ಇ-ಖಾತಾ ಆಂದೋಲನಕ್ಕೆ ಚಾಲನೆ


Team Udayavani, May 3, 2019, 11:49 AM IST

blore-g-2

ದೊಡ್ಡಬಳ್ಳಾಪುರ: ಮನೆ ನಿರ್ಮಿಸಲು, ಮನೆ ಅಥವಾ ನಿವೇಶನದ ಹಕ್ಕು ವರ್ಗಾವಣೆ, ಬ್ಯಾಂಕಿನಿಂದ ಸಾಲ ಪಡೆಯುವುದು ಸೇರಿದಂತೆ ಎಲ್ಲದಕ್ಕೂ ಈಗ ಇ-ಖಾತೆ ಕಡ್ಡಾಯವಾಗಿದ್ದು, ನಗರಸಭೆಯಿಂದ ಆರಂಭವಾಗಿರುವ ಇ-ಖಾತಾ ಆಂದೋಲನದಲ್ಲಿ ನಾಗರಿಕರು ಅಗತ್ಯ ದಾಖಲೆಗಳನ್ನು ಹಾಜರುಪಡಿಸಿ ಇ-ಖಾತೆಗಳನ್ನು ಪಡೆಯಬೇಕು ಎಂದು ಶಾಸಕ ಟಿ.ವೆಂಕಟರಮಣಯ್ಯ ಹೇಳಿದರು.

ಅವರು ಗುರುವಾರ ನಗರಸಭೆ ವತಿಯಿಂದ ನಗರದ 14ನೇ ವಾರ್ಡ್‌ ದೇವಲ ಮಹರ್ಷಿ ಶಾಲೆಯಲ್ಲಿ ನಡೆದ ಇ-ಖಾತೆ ಆಂದೋಲದಲ್ಲಿ ಇ-ಖಾತೆಯನ್ನು ಸ್ಥಳದಲ್ಲೇ ವಿತರಿಸಿ ಮಾತನಾಡಿದರು.

ಸಾರ್ವಜನಿಕರು ಮನೆ ನಿರ್ಮಿಸಲು, ಮನೆ ಅಥವಾ ನಿವೇಶನದ ಹಕ್ಕು ವರ್ಗಾವಣೆ, ಬ್ಯಾಂಕಿನಿಂದ ಸಾಲ ಪಡೆಯುವುದು ಸೇರಿದಂತೆ ಎಲ್ಲದಕ್ಕೂ ಈಗ ಇ-ಖಾತೆ ಕಡ್ಡಾಯವಾಗಿವೆ. ನಗರಸಭೆ ವ್ಯಾಪ್ತಿಯಲ್ಲಿನ ಎಲ್ಲ ಕಂದಾಯ ದಾಖಲೆಗಳು ಡಿಜಿಟಲೀಕರಣವಾಗಿವೆ. ಯಾವುದೇ ಸ್ವತ್ತನ್ನು ಮಾಲೀಕರಿಗೆ ತಿಳಿಯದಂತೆ ಮಾರಾಟ ಮಾಡಲು ಸಾಧ್ಯವೇ ಇಲ್ಲ. ಹೀಗಾಗಿ ಎಲ್ಲರು ಇ-ಖಾತೆಗಳಿಗೆ ಅರ್ಜಿ ಸಲ್ಲಿಸಿ ಇ-ಖಾತೆಗಳನ್ನು ಮಾಡಿಸಿಕೊಳ್ಳಬೇಕು. ಸರ್ಕಾರಿ ರಜಾ ದಿನ ಹೊರತುಪಡಿಸಿ ಪ್ರತಿದಿನ ಬೆಳಗ್ಗೆ 10 ರಿಂದ ಸಂಜೆ 4 ಗಂಟೆವರೆಗೆ ನಡೆಯಲಿದೆ ಎಂದರು.

ಇ-ಖಾತಾ ಕುರಿತು ಮಾಹಿತಿ ನೀಡಿದ ನಗರಸಭೆ ಪೌರಾಯುಕ್ತ ಆರ್‌.ಮಂಜುನಾಥ್‌ ಆಸ್ತಿ ಹಾಗೂ ಮಾಲೀಕರ ಭಾವ ಚಿತ್ರದ ಸಮೇತ ಆಧಾರ್‌ ಸಂಖ್ಯೆಯೊಂದಿಗೆ ಎಲ್ಲವೂ ಇ-ಖಾತಾ ಪತ್ರದಲ್ಲಿ ಇರಲಿವೆ. ಆಸ್ತಿ ಪರಭಾರೆಗೆ ಉಪನೋಂದಣಿ ಕಚೇರಿಗೆ ಹೋದರೆ ಅಲ್ಲಿ ಮಾಲೀಕರ ಭಾವಚಿತ್ರ ಸಮೇತ ಎಲ್ಲ ಮಾಹಿತಿಯು ಬರಲಿದೆ. ನಗರದಲ್ಲಿ ಇ-ಖಾತೆಗೆ ಹೆಚ್ಚು ಜನ ಅರ್ಜಿಗಳನ್ನು ಸಲ್ಲಿಸುತ್ತಿದ್ದಾರೆ. ಆದರೆ ಸೂಕ್ತ ದಾಖಲೆಗಳು, ಸಿಬ್ಬಂದಿಗೆ ಕಾರ್ಯಾಭಾರದ ಒತ್ತಡದಿಂದಾಗಿ ಸಾರ್ವಜನಿಕರಿಗೆ ಸಕಾಲದಲ್ಲಿ ಇ-ಖಾತೆಗಳನ್ನು ನೀಡುವುದು ವಿಳಂಭವಾಗುತಿತ್ತು.

ಇದನ್ನು ಮನಗೊಂಡ ಜಿಲ್ಲಾಧಿಕಾರಿಗಳು ಹಾಗೂ ನಗರಸಭೆ ಆಡಳಿತಾಧಿಕಾರಿ ಕರೀಗೌಡ ಅವರ ಆದೇಶದ ಮೇರೆಗೆ ಪ್ರತಿ ವಾರ್ಡ್‌ಗಳಲ್ಲಿಯೂ ಇ-ಖಾತೆ ಆಂದೋಲನವನ್ನು ಹಮ್ಮಿಕೊಳ್ಳಲಾಗಿದೆ. 2019-20ನೇ ಸಾಲಿನ ನೀರು, ನಿವೇಶನ ಕಂದಯ ಪಾವತಿ ಸೇರಿದಂತೆ ಅಗತ್ಯ ದಾಖಲಾತಿಗಳ ಮಾಹಿತಿಯನ್ನು ಒಳಗೊಂಡ ಕರ ಪತ್ರವನ್ನು ಮುದ್ರಿಸಿ ಹಂಚಿಕೆ ಮಾಡಲಾಗಿದೆ. ಅರ್ಜಿ ಸಲ್ಲಿಸಿದ ಒಂದು ಗಂಟೆಯಲ್ಲೇ ಇ-ಖಾತಾ ಪತ್ರವನ್ನು ಸ್ಥಳದಲ್ಲೇ ವಿತರಿಸಲಾಗುತ್ತಿದೆ ಎಂದರು.

ನಗರ ವಾಸದ ಹಾಗೂ ವಾಣಿಜ್ಯ ಸೇರಿ ಒಟ್ಟು 17,739 ಅಸ್ತಿಗಳಿವೆ. ಇವುಗಳ ಪೈಕಿ ಇಲ್ಲಿಯವರೆಗೆ 4,000 ಆಸ್ತಿಗಳಿಗೆ ಮಾತ್ರ ಇ-ಖಾತೆಗಳಾಗಿವೆ. ಮೊದಲ ದಿನ ಇ-ಖಾತೆಗೆ 35 ಜನ ಅರ್ಜಿಗಳನ್ನು ಪಡೆದಿದ್ದಾರೆ. ಶುಕ್ರವಾರ15 ನೇ ವಾರ್ಡ್‌ ಇ-ಖಾತಾ ಆಂದೋಲನವು ಸಹ ದೇವಲ ಮಹರ್ಷಿ ಶಾಲೆಯಲ್ಲಿಯೇ ಬೆಳಿಗ್ಗೆ 10 ರಿಂದ ಸಂಜೆ 4 ಗಂಟೆವರೆಗೂ ನಡೆಯಲಿದೆ. ಉಳಿದ ವಾಡ್ಗರ್ಳಲ್ಲಿ ಯಾವ ದಿನಾಂಕ, ಸ್ಥಳ, ಸಮಯವನ್ನು ಕರಪತ್ರದ ಮೂಲಕ ಹಂಚಿಕೆ ಮಾಡಲಾಗಿದೆ ಎಂದು ತಿಳಿಸಿದರು.

ಸಮಯಾವಕಾಶ ನೀಡಿ

ನಗರಸಭೆ ವತಿಯಿಂದ ಇ-ಖಾತಾ ಆಂದೋಲನ ಪ್ರಾರಂಭಿಸಿರುವುದು ಸಾರ್ವಜನಿಕರಿಗೆ ಅತ್ಯಂತ ಉಪಯುಕ್ತ ಹಾಗೂ ಅತ್ಯವಶ್ಯಕವಾದ ಕೆಲಸವಾಗಿದೆ. ಇದರಿಂದ ಸಾರ್ವಜನಿಕರಿಗೆ ಸಾಕಷ್ಟು ಸಮಯ, ಕಚೇರಿಗೆ ಅಲೆದಾಟ ತಪ್ಪಲಿದೆ. ಆದರೆ, ಇ-ಖಾತೆ ಮಾಡಿಸಲು ಅಗತ್ಯ ದಾಖಲೆಗಳನ್ನು ಹೊಂದಿಸಿಕೊಳ್ಳಲು ಸಮಯಾವಕಾಶ ಸಾಲದು. ಕನಿಷ್ಠ ಒಂದು ವಾರಗಳ ಮುಂಚಿತವಾಗಿಯೇ ಸಾರ್ವಜನಿಕರಿಗೆ ಪ್ರಚಾರ ಮಾಡಿದ್ದರೆ ದಾಖಲೆಗಳನ್ನು ಹೊಂದಿಸಿಕೊಳ್ಳಲು ಅನುಕೂಲವಾಗುತ್ತಿತ್ತು ಎಂದು 14ನೇ ವಾರ್ಡ್‌ ನಿವಾಸಿ ಶ್ರೀನಿವಾಸ್‌ ಹೇಳಿದರು.

ಟಾಪ್ ನ್ಯೂಸ್

1-24-saturday

Daily Horoscope: ಪಾಲುದಾರಿಕೆ ವ್ಯವಹಾರದಲ್ಲಿ ಲಾಭ ಹೆಚ್ಚಳ, ಆರೋಗ್ಯ ಉತ್ತಮ

CM ಆಪ್ತರ ಜತೆ ನಾಡಿದ್ದು ಸಿಎಂ ದಿಲ್ಲಿಗೆ; ವಾಲ್ಮೀಕಿ, ಮುಡಾ ಹಗರಣ: ಹೈಕಮಾಂಡ್‌ಗೆ ವಿವರಣೆ?

CM ಆಪ್ತರ ಜತೆ ನಾಡಿದ್ದು ಸಿಎಂ ದಿಲ್ಲಿಗೆ; ವಾಲ್ಮೀಕಿ, ಮುಡಾ ಹಗರಣ: ಹೈಕಮಾಂಡ್‌ಗೆ ವಿವರಣೆ?

Ramanagara ಜಿಲ್ಲೆ ಇನ್ನು ಬೆಂಗಳೂರು ದಕ್ಷಿಣ; ರಾಜ್ಯ ಸಚಿವ ಸಂಪುಟದಲ್ಲಿ ನಿರ್ಧಾರ

Ramanagara ಜಿಲ್ಲೆ ಇನ್ನು ಬೆಂಗಳೂರು ದಕ್ಷಿಣ; ರಾಜ್ಯ ಸಚಿವ ಸಂಪುಟದಲ್ಲಿ ನಿರ್ಧಾರ

Siddaramaiah ನನ್ನ ವಿರುದ್ಧ ವಿಪಕ್ಷ ಷಡ್ಯಂತ್ರ

Siddaramaiah ನನ್ನ ವಿರುದ್ಧ ವಿಪಕ್ಷ ಷಡ್ಯಂತ್ರ

Pilikula Biological Park: ಕಾಳಿಂಗ ಸರ್ಪಗಳಿಗೆ “ಮೈಕ್ರೋ ಚಿಪ್‌’!

Pilikula Biological Park: ಕಾಳಿಂಗ ಸರ್ಪಗಳಿಗೆ “ಮೈಕ್ರೋ ಚಿಪ್‌’!

1-aaasdeqweqw

India-Sri Lanka ಟಿ20 ಸರಣಿ ಇಂದಿನಿಂದ : ಸೂರ್ಯ, ಗಂಭೀರ್‌ ಯುಗಾರಂಭ

1-hockey

Paris Olympics ಹಾಕಿ ಕಂಚಿನಿಂದಾಚೆ ಮಿಂಚಲಿ ಭಾರತ


ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು

Crime: ಕಾಂಗ್ರೆಸ್‌ ಪುರಸಭೆ ಸದಸ್ಯನ ಭೀಕರ ಹತ್ಯೆ; ಆನೇಕಲ್‌ನಲ್ಲಿ ಉದ್ವಿಗ್ನ ಸ್ಥಿತಿ

Crime: ಕಾಂಗ್ರೆಸ್‌ ಪುರಸಭೆ ಸದಸ್ಯನ ಭೀಕರ ಹತ್ಯೆ; ಆನೇಕಲ್‌ನಲ್ಲಿ ಉದ್ವಿಗ್ನ ಸ್ಥಿತಿ

Ganja peddler: ಪೊಲೀಸರ ಮೇಲೆಯೇ  ಹಲ್ಲೆಗೆ ಯತ್ನಿಸಿದ ಗಾಂಜಾ ಪೆಡ್ಲರ್‌ಗೆ ಗುಂಡೇಟು; ಸೆರೆ

Ganja peddler: ಪೊಲೀಸರ ಮೇಲೆಯೇ  ಹಲ್ಲೆಗೆ ಯತ್ನಿಸಿದ ಗಾಂಜಾ ಪೆಡ್ಲರ್‌ಗೆ ಗುಂಡೇಟು; ಸೆರೆ

R.Ashok

Assembly Electionನಲ್ಲಿ ಮೈತ್ರಿಗೆ ದೇವೇಗೌಡರು ಒಪ್ಪಲಿಲ್ಲ: ಅಶೋಕ್‌

BRural

Devanahalli: ಗ್ರಾಮ ಪಂಚಾಯಿತಿಗಳಲ್ಲಿ ಇ- ಜನ್ಮ ದಾಖಲೆ

Wheeling: ಬೆಂಗಳೂರು ಹುಡುಗರಿಗೆ ವ್ಹೀಲಿಂಗ್‌ ಅಡ್ಡೆಯಾದ ಹೆದ್ದಾರಿ!

Wheeling: ಬೆಂಗಳೂರು ಹುಡುಗರಿಗೆ ವ್ಹೀಲಿಂಗ್‌ ಅಡ್ಡೆಯಾದ ಹೆದ್ದಾರಿ!

MUST WATCH

udayavani youtube

ಸರ್ಕಾರದ ವಿರುದ್ಧ ವಿಧಾನಸಭೆಯಲ್ಲಿ ಬಿಜೆಪಿ-JDS ಶಾಸಕರಿಂದ ಭಜನೆ

udayavani youtube

ಶಿರೂರು ಗುಡ್ಡಕುಸಿತ; ಕಾಣೆಯಾದವರ ಹುಡುಕಾಟಕ್ಕೆ ಡ್ರೋನ್ ಬಳಸಿ ಕಾರ್ಯಾಚರಣೆ

udayavani youtube

ಕರ್ಮಫಲ ಶಿಕ್ಷಣದಿಂದ ಆತ್ಮೋನ್ನತಿ

udayavani youtube

ತಪ್ತ ಮುದ್ರಾ ಧಾರಣೆ ವಿಶೇಷ ಮಹತ್ವದ್ದು, ಯಾಕೆ?

udayavani youtube

ಬಾಳೆಯಿಂದ ವಾರ್ಷಿಕ 50-60 ಲಕ್ಷ ರೂ. ಆದಾಯ

ಹೊಸ ಸೇರ್ಪಡೆ

1-24-saturday

Daily Horoscope: ಪಾಲುದಾರಿಕೆ ವ್ಯವಹಾರದಲ್ಲಿ ಲಾಭ ಹೆಚ್ಚಳ, ಆರೋಗ್ಯ ಉತ್ತಮ

CM ಆಪ್ತರ ಜತೆ ನಾಡಿದ್ದು ಸಿಎಂ ದಿಲ್ಲಿಗೆ; ವಾಲ್ಮೀಕಿ, ಮುಡಾ ಹಗರಣ: ಹೈಕಮಾಂಡ್‌ಗೆ ವಿವರಣೆ?

CM ಆಪ್ತರ ಜತೆ ನಾಡಿದ್ದು ಸಿಎಂ ದಿಲ್ಲಿಗೆ; ವಾಲ್ಮೀಕಿ, ಮುಡಾ ಹಗರಣ: ಹೈಕಮಾಂಡ್‌ಗೆ ವಿವರಣೆ?

Ramanagara ಜಿಲ್ಲೆ ಇನ್ನು ಬೆಂಗಳೂರು ದಕ್ಷಿಣ; ರಾಜ್ಯ ಸಚಿವ ಸಂಪುಟದಲ್ಲಿ ನಿರ್ಧಾರ

Ramanagara ಜಿಲ್ಲೆ ಇನ್ನು ಬೆಂಗಳೂರು ದಕ್ಷಿಣ; ರಾಜ್ಯ ಸಚಿವ ಸಂಪುಟದಲ್ಲಿ ನಿರ್ಧಾರ

Siddaramaiah ನನ್ನ ವಿರುದ್ಧ ವಿಪಕ್ಷ ಷಡ್ಯಂತ್ರ

Siddaramaiah ನನ್ನ ವಿರುದ್ಧ ವಿಪಕ್ಷ ಷಡ್ಯಂತ್ರ

Pilikula Biological Park: ಕಾಳಿಂಗ ಸರ್ಪಗಳಿಗೆ “ಮೈಕ್ರೋ ಚಿಪ್‌’!

Pilikula Biological Park: ಕಾಳಿಂಗ ಸರ್ಪಗಳಿಗೆ “ಮೈಕ್ರೋ ಚಿಪ್‌’!

Thanks for visiting Udayavani

You seem to have an Ad Blocker on.
To continue reading, please turn it off or whitelist Udayavani.