ಬೂದಿಗೆರೆ ಕೆರೆ ಹೂಳೆತ್ತುವ ಕಾರ್ಯ


Team Udayavani, Jul 26, 2019, 10:22 AM IST

br-tdy-1

ದೇವನಹಳ್ಳಿ ತಾಲೂಕಿನ ಚನ್ನರಾಯಪಟ್ಟಣ ಹೋಬಳಿ ಬೂದಿಗೆರೆ ಗ್ರಾಮದಲ್ಲಿ ಸಾರ್ವಜನಿಕರ ಸಹಕಾರದೊಂದಿಗೆ ಕೆರೆ ಹೂಳೆತ್ತುವ ಕಾಮಗಾರಿಗೆ ಜಿಲ್ಲಾಧಿಕಾರಿ ಸಿ.ಎಸ್‌. ಕರೀಗೌಡ, ಶಾಸಕ ಎಲ್.ಎನ್‌.ನಾರಾಯಣಸ್ವಾಮಿ ಚಾಲನೆ ನೀಡಿದರು.

ದೇವನಹಳ್ಳಿ: ಕೆರೆಗಳ ನಿರ್ಮಾಣ ಮತ್ತು ಅವುಗಳ ಪುನಶ್ಚೇತನ ಕಾರ್ಯಗಳು ನಮ್ಮ ಹಿರಿಯರ ದೂರದೃಷ್ಟಿ ಯೋಚನೆಯಾಗಿದೆ. ಇಂತಹ ಜಲಮೂಲಗಳ ರಕ್ಷಣೆಯಿಂದ ಅಂತರ್ಜಲದ ಮಟ್ಟ ಹೆಚ್ಚುತ್ತದೆ ಎಂದು ಜಿಲ್ಲಾಧಿಕಾರಿ ಸಿ.ಎಸ್‌.ಕರೀಗೌಡ ತಿಳಿಸಿದರು.

ತಾಲೂಕಿನ ಚನ್ನರಾಯಪಟ್ಟಣ ಹೋಬಳಿ ಬೂದಿಗೆರೆ ಗ್ರಾಮದಲ್ಲಿ ಸಾರ್ವಜನಿಕರ ಸಹಕಾರದೊಂದಿಗೆ 399.12 ಎಕರೆ ಕೆರೆ ಹೂಳೆತ್ತುವ ಕಾಮಗಾರಿಗೆ ಚಾಲನೆ ನೀಡಿ ಮಾತನಾಡಿದರು.

ನೀರನ್ನು ಮಿತವಾಗಿ ಬಳಸಿ: ಪೂರ್ವಜರು ಸ್ಥಾಪಿಸಿರುವ ಜಲ ಮೂಲಗಳನ್ನು ಸಂರಕ್ಷಿಸಿಕೊಳ್ಳ ಬೇಕು. ಹೆಚ್ಚುತ್ತಿರುವ ಜನಸಂಖ್ಯೆಯಿಂದ ಪ್ರಾಕೃತಿಕ ಸಂಪನ್ಮೂಲದ ಮೇಲೆ ಒತ್ತಡವಿದೆ. ಭೂಮಿಯ ಮೇಲಿರುವ ಸಂಪನ್ಮೂಲದಲ್ಲಿ ಈಗಾಗಲೇ ಒಂದೂ ವರೆ ಪಟ್ಟು ಹೆಚ್ಚು ಬಳಸಿಕೊಂಡಿದ್ದೇವೆ. ಕಳೆದ ತಿಂಗಳು ಚೆನ್ನೈ ಮಹಾ ನಗರ ನೀರಿನ ಅಭಾವದಿಂದ ಸಂಕಷ್ಟಕ್ಕೆ ಸಿಲುಕಿರುವ ನಿದರ್ಶನ ನಮ್ಮ ಎದುರಿಗಿದೆ. ಈಗಾಗಲೇ ಮುಂಗಾರು ಮಳೆ ಕೊರತೆ ಎದುರಿಸುತ್ತಿ ದ್ದೇವೆ. ಪರಿಸ್ಥಿತಿ ಹೀಗೆ ಮುಂದುವರಿದರೆ ಬೆಂಗಳೂರಿ ನಲ್ಲೂ ಇಂತಹ ಸಮಸ್ಯೆ ಎದುರಾಗುವುದರಲ್ಲಿ ಸಂದೇಶವಿಲ್ಲ. ಹೀಗಾಗಿ ಪ್ರತಿ ಹನಿ ನೀರನ್ನು ಮಿತವಾಗಿ ಬಳಕೆ ಮಾಡಬೇಕು. ಸಂರಕ್ಷಣೆಗೆ ಮುನ್ನೆಚ್ಚರಿಕೆ ಕ್ರಮ ಗಳನ್ನು ಕೈಗೊಳ್ಳಬೇಕು. ಈಗ ಅನುಭವಿಸುತ್ತಿರುವ ನೀರಿನ ಬವಣೆ ವಿಕೋಪಕ್ಕೆ ಹೋದರೆ ಪರಿಸ್ಥಿತಿ ಯಾವ ಮಟ್ಟಕ್ಕೆ ಬರಲಿದೆ ಎಂದು ಪರಿಸ್ಥಿತಿಯನ್ನು ಅರ್ಥ ಮಾಡಿಕೊಳ್ಳಬೇಕು ಎಂದು ಹೇಳಿದರು.

ಸಾರ್ವಜನಿಕರ ಹಣದಿಂದ ಕಾಮಗಾರಿ: ಬೂದಿಗೆರೆ ಕೆರೆ ಹೂಳೆತ್ತಲು ಸರ್ಕಾರದ ಯಾವುದೇ ಅನುದಾನ ಬಳಸಿಲ್ಲ. ಸಾರ್ವಜನಿಕರಿಂದ ಹಣ ಸಂಗ್ರಹಿಸಿ ಜಿಲ್ಲೆ ಯಲ್ಲಿ ಹಲವು ಕೆರೆಗಳನ್ನು ಹೂಳೆತ್ತುವ ಕಾರ್ಯ ವಾಗುತ್ತಿದೆ. ಕೆರೆಯ ಹೂಳೆತ್ತುವ ಕಾರ್ಯ ಶತಮಾನ ಗಳಿಂದ ಆಗಿಲ್ಲ. ಕೆರೆಯಲ್ಲಿ ಗಿಡಗಂಟೆ ಬೆಳೆದಿರು ವುದರಿಂದ ಮಧ್ಯಭಾಗದ ಕೆರೆಯಲ್ಲಿ ನೀರಿನ ಅಂಶವೇ ಇಲ್ಲ. ಸಂಪೂರ್ಣ ಒಣಗಿ ಬಿರುಕು ಬಿಟ್ಟಿದೆ. ಜಲ ಮೂಲ ಸಂರಕ್ಷಣೆ ಮತ್ತು ಕೆರೆ ಅಭಿವೃದ್ಧಿಯಲ್ಲಿ ಸ್ಥಳೀಯರ ಸಹಭಾಗಿತ್ವ ಮಹತ್ವದ್ದಾಗಿದೆ. ಕೆರೆಗಳಲ್ಲಿ ನೀರು ತುಂಬದಿದ್ದರೆ ಮತ್ತು ಸಂರಕ್ಷಣೆ ಮಾಡದೇ ಇದ್ದರೆ ಪ್ರಸ್ತುತ ಈಗ ಅನುಭವಿಸುತ್ತಿರುವ ಬವಣೆ ವಿಕೋಪಕ್ಕೆ ತಲುಪುವ ಸಾಧ್ಯತೆಗಳಿವೆ. ಹೀಗಾಗಲೇ ಪ್ರತಿಯೊಬ್ಬರು ಅರ್ಥೈಸಿಕೊಂಡು ಎಚ್ಚರಿಕೆ ವಹಿಸ ಬೇಕು ಎಂದು ಗ್ರಾಮಸ್ಥರಿಗೆ ಮನವಿ ಮಾಡಿದರು.

ಕೆರೆ ಅಭಿವೃದ್ಧಿಯಿಂದ ಅಂತರ್ಜಲ ವೃದ್ಧಿ: ಶಾಸಕ ಎಲ್.ಎನ್‌. ನಾರಾಯಣಸ್ವಾಮಿ ಮಾತನಾಡಿ, ಅಂತಾ ರಾಷ್ಟ್ರೀಯ ವಿಮಾನ ನಿಲ್ದಾಣ ಯೋಜನೆ ಪ್ರಾಧಿಕಾರದ ಅಧ್ಯಕ್ಷರಾಗಿದ್ದ ವೇಳೆ 30 ಕೋಟಿ ರೂ.ಗಳ ಅನು ದಾನವನ್ನು ದೇವನಹಳ್ಳಿ ಕ್ಷೇತ್ರದ ಕೆರೆಗಳ ಅಭಿವೃದ್ಧಿಗೆ ಬಿಡುಗಡೆಗೊಳಿಸಿದ್ದೇನೆ. ನೀರಿನ ಬವಣೆಯಿಂದ ಜನ ಯಾವ ರೀತಿ ಕಷ್ಟ ಅನುಭವಿಸುತ್ತಿದ್ದಾರೆ ಎಂಬುದು ಪ್ರತಿಯೊಬ್ಬರಿಗೂ ತಿಳಿದಿದೆ. ಕೆರೆ ಅಭಿವೃದ್ಧಿಯಾದರೆ ಮಳೆ ನೀರು ಸಂಗ್ರಹಣೆಯಾಗುವುದರಿಂದ ಪ್ರಾಣಿ ಪಕ್ಷಿಗಳಿಗೆ ಜಾನುವಾರು, ಗದ್ದೆಗಳಿಗೆ ಹಾಗೂ ಜನರಿಗೆ ನೀರು ದೊರೆಯುತ್ತದೆ. ಸಮೀಪದ ಕೊಳವೆ ಬಾವಿ ಗಳಲ್ಲಿ ಅಂತರ್ಜಲ ಹೆಚ್ಚುತ್ತದೆ ಎಂದು ಹೇಳಿದರು.

ಗ್ರಾಪಂ ಅಧ್ಯಕ್ಷ ಕೆ. ಶ್ರೀನಿವಾಸ್‌ ಗೌಡ ಮಾತನಾಡಿ, ಗ್ರಾಮಸ್ಥರ ಸಭೆಯಲ್ಲಿ ಹೂಳೆತ್ತುವ ಕಾಮಗಾರಿಗೆ ದೇಣಿಗೆ ಸಂಗ್ರಹವಾಗಿದೆ. ಟ್ರಾಕ್ಟರ್‌, ಜೆಸಿಬಿ, ಟಿಪ್ಪರ್‌ ವಾಹನಗಳು 200ಕ್ಕೂ ಹೆಚ್ಚು ಕಾಮಗಾರಿಯಲ್ಲಿ ಉಚಿತವಾಗಿ ತೊಡಗಿಸಿಕೊಳ್ಳುವುದಾಗಿ ವಾಹನ ಮಾಲಿಕರು ತಿಳಿಸಿದ್ದಾರೆ. ಪಕ್ಷಾತೀತವಾಗಿ ಕೆರೆ ಹೂಳೆತ್ತುವ ಕಾಮಗಾರಿ ಮಾಡುತ್ತಿದ್ದೇವೆ ಎಂದು ಹರ್ಷ ವ್ಯಕ್ತಪಡಿಸಿದರು.

ತಾಪಂ ಮಾಜಿ ಸದಸ್ಯ ಲಕ್ಷ್ಮಣ್‌ಗೌಡ, ಜಿಪಂ ಸದಸ್ಯ ಕೆ.ಸಿ. ಮಂಜುನಾಥ್‌, ರಾಜ್ಯಸ್ವ ನಿರೀಕ್ಷಕ ಚಿದಾನಂದ್‌, ಗ್ರಾಪಂ ಮಾಜಿ ಅಧ್ಯಕ್ಷ ಪಾಪಣ್ಣ, ಜಯರಾಮೇಗೌಡ, ರಾಜಣ್ಣ, ವಿಎಸ್‌ಎಸ್‌ಎನ್‌ ನಿರ್ದೇಶಕ ಹಿತ್ತರಹಳ್ಳಿ ರಮೇಶ್‌, ಗ್ರಾಪಂ ಸದಸ್ಯ ರಾಮಮೂರ್ತಿ, ರಾಮಾಂಜಿನೇಯ ದಾಸ್‌, ನಟರಾಜು, ವಿಎಸ್‌ಎಸ್‌ಎನ್‌ ಅಧ್ಯಕ್ಷ ಶಂಕರಪ್ಪ, ಕೃಷಿಕ ಸಮಾಜದ ನಿರ್ದೇಶಕ ಕೃಷ್ಣಮೂರ್ತಿ, ಮುಖಂಡ ಶಿವಣ್ಣ, ನಾರಾಯಣಸ್ವಾಮಿ, ಕೇಶವ ಮತ್ತಿತರರು ಇದ್ದರು.

ಟಾಪ್ ನ್ಯೂಸ್

Yatindra

Yathindra Siddaramaiah ಗೂಂಡಾ, ರೌಡಿ ಹೇಳಿಕೆ : EC ಗೆ ದೂರು ನೀಡಿದ ಬಿಜೆಪಿ

1-ewqeqwqe

AAP ‘ಮಹಾರ್‍ಯಾಲಿ’ಯಲ್ಲಿ ಭಾಗಿಯಾಗಲಿರುವ ರಾಹುಲ್,ಖರ್ಗೆ,ಪವಾರ್, ಅಖಿಲೇಶ್

ಲೋಕಸಭಾ ಚುನಾವಣೆ: ಪಕ್ಷೇತರ ಅಭ್ಯರ್ಥಿಯಾಗಿ ಕಣಕ್ಕಿಳಿಯಲಿದ್ದಾರ ಸೂರಜ ನಾಯ್ಕ ಸೋನಿ ?

ಲೋಕಸಭಾ ಚುನಾವಣೆ: ಪಕ್ಷೇತರ ಅಭ್ಯರ್ಥಿಯಾಗಿ ಕಣಕ್ಕಿಳಿಯಲಿದ್ದಾರ ಸೂರಜ್ ನಾಯ್ಕ ಸೋನಿ ?

jds

JDS; ಮೂವರು ಅಭ್ಯರ್ಥಿಗಳ ಪಟ್ಟಿ ಪ್ರಕಟ: ಕೋಲಾರಕ್ಕೆ ಮಲ್ಲೇಶ್ ಬಾಬು

Rameshwaram Cafe ಪ್ರಕರಣ: ಇಬ್ಬರು ಶಂಕಿತರ ಮಾಹಿತಿ ನೀಡಿದವರಿಗೆ 10 ಲಕ್ಷ ಬಹುಮಾನ ಘೋಷಣೆ

Rameshwaram Cafe ಪ್ರಕರಣ: ಇಬ್ಬರು ಶಂಕಿತರ ಮಾಹಿತಿ ನೀಡಿದವರಿಗೆ ಬಹುಮಾನ ಘೋಷಣೆ ಮಾಡಿದ NIA

prahlad-joshi

LS Election; ದಿಂಗಾಲೇಶ್ವರ ಶ್ರೀ ಟೀಕೆ ನನಗೆ ಆಶೀರ್ವಾದ ಇದ್ದಂತೆ: ಪ್ರಹ್ಲಾದ್ ಜೋಶಿ

1-wewqeq

Kejriwal ಪತ್ನಿಯನ್ನು ರಾಬ್ರಿ ದೇವಿಗೆ ಹೋಲಿಸಿದ ಕೇಂದ್ರ ಸಚಿವ ಹರ್ದೀಪ್ ಪುರಿ


ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು

10

Electricity problem: ಬೇಸಿಗೆ ಬೆನ್ನಲ್ಲೇ ಕಾಡುತ್ತಿದೆ ವಿದ್ಯುತ್‌ ಸಮಸ್ಯೆ

Kanakapura ಚುನಾವಣೆ ಉಸ್ತುವಾರಿ ಹೊಣೆ ನಾನೇ ಹೊತ್ತುಕೊಳ್ಳುವೆ: ಸಿಪಿವೈ

Kanakapura ಚುನಾವಣೆ ಉಸ್ತುವಾರಿ ಹೊಣೆ ನಾನೇ ಹೊತ್ತುಕೊಳ್ಳುವೆ: ಸಿಪಿವೈ

Lok sabha polls: ಬೆಂ. ಗ್ರಾಮಾಂತರ; ಡಾ.ಮಂಜುನಾಥ್‌ ಸ್ಪರ್ಧೆ

Lok sabha polls: ಬೆಂ. ಗ್ರಾಮಾಂತರ; ಡಾ.ಮಂಜುನಾಥ್‌ ಸ್ಪರ್ಧೆ

Bannerghatta Biological Park: ಚಿರತೆ ಮರಿಗಳಿಗೆ ಉದ್ಯಾನವನದ ಸಿಬ್ಬಂದಿ ಆಸರೆ

Bannerghatta Biological Park: ಚಿರತೆ ಮರಿಗಳಿಗೆ ಉದ್ಯಾನವನದ ಸಿಬ್ಬಂದಿ ಆಸರೆ

Road Dispute: ರಸ್ತೆ ವಿವಾದ; ಪೊಲೀಸ್‌ ಠಾಣೆ ಮೆಟ್ಟಿಲೇರಿದ ಪ್ರಕರಣ

Road Dispute: ರಸ್ತೆ ವಿವಾದ; ಪೊಲೀಸ್‌ ಠಾಣೆ ಮೆಟ್ಟಿಲೇರಿದ ಪ್ರಕರಣ

MUST WATCH

udayavani youtube

ಟೌನಶಿಪ್’ನ ಬಾಡಿಗೆ ಮನೆಯೊಂದರಲ್ಲಿ ಕಳ್ಳತನ ರೂ: 47 ಸಾವಿರ ಕಳವು

udayavani youtube

ವಿಶ್ವ ಗುಬ್ಬಚ್ಚಿಗಳ ದಿನ | ಈ ಮನೆ ನೂರಾರು ಗುಬ್ಬಚ್ಚಿಗಳ ತವರು

udayavani youtube

ಬಡವರ ಸೇವೆಯೇ ಶ್ರೀರಾಮ ದೇವರ ಸೇವೆ : ಪೇಜಾವರಶ್ರೀ

udayavani youtube

ಕೆಂಪು ಹರಿವೆ ಸೊಪ್ಪು ಬೆಳೆಯುವ ಸೂಕ್ತ ವಿಧಾನ

udayavani youtube

ರಾಜಕೀಯದತ್ತ ಒಲವು ತೋರಿದ್ರಾ ಚಕ್ರವರ್ತಿ ಸೂಲಿಬೆಲೆ ?

ಹೊಸ ಸೇರ್ಪಡೆ

Yatindra

Yathindra Siddaramaiah ಗೂಂಡಾ, ರೌಡಿ ಹೇಳಿಕೆ : EC ಗೆ ದೂರು ನೀಡಿದ ಬಿಜೆಪಿ

1-ewqeqwqe

AAP ‘ಮಹಾರ್‍ಯಾಲಿ’ಯಲ್ಲಿ ಭಾಗಿಯಾಗಲಿರುವ ರಾಹುಲ್,ಖರ್ಗೆ,ಪವಾರ್, ಅಖಿಲೇಶ್

Lok Sabha Election: ಮಹಿಳೆ ಅಡುಗೆ ಮನೆಗಷ್ಟೇ ಸೀಮಿತವಲ್ಲ: ಗಾಯತ್ರಿ ಸಿದ್ದೇಶ್ವರ

Lok Sabha Election: ಮಹಿಳೆ ಅಡುಗೆ ಮನೆಗಷ್ಟೇ ಸೀಮಿತವಲ್ಲ: ಗಾಯತ್ರಿ ಸಿದ್ದೇಶ್ವರ

Kannada Cinema; ಚಿತ್ರೀಕರಣ ಮುಗಿಸಿದ ‘ವಿದ್ಯಾರ್ಥಿ ವಿದ್ಯಾರ್ಥಿನಿಯರೇ’

Kannada Cinema; ಚಿತ್ರೀಕರಣ ಮುಗಿಸಿದ ‘ವಿದ್ಯಾರ್ಥಿ ವಿದ್ಯಾರ್ಥಿನಿಯರೇ’

ಲೋಕಸಭಾ ಚುನಾವಣೆ: ಪಕ್ಷೇತರ ಅಭ್ಯರ್ಥಿಯಾಗಿ ಕಣಕ್ಕಿಳಿಯಲಿದ್ದಾರ ಸೂರಜ ನಾಯ್ಕ ಸೋನಿ ?

ಲೋಕಸಭಾ ಚುನಾವಣೆ: ಪಕ್ಷೇತರ ಅಭ್ಯರ್ಥಿಯಾಗಿ ಕಣಕ್ಕಿಳಿಯಲಿದ್ದಾರ ಸೂರಜ್ ನಾಯ್ಕ ಸೋನಿ ?

Thanks for visiting Udayavani

You seem to have an Ad Blocker on.
To continue reading, please turn it off or whitelist Udayavani.