ಮತಾಂತರ ವಿರುದ್ಧ ಬೀದಿಗಿಳಿದು ಹೋರಾಟ: ಡಿವಿಎಸ್
Team Udayavani, Sep 26, 2021, 1:23 PM IST
ದೇವನಹಳ್ಳಿ: ರಾಜ್ಯದಲ್ಲಿ ಮತಾಂತರದ ವಿರುದ್ಧ ಹೋರಾಟ ಮಾಡಲಾಗುವುದು. ಮತಾಂತರ ಮಾಡುವುದನ್ನು ಕೂಡಲೇ ನಿಲ್ಲಿಸಬೇಕು ಎಂದು ಮಾಜಿ ಕೇಂದ್ರ ಸಚಿವ ಡಿವಿ ಸದಾನಂದ ಗೌಡ ತಿಳಿಸಿದರು.
ಪಟ್ಟಣದಲ್ಲಿ ಸುದ್ದಿಗಾರರೊಂದಿಗೆ ಮಾತನಾಡಿದ ಅವರು, ಮತಾಂತರ ತಡೆಗೆ ಎಲ್ಲಾ ರೀತಿಯಲ್ಲಿಯೂ ಹೋರಾಟಗಳನ್ನು ರೂಪಿಸಲಾಗುವುದು. ಯಾರೂ ಸಹ ಮತಾಂತರ ಆಗಬಾರದು. ಮತಾಂತರದ ವಿರುದ್ಧ ಧ್ವನಿ ಎತ್ತಲಾಗುವುದು. ಬೀದಿಗಿಳಿದು ಹೋರಾಟ ಮಾಡಲು ನಾವು ಸಿದ್ಧ ಎಂದರು.
ದೇಶದಲ್ಲಿ ಪೆಟ್ರೋಲ್, ಡೀಸೆಲ್ ಹಾಗೂ ಅಗತ್ಯ ವಸ್ತುಗಳ ಬೆಲೆ ಏರಿಕೆಗೆ ಕಾಂಗ್ರೆಸ್ನವರೇ ಮೂಲ ಕಾರಣ. ಕಾಂಗ್ರೆಸ್ ನವರು ಬಾಂಡ್ಗಳನ್ನು ಇಟ್ಟು ಕೊಂಡು ಸಾಲಗಳನ್ನು ಮಾಡಿದ್ದಾರೆ. ಈ ಕಾರಣ ಗೊತ್ತಿದ್ದರೂ ಸಹ ಕಾಂಗ್ರೆಸ್ ನವರು ಸೈಕಲ್, ಎತ್ತಿನ ಗಾಡಿ, ಟಾಂಗ ಸೇರಿದಂತೆ ವಿವಿಧ ರೀತಿಯಲ್ಲಿ ಹೋರಾಟ ಮಾಡಿ ಜನರ ದಿಕ್ಕನ್ನು ತಪ್ಪಿಸುವ ಕೆಲಸ ಮಾಡುತ್ತಿದ್ದಾರೆ. ಕಾಂಗ್ರೆಸ್ ಈಗಾಗಲೇ ಮುಳುಗಿದ ಹಡಗು ಆಗಿದೆ. ರೈತರ ಪ್ರತಿಭಟನೆ ಪರಿಹಾರವಲ್ಲ. ಪ್ರಧಾನಿ ನರೇಂದ್ರ ಮೋದಿ ಸಾಕಷ್ಟು ಸುತ್ತಿನ ಮಾತುಕತೆಯನ್ನು ಮಾಡಿದ್ದಾರೆ. ರೈತರ ಸಮಸ್ಯೆಯನ್ನು ಬಗೆಹರಿಸುತ್ತಾರೆ. ಬಂದ್ ಮಾಡುವುದು ಪರಿಹಾರವಲ್ಲ ಎಂದರು.
ಟಾಪ್ ನ್ಯೂಸ್
ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು
MUST WATCH
ಹೊಸ ಸೇರ್ಪಡೆ
Road Mishap; ಪಡುಬಿದ್ರಿ: ವಿದ್ಯುತ್ ಕಂಬಕ್ಕೆ ಕಾರು ಢಿಕ್ಕಿ: ಮಹಿಳೆ ಸಾವು
ಚನ್ನಮ್ಮನ ಕಿತ್ತೂರು: ಮಹಾನ್ ಯೋಗಿಗಳು-ಸೂಫಿ ಸಂತರ ನಾಡಿದು- ಶಿಲೇದಾರ
Sringeri Sharadamba Temple; ಪ್ರಧಾನಿ ಮೋದಿ ಹೆಸರಲ್ಲಿ ಸಹಸ್ರನಾಮ ಪೂಜೆ
ಮೊದಲ ಬಾರಿ ಕುಂದಾನಗರಿಯಲ್ಲಿ ಪ್ರಧಾನಿ ಮೋದಿ ವಾಸ್ತವ್ಯ; 28ಕ್ಕೆ ಸಮಾವೇಶ
ಬಿಸಿಲ ಝಳದಿಂದ ಮೈದಾನಗಳು ಖಾಲಿ; ಮಕ್ಕಳ ಆಟಕ್ಕೂ ಉರಿ ಬಿಸಿಲು ಅಡ್ಡಿ!