ಕೋವಿಡ್‌ ಸಂಕಷ್ಟದಲ್ಲೂ ದೇಶ ಮುನ್ನಡೆಸಿದ ಮೋದಿ


Team Udayavani, Jun 8, 2022, 3:02 PM IST

ಕೋವಿಡ್‌ ಸಂಕಷ್ಟದಲ್ಲೂ ದೇಶ ಮುನ್ನಡೆಸಿದ ಮೋದಿ

ದೊಡ್ಡಬಳ್ಳಾಪುರ: ಕೋವಿಡ್‌ ಸಂದರ್ಭದಲ್ಲಿ ಆರ್ಥಿಕ ಸಂಕಷ್ಟಕ್ಕೆ ಸಿಲುಕಿದ್ದ ದೇಶವನ್ನು ಸಬಲವನ್ನಾಗಿ ಮಾಡಿ ನೆರೆಯ ದೇಶಗಳಿಗೆ ನೆರವನನ್ನು ನೀಡುವ ಮಟ್ಟಕ್ಕೆ ಬೆಳೆಸಿದ ಹಿರಿಮೆ ಪ್ರಧಾನಿ ನರೇಂದ್ರ ಮೋದಿ ಅವರಿಗೆ ಸಲ್ಲುತ್ತದೆ ಎಂದು ಬಿಜೆಪಿ ಆರ್ಥಿಕ ಪ್ರಕೋಷ್ಠ ರಾಜ್ಯ ಸಂಚಾಲಕ ಸಮೀರ್‌ ಕಾಧಲ್ಕರ್‌ ಹೇಳಿದರು.

ನಗರದ ಕೆಎಂಎಚ್‌ ಕಲ್ಯಾಣ ಮಂದಿರದಲ್ಲಿ ನಡೆದ ಬೆಂಗಳೂರು ಗ್ರಾಮಾಂತರ ಜಿಲ್ಲಾ ಬಿಜೆಪಿ ಪ್ರಕೋಷ್ಠಗಳ ಸಮಾವೇಶದಲ್ಲಿ ಮಾತನಾಡಿದ ಅವರು, ದಿನಬಳಕೆ ವಸ್ತುಗಳ ಬೆಲೆ ಏರಿಕೆಗೆ ಹಲವಾರು ಕಾರಣಗಳಿವೆ. ರಷ್ಯಾ-ಉಕ್ರೇನ್‌ ನಡುವೆ ನಡೆಯುತ್ತಿರುವ ಯುದ್ಧದ ಪ್ರಭಾವ ಇಡೀ ವಿಶ್ವದ ಮೇಲೆ ಬಿದ್ದಿದೆ. ಹಲವಾರು ದೇಶ ಆರ್ಥಿಕವಾಗಿ ದಿವಾಳಿಯ ಅಂಚಿಗೆ ಬಂದು ನಿಂತಿವೆ. ಆದರೆ, ಇಂದು ಭಾರತ ನೆರೆಹೊರೆಯ ದೇಶಗಳಿಗೆ ಆರ್ಥಿಕ ನೆರವು ಸೇರಿದಂತೆ ಎಲ್ಲ ರೀತಿಯಲ್ಲೂ ಸಹಕಾರ ನೀಡುವಷ್ಟು ಸಮರ್ಥವಾಗಿದೆ ಎಂದರು.

ವಿಪಕ್ಷಗಳಿಂದ ಜನರಿಗೆ ತಪ್ಪು ಮಾಹಿತಿ: ಕೋವಿಡ್‌ ನಂತರದಲ್ಲಿ ಅಮೇರಿಕ ದೇಶವು ಸೇರಿದಂತೆ ಹಲವಾರು ಬಲಿಷ್ಠ ದೇಶಗಳಲ್ಲೂ ಆರ್ಥಿಕ ಏರುಪೇರು ಉಂಟಾಗಿವೆ. ಈ ಎಲ್ಲದರ ಪರಿಣಾ ಮವೇ ಬೆಲೆ ಏರಿಕೆಗೆ ಮುಖ್ಯ ಕಾರಣವಾಗಿದೆ. ಆದರೆ, ವಿರೋಧ ಪಕ್ಷಗಳು ಜನರಿಗೆ ಸೂಕ್ತ ಮಾಹಿತಿ ನೀಡದೆ ಮರೆಮಾಚುವ ಮೂಲಕ ಅಪಪ್ರಚಾರ ಮಾಡ ಲು ಮುಂದಾಗಿವೆ. ವಿವಿಧ ಪ್ರಕಾಕೋಷ್ಠಗಳ ಪದಾಧಿ ಕಾರಿಗಳು ಸೂಕ್ತ ಮಾಹಿತಿಯೊಂದಿಗೆ ಜನರ ಬಳಿ ನಿಂತು ಮಾತನಾಡಬೇಕು. ಆಗ ಮಾತ್ರ ವಿರೋಧಿ ಗಳ ಬಾಯಿ ಮುಚ್ಚಿಸಲು ಸಾಧ್ಯವಾಗಲಿದೆ ಎಂದರು.

ಆರೋಗ್ಯ ಸುಧಾರಣೆಗೆ ಸಹಕಾರಿ: ದೇಶದಲ್ಲಿ ನಾವೇ ಜನೌಷಧ ಕೇಂದ್ರಗಳನ್ನು ತೆರೆದಿದ್ದು ಎಂದು ಕಾಂಗ್ರೆಸ್‌ ಮುಖಂಡರು ಹೇಳಿಕೊಳ್ಳುತ್ತಾರೆ. ಆದರೆ, ವಾಸ್ತವವೇ ಬೇರೆ ಇದೆ. ಕಾಂಗ್ರೆಸ್‌ ಪಕ್ಷದ ವತಿಯಿಂದ ತೆರೆಯ ಲಾಗಿದ್ದ ಬೆರಳೆಣಿಕೆಯಷ್ಟು ಜನೌಷಧ ಕೇಂದ್ರಗಳಿಗೆ ಸೂಕ್ತ ಔಷಧ ಸರಬರಾಜು ಇಲ್ಲದೆ ಬಾಗಿಲು ಮುಚ್ಚಿವ ಹಂತಕ್ಕೆ ಬಂದಿದ್ದವು. ಆದರೆ, ಇಂದು ದೇಶದಲ್ಲಿ 43 ಸಾವಿರ ಜನೌಷಧ ಕೇಂದ್ರಗಳಿಗೆ. ಜನರಿಗೆ ಅಗತ್ಯವಿರುವ ಎಲ್ಲ ರೀತಿಯ ಔಷಧಗಳನ್ನು ಅತ್ಯಂತ ಕಡಿಮೆ ಬೆಲೆಗೆ ದೊರೆಯುವಂತೆ ಮಾಡಲಾಗಿದೆ. ಇದರಿಂದ ಬಡವರ ಆರೋಗ್ಯ ಸುಧಾರಣೆಗೆ ಸಹಕಾರಿಯಾಗಿದೆ ಎಂದರು.

ಜನರಿಗೆ ಮನವರಿಕೆ ಮಾಡಿ: ಮಾಹಿತಿಯೇ ನಮ್ಮ ದೊಡ್ಡ ಶಕ್ತಿಯಾಗಬೇಕು. ಈ ಶಕ್ತಿಯನ್ನು ಸಮರ್ಥವಾಗಿ ಬಳಸಿಕೊಳ್ಳುವ ಗಟ್ಟಿ ಕಾರ್ಯಕರ್ತರನ್ನು ಸಿದ್ಧಗೊಳಿಸುವ ಹೊಣೆಗಾರಿಕೆ ಪ್ರಕೋಷ್ಠಗಳ ಜವಾಬ್ದಾರಿಯಾಗಿದೆ. ಕೇವಲ ಸಮಾವೇಶಕ್ಕೆ ನಮ್ಮ ಕೆಲಸ ಮುಗಿಯಿತು ಎಂದು ಮೈ ಮರೆತು ಕುಳಿತುಕೊಳ್ಳುವಂತಿಲ್ಲ. ಕೇಂದ್ರದಲ್ಲಿನ ನರೇಂದ್ರ ಮೋದಿ ನೇತೃತ್ವದ ಬಿಜೆಪಿ ಆಡಳಿತದಲ್ಲಿ ನಡೆದಿರುವ ಜನೋಪಯೋಗಿ ಕೆಲಸ ಜನರಿಗೆ ಮನವರಿಕೆ ಮಾಡಿಕೊಡುವಲ್ಲಿ ಕಾರ್ಯಕರ್ತರ ಪಾತ್ರ ಮಹತ್ವದಾಗಿದೆ ಎಂದರು.

ಫಲಾನುಭವಿಗಳ ಪ್ರಕೋಷ್ಠದ ಜಿಲ್ಲಾ ಸಂಚಾಲಕ ಧೀರಜ್‌ ಮುನಿರಾಜು, ಕೇಂದ್ರ ರೇಷ್ಮೆ ಮಂಡಲಿ ಮಾಜಿ ಅಧ್ಯಕ್ಷ ಕೆ.ಎಂ.ಹನುಮಂತರಾಯಪ್ಪ, ಬಿಜೆಪಿ ಜಿಲ್ಲಾ ಘಟಕದ ಅಧ್ಯಕ್ಷ ಎ.ವಿ. ನಾರಾಯಣಸ್ವಾಮಿ, ಜಿಲ್ಲಾ ಪ್ರಧಾನ ಕಾರ್ಯದರ್ಶಿ ಗೋಪಿ, ರಾಜ್ಯ ಕಾರ್ಯಕಾರಣಿ ಸದಸ್ಯ ಬಿ.ಸಿ.ನಾರಾಯಣಸ್ವಾಮಿ, ಪಂಚಾಯಿತ್‌ ರಾಜ್‌ ಪ್ರಕೋಷ್ಠ ಜಿಲ್ಲಾ ಸಂಚಾಲಕ ಕೆ.ಎಚ್‌. ವೆಂಕಟರಾಜು, ಮಾಧ್ಯಮ ಪ್ರಕೋಷ್ಠ ಜಿಲ್ಲಾ ಸಂಚಾಲಕ ಬಂತಿ ವೆಂಕಟೇಶ್‌, ಮುಖಂಡ ಅಶ್ವತ್ಥ ನಾರಾಯಣಕುಮಾರ್‌, ಉಮಾಮೇಶ್ವರಿ, ಶ್ರಮಿಕ ಸಂಕುಲ ಪ್ರಮುಖ್‌ ರಾಮಕಿಟ್ಟಿ ಇದ್ದರು.

ಟಾಪ್ ನ್ಯೂಸ್

Bengaluru: ಇನ್‌ಸ್ಟಾದಲ್ಲಿ ಯುವತಿ ನಗ್ನ ಫೋಟೋ ವೈರಲ್‌; ಅಪರಿಚಿತನ ಮೇಲೆ ಕೇಸು

Bengaluru: ಇನ್‌ಸ್ಟಾದಲ್ಲಿ ಯುವತಿ ನಗ್ನ ಫೋಟೋ ವೈರಲ್‌; ಅಪರಿಚಿತನ ಮೇಲೆ ಕೇಸು

Chamarajanagara: ಇಂಡಿಗನತ್ತದಲ್ಲಿ ಮರುಮತದಾನ ಆರಂಭ

Chamarajanagara: ಇಂಡಿಗನತ್ತದಲ್ಲಿ ಮರುಮತದಾನ ಆರಂಭ

Food Poison; ಚಿಕನ್ ಶವರ್ಮಾ ಸೇವಿಸಿ ಆಸ್ಪತ್ರೆಗೆ ದಾಖಲಾದ 12 ಜನರು

Food Poison; ಚಿಕನ್ ಶವರ್ಮಾ ಸೇವಿಸಿ ಆಸ್ಪತ್ರೆಗೆ ದಾಖಲಾದ 12 ಜನರು

ಮೀಸಲಾತಿ ಕುರಿತ ಅಮಿತ್ ಶಾ ಹೇಳಿಕೆಯ ನಕಲಿ ವಿಡಿಯೋ ವೈರಲ್… FIR ದಾಖಲು

ಮೀಸಲಾತಿ ಕುರಿತ ಅಮಿತ್ ಶಾ ಹೇಳಿಕೆಯ ನಕಲಿ ವಿಡಿಯೋ ವೈರಲ್… FIR ದಾಖಲು

Srinivas Prasad: ದ. ಕರ್ನಾಟಕದ ʼದಲಿತ ಸೂರ್ಯʼ ಎಂದು ಖ್ಯಾತರಾಗಿದ್ದ ಶ್ರೀನಿವಾಸ ಪ್ರಸಾದ್‌

Srinivas Prasad: ದ. ಕರ್ನಾಟಕದ ʼದಲಿತ ಸೂರ್ಯʼ ಎಂದು ಖ್ಯಾತರಾಗಿದ್ದ ಶ್ರೀನಿವಾಸ ಪ್ರಸಾದ್‌

ಗುಜರಾತ್ ಕರಾವಳಿ ಪ್ರದೇಶದಲ್ಲಿ 602 ಕೋಟಿ ಮೌಲ್ಯದ ಡ್ರಗ್ಸ್ ವಶ: 14 ಪಾಕ್ ಪ್ರಜೆಗಳ ಬಂಧನ

ಗುಜರಾತ್ ಕರಾವಳಿ ಪ್ರದೇಶದಲ್ಲಿ 602 ಕೋಟಿ ಮೌಲ್ಯದ ಡ್ರಗ್ಸ್ ವಶ: 14 ಪಾಕ್ ಪ್ರಜೆಗಳ ಬಂಧನ

Spying: ಪಾಕಿಸ್ತಾನ ಪರ ಬೇಹುಗಾರಿಕೆ: ಒಂದು ವರ್ಷದಿಂದ ತಲೆಮರೆಸಿಕೊಂಡಿದ್ದ ವ್ಯಕ್ತಿಯ ಬಂಧನ

Spying: ಪಾಕಿಸ್ತಾನ ಪರ ಬೇಹುಗಾರಿಕೆ: ಒಂದು ವರ್ಷದಿಂದ ತಲೆಮರೆಸಿಕೊಂಡಿದ್ದ ವ್ಯಕ್ತಿಯ ಬಂಧನ


ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು

8

Devanahalli: ಬೇಸಿಗೆ ಬಿಸಿ; ಹುರುಳಿಕಾಯಿ ದರ ದುಬಾರಿ

ಬೇಸಿಗೆ ಬಿಸಿಯೂಟ: 32,173 ಮಕ್ಕಳ ನೋಂದಣಿ

ಬೇಸಿಗೆ ಬಿಸಿಯೂಟ: 32,173 ಮಕ್ಕಳ ನೋಂದಣಿ

Devanahalli: ಬೇಸಿಗೆ ತಾಪಮಾನ ಹೆಚ್ಚಳ, ಇರಲಿ ಎಚ್ಚರ

Devanahalli: ಬೇಸಿಗೆ ತಾಪಮಾನ ಹೆಚ್ಚಳ, ಇರಲಿ ಎಚ್ಚರ

Doddaballapur: ಜಾತೀಯತೆಗೆ ಮಣೆ ಹಾಕದ ಕ್ಷೇತ್ರದ ‌ಮತದಾರರು

Doddaballapur: ಜಾತೀಯತೆಗೆ ಮಣೆ ಹಾಕದ ಕ್ಷೇತ್ರದ ‌ಮತದಾರರು

Lok Sabha polls: ಲೋಕಸಭೆ ಚುನಾವಣೆಯಲ್ಲಿ ಇಂದಿರಾಗಾಂಧಿ ನೆನಪು

Lok Sabha polls: ಲೋಕಸಭೆ ಚುನಾವಣೆಯಲ್ಲಿ ಇಂದಿರಾಗಾಂಧಿ ನೆನಪು

MUST WATCH

udayavani youtube

ವೈಭವದ ಹಿರಿಯಡ್ಕ ಸಿರಿಜಾತ್ರೆ ಸಂಪನ್ನ

udayavani youtube

ಯಾವೆಲ್ಲಾ ಚರ್ಮದ ಕಾಯಿಲೆಗಳಿವೆ ಹಾಗೂ ಪರಿಹಾರಗಳೇನು?

udayavani youtube

Mangaluru ಹೆಬ್ಬಾವಿನ ದೇಹದಲ್ಲಿ ಬರೋಬ್ಬರಿ 11 ಬುಲೆಟ್‌ ಪತ್ತೆ!

udayavani youtube

ನನ್ನ ಕಥೆ ನಿಮ್ಮ ಜೊತೆ

udayavani youtube

‘ಕಸಿ’ ಕಟ್ಟುವ ಸುಲಭ ವಿಧಾನ

ಹೊಸ ಸೇರ್ಪಡೆ

Bengaluru: ಚೆಕ್‌ ದುರ್ಬಳಕೆ; ಕ್ಯಾಷಿಯರ್‌, ಎಲ್‌ಐಸಿ ಏಜೆಂಟ್‌ಗೆ ಜೈಲು

Bengaluru: ಚೆಕ್‌ ದುರ್ಬಳಕೆ; ಕ್ಯಾಷಿಯರ್‌, ಎಲ್‌ಐಸಿ ಏಜೆಂಟ್‌ಗೆ ಜೈಲು

Lok Sabha Election: ಗ್ಯಾರಂಟಿಗೆ ಮೋಸ ಹೋಗದೆ ಬಿಜೆಪಿಗೆ ಮತ ನೀಡಿ: ಬಿವೈಆರ್‌

Lok Sabha Election: ಗ್ಯಾರಂಟಿಗೆ ಮೋಸ ಹೋಗದೆ ಬಿಜೆಪಿಗೆ ಮತ ನೀಡಿ: ಬಿವೈಆರ್‌

Bengaluru: ಇನ್‌ಸ್ಟಾದಲ್ಲಿ ಯುವತಿ ನಗ್ನ ಫೋಟೋ ವೈರಲ್‌; ಅಪರಿಚಿತನ ಮೇಲೆ ಕೇಸು

Bengaluru: ಇನ್‌ಸ್ಟಾದಲ್ಲಿ ಯುವತಿ ನಗ್ನ ಫೋಟೋ ವೈರಲ್‌; ಅಪರಿಚಿತನ ಮೇಲೆ ಕೇಸು

Namma Metro: ಮೆಟ್ರೋ ನಿಲ್ದಾಣಗಳ ಪಾದಚಾರಿ ಮಾರ್ಗಕ್ಕಿಲ್ಲ ಮುಕ್ತಿ

Namma Metro: ಮೆಟ್ರೋ ನಿಲ್ದಾಣಗಳ ಪಾದಚಾರಿ ಮಾರ್ಗಕ್ಕಿಲ್ಲ ಮುಕ್ತಿ

Chamarajanagara: ಇಂಡಿಗನತ್ತದಲ್ಲಿ ಮರುಮತದಾನ ಆರಂಭ

Chamarajanagara: ಇಂಡಿಗನತ್ತದಲ್ಲಿ ಮರುಮತದಾನ ಆರಂಭ

Thanks for visiting Udayavani

You seem to have an Ad Blocker on.
To continue reading, please turn it off or whitelist Udayavani.