ದೇವಹಳ್ಳಿ ತಾ.ಕಚೇರಿಯಲ್ಲಿ ಇ-ಆಫೀಸ್‌ ವ್ಯವಸ್ಥೆ


Team Udayavani, Dec 13, 2019, 12:15 PM IST

br-tdy-1

ದೇವನಹಳ್ಳಿ : ನೆಲಮಂಗಲ ತಾಲೂಕಿನ ನಂತರ ಜಿಲ್ಲಾ ಕೇಂದ್ರ ದೇವನಹಳ್ಳಿ ತಾಲೂಕು ಕಚೇರಿಯಲ್ಲೂ ಕಾಗದ ರಹಿತ ಆಡಳಿತಕ್ಕೆ ಸಜ್ಜಾಗಿದ್ದು, ಇನ್ಮುಂದೆ ಎಲ್ಲಾ ವ್ಯವಹಾರಗಳು ಇ-ಆಫೀಸ್‌ ಮೂಲಕವೇ ನಡೆಯಲಿವೆ ಎಂದು ತಹಶೀಲ್ದಾರ್‌ ಅನಿಲ್‌ ಕುಮಾರ್‌ ತಿಳಿಸಿದರು.

ರಾಜ್ಯ ಸರ್ಕಾರ ಕಾಗದ ರಹಿತ ಆಡಳಿತಕ್ಕಾಗಿ ಜಾರಿಗೆ ತಂದಿರುವ ಇ-ಆಫೀಸ್‌ ತಂತ್ರಾಂಶವನ್ನು ಜಾರಿಗೆ ತಂದಿದ್ದು, ಅದರಂತೆ ತಾಲೂಕು ಕಚೇರಿ ಸಂಪೂರ್ಣ ಇ -ಆಫೀಸ್‌ ವ್ಯಾಪ್ತಿಗೆ ಒಳ ಪಡುವಂತೆ ಮಾಡಲಾಗಿದೆ. ಸಾರ್ವಜನಿಕರು ಇದರ ಸದುಪಯೋಗ ಪಡೆಯಬೇಕೆಂದು ತಹಶೀಲ್ದಾರ್‌ ಅನಿಲ್‌ ಕುಮಾರ್‌ ಅರೋಲಿಕರ್‌ ತಿಳಿಸಿದರು. ನಗರದ ತಾಲೂಕು ಕಚೇರಿಯಲ್ಲಿ ಕಂಪ್ಯೂಟರ್‌ ನಲ್ಲಿ ಇ-ಆಫೀಸ್‌ ಅರ್ಜಿಯನ್ನು ಅಪ್‌ಲೋಡ್‌ ಮಾಡುವುದರ ಇ-ಆಫೀಸ್‌ ವ್ಯವಸ್ಥೆಗೆ ಚಾಲನೆ ನೀಡಿ ಅವರು ಮಾತನಾಡಿದರು.

ಜಿಲ್ಲೆಯಲ್ಲಿ ಈಗಾಗಲೇ ನೆಲಮಂಗಲ ತಾ.ಕಚೇರಿಯಲ್ಲಿ ಇ-ಆಫೀಸ್‌ ತಂತ್ರಾಂಶದ ಮೂಲಕ ಕಾರ್ಯನಿರ್ವಹಿಸಲಾಗುತ್ತಿದೆ. ಈ ವವ್ಯಸ್ಥೆಯಿಂದ ತಾಲೂಕು ಕಚೇರಿಯ ಟಪಾಲಿಗೆ ಬಂದ ಅರ್ಜಿಯು ನನಗೆ ತಕ್ಷಣ ತಿಳಿಯುತ್ತದೆ. ಸಾರ್ವಜನಿಕರು ನೀಡುವ ಅರ್ಜಿಯನ್ನು ಸ್ಕ್ಯಾನ್ ಮಾಡುವುದರ ಮೂಲಕ ಇ-ಆಫೀಸ್‌ನಲ್ಲಿ ಸಂಗ್ರಹಿಸಲಾಗುತ್ತದೆ. ಯಾವ ಶಾಖೆಗೆ ತಲುಪಬೇಕೋ ಆ ಶಾಖೆ ವ್ಯಾಪ್ತಿಗೆ ಬರುತ್ತದೆ. ಸಾರ್ವಜನಿಕರಿಗೆ ಒಂದು ನಂಬರ್‌ ಅನ್ನು ನೀಡುತ್ತೇವೆ. ಆ ನಂಬರ್‌ ಅನ್ನು ಮೊಬೈಲ್‌ ನಲ್ಲಿಯೇ ಕೂತ ಜಾಗದಲ್ಲಿ ಪರಿಶೀಲಿಸಿ ತಮ್ಮ ಅರ್ಜಿ ನೀಡಿರುವುದು ಯಾವ ಹಂತದಲ್ಲಿ ಇದೆ ಎಂಬುವುದರ ಬಗ್ಗೆ ತಿಳಿದುಕೊಳ್ಳಬಹುದು. ಇ -ಆಫೀಸ್‌ ಮೂಲಕ ಪಾರದರ್ಶಕ , ಜನಸ್ನೇಹಿ ಕಚೇರಿಯಾಗಿ ಮಾರ್ಪಾಡಾಗಲು ಸಹಕಾರಿಯಾಗಲಿದ್ದು, ಮಧ್ಯವರ್ತಿಗಳ ಹಾವಳಿಗೆ ಬ್ರೇಕ್‌ಬ ಬೀಳಲಿದೆ ಎಂದರು.

ದಲ್ಲಾಳಿಗಳ ಹಾವಳಿಗೆ ಬ್ರೇಕ್‌: ಇನ್ಮುಂದೆ ಅಧಿಕಾರಿಗಳು ಯಾವುದೇ ಸಬೂಬು ಹೇಳುವುದು ಕಡಿಮೆ ಆಗುತ್ತದೆ. ನಿಗದಿತ ವೇಳೆಗೆ ಅರ್ಜಿಗಳು ವಿಲೇವಾರಿ ಆಗುತ್ತವೆ. ಪತ್ರ ವ್ಯವಹಾರ ಕಡಿಮೆಯಾಗಿ ಇ -ಆಫೀಸ್‌ ತಂತ್ರಾಂಶದಲ್ಲಿಯೇ ವ್ಯವಹಾರ ಮಾಡಬಹುದು ಎಂದರು.

ಅಲೆದಾಟ ತಪ್ಪಲಿದೆ: ಇ-ಆಫೀಸ್‌ನಿಂದ ಸಾರ್ವಜನಿಕರು ಮತ್ತು ರೈತರು ಕಚೇರಿಗೆ ಅಲೆದಾಡುವುದು ತಪ್ಪಲಿದೆ. ಕಡತ, ಅರ್ಜಿಗಳ ವಿಲೇವಾರಿ ವಿಳಂಬ ತಪ್ಪಿಸಲು ಈ ಸೌಲಭ್ಯ ಉತ್ತಮವಾಗಿದೆ. ಇ ಆಫೀಸ್‌ ನಲ್ಲಿ ಸರಿಯಾದ ಸಮಯಕ್ಕೆ ಅರ್ಜಿಗಳನ್ನು ವಿಲೇವಾರಿ ಮಾಡದಿದ್ದರೆ ಅಂತಹ ಅಧಿಕಾರಿಗಳ ಮೇಲೆ ಕ್ರಮ ಕೈ ಗೊಳ್ಳಬೇಕಾಗುತ್ತದೆ. ಟಪಾಲಿನಲ್ಲಿ ಸಲ್ಲಿಸಿದ ಅರ್ಜಿ ಕೇಸ್‌ ಗಳು ಸಿಬ್ಬಂಧಿಗಳು, ಶಿರಸ್ಥೆದಾರ್‌, ತಹಶೀಲ್ದಾರ್‌ ಅವರಿಗೆ ನೇರವಾಗಿ ಮಾಹಿತಿ ತಿಳಿಯಲಿದೆ ಎಂದು ಹೇಳಿದರು. ಈ ವೇಳೆ ಶಿರಸ್ಥೆದಾರ್‌ ನಿಸಾರ್‌ ಅಹಮದ್‌, ಗ್ರಾಮ ಲೆಕ್ಕಾಧಿಕಾರಿ ಮಂಜುನಾಥ್‌, ಹನುಮಂತ ರಾಯಪ್ಪ, ಮತ್ತಿತರರು ಇದ್ದರು.

ಟಾಪ್ ನ್ಯೂಸ್

13-

Muddebihal: ಅಪರಿಚಿತ ವಾಹನ ಡಿಕ್ಕಿ: ಯುವಕ ಸಾವು

11-udyavara

Sand Mining; ಉದ್ಯಾವರ: ಚುನಾವಣ ಚೆಕ್‌ಪೋಸ್ಟ್‌ ಬಳಿ ಅಕ್ರಮ ಮರಳು ಸಾಗಾಟ ಪತ್ತೆ

MDH-Everest ban: India seeks details from Singapore, Hong Kong

MDH- Everest ಮಸಾಲೆ ನಿಷೇಧ: ಸಿಂಗಾಪುರ, ಹಾಂಕಾಂಗ್‌ ನಿಂದ ವಿವರ ಕೇಳಿದ ಭಾರತ

ದೇಶದ ನಿರುದ್ಯೋಗ ಪ್ರಮಾಣ 45 ವರ್ಷದಲ್ಲೇ ಗರಿಷ್ಠ: ಪ್ರಿಯಾಂಕಾ ಕಿಡಿ

Priyanka Gandhi; ದೇಶದ ನಿರುದ್ಯೋಗ ಪ್ರಮಾಣ 45 ವರ್ಷದಲ್ಲೇ ಗರಿಷ್ಠ

Neha Hiremath ತಂದೆ ಜತೆ ಮಾತನಾಡಿ ಸಾಂತ್ವನ ಹೇಳಿದ ಸಿಎಂ ಸಿದ್ದು

Neha Hiremath ತಂದೆ ಜತೆ ಮಾತನಾಡಿ ಸಾಂತ್ವನ ಹೇಳಿದ ಸಿಎಂ ಸಿದ್ದು

Congress ಗೆದ್ದರೆ ಸಿದ್ದರಾಮಯ್ಯ ಕೆಳಗಿಳಿಸಿ ಡಿಕೆಶಿ ಸಿಎಂ: ಯತ್ನಾಳ್

Congress ಗೆದ್ದರೆ ಸಿದ್ದರಾಮಯ್ಯ ಕೆಳಗಿಳಿಸಿ ಡಿಕೆಶಿ ಸಿಎಂ: ಯತ್ನಾಳ್

Harihara ಬಿಜೆಪಿ ಶಾಸಕ ಬಿ.ಪಿ.ಹರೀಶ್‌ಗೆ ಜೀವ ಬೆದರಿಕೆ,

Harihara ಬಿಜೆಪಿ ಶಾಸಕ ಬಿ.ಪಿ.ಹರೀಶ್‌ಗೆ ಜೀವ ಬೆದರಿಕೆ


ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು

ಬೇಸಿಗೆ ಬಿಸಿಯೂಟ: 32,173 ಮಕ್ಕಳ ನೋಂದಣಿ

ಬೇಸಿಗೆ ಬಿಸಿಯೂಟ: 32,173 ಮಕ್ಕಳ ನೋಂದಣಿ

Devanahalli: ಬೇಸಿಗೆ ತಾಪಮಾನ ಹೆಚ್ಚಳ, ಇರಲಿ ಎಚ್ಚರ

Devanahalli: ಬೇಸಿಗೆ ತಾಪಮಾನ ಹೆಚ್ಚಳ, ಇರಲಿ ಎಚ್ಚರ

Doddaballapur: ಜಾತೀಯತೆಗೆ ಮಣೆ ಹಾಕದ ಕ್ಷೇತ್ರದ ‌ಮತದಾರರು

Doddaballapur: ಜಾತೀಯತೆಗೆ ಮಣೆ ಹಾಕದ ಕ್ಷೇತ್ರದ ‌ಮತದಾರರು

Lok Sabha polls: ಲೋಕಸಭೆ ಚುನಾವಣೆಯಲ್ಲಿ ಇಂದಿರಾಗಾಂಧಿ ನೆನಪು

Lok Sabha polls: ಲೋಕಸಭೆ ಚುನಾವಣೆಯಲ್ಲಿ ಇಂದಿರಾಗಾಂಧಿ ನೆನಪು

10

Electricity problem: ಬೇಸಿಗೆ ಬೆನ್ನಲ್ಲೇ ಕಾಡುತ್ತಿದೆ ವಿದ್ಯುತ್‌ ಸಮಸ್ಯೆ

MUST WATCH

udayavani youtube

ಯಾವೆಲ್ಲಾ ಚರ್ಮದ ಕಾಯಿಲೆಗಳಿವೆ ಹಾಗೂ ಪರಿಹಾರಗಳೇನು?

udayavani youtube

Mangaluru ಹೆಬ್ಬಾವಿನ ದೇಹದಲ್ಲಿ ಬರೋಬ್ಬರಿ 11 ಬುಲೆಟ್‌ ಪತ್ತೆ!

udayavani youtube

ನನ್ನ ಕಥೆ ನಿಮ್ಮ ಜೊತೆ

udayavani youtube

‘ಕಸಿ’ ಕಟ್ಟುವ ಸುಲಭ ವಿಧಾನ

udayavani youtube

ಬೇಸಿಗೆಯಲ್ಲಿ ನಮ್ಮನ್ನು ಕಾಡುವ Heat Illnessಏನಿದು ಸಮಸ್ಯೆ ? ಪರಿಹಾರವೇನು ?

ಹೊಸ ಸೇರ್ಪಡೆ

13-

Muddebihal: ಅಪರಿಚಿತ ವಾಹನ ಡಿಕ್ಕಿ: ಯುವಕ ಸಾವು

12

Theft; ಕೊಲ್ಲೂರು: ಮಹಿಳೆಯ ಚಿನ್ನ, ನಗದು ಕಳವು

11-udyavara

Sand Mining; ಉದ್ಯಾವರ: ಚುನಾವಣ ಚೆಕ್‌ಪೋಸ್ಟ್‌ ಬಳಿ ಅಕ್ರಮ ಮರಳು ಸಾಗಾಟ ಪತ್ತೆ

Gadag; ತೋಂಟದಾರ್ಯ ಮಠದ ಅದ್ದೂರಿ ಮಹಾರಥೋತ್ಸವ

Gadag; ತೋಂಟದಾರ್ಯ ಮಠದ ಅದ್ದೂರಿ ಮಹಾರಥೋತ್ಸವ

10-shirva

ಮೂಡುಬೆಳ್ಳೆ ಶ್ರೀಮಹಾಲಿಂಗೇಶ್ವರ, ಶ್ರೀ ಮಹಾಗಣಪತಿ, ಶ್ರೀ ಸೂರ್ಯನಾರಾಯಣ ದೇಗುಲ

Thanks for visiting Udayavani

You seem to have an Ad Blocker on.
To continue reading, please turn it off or whitelist Udayavani.