ಇ-ಖಾತಾ ಆಂದೋಲನಕ್ಕೆ ಚಾಲನೆ


Team Udayavani, May 3, 2019, 11:49 AM IST

blore-g-2

ದೊಡ್ಡಬಳ್ಳಾಪುರ: ಮನೆ ನಿರ್ಮಿಸಲು, ಮನೆ ಅಥವಾ ನಿವೇಶನದ ಹಕ್ಕು ವರ್ಗಾವಣೆ, ಬ್ಯಾಂಕಿನಿಂದ ಸಾಲ ಪಡೆಯುವುದು ಸೇರಿದಂತೆ ಎಲ್ಲದಕ್ಕೂ ಈಗ ಇ-ಖಾತೆ ಕಡ್ಡಾಯವಾಗಿದ್ದು, ನಗರಸಭೆಯಿಂದ ಆರಂಭವಾಗಿರುವ ಇ-ಖಾತಾ ಆಂದೋಲನದಲ್ಲಿ ನಾಗರಿಕರು ಅಗತ್ಯ ದಾಖಲೆಗಳನ್ನು ಹಾಜರುಪಡಿಸಿ ಇ-ಖಾತೆಗಳನ್ನು ಪಡೆಯಬೇಕು ಎಂದು ಶಾಸಕ ಟಿ.ವೆಂಕಟರಮಣಯ್ಯ ಹೇಳಿದರು.

ಅವರು ಗುರುವಾರ ನಗರಸಭೆ ವತಿಯಿಂದ ನಗರದ 14ನೇ ವಾರ್ಡ್‌ ದೇವಲ ಮಹರ್ಷಿ ಶಾಲೆಯಲ್ಲಿ ನಡೆದ ಇ-ಖಾತೆ ಆಂದೋಲದಲ್ಲಿ ಇ-ಖಾತೆಯನ್ನು ಸ್ಥಳದಲ್ಲೇ ವಿತರಿಸಿ ಮಾತನಾಡಿದರು.

ಸಾರ್ವಜನಿಕರು ಮನೆ ನಿರ್ಮಿಸಲು, ಮನೆ ಅಥವಾ ನಿವೇಶನದ ಹಕ್ಕು ವರ್ಗಾವಣೆ, ಬ್ಯಾಂಕಿನಿಂದ ಸಾಲ ಪಡೆಯುವುದು ಸೇರಿದಂತೆ ಎಲ್ಲದಕ್ಕೂ ಈಗ ಇ-ಖಾತೆ ಕಡ್ಡಾಯವಾಗಿವೆ. ನಗರಸಭೆ ವ್ಯಾಪ್ತಿಯಲ್ಲಿನ ಎಲ್ಲ ಕಂದಾಯ ದಾಖಲೆಗಳು ಡಿಜಿಟಲೀಕರಣವಾಗಿವೆ. ಯಾವುದೇ ಸ್ವತ್ತನ್ನು ಮಾಲೀಕರಿಗೆ ತಿಳಿಯದಂತೆ ಮಾರಾಟ ಮಾಡಲು ಸಾಧ್ಯವೇ ಇಲ್ಲ. ಹೀಗಾಗಿ ಎಲ್ಲರು ಇ-ಖಾತೆಗಳಿಗೆ ಅರ್ಜಿ ಸಲ್ಲಿಸಿ ಇ-ಖಾತೆಗಳನ್ನು ಮಾಡಿಸಿಕೊಳ್ಳಬೇಕು. ಸರ್ಕಾರಿ ರಜಾ ದಿನ ಹೊರತುಪಡಿಸಿ ಪ್ರತಿದಿನ ಬೆಳಗ್ಗೆ 10 ರಿಂದ ಸಂಜೆ 4 ಗಂಟೆವರೆಗೆ ನಡೆಯಲಿದೆ ಎಂದರು.

ಇ-ಖಾತಾ ಕುರಿತು ಮಾಹಿತಿ ನೀಡಿದ ನಗರಸಭೆ ಪೌರಾಯುಕ್ತ ಆರ್‌.ಮಂಜುನಾಥ್‌ ಆಸ್ತಿ ಹಾಗೂ ಮಾಲೀಕರ ಭಾವ ಚಿತ್ರದ ಸಮೇತ ಆಧಾರ್‌ ಸಂಖ್ಯೆಯೊಂದಿಗೆ ಎಲ್ಲವೂ ಇ-ಖಾತಾ ಪತ್ರದಲ್ಲಿ ಇರಲಿವೆ. ಆಸ್ತಿ ಪರಭಾರೆಗೆ ಉಪನೋಂದಣಿ ಕಚೇರಿಗೆ ಹೋದರೆ ಅಲ್ಲಿ ಮಾಲೀಕರ ಭಾವಚಿತ್ರ ಸಮೇತ ಎಲ್ಲ ಮಾಹಿತಿಯು ಬರಲಿದೆ. ನಗರದಲ್ಲಿ ಇ-ಖಾತೆಗೆ ಹೆಚ್ಚು ಜನ ಅರ್ಜಿಗಳನ್ನು ಸಲ್ಲಿಸುತ್ತಿದ್ದಾರೆ. ಆದರೆ ಸೂಕ್ತ ದಾಖಲೆಗಳು, ಸಿಬ್ಬಂದಿಗೆ ಕಾರ್ಯಾಭಾರದ ಒತ್ತಡದಿಂದಾಗಿ ಸಾರ್ವಜನಿಕರಿಗೆ ಸಕಾಲದಲ್ಲಿ ಇ-ಖಾತೆಗಳನ್ನು ನೀಡುವುದು ವಿಳಂಭವಾಗುತಿತ್ತು.

ಇದನ್ನು ಮನಗೊಂಡ ಜಿಲ್ಲಾಧಿಕಾರಿಗಳು ಹಾಗೂ ನಗರಸಭೆ ಆಡಳಿತಾಧಿಕಾರಿ ಕರೀಗೌಡ ಅವರ ಆದೇಶದ ಮೇರೆಗೆ ಪ್ರತಿ ವಾರ್ಡ್‌ಗಳಲ್ಲಿಯೂ ಇ-ಖಾತೆ ಆಂದೋಲನವನ್ನು ಹಮ್ಮಿಕೊಳ್ಳಲಾಗಿದೆ. 2019-20ನೇ ಸಾಲಿನ ನೀರು, ನಿವೇಶನ ಕಂದಯ ಪಾವತಿ ಸೇರಿದಂತೆ ಅಗತ್ಯ ದಾಖಲಾತಿಗಳ ಮಾಹಿತಿಯನ್ನು ಒಳಗೊಂಡ ಕರ ಪತ್ರವನ್ನು ಮುದ್ರಿಸಿ ಹಂಚಿಕೆ ಮಾಡಲಾಗಿದೆ. ಅರ್ಜಿ ಸಲ್ಲಿಸಿದ ಒಂದು ಗಂಟೆಯಲ್ಲೇ ಇ-ಖಾತಾ ಪತ್ರವನ್ನು ಸ್ಥಳದಲ್ಲೇ ವಿತರಿಸಲಾಗುತ್ತಿದೆ ಎಂದರು.

ನಗರ ವಾಸದ ಹಾಗೂ ವಾಣಿಜ್ಯ ಸೇರಿ ಒಟ್ಟು 17,739 ಅಸ್ತಿಗಳಿವೆ. ಇವುಗಳ ಪೈಕಿ ಇಲ್ಲಿಯವರೆಗೆ 4,000 ಆಸ್ತಿಗಳಿಗೆ ಮಾತ್ರ ಇ-ಖಾತೆಗಳಾಗಿವೆ. ಮೊದಲ ದಿನ ಇ-ಖಾತೆಗೆ 35 ಜನ ಅರ್ಜಿಗಳನ್ನು ಪಡೆದಿದ್ದಾರೆ. ಶುಕ್ರವಾರ15 ನೇ ವಾರ್ಡ್‌ ಇ-ಖಾತಾ ಆಂದೋಲನವು ಸಹ ದೇವಲ ಮಹರ್ಷಿ ಶಾಲೆಯಲ್ಲಿಯೇ ಬೆಳಿಗ್ಗೆ 10 ರಿಂದ ಸಂಜೆ 4 ಗಂಟೆವರೆಗೂ ನಡೆಯಲಿದೆ. ಉಳಿದ ವಾಡ್ಗರ್ಳಲ್ಲಿ ಯಾವ ದಿನಾಂಕ, ಸ್ಥಳ, ಸಮಯವನ್ನು ಕರಪತ್ರದ ಮೂಲಕ ಹಂಚಿಕೆ ಮಾಡಲಾಗಿದೆ ಎಂದು ತಿಳಿಸಿದರು.

ಸಮಯಾವಕಾಶ ನೀಡಿ

ನಗರಸಭೆ ವತಿಯಿಂದ ಇ-ಖಾತಾ ಆಂದೋಲನ ಪ್ರಾರಂಭಿಸಿರುವುದು ಸಾರ್ವಜನಿಕರಿಗೆ ಅತ್ಯಂತ ಉಪಯುಕ್ತ ಹಾಗೂ ಅತ್ಯವಶ್ಯಕವಾದ ಕೆಲಸವಾಗಿದೆ. ಇದರಿಂದ ಸಾರ್ವಜನಿಕರಿಗೆ ಸಾಕಷ್ಟು ಸಮಯ, ಕಚೇರಿಗೆ ಅಲೆದಾಟ ತಪ್ಪಲಿದೆ. ಆದರೆ, ಇ-ಖಾತೆ ಮಾಡಿಸಲು ಅಗತ್ಯ ದಾಖಲೆಗಳನ್ನು ಹೊಂದಿಸಿಕೊಳ್ಳಲು ಸಮಯಾವಕಾಶ ಸಾಲದು. ಕನಿಷ್ಠ ಒಂದು ವಾರಗಳ ಮುಂಚಿತವಾಗಿಯೇ ಸಾರ್ವಜನಿಕರಿಗೆ ಪ್ರಚಾರ ಮಾಡಿದ್ದರೆ ದಾಖಲೆಗಳನ್ನು ಹೊಂದಿಸಿಕೊಳ್ಳಲು ಅನುಕೂಲವಾಗುತ್ತಿತ್ತು ಎಂದು 14ನೇ ವಾರ್ಡ್‌ ನಿವಾಸಿ ಶ್ರೀನಿವಾಸ್‌ ಹೇಳಿದರು.

ಟಾಪ್ ನ್ಯೂಸ್

Sringeri Sharadamba Temple; ಪ್ರಧಾನಿ ಮೋದಿ ಹೆಸರಲ್ಲಿ ಸಹಸ್ರನಾಮ ಪೂಜೆ

Sringeri Sharadamba Temple; ಪ್ರಧಾನಿ ಮೋದಿ ಹೆಸರಲ್ಲಿ ಸಹಸ್ರನಾಮ ಪೂಜೆ

Mangaluru: ಸಂಪರ್ಕ ಸೇತುವೆ ಇಲ್ಲದೆ ಬೋಟ್ ಮೂಲಕ ಬಂದು ಮತ ಚಲಾಯಿಸಿದ ಜನ

Mangaluru: ಸಂಪರ್ಕ ಸೇತುವೆ ಇಲ್ಲದೆ ಬೋಟ್ ಮೂಲಕ ಬಂದು ಮತ ಚಲಾಯಿಸಿದ ಜನ

INDIA ಒಕ್ಕೂಟ ಅಧಿಕಾರಕ್ಕೆ ಬಂದರೆ ರೈತರ ಸಾಲಮನ್ನಾ, ನಿರುದ್ಯೋಗ ನಿವಾರಣೆಗೆ ಆದ್ಯತೆ: ರಾಹುಲ್

INDIA ಒಕ್ಕೂಟ ಅಧಿಕಾರಕ್ಕೆ ಬಂದರೆ ರೈತರ ಸಾಲಮನ್ನಾ, ನಿರುದ್ಯೋಗ ನಿವಾರಣೆಗೆ ಆದ್ಯತೆ: ರಾಹುಲ್

Lok Sabha Polls: ಧರ್ಮಸ್ಥಳದಲ್ಲಿ ಧರ್ಮಾಧಿಕಾರಿ ಡಾ.ಡಿ.ವೀರೇಂದ್ರ ಹೆಗ್ಗಡೆ ಮತದಾನ

Lok Sabha Polls: ಧರ್ಮಸ್ಥಳದಲ್ಲಿ ಧರ್ಮಾಧಿಕಾರಿ ಡಾ.ಡಿ.ವೀರೇಂದ್ರ ಹೆಗ್ಗಡೆ ಮತದಾನ

WhatsApp ಭಾರತದಲ್ಲಿ ಸ್ಥಗಿತಗೊಳಿಸ್ತೇವೆ; ಹೈಕೋರ್ಟ್‌ ಮೆಟ್ಟಿಲೇರಿದ ಪ್ರಕರಣ, ಏನಿದು?

WhatsApp ಭಾರತದಲ್ಲಿ ಸ್ಥಗಿತಗೊಳಿಸ್ತೇವೆ; ಹೈಕೋರ್ಟ್‌ ಮೆಟ್ಟಿಲೇರಿದ ಪ್ರಕರಣ, ಏನಿದು?

Eletion: ತೀರ್ಥಹಳ್ಳಿಯಲ್ಲಿ ಪ್ರಚಾರದ ವೇಳೆ ತಮಿಳಿನಲ್ಲೆ ಮಾತನಾಡಿದ ನಟ ಶಿವರಾಜ್ ಕುಮಾರ್

Eletion: ತೀರ್ಥಹಳ್ಳಿಯಲ್ಲಿ ಪ್ರಚಾರದ ವೇಳೆ ತಮಿಳಿನಲ್ಲೆ ಮಾತನಾಡಿದ ನಟ ಶಿವರಾಜ್ ಕುಮಾರ್

Chitradurga: ಹೃದಯಾಘಾತದಿಂದ ಚುನಾವಣಾ ಕರ್ತವ್ಯದಲ್ಲಿದ್ದ ಶಿಕ್ಷಕಿ ಮೃತ್ಯು…

Chitradurga: ಚುನಾವಣಾ ಕರ್ತವ್ಯದಲ್ಲಿದ್ದಾಗಲೇ ಹೃದಯಾಘಾತಗೊಂಡು ಶಿಕ್ಷಕಿ ಮೃತ್ಯು…


ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು

ಬೇಸಿಗೆ ಬಿಸಿಯೂಟ: 32,173 ಮಕ್ಕಳ ನೋಂದಣಿ

ಬೇಸಿಗೆ ಬಿಸಿಯೂಟ: 32,173 ಮಕ್ಕಳ ನೋಂದಣಿ

Devanahalli: ಬೇಸಿಗೆ ತಾಪಮಾನ ಹೆಚ್ಚಳ, ಇರಲಿ ಎಚ್ಚರ

Devanahalli: ಬೇಸಿಗೆ ತಾಪಮಾನ ಹೆಚ್ಚಳ, ಇರಲಿ ಎಚ್ಚರ

Doddaballapur: ಜಾತೀಯತೆಗೆ ಮಣೆ ಹಾಕದ ಕ್ಷೇತ್ರದ ‌ಮತದಾರರು

Doddaballapur: ಜಾತೀಯತೆಗೆ ಮಣೆ ಹಾಕದ ಕ್ಷೇತ್ರದ ‌ಮತದಾರರು

Lok Sabha polls: ಲೋಕಸಭೆ ಚುನಾವಣೆಯಲ್ಲಿ ಇಂದಿರಾಗಾಂಧಿ ನೆನಪು

Lok Sabha polls: ಲೋಕಸಭೆ ಚುನಾವಣೆಯಲ್ಲಿ ಇಂದಿರಾಗಾಂಧಿ ನೆನಪು

10

Electricity problem: ಬೇಸಿಗೆ ಬೆನ್ನಲ್ಲೇ ಕಾಡುತ್ತಿದೆ ವಿದ್ಯುತ್‌ ಸಮಸ್ಯೆ

MUST WATCH

udayavani youtube

ವೈಭವದ ಹಿರಿಯಡ್ಕ ಸಿರಿಜಾತ್ರೆ ಸಂಪನ್ನ

udayavani youtube

ಯಾವೆಲ್ಲಾ ಚರ್ಮದ ಕಾಯಿಲೆಗಳಿವೆ ಹಾಗೂ ಪರಿಹಾರಗಳೇನು?

udayavani youtube

Mangaluru ಹೆಬ್ಬಾವಿನ ದೇಹದಲ್ಲಿ ಬರೋಬ್ಬರಿ 11 ಬುಲೆಟ್‌ ಪತ್ತೆ!

udayavani youtube

ನನ್ನ ಕಥೆ ನಿಮ್ಮ ಜೊತೆ

udayavani youtube

‘ಕಸಿ’ ಕಟ್ಟುವ ಸುಲಭ ವಿಧಾನ

ಹೊಸ ಸೇರ್ಪಡೆ

Sringeri Sharadamba Temple; ಪ್ರಧಾನಿ ಮೋದಿ ಹೆಸರಲ್ಲಿ ಸಹಸ್ರನಾಮ ಪೂಜೆ

Sringeri Sharadamba Temple; ಪ್ರಧಾನಿ ಮೋದಿ ಹೆಸರಲ್ಲಿ ಸಹಸ್ರನಾಮ ಪೂಜೆ

ಮೊದಲ ಬಾರಿ ಕುಂದಾನಗರಿಯಲ್ಲಿ ಪ್ರಧಾನಿ ಮೋದಿ ವಾಸ್ತವ್ಯ; 28ಕ್ಕೆ ಸಮಾವೇಶ

ಮೊದಲ ಬಾರಿ ಕುಂದಾನಗರಿಯಲ್ಲಿ ಪ್ರಧಾನಿ ಮೋದಿ ವಾಸ್ತವ್ಯ; 28ಕ್ಕೆ ಸಮಾವೇಶ

ಬಿಸಿಲ ಝಳದಿಂದ ಮೈದಾನಗಳು ಖಾಲಿ; ಮಕ್ಕಳ ಆಟಕ್ಕೂ ಉರಿ ಬಿಸಿಲು ಅಡ್ಡಿ!

ಬಿಸಿಲ ಝಳದಿಂದ ಮೈದಾನಗಳು ಖಾಲಿ; ಮಕ್ಕಳ ಆಟಕ್ಕೂ ಉರಿ ಬಿಸಿಲು ಅಡ್ಡಿ!

Mangaluru: ಸಂಪರ್ಕ ಸೇತುವೆ ಇಲ್ಲದೆ ಬೋಟ್ ಮೂಲಕ ಬಂದು ಮತ ಚಲಾಯಿಸಿದ ಜನ

Mangaluru: ಸಂಪರ್ಕ ಸೇತುವೆ ಇಲ್ಲದೆ ಬೋಟ್ ಮೂಲಕ ಬಂದು ಮತ ಚಲಾಯಿಸಿದ ಜನ

INDIA ಒಕ್ಕೂಟ ಅಧಿಕಾರಕ್ಕೆ ಬಂದರೆ ರೈತರ ಸಾಲಮನ್ನಾ, ನಿರುದ್ಯೋಗ ನಿವಾರಣೆಗೆ ಆದ್ಯತೆ: ರಾಹುಲ್

INDIA ಒಕ್ಕೂಟ ಅಧಿಕಾರಕ್ಕೆ ಬಂದರೆ ರೈತರ ಸಾಲಮನ್ನಾ, ನಿರುದ್ಯೋಗ ನಿವಾರಣೆಗೆ ಆದ್ಯತೆ: ರಾಹುಲ್

Thanks for visiting Udayavani

You seem to have an Ad Blocker on.
To continue reading, please turn it off or whitelist Udayavani.