯ್ಕೆ


ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು

ಬೇಸಿಗೆ ಬಿಸಿಯೂಟ: 32,173 ಮಕ್ಕಳ ನೋಂದಣಿ

ಬೇಸಿಗೆ ಬಿಸಿಯೂಟ: 32,173 ಮಕ್ಕಳ ನೋಂದಣಿ

Devanahalli: ಬೇಸಿಗೆ ತಾಪಮಾನ ಹೆಚ್ಚಳ, ಇರಲಿ ಎಚ್ಚರ

Devanahalli: ಬೇಸಿಗೆ ತಾಪಮಾನ ಹೆಚ್ಚಳ, ಇರಲಿ ಎಚ್ಚರ

Doddaballapur: ಜಾತೀಯತೆಗೆ ಮಣೆ ಹಾಕದ ಕ್ಷೇತ್ರದ ‌ಮತದಾರರು

Doddaballapur: ಜಾತೀಯತೆಗೆ ಮಣೆ ಹಾಕದ ಕ್ಷೇತ್ರದ ‌ಮತದಾರರು

Lok Sabha polls: ಲೋಕಸಭೆ ಚುನಾವಣೆಯಲ್ಲಿ ಇಂದಿರಾಗಾಂಧಿ ನೆನಪು

Lok Sabha polls: ಲೋಕಸಭೆ ಚುನಾವಣೆಯಲ್ಲಿ ಇಂದಿರಾಗಾಂಧಿ ನೆನಪು

10

Electricity problem: ಬೇಸಿಗೆ ಬೆನ್ನಲ್ಲೇ ಕಾಡುತ್ತಿದೆ ವಿದ್ಯುತ್‌ ಸಮಸ್ಯೆ

MUST WATCH

udayavani youtube

‘ಕಸಿ’ ಕಟ್ಟುವ ಸುಲಭ ವಿಧಾನ

udayavani youtube

ಬೇಸಿಗೆಯಲ್ಲಿ ನಮ್ಮನ್ನು ಕಾಡುವ Heat Illnessಏನಿದು ಸಮಸ್ಯೆ ? ಪರಿಹಾರವೇನು ?

udayavani youtube

ದ್ವಾರಕೀಶ್ ನಿಧನಕ್ಕೆ ನಟ ಶಿವರಾಜ್ ಕುಮಾರ್ ಸಂತಾಪ

udayavani youtube

ದೇವೇಗೌಡರಿದ್ದ ವೇದಿಕೆಗೆ ನುಗ್ಗಿದ ಕಾಂಗ್ರೆಸ್‌ ಕಾರ್ಯಕರ್ತೆಯರು

udayavani youtube

ಮಂಗಳೂರಿನಲ್ಲಿ ಪ್ರಧಾನಿ ಶ್ರೀ Narendra Modi ಅವರ ಬೃಹತ್‌ ರೋಡ್‌ ಶೋ

ಹೊಸ ಸೇರ್ಪಡೆ

ನಾರಾಯಣ್‌,ಬಟ್ಲರ್‌ ಶತಕ ಮೇಲಾಟ; ರನ್‌ ಚೇಸ್‌ನಲ್ಲಿ ರಾಜಸ್ಥಾನ್‌ ರಾಯಲ್ಸ್‌ಗೆ ಬೃಹತ್‌ ಗೆಲುವು

ನಾರಾಯಣ್‌,ಬಟ್ಲರ್‌ ಶತಕ ಮೇಲಾಟ; ರನ್‌ ಚೇಸ್‌ನಲ್ಲಿ ರಾಜಸ್ಥಾನ್‌ ರಾಯಲ್ಸ್‌ಗೆ ಬೃಹತ್‌ ಗೆಲುವು

ನ್ಯಾಯಾಲಯದಲ್ಲೇ ಕುಸಿದು ಬಿದ್ದ ಆಸ್ಟ್ರೇಲಿಯದ ಮಾಜಿ ಕ್ರಿಕೆಟಿಗ ಮೈಕಲ್‌ ಸ್ಲೇಟರ್‌

ನ್ಯಾಯಾಲಯದಲ್ಲೇ ಕುಸಿದು ಬಿದ್ದ ಆಸ್ಟ್ರೇಲಿಯದ ಮಾಜಿ ಕ್ರಿಕೆಟಿಗ ಮೈಕಲ್‌ ಸ್ಲೇಟರ್‌

FIDE Candidates 2024; ಜಂಟಿ ಅಗ್ರಸ್ಥಾನದಲ್ಲೇ ಉಳಿದ ಗುಕೇಶ್‌

FIDE Candidates 2024; ಜಂಟಿ ಅಗ್ರಸ್ಥಾನದಲ್ಲೇ ಉಳಿದ ಗುಕೇಶ್‌

ಹೃದಯ ಗೆದ್ದ ದಿನೇಶ್‌ ಕಾರ್ತಿಕ್‌; ಟಿ20 ವಿಶ್ವಕಪ್‌ ತಂಡದಲ್ಲಿ ಸ್ಥಾನ?

ಹೃದಯ ಗೆದ್ದ ದಿನೇಶ್‌ ಕಾರ್ತಿಕ್‌; ಟಿ20 ವಿಶ್ವಕಪ್‌ ತಂಡದಲ್ಲಿ ಸ್ಥಾನ?

IPL ಬ್ರೇಕ್‌ ಪಡೆದ ಗ್ಲೆನ್‌ ಮ್ಯಾಕ್ಸ್‌ವೆಲ್‌

IPL ಬ್ರೇಕ್‌ ಪಡೆದ ಗ್ಲೆನ್‌ ಮ್ಯಾಕ್ಸ್‌ವೆಲ್‌

Thanks for visiting Udayavani

You seem to have an Ad Blocker on.
To continue reading, please turn it off or whitelist Udayavani.