ಶಿಕ್ಷಣ, ಧಾರ್ಮಿಕ ಕಾರ್ಯದಲ್ಲಿ ಮಠಗಳ ಪ್ರಮುಖ ಪಾತ್ರ


Team Udayavani, Apr 19, 2017, 4:44 PM IST

16-Z-3.jpg

ನೆಲಮಂಗಲ: ರಾಜ್ಯದಲ್ಲಿ ಶಿಕ್ಷಣ ಮತ್ತು ಇತರ ಧರ್ಮಕಾರ್ಯಗಳ ಅಭಿವೃದ್ಧಿಯಲ್ಲಿ ಮಠಗಳ ಪಾತ್ರ ಪ್ರಮುಖವಾದದ್ದು. ಇತರೆ ಧರ್ಮಗಳ ಸಮುದಾಯಗಳ ಮಠಗಳೂ ಉತ್ತಮ ಸೇವೆ ನಡೆಸಿಕೊಂಡು ಬರುತ್ತಿವೆ ಎಂದು ಸಂಸದ ವೀರಪ್ಪ ಮೊಯ್ಲಿ ತಿಳಿಸಿದರು. ತಾಲೂಕಿನ ಸೋಂಪುರ ಹೋಬಳಿಯ ಶಿವಗಂಗೆಯ ಶ್ರೀಹೊನ್ನಮ್ಮ ಗವಿ ಮಠದಲ್ಲಿ ನಡೆದ ಜಾತ್ರಾ ಮಹೋತ್ಸವ, ಮಠದಲ್ಲಿ ಅನಾಥಶ್ರಮ, ವೃದ್ಧಾಶ್ರಮ ಕಟ್ಟಡದ ಶಂಕುಸ್ಥಾಪನೆ ಕಾರ್ಯಕ್ರಮದಲ್ಲಿ ಮಾತನಾಡಿದರು.

ತಾಲೂಕಿನಲ್ಲಿಯೇ ಶಿವಗಂಗೆ ಭಾಗದಲ್ಲಿ ಹೆಚ್ಚಿನ ಮಠಗಳು ಇದ್ದು, ಉತ್ತಮ ಸಮಾಜ ಸೇವೆಯನ್ನು ನಡೆಸಿಕೊಂಡು ಬರುತ್ತಿವೆ. ಇಲ್ಲಿನ ಪೀಠಾಧ್ಯಕ್ಷರು ಜನರಿಗೆ ಉತ್ತಮ ಶಿಕ್ಷಣ, ಧಾರ್ಮಿಕ ಬೋಧನೆಯ ಜೊತೆಗೆ ಮಾನವೀಯ ಮೌಲ್ಯಗಳನ್ನು ತಿಳಿಸುತ್ತಿದ್ದಾರೆ. ಉತ್ತಮ ಸ್ಪಂದನೆ ಹೊಂದಿದ್ದಾರೆ. ಇಲ್ಲಿಯ ಮಠದ ಪೂಜ್ಯರು ಚಿಕ್ಕ ವಯಸ್ಕರಾದರೂ ಹೆಚ್ಚಿನ ಶ್ರಮದಿಂದ ಮಠವನ್ನು ಅಭಿವೃದ್ಧಿ ಪಡಿಸಿದ್ದಾರೆ ಮತ್ತು ಇತರ ಸ್ವಾಮೀಜಿಯವರಿಗೂ ಮಾರ್ಗದರ್ಶಿಯಾಗಿದ್ದಾರೆ ಎಂದು ವಿವರಿಸಿದರು.

ಎರಡು ರಥೋತ್ಸವ, ದನಗಳ ಜಾತ್ರೆ: ದೊಡ್ಡಮಠದ ಶಿವಬಸವ ಸ್ವಾಮೀಜಿ ಮಾತನಾಡಿ, ಶಿವಗಂಗೆಯಲ್ಲಿನ ಶ್ರೀ ಸ್ವಾರ್ಣಾಂಬ ದೇವಿಯ ಶಕ್ತಿ ಅಪಾರವಾದದ್ದು, ಆದ್ದರಿಂದ ದೇವಿಯ ಶಕ್ತಿಯ ಆರಾಧಕರು ಸಾಕಷ್ಟು ಸಂಖ್ಯೆಯಲ್ಲಿದ್ದಾರೆ. ಈ ದೇವಿಗೆ ಪ್ರತಿವರ್ಷವು ವಿಶೇಷವಾಗಿ ಜಾತ್ರಾ ಮಹೋತ್ಸವವನ್ನು ಆಚರಿಸಿಕೊಂಡು ಬರುತ್ತಿದ್ದಾರೆ. ಈ ಕ್ಷೇತ್ರದಲ್ಲಿ ವರ್ಷಕ್ಕೆ ಎರಡು ದನಗಳ ಜಾತ್ರೆ ಮತ್ತು ಎರಡು ರಥೋತ್ಸವಗಳು ನಡೆಯುತ್ತಿವೆ.

ಮುಖ್ಯವಾಗಿ ಸಂಕ್ರಾಂತಿಯ ಹಬ್ಬದಂದು ಗಂಗಾಧರೇಶ್ವರ ಸ್ವಾಮಿ ಕಲ್ಯಾಣ ಮಹೋತ್ಸವ ಮತ್ತು ಏಪ್ರಿಲ್‌ನಲ್ಲಿ ಹೊನ್ನಮ್ಮ ದೇವಿ ಜಾತ್ರೆ ಹಾಗೂ ರಥೋತ್ಸವಗಳು ನಡೆಯುತ್ತವೆ ಎಂದು ಹೇಳಿದರು. ವಿಶೇಷವೆಂದರೆ ಉತ್ಸವಗಳನ್ನು ಸರಕಾರದ ವತಿಯಿಂದಲೂ ನಡೆಸಿಕೊಂಡು ಬರುತ್ತಿದ್ದಾರೆ. ಅಲ್ಲದೆ, ಹೊನ್ನಮ್ಮಗವಿ ಮಠದ ವತಿಯಿಂದ ವಿಶೇಷವಾದ ಮಡೆ (ಆರತಿ)ಮತ್ತು ತೆಪ್ಪೋತ್ಸವ ಸೇರಿದಂತೆ ವಿವಿಧ ಪೂಜೆ ಉತ್ಸವಗಳನ್ನು ವಿಜೃಂಭಣೆಯಿಂದ ನಡೆಸಿಕೊಂಡು ಬರುತ್ತಿದ್ದಾರೆ ಎಂದು ಹೇಳಿದರು.

ಹೊನ್ನಮ್ಮ ಗವಿ ಮಠದ ರುದ್ರಮುನಿ ಶಿವಾಚಾರ್ಯ ಸ್ವಾಮೀಜಿ ಪ್ರಸ್ತಾವಿಕವಾಗಿ ಮಾತನಾಡಿದರು. ಕಾರ್ಯಕ್ರಮದಲ್ಲಿ ದೊಡ್ಡ ಬಳ್ಳಾಪುರ ಕ್ಷೇತ್ರದ ಶಾಸಕ ವೆಂಕಟರಮಣಪ್ಪ, ಶಿವಗಂಗೆಯ ಗಿರಿಪ್ರದಕ್ಷಿಣೆ ಸಂಘದ ಅಧ್ಯಕ್ಷ ಚಂದ್ರಪ್ಪ, ಸೇವಾಕರ್ತರಾದ ರೂಪ ಶಿವಾನಂದ ಮೂರ್ತಿ, ಹೇಮಲತ ಶುಭಾಸ್‌, ಲತಾ ಪರಮೇಶ್‌, ಗೌರಿಶಂಕರ್‌ ಅಂಚೆಮನೆ ರುದ್ರಪ್ಪ, ಪ್ರಕಾಶ್‌, ಉಮೇಶ್‌, ಚೌಡಯ್ಯ, ತಿರುಮಲ್ಲೇಶ್‌, ರವಿಕುಮಾರ್‌, ಸಿದ್ದರಾಜು ಭಾಗವಹಿಸಿದ್ದರು.

ಟಾಪ್ ನ್ಯೂಸ್

pralhad joshi

Hubli; ದ್ವಂದ್ವತೆ, ತುಷ್ಟೀಕರಣ ಕಾಂಗ್ರೆಸ್ ರಕ್ತದ ಕಣಕಣದಲ್ಲಿದೆ: ಪ್ರಹ್ಲಾದ ಜೋಶಿ

ಹೆದ್ದಾರಿ ಬದಿ ನಿಂತಿದ್ದ ಟ್ರಕ್ ಗೆ ಕಾರು ಡಿಕ್ಕಿ… ಮಗು ಸೇರಿ 6 ಮಂದಿ ಸ್ಥಳದಲ್ಲೇ ಮೃತ್ಯು

ಹೆದ್ದಾರಿ ಬದಿ ನಿಂತಿದ್ದ ಟ್ರಕ್ ಗೆ ಕಾರು ಡಿಕ್ಕಿ… ಮಗು ಸೇರಿ 6 ಮಂದಿ ಸ್ಥಳದಲ್ಲೇ ಮೃತ್ಯು

Chamarajanagar: ಕೊಳ್ಳೇಗಾಲ ಶಾಸಕ ಎ ಆರ್ ಕೃಷ್ಣಮೂರ್ತಿ ಕಾರು ಅಪಘಾತ, ಅಪಾಯದಿಂದ ಪಾರು

Chamarajanagar: ಕೊಳ್ಳೇಗಾಲ ಶಾಸಕ ಎ ಆರ್ ಕೃಷ್ಣಮೂರ್ತಿ ಕಾರು ಅಪಘಾತ, ಅಪಾಯದಿಂದ ಪಾರು

BJP Minority Morcha Leader Expelled

Usman Ghani: ಮೋದಿ ಹೇಳಿಕೆ ಟೀಕೆ ಮಾಡಿದ ಬಿಜೆಪಿ ಅಲ್ಪಸಂಖ್ಯಾತ ಮೋರ್ಚಾ ಅಧ್ಯಕ್ಷ ಉಚ್ಛಾಟನೆ

Award: ಅಮಿತಾಬ್ ಬಚ್ಚನ್, ಎಆರ್ ರೆಹಮಾನ್ ಗೆ ದೀನನಾಥ್ ಮಂಗೇಶ್ಕರ್ ಪ್ರಶಸ್ತಿ ಗೌರವ

ಪ್ರತಿಷ್ಠಿತ ಲತಾ ದೀನನಾಥ್ ಮಂಗೇಶ್ಕರ್ ಪ್ರಶಸ್ತಿ ಸ್ವೀಕರಿಸಿದ ಬಾಲಿವುಡ್ ನಟ ಅಮಿತಾಬ್ ಬಚ್ಚನ್

5-harikrishna

LS Polls: ಹಿಂದೂ ಸಂಸ್ಕೃತಿ, ಪರಂಪರೆ ಉಳಿಸಲು ಬಿಜೆಪಿಯೇ ಶಕ್ತಿ: ಹರಿಕೃಷ್ಣ ಬಂಟ್ವಾಳ

3-dinesh

33 ವರ್ಷಗಳಲ್ಲಿ ದ.ಕ. ಜಿಲ್ಲೆಗೆ ಬಿಜೆಪಿ ಸಂಸದರ ಕೊಡುಗೆ ಏನು? ಸಚಿವ ದಿನೇಶ್‌ ಗುಂಡೂರಾವ್‌


ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು

ಬೇಸಿಗೆ ಬಿಸಿಯೂಟ: 32,173 ಮಕ್ಕಳ ನೋಂದಣಿ

ಬೇಸಿಗೆ ಬಿಸಿಯೂಟ: 32,173 ಮಕ್ಕಳ ನೋಂದಣಿ

Devanahalli: ಬೇಸಿಗೆ ತಾಪಮಾನ ಹೆಚ್ಚಳ, ಇರಲಿ ಎಚ್ಚರ

Devanahalli: ಬೇಸಿಗೆ ತಾಪಮಾನ ಹೆಚ್ಚಳ, ಇರಲಿ ಎಚ್ಚರ

Doddaballapur: ಜಾತೀಯತೆಗೆ ಮಣೆ ಹಾಕದ ಕ್ಷೇತ್ರದ ‌ಮತದಾರರು

Doddaballapur: ಜಾತೀಯತೆಗೆ ಮಣೆ ಹಾಕದ ಕ್ಷೇತ್ರದ ‌ಮತದಾರರು

Lok Sabha polls: ಲೋಕಸಭೆ ಚುನಾವಣೆಯಲ್ಲಿ ಇಂದಿರಾಗಾಂಧಿ ನೆನಪು

Lok Sabha polls: ಲೋಕಸಭೆ ಚುನಾವಣೆಯಲ್ಲಿ ಇಂದಿರಾಗಾಂಧಿ ನೆನಪು

10

Electricity problem: ಬೇಸಿಗೆ ಬೆನ್ನಲ್ಲೇ ಕಾಡುತ್ತಿದೆ ವಿದ್ಯುತ್‌ ಸಮಸ್ಯೆ

MUST WATCH

udayavani youtube

ವೈಭವದ ಹಿರಿಯಡ್ಕ ಸಿರಿಜಾತ್ರೆ ಸಂಪನ್ನ

udayavani youtube

ಯಾವೆಲ್ಲಾ ಚರ್ಮದ ಕಾಯಿಲೆಗಳಿವೆ ಹಾಗೂ ಪರಿಹಾರಗಳೇನು?

udayavani youtube

Mangaluru ಹೆಬ್ಬಾವಿನ ದೇಹದಲ್ಲಿ ಬರೋಬ್ಬರಿ 11 ಬುಲೆಟ್‌ ಪತ್ತೆ!

udayavani youtube

ನನ್ನ ಕಥೆ ನಿಮ್ಮ ಜೊತೆ

udayavani youtube

‘ಕಸಿ’ ಕಟ್ಟುವ ಸುಲಭ ವಿಧಾನ

ಹೊಸ ಸೇರ್ಪಡೆ

pralhad joshi

Hubli; ದ್ವಂದ್ವತೆ, ತುಷ್ಟೀಕರಣ ಕಾಂಗ್ರೆಸ್ ರಕ್ತದ ಕಣಕಣದಲ್ಲಿದೆ: ಪ್ರಹ್ಲಾದ ಜೋಶಿ

7-uv-fusion

UV Fusion: ಚುಕ್ಕಿ ತಾರೆ ನಾಚುವಂತೆ ಒಮ್ಮೆ ನೀ ನಗು

6-fusion

Yugadi: ಯುಗಾದಿ

ಹೆದ್ದಾರಿ ಬದಿ ನಿಂತಿದ್ದ ಟ್ರಕ್ ಗೆ ಕಾರು ಡಿಕ್ಕಿ… ಮಗು ಸೇರಿ 6 ಮಂದಿ ಸ್ಥಳದಲ್ಲೇ ಮೃತ್ಯು

ಹೆದ್ದಾರಿ ಬದಿ ನಿಂತಿದ್ದ ಟ್ರಕ್ ಗೆ ಕಾರು ಡಿಕ್ಕಿ… ಮಗು ಸೇರಿ 6 ಮಂದಿ ಸ್ಥಳದಲ್ಲೇ ಮೃತ್ಯು

Chamarajanagar: ಕೊಳ್ಳೇಗಾಲ ಶಾಸಕ ಎ ಆರ್ ಕೃಷ್ಣಮೂರ್ತಿ ಕಾರು ಅಪಘಾತ, ಅಪಾಯದಿಂದ ಪಾರು

Chamarajanagar: ಕೊಳ್ಳೇಗಾಲ ಶಾಸಕ ಎ ಆರ್ ಕೃಷ್ಣಮೂರ್ತಿ ಕಾರು ಅಪಘಾತ, ಅಪಾಯದಿಂದ ಪಾರು

Thanks for visiting Udayavani

You seem to have an Ad Blocker on.
To continue reading, please turn it off or whitelist Udayavani.