ಚುನಾವಣೆಗೂ ಮೊದಲೇ ಪ್ರಚಾರದ ಅಬ್ಬರ


Team Udayavani, Mar 14, 2023, 2:56 PM IST

tdy-13

ದೊಡ್ಡಬಳ್ಳಾಪುರ: ವಿಧಾನಸಭಾ ಚುನಾವಣೆಗೆ ದಿನಾಂಕ ಪ್ರಕಟಿಸುವುದು ಬಾಕಿ ಇದ್ದು, ನೀತಿ ಸಂಹಿತಿ ಇನ್ನೂ ಜಾರಿಯಾಗಿಲ್ಲ. ಆದರೆ, ನೀತಿ ಸಂಹಿತೆ ಜಾರಿಯಾಗುವುದರೊಳಗಾಗಿ ಮತದಾರರನ್ನು ಹೇಗಾದರೂ ಓಲೈಸಿಕೊಳ್ಳೋಣ ಎಂದು ರಾಜಕೀಯ ಪಕ್ಷಗಳು ಹಾಗೂ ಮುಖಂಡರು ಪ್ರಚಾರಕ್ಕಿಳಿದಿದ್ದಾರೆ.

ಕಳೆದ 6 ತಿಂಗಳಿನಿಂದ ಚುನಾವಣೆಯನ್ನು ದೃಷ್ಟಿಯಲ್ಲಿರಿಸಿಕೊಂಡು ಮತದಾರರನ್ನು ಆಕರ್ಷಿಸಲು ವಿವಿಧ ಕಸರತ್ತುಗಳು ನಡೆಯುತ್ತಿವೆ. ತಾಲೂಕಿನ ವಿವಿಧೆಡೆಗಳಿಂದ ಧರ್ಮಸ್ಥಳ, ನಂಜನಗೂಡು, ಮೇಲಮೆರುತ್ತೂರು ಓಂಶಕ್ತಿ ಮೊದಲಾದ ಕಡೆ ಪ್ರವಾಸಗಳನ್ನು ಕಳುಹಿಸಲಾಗುತ್ತಿದೆ. ವಿವಿಧೆಡೆ ಆರೋಗ್ಯ ಶಿಬಿರಗಳನ್ನು ಏರ್ಪಡಿಸಲಾಗುತ್ತಿದೆ. ನಾಟಕಗಳು, ಕ್ರೀಡಾಕೂಟದ ಆಯೋಜನೆಗಳು ಸಹ ನಿರಂತರವಾಗಿವೆ.

ಕಾಣಿಸಿದ ಗೋಡೆ ಬರಹಗಳು: ದಶಕಗಳ ಹಿಂದೆ ಚುನಾ ವಣೆ ಬಂತೆಂದರೆ ಅಬ್ಬರದ ಪ್ರಚಾರ, ಗೋಡೆ ಬರಹಗಳು, ಬ್ಯಾನರ್‌ಗಳು ರಾರಾಜಿಸುತ್ತಿದ್ದವು. 90ರ ದಶಕದಲ್ಲಿ ಟಿ. ಎನ್‌.ಶೇಷನ್‌ ಮುಖ್ಯ ಚುನಾವಣಾ ಆಯುಕ್ತರಾಗಿದ್ದಾಗ ಇದಕ್ಕೆಲ್ಲ ಕಡಿವಾಣ ಹಾಕಿ, ಚುನಾವಣಾ ವೆಚ್ಚಕ್ಕೆ ಮಿತಿ ಹೇರಲಾಯಿತು. ಆನಂತರದಲ್ಲಿ ಕರಪತ್ರಗಳು ಚುನಾವಣಾ ಪ್ರಚಾರದ ಪ್ರಮುಖ ಪ್ರಚಾರ ಮಾಧ್ಯಮವಾಗಿತ್ತು. ಆದರೆ, ಈಗ ಇನ್ನೂ ನೀತಿ ಸಂಹಿತೆ ಜಾರಿಯಾಗಿಲ್ಲದಿರುವುದರಿಂದ, ಗೋಡೆಗಳ ಮೇಲೆ ಪ್ರಚಾರದ ಪೋಸ್ಟರ್‌ಗಳನ್ನು ಹಾಕಲಾಗುತ್ತಿದೆ. ಕಾಂಗ್ರೆಸ್‌ ಪಕ್ಷದ ಚುನಾವಣೆ ಪ್ರಣಾಳಿಕೆಯ ಭರವಸೆಗಳು, ಬಿಜೆಪಿಯ ಸರ್ಕಾರದ ಹಿಂದಿನ ಭರವಸೆಗಳು ಹಾಗೂ ಯೋಜನೆಗಳು, ಪ್ರಿಂಟಿಂಗ್‌ ಗೋಡೆ ಬರಹಗಳಲ್ಲಿದ್ದರೆ, ಜೆಡಿಎಸ್‌ನ ಪಂಚರತ್ನ ಯಾತ್ರೆಯ ಪೋಸ್ಟರ್‌ಗಳು ಚುನಾವಣಾ ಪ್ರಚಾರದ ಸರಕಾಗಿವೆ.

ಸಾಮಾಜಿಕ ಜಾಲತಾಣಗಳಲ್ಲಿ ಅಬ್ಬರ ಪ್ರಚಾರ: ಈಗ ಸಾಮಾಜಿಕ ಜಾಲತಾಣಗಳು ಚುನಾವಣಾ ಪ್ರಚಾರದಲ್ಲಿ ಹೆಚ್ಚು ಸಕ್ರಿಯವಾಗಿವೆ. ವಿವಿಧ ರಾಜಕೀಯ ಪಕ್ಷಗಳು ತಮ್ಮ ಭರವಸೆಗಳ ಪ್ರಚಾರರೊಂದಿಗೆ, ಇನ್ನೊಂದು ಪಕ್ಷದ ಅಥವಾ ಪ್ರಮುಖ ಮುಖಂಡರನ್ನು ತೆಗಳುವ ಫೋಟೋಗಳು ಹಾಗೂ ವಿಡಿಯೋಗಳನ್ನು ಹರಿಬಿಡಲಾಗುತ್ತಿದೆ. ಉಡುಗೊರೆಗಳ ಅಬ್ಬರ: ಟಿಕೆಟ್‌ ಆಕಾಂಕ್ಷಿಗಳು ಹಾಗೂ ಪಕ್ಷಗಳ ಸಂಭಾವ್ಯ ಅಭ್ಯರ್ಥಿಗಳು ಮತದಾರರಿಗೆ ಉಡುಗೊರೆಗಳನ್ನು ನೀಡುವ ಮೂಲಕ ತಮ್ಮ ಅಸ್ತಿತ್ವ ಪ್ರತಿಪಾದಿಸಿಕೊಳ್ಳಲು ಹವಣಿಸಿಕೊಳ್ಳುತ್ತಿದ್ದಾರೆ. ಹಬ್ಬಗಳಲ್ಲಿ ದಿನಸಿ ಕಿಟ್‌ಗಳು, ಕಬ್ಬು ಸೇರಿದಂತೆ ವಿವಿಧ ಪದಾರ್ಥಗಳ ಉಡುಗೊರೆಗಳನ್ನು ನೀಡಲಾಗುತ್ತಿದೆ.

ಸಾರ್ವಜನಿಕ ಕೆಲಸಗಳು ಕುಂಠಿತ: ರಾಜಕೀಯ ಪಕ್ಷಗಳು ಹಾಗೂ ಮುಖಂಡರು ತಮ್ಮದೇ ಆದ ಕೆಲಸ ಕಾರ್ಯಗಳಲ್ಲಿ ನಿರತರಾಗಿರುವು ದರಿಂದ ಜನರ ಕೆಲಸಗಳು ವಿಳಂಬವಾಗುತ್ತಿವೆ ಎನ್ನುವ ದೂರುಗಳು ಕೇಳಿ ಬರುತ್ತಿವೆ. ವಿವಿಧ ಸರ್ಕಾರಿ ಕಚೇರಿಗಳಲ್ಲಿ, ಕೆಲಸಗಳು ಸಕಾಲಕ್ಕೆ ಆಗುತ್ತಿಲ್ಲ. ರಸ್ತೆ, ನೀರು, ಮೂಲ ಸೌಕರ್ಯಗಳ ಬಗ್ಗೆ ದೂರುಗಳು ನೀಡುತ್ತಿದ್ದರೂ ಸ್ಪಂದಿಸುತ್ತಿಲ್ಲ. ಈಗಾಗಲೇ ಆರಂಭವಾಗಿರುವ ಕಾಮಗಾರಿಗಳು ಸಹ ವಿಳಂಬವಾಗುತ್ತಿವೆ. ಪರೀಕ್ಷೆಗೆ ನಿಯೋಜಿತರಾಗಿರುವ ಉಪನ್ಯಾಸಕರನ್ನು ಚುನಾವಣಾ ಕಾರ್ಯಕ್ಕೆ ನಿಯೋಜಿಸಿರುವುದರಿಂದ ಪರೀಕ್ಷಾ ಕಾರ್ಯಗಳಿಗೆ ತೊಂದರೆಯಾಗುತ್ತಿವೆ. ಮತದಾರರ ಆಮಿಷಗಳಿಗೆ ಚುನಾವಣಾ ನೀತಿ ಸಂಹಿತೆ ತೂಗುಗತ್ತಿ ಇದ್ದರೆ ತಾನೆ ಕೇಳುವುದು. ಅದಕ್ಕೆ ಈಗ ರಂಗೋಲಿ ಕೆಳಗೆ ನುಗ್ಗಿ ಮತದಾರರನ್ನು ಓಲೈಸುವ ಕಾರ್ಯಗಳು ಸಾಗುತ್ತಿದ್ದು, ಈ ಬಗ್ಗೆ ಚುನಾವಣಾ ಆಯೋಗ ಗಮನ ಹರಿಸಬೇಕು ಎನ್ನುತ್ತಾರೆ ಪ್ರಜ್ಞಾವಂತ ಮತದಾರರು.

ಚುನಾವಣೆಯದ್ದೇ ಚರ್ಚೆ: ಚುನಾವಣಾ ದಿನಾಂಕ ಇನ್ನೂ ಪ್ರಕಟವಾಗಿಲ್ಲವಾದರೂ ಸಹ ಚುನಾವಣೆ ಕುರಿತಂತೆ ಎಲ್ಲಡೆ ಚರ್ಚೆಗಳು ನಡೆಯುತ್ತಿವೆ. ಯಾರಿಗೆ ಪಕ್ಷದ ಟಿಕೆಟ್‌, ಯಾವ ಲಕ್ಷ ಮೇಲುಗೈ ಇತ್ಯಾದಿ ಚರ್ಚೆಗಳು ನಡೆಯುತ್ತಿವೆ. ಹಿಂದಿನ ಚುನಾವಣೆಗಳಲ್ಲಿ ನೀತಿ ಸಂಹಿತೆ ಜಾರಿಯಾಗುವ ತನಕ ಚುನಾವಣೆಯ ಕಾವು ಏರುತ್ತಿರಲಿಲ್ಲ. ಆದರೆ, ಈ ಬಾರಿ ನೀತಿ ಸಂಹಿತೆ ಜಾರಿಗೆ ಮುಂಚೆಯೇ ಎಲ್ಲಾ ಚುನಾವಣೆ ತಯಾರಿಗಾಗಿ ಎಂಬಂತೆ ಸಿದ್ದವಾದಂತಿದೆ.

ತಪಾಸಣೆ ಚುರುಕು: ಈ ನಡುವೆ ವಿಧಾನಸಭಾ ಚುನಾವಣೆ ಹತ್ತಿರವಾಗುತ್ತಿದ್ದಂತೆ ಮತದಾರರಿಗೆ ವಿವಿಧ ಆಮಿಷಗಳನ್ನು ಒಡ್ಡುವುದು ಸಾಮಾನ್ಯವಾಗಿರುವ ಹಿನ್ನೆಲೆಯಲ್ಲಿ ಆಮಿಷಗಳನ್ನು ತಡೆಯಲು ಮುಹೂರ್ತಕ್ಕಾಗಿ ಕಾಯಬೇಡಿ ಎಂದು ಚುನಾವಣಾಧಿಕಾರಿಗಳು ಅಧಿಕಾರಿಗಳಿಗೆ ಕಟ್ಟುನಿಟ್ಟಿನ ಸೂಚನೆ ನೀಡಿರುವ ಬೆನ್ನಲ್ಲೇ ದೊಡ್ಡಬಳ್ಳಾಪುರ ಉಪ ವಿಭಾಗದಲ್ಲಿ ಪೊಲೀಸ್‌ ಇಲಾಖೆಯಿಂದ ಚೆಕ್‌ ಪೋಸ್ಟ್  ಗಳನ್ನು ತೆರೆದು ಅಕ್ರಮ ಹಣ ಅಥವಾ ವಸ್ತುಗಳ ಸಾಗಾಣಿಕೆಯನ್ನು ತಪಾಸಣೆ ಮಾಡಲಾಗುತ್ತಿದೆ.

ಟಾಪ್ ನ್ಯೂಸ್

T20 ವಿಶ್ವಕಪ್‌ ಇಂಗ್ಲೆಂಡ್‌ ತಂಡ ಪ್ರಕಟ: ವರ್ಷದ ಬಳಿಕ ಸ್ಟಾರ್‌ ಬೌಲರ್‌ ತಂಡಕ್ಕೆ ಕಂಬ್ಯಾಕ್

T20 ವಿಶ್ವಕಪ್‌ ಇಂಗ್ಲೆಂಡ್‌ ತಂಡ ಪ್ರಕಟ: ವರ್ಷದ ಬಳಿಕ ಸ್ಟಾರ್‌ ಬೌಲರ್‌ ತಂಡಕ್ಕೆ ಕಂಬ್ಯಾಕ್

ಜಗತ್ತಿಗಿಂತ ಮೊದಲು ಪಾಕ್‌ ಗೆ ಮಾಹಿತಿ ಕೊಟ್ಟಿದ್ದೇವು: ಬಾಲಾಕೋಟ್‌ ದಾಳಿ ಬಗ್ಗೆ ಪ್ರಧಾನಿ

ಜಗತ್ತಿಗಿಂತ ಮೊದಲು ಪಾಕ್‌ ಗೆ ಮಾಹಿತಿ ಕೊಟ್ಟಿದ್ದೇವು: ಬಾಲಾಕೋಟ್‌ ದಾಳಿ ಬಗ್ಗೆ ಪ್ರಧಾನಿ

ಬ್ಯಾಟಿಂಗ್‌ – ಬೌಲಿಂಗ್‌ ಎರಡರಲ್ಲೂ ಬಲಿಷ್ಠ: T20 ವಿಶ್ವಕಪ್‌ಗೆ ದಕ್ಷಿಣ ಆಫ್ರಿಕಾ ಪ್ರಕಟ

ಬ್ಯಾಟಿಂಗ್‌ – ಬೌಲಿಂಗ್‌ ಎರಡರಲ್ಲೂ ಬಲಿಷ್ಠ: T20 ವಿಶ್ವಕಪ್‌ಗೆ ದಕ್ಷಿಣ ಆಫ್ರಿಕಾ ಪ್ರಕಟ

Encounter: ಛತ್ತೀಸ್‌ಗಢದಲ್ಲಿ ಎನ್‌ಕೌಂಟರ್‌… 7 ಮಾವೋವಾದಿಗಳ ಹತ್ಯೆ, ಶಸ್ತ್ರಾಸ್ತ್ರ ವಶ

Encounter: ಛತ್ತೀಸ್‌ಗಢದಲ್ಲಿ ಎನ್‌ಕೌಂಟರ್‌… 7 ಮಾವೋವಾದಿಗಳ ಹತ್ಯೆ, ಶಸ್ತ್ರಾಸ್ತ್ರ ವಶ

ಪ್ರಜ್ವಲ್ ರೇವಣ್ಣ ಸಂಸದರಾಗಿರುವುದು ಕಾಂಗ್ರೆಸ್ ನಾಯಕರಿಂದಲೇ… :ಆರ್. ಅಶೋಕ್

ಪ್ರಜ್ವಲ್ ರೇವಣ್ಣ ಸಂಸದರಾಗಿರುವುದು ಕಾಂಗ್ರೆಸ್ ನಾಯಕರಿಂದಲೇ… :ಆರ್. ಅಶೋಕ್

60 ವರ್ಷಗಳ ಕಾಲ ಆಡಳಿತ ನಡೆಸಿದ ಕಾಂಗ್ರೆಸ್ ನಿಂದ ದಲಿತರ ಶೋಷಣೆ: ಜಗದೀಶ ಹಿರೇಮನಿ ಆರೋಪ

60 ವರ್ಷಗಳ ಕಾಲ ಆಡಳಿತ ನಡೆಸಿದ ಕಾಂಗ್ರೆಸ್ ನಿಂದ ದಲಿತರ ಶೋಷಣೆ: ಜಗದೀಶ ಹಿರೇಮನಿ ಆರೋಪ

Bribe: ಲಂಚ ಸ್ವೀಕರಿಸುವ ವೇಳೆ ಲೋಕಾಯುಕ್ತ ಬಲೆಗೆ ಬಿದ್ದ ಶಿಡ್ಲಘಟ್ಟ ತಾ.ಪಂ ಇಒ ಮುನಿರಾಜು

Bribe: ಲಂಚ ಸ್ವೀಕರಿಸುವ ವೇಳೆ ಲೋಕಾಯುಕ್ತ ಬಲೆಗೆ ಬಿದ್ದ ಶಿಡ್ಲಘಟ್ಟ ತಾ.ಪಂ ಇಒ ಮುನಿರಾಜು


ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು

8

Devanahalli: ಬೇಸಿಗೆ ಬಿಸಿ; ಹುರುಳಿಕಾಯಿ ದರ ದುಬಾರಿ

ಬೇಸಿಗೆ ಬಿಸಿಯೂಟ: 32,173 ಮಕ್ಕಳ ನೋಂದಣಿ

ಬೇಸಿಗೆ ಬಿಸಿಯೂಟ: 32,173 ಮಕ್ಕಳ ನೋಂದಣಿ

Devanahalli: ಬೇಸಿಗೆ ತಾಪಮಾನ ಹೆಚ್ಚಳ, ಇರಲಿ ಎಚ್ಚರ

Devanahalli: ಬೇಸಿಗೆ ತಾಪಮಾನ ಹೆಚ್ಚಳ, ಇರಲಿ ಎಚ್ಚರ

Doddaballapur: ಜಾತೀಯತೆಗೆ ಮಣೆ ಹಾಕದ ಕ್ಷೇತ್ರದ ‌ಮತದಾರರು

Doddaballapur: ಜಾತೀಯತೆಗೆ ಮಣೆ ಹಾಕದ ಕ್ಷೇತ್ರದ ‌ಮತದಾರರು

Lok Sabha polls: ಲೋಕಸಭೆ ಚುನಾವಣೆಯಲ್ಲಿ ಇಂದಿರಾಗಾಂಧಿ ನೆನಪು

Lok Sabha polls: ಲೋಕಸಭೆ ಚುನಾವಣೆಯಲ್ಲಿ ಇಂದಿರಾಗಾಂಧಿ ನೆನಪು

MUST WATCH

udayavani youtube

ವೈಭವದ ಹಿರಿಯಡ್ಕ ಸಿರಿಜಾತ್ರೆ ಸಂಪನ್ನ

udayavani youtube

ಯಾವೆಲ್ಲಾ ಚರ್ಮದ ಕಾಯಿಲೆಗಳಿವೆ ಹಾಗೂ ಪರಿಹಾರಗಳೇನು?

udayavani youtube

Mangaluru ಹೆಬ್ಬಾವಿನ ದೇಹದಲ್ಲಿ ಬರೋಬ್ಬರಿ 11 ಬುಲೆಟ್‌ ಪತ್ತೆ!

udayavani youtube

ನನ್ನ ಕಥೆ ನಿಮ್ಮ ಜೊತೆ

udayavani youtube

‘ಕಸಿ’ ಕಟ್ಟುವ ಸುಲಭ ವಿಧಾನ

ಹೊಸ ಸೇರ್ಪಡೆ

1-sirsi

Modi ಬಂದಿದ್ದು ಕಾಂಗ್ರೆಸ್‌ಗೆ ಅಡ್ಡ ಪರಿಣಾಮ ಏನಿಲ್ಲ: ಭೀಮಣ್ಣ ನಾಯ್ಕ

T20 ವಿಶ್ವಕಪ್‌ ಇಂಗ್ಲೆಂಡ್‌ ತಂಡ ಪ್ರಕಟ: ವರ್ಷದ ಬಳಿಕ ಸ್ಟಾರ್‌ ಬೌಲರ್‌ ತಂಡಕ್ಕೆ ಕಂಬ್ಯಾಕ್

T20 ವಿಶ್ವಕಪ್‌ ಇಂಗ್ಲೆಂಡ್‌ ತಂಡ ಪ್ರಕಟ: ವರ್ಷದ ಬಳಿಕ ಸ್ಟಾರ್‌ ಬೌಲರ್‌ ತಂಡಕ್ಕೆ ಕಂಬ್ಯಾಕ್

ಶ್ರೀ ದುರ್ಗಾ ಆದಿಶಕ್ತಿ ಕ್ಷೇತ್ರ: ಮೇ 2 ರಂದು ಕುಬೇರ ಲಕ್ಷ್ಮಿ ಪ್ರತಿಷ್ಠಾ ವರ್ಧಂತಿ

ಶ್ರೀ ದುರ್ಗಾ ಆದಿಶಕ್ತಿ ಕ್ಷೇತ್ರ: ಮೇ 2 ರಂದು ಕುಬೇರ ಲಕ್ಷ್ಮಿ ಪ್ರತಿಷ್ಠಾ ವರ್ಧಂತಿ

ಜಗತ್ತಿಗಿಂತ ಮೊದಲು ಪಾಕ್‌ ಗೆ ಮಾಹಿತಿ ಕೊಟ್ಟಿದ್ದೇವು: ಬಾಲಾಕೋಟ್‌ ದಾಳಿ ಬಗ್ಗೆ ಪ್ರಧಾನಿ

ಜಗತ್ತಿಗಿಂತ ಮೊದಲು ಪಾಕ್‌ ಗೆ ಮಾಹಿತಿ ಕೊಟ್ಟಿದ್ದೇವು: ಬಾಲಾಕೋಟ್‌ ದಾಳಿ ಬಗ್ಗೆ ಪ್ರಧಾನಿ

ಬ್ಯಾಟಿಂಗ್‌ – ಬೌಲಿಂಗ್‌ ಎರಡರಲ್ಲೂ ಬಲಿಷ್ಠ: T20 ವಿಶ್ವಕಪ್‌ಗೆ ದಕ್ಷಿಣ ಆಫ್ರಿಕಾ ಪ್ರಕಟ

ಬ್ಯಾಟಿಂಗ್‌ – ಬೌಲಿಂಗ್‌ ಎರಡರಲ್ಲೂ ಬಲಿಷ್ಠ: T20 ವಿಶ್ವಕಪ್‌ಗೆ ದಕ್ಷಿಣ ಆಫ್ರಿಕಾ ಪ್ರಕಟ

Thanks for visiting Udayavani

You seem to have an Ad Blocker on.
To continue reading, please turn it off or whitelist Udayavani.