ಒತ್ತುವರಿ: ಸ್ಮಶಾನಕ್ಕೆ ಶವ ಕೊಂಡೊಯ್ಯಲು ಅಡ್ಡಿ


Team Udayavani, Jul 12, 2018, 3:02 PM IST

blore-g-2.gif

ಹೊಸಕೋಟೆ: ಮಾಲೂರು ರಸ್ತೆ ಹಿಂದೂ ಸ್ಮಶಾನದ ಪ್ರದೇಶ ಅತಿಕ್ರಮಣ ಮಾಡಿಕೊಂಡಿರುವ ಕಾರಣ ಪ್ರವೇಶಿಸಲು ಅಡ್ಡಿಯಾಗುತ್ತಿದ್ದು ಶವಸಂಸ್ಕಾರ ನೆರವೇರಿಸಲು ಹರಸಾಹಸ ಮಾಡಬೇಕಾದ ಪರಿಸ್ಥಿತಿ ನಿರ್ಮಾಣಗೊಂಡಿದೆ.

ಗಡಿ ಗುರುತಿಸಲಾಗಿತ್ತು: ವರದಾಪುರಕ್ಕೆ ಹೊಂದಿ ಕೊಂಡಂತಿರುವ ಸ್ಮಶಾನ, ನಗರಸಭೆ ವಾರ್ಡ್‌ 22ರ ವ್ಯಾಪ್ತಿಗೆ ಒಳಪಟ್ಟಿದ್ದು ಅಂದಾಜು 10 ಲಕ್ಷ ರೂ.ಗಳ ವೆಚ್ಚದಲ್ಲಿ ಮುಂಭಾಗ ದಲ್ಲಿ ಇತ್ತೀಚೆಗೆ ಕಾಂಪೌಂಡ್‌ ನಿರ್ಮಿಸಲಾಗಿದೆ. ಅಳವಡಿಸಿರುವ ಗೇಟಿನ ಹಿಂಭಾಗದಲ್ಲಿಯೇ ಅಕ್ರಮವಾಗಿ 2 ಪೆಟ್ಟಿಗೆ ಅಂಗಡಿ ಇಟ್ಟಿರುವ ಕಾರಣ ಪ್ರವೇಶಿಸಲು ಹರಸಾಹಸ ಪಡಬೇಕಾಗಿದೆ. ಇನ್ನು ಶವವನ್ನು ಕೊಂಡೊಯ್ಯುವುದು ದುಸ್ತರವಾಗಿದೆ. ಸ್ಮಶಾನಕ್ಕೆ ಬರುವವರ ಸಂಕಷ್ಟ ಅರಿತ ಪಕ್ಕದ ಜಮೀನಿನ ಮಾಲಿಕರು ನಿರ್ಮಿಸಿರುವ ಕಾಂಪೌಂ ಡಿನ ಸ್ವಲ್ಪ ಭಾಗ ಒಡೆದು ಅವಕಾಶ ಮಾಡಿಕೊಟ್ಟಿದ್ದಾರೆ. 

ಸ್ಮಶಾನದ ಜಾಗ ಒತ್ತುವರಿ ಬಗ್ಗೆ 7-8 ವರ್ಷಗಳ ಹಿಂದೆ ನೀಡಿದ್ದ ದೂರಿನಿಂದಾಗಿ ಅಳತೆ ಮಾಡಿ ನಿರ್ದಿಷ್ಟ ಗಡಿ ಗುರುತಿಸಲಾಗಿತ್ತು. ಆದರೆ, ಈ ಗಡಿ 2-3 ವರ್ಷಗಳಿಂದಲೂ ಕಾಂಪೌಂಡ್‌ ನಿರ್ಮಾಣಕ್ಕೆ ಮೊದಲೇ 5 ಪೆಟ್ಟಿಗೆ ಅಂಗಡಿಗಳಿದ್ದು 3ನ್ನು ಮಾತ್ರ ತೆರವುಗೊಳಿಸಿದ ಅಧಿಕಾರಿಗಳು ಉಳಿದ ಎರಡನ್ನು ಹಾಗೆಯೇ ಬಿಟ್ಟಿದ್ದಾರೆ. 

ಸ್ಮಶಾನದ ಪ್ರವೇಶಕ್ಕೆ ಅಡ್ಡಿಯಾಗಿರುವ ಅಕ್ರಮ ಪೆಟ್ಟಿಗೆ ಅಂಗಡಿ ಬಗ್ಗೆ ನಗರಸಭೆ ಅಧಿಕಾರಿಗಳಿಗೆ ದೂರು ನೀಡಿದರೂ ಕ್ರಮ ಕೈಗೊಳ್ಳಲು ಹಿಂಜರಿಯುತ್ತಿದ್ದಾರೆಂದು ಸ್ಥಳೀಯರು ದೂರಿದ್ದಾರೆ. 

ಖಂಡನೀಯ : ಪಟ್ಟಣದ ಗಾಣಿಗರಪೇಟೆ ವೆಂಕಟಸ್ವಾಮಿ ಪ್ರತಿಕ್ರಿಯಿಸಿ, ಸರ್ಕಾರಿ ಸ್ವತ್ತು ರಕ್ಷಿಸುವ ಜವಾಬ್ದಾರಿ ಯುಳ್ಳ ಜನಪ್ರತಿನಿಧಿಗಳೇ ಪರೋಕ್ಷವಾಗಿ ಇಂತಹ ಅತಿಕ್ರಮಗಳಿಗೆ ಬೆಂಬಲಿಸುತ್ತಿರುವುದು ಖಂಡನೀ ಯ. ಅಧಿಕಾರಿಗಳು ತೆರವುಗೊಳಿಸಿ ಸ್ಮಶಾನ ಪ್ರವೇಶಕ್ಕೆ ಅವಕಾಶ ಮಾಡಿಕೊಡಲು ಕ್ರಮ ಕೈಗೊಳ್ಳಲು ನಿರ್ಲಕ್ಷ್ಯ ತೋರಿದ್ದಲ್ಲಿ ಜಿಲ್ಲಾಧಿಕಾರಿಗಳ ಕಚೇರಿ ಮುಂದೆ ಪ್ರತಿಭಟನೆ ನಡೆಸುವುದು ಅನಿವಾರ್ಯ ವಾಗಲಿದೆ ಎಂದು ಎಚ್ಚರಿಸಿದ್ದಾರೆ. ಸ್ಮಶಾನ ಹಳೆ ಪಟ್ಟಣದ ಚಿಕ್ಕತಿಗಳರಪೇಟೆ, ಕಿಲಾರಿ ಪೇಟೆ, ಗಾಣಿಗರಪೇಟೆ, ಪಾರ್ವತಿಪುರದ ನಿವಾಸಿಗಳಿಗೆ ಬಹಳಷ್ಟು ವರ್ಷಗಳಿಂದ ಬಳಕೆಯಾಗುತ್ತಿದೆ. 4-5 ವರ್ಷಗಳ ಹಿಂದೆ ಅಳತೆ ಮಾಡಿ ಕಾಂಪೌಂಡ್‌ ನಿರ್ಮಿಸಿ ರಕ್ಷಿಸಲಾಗಿತ್ತು. ಕೊರೆದಿದ್ದ ಕೊಳವೆಬಾವಿ ವಿಫ‌ಲವಾಗಿರುವ ಕಾರಣ ಸ್ಮಶಾನಕ್ಕೆ ಬರುವವರಿಗೆ ನೀರಿನ ಸೌಲಭ್ಯ ಕಲ್ಪಿಸಲು ಆವರಣ ದಲ್ಲಿ ಟ್ಯಾಂಕ್‌ ಅಳವಡಿಸಲಾಗಿದೆ. ಆದರೆ ಇದೀಗ ಪ್ರಭಾವಶಾಲಿಗಳ ಒತ್ತಡಕ್ಕೆ ಮಣಿದಿರುವ ಅಧಿಕಾರಿಗಳು, ಪೆಟ್ಟಿಗೆ ಅಂಗಡಿ ತೆರವುಗೊಳಿಸಲು ನಿರಾಸಕ್ತಿ ತೋರುತ್ತಿದ್ದಾರೆ. ಜಿಲ್ಲಾಧಿಕಾರಿಗಳು ಸಂಬಂಧಪಟ್ಟ ಅಧಿಕಾರಿಗಳಿಗೆ ಆದೇಶಿಸಬೇಕೆಂದು ಒತ್ತಾಯಿಸಿದ್ದಾರೆ. ಅಲ್ಲದೆ ಸ್ಮಶಾನದಲ್ಲಿ ಗಿಡ ಬೆಳೆದಿದ್ದು ತ್ಯಾಜ್ಯ ಸುರಿಯುತ್ತಿರುವುದರಿಂದ ಸಮಸ್ಯೆ ಬಿಗಡಾಯಿಸಿದೆ. 

ಸಾರ್ವಜನಿಕರಿಗೆ ತೊಂದರೆಯಾಗುತ್ತಿರುವ ಬಗ್ಗೆ ಸ್ವೀಕರಿಸಿರುವ ಮನವಿ ಆಧರಿಸಿ ಕಂದಾಯ ಇಲಾಖೆ ಸಿಬ್ಬಂದಿಯನ್ನು ಸ್ಥಳ ಪರಿಶೀಲನೆ ಮಾಡಲು ಸೂಚಿಸಲಾಗುವುದು. ಇವರ ವರದಿ ಆಧರಿಸಿ ಸ್ಮಶಾನದ ವ್ಯಾಪ್ತಿಗೆ ಒಳಪಡುವ ಸಂಬಂಧಪಟ್ಟ ಅಧಿಕಾರಿಗಳಿಗೆ ಕ್ರಮ ಕೈಗೊಳ್ಳಲು ತಿಳಿಸಲಾಗುವುದು.
ನಾರಾಯಣವಿಠಲ್‌, ತಹಶೀಲ್ದಾರ್‌

ಪ್ರಭುದೇವ

ಟಾಪ್ ನ್ಯೂಸ್

Scam: 25,000 ಕೋಟಿ ಬ್ಯಾಂಕ್ ಹಗರಣ ಪ್ರಕರಣ: ಅಜಿತ್ ಪವಾರ್ ಪತ್ನಿ ಸುನೇತ್ರಾಗೆ ಕ್ಲೀನ್ ಚಿಟ್

Scam: 25,000 ಕೋಟಿ ಬ್ಯಾಂಕ್ ಹಗರಣ ಪ್ರಕರಣ: ಅಜಿತ್ ಪವಾರ್ ಪತ್ನಿ ಸುನೇತ್ರಾಗೆ ಕ್ಲೀನ್ ಚಿಟ್

24

OTT Release: ವಿಜಯ್‌ ದೇವರಕೊಂಡ ʼಫ್ಯಾಮಿಲಿ ಸ್ಟಾರ್‌ʼ ಓಟಿಟಿ ರಿಲೀಸ್‌ಗೆ ಡೇಟ್‌ ಫಿಕ್ಸ್

90 ದಿನದಲ್ಲಿ ನೇಹಾ ಕುಟುಂಬಕ್ಕೆ ನ್ಯಾಯ ಸಿಗುವ ವಿಶ್ವಾಸವಿದೆ..: ರಣದೀಪ್ ಸಿಂಗ್ ಸುರ್ಜೇವಾಲಾ

90 ದಿನದಲ್ಲಿ ನೇಹಾ ಕುಟುಂಬಕ್ಕೆ ನ್ಯಾಯ ಸಿಗುವ ವಿಶ್ವಾಸವಿದೆ..: ರಣದೀಪ್ ಸಿಂಗ್ ಸುರ್ಜೇವಾಲಾ

23

ಹೂಡಿಕೆದಾರರಿಗೆ ಲಾಭಾಂಶ ನೀಡದ ಆರೋಪ ʼManjummel Boysʼ ನಿರ್ಮಾಪಕರ ವಿರುದ್ದ ದೂರು ದಾಖಲು

LS Polls: ವೇದಿಕೆಯಲ್ಲಿ ಭಾಷಣ ಮಾಡುತ್ತಲೇ ಅಸ್ವಸ್ಥಗೊಂಡ ಕೇಂದ್ರ ಸಚಿವ ನಿತಿನ್ ಗಡ್ಕರಿ

LS Polls: ವೇದಿಕೆಯಲ್ಲಿ ಭಾಷಣ ಮಾಡುತ್ತಲೇ ಅಸ್ವಸ್ಥಗೊಂಡ ಕೇಂದ್ರ ಸಚಿವ ನಿತಿನ್ ಗಡ್ಕರಿ

21

ಹೊಸ ಚಿತ್ರಕ್ಕೆ ಮಹೇಶ್‌ ಬಾಬು ರೆಡಿ: ‘ವೀರ ಮದಕರಿ’ ಬಾಲ ಕಲಾವಿದೆ ಈಗ ನಾಯಕಿ

Lok Sabha Election: ಗೋವಾದ ಎರಡೂ ಕ್ಷೇತ್ರದಲ್ಲಿ 16 ಅಭ್ಯರ್ಥಿಗಳು ಕಣಕ್ಕೆ, ಇಲ್ಲಿದೆ ವಿವರ

Lok Sabha Election: ಗೋವಾದ ಎರಡೂ ಕ್ಷೇತ್ರದಲ್ಲಿ 16 ಅಭ್ಯರ್ಥಿಗಳು ಕಣಕ್ಕೆ, ಇಲ್ಲಿದೆ ವಿವರ


ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು

ಬೇಸಿಗೆ ಬಿಸಿಯೂಟ: 32,173 ಮಕ್ಕಳ ನೋಂದಣಿ

ಬೇಸಿಗೆ ಬಿಸಿಯೂಟ: 32,173 ಮಕ್ಕಳ ನೋಂದಣಿ

Devanahalli: ಬೇಸಿಗೆ ತಾಪಮಾನ ಹೆಚ್ಚಳ, ಇರಲಿ ಎಚ್ಚರ

Devanahalli: ಬೇಸಿಗೆ ತಾಪಮಾನ ಹೆಚ್ಚಳ, ಇರಲಿ ಎಚ್ಚರ

Doddaballapur: ಜಾತೀಯತೆಗೆ ಮಣೆ ಹಾಕದ ಕ್ಷೇತ್ರದ ‌ಮತದಾರರು

Doddaballapur: ಜಾತೀಯತೆಗೆ ಮಣೆ ಹಾಕದ ಕ್ಷೇತ್ರದ ‌ಮತದಾರರು

Lok Sabha polls: ಲೋಕಸಭೆ ಚುನಾವಣೆಯಲ್ಲಿ ಇಂದಿರಾಗಾಂಧಿ ನೆನಪು

Lok Sabha polls: ಲೋಕಸಭೆ ಚುನಾವಣೆಯಲ್ಲಿ ಇಂದಿರಾಗಾಂಧಿ ನೆನಪು

10

Electricity problem: ಬೇಸಿಗೆ ಬೆನ್ನಲ್ಲೇ ಕಾಡುತ್ತಿದೆ ವಿದ್ಯುತ್‌ ಸಮಸ್ಯೆ

MUST WATCH

udayavani youtube

ವೈಭವದ ಹಿರಿಯಡ್ಕ ಸಿರಿಜಾತ್ರೆ ಸಂಪನ್ನ

udayavani youtube

ಯಾವೆಲ್ಲಾ ಚರ್ಮದ ಕಾಯಿಲೆಗಳಿವೆ ಹಾಗೂ ಪರಿಹಾರಗಳೇನು?

udayavani youtube

Mangaluru ಹೆಬ್ಬಾವಿನ ದೇಹದಲ್ಲಿ ಬರೋಬ್ಬರಿ 11 ಬುಲೆಟ್‌ ಪತ್ತೆ!

udayavani youtube

ನನ್ನ ಕಥೆ ನಿಮ್ಮ ಜೊತೆ

udayavani youtube

‘ಕಸಿ’ ಕಟ್ಟುವ ಸುಲಭ ವಿಧಾನ

ಹೊಸ ಸೇರ್ಪಡೆ

Scam: 25,000 ಕೋಟಿ ಬ್ಯಾಂಕ್ ಹಗರಣ ಪ್ರಕರಣ: ಅಜಿತ್ ಪವಾರ್ ಪತ್ನಿ ಸುನೇತ್ರಾಗೆ ಕ್ಲೀನ್ ಚಿಟ್

Scam: 25,000 ಕೋಟಿ ಬ್ಯಾಂಕ್ ಹಗರಣ ಪ್ರಕರಣ: ಅಜಿತ್ ಪವಾರ್ ಪತ್ನಿ ಸುನೇತ್ರಾಗೆ ಕ್ಲೀನ್ ಚಿಟ್

24

OTT Release: ವಿಜಯ್‌ ದೇವರಕೊಂಡ ʼಫ್ಯಾಮಿಲಿ ಸ್ಟಾರ್‌ʼ ಓಟಿಟಿ ರಿಲೀಸ್‌ಗೆ ಡೇಟ್‌ ಫಿಕ್ಸ್

Theft ಶಿರೂರು: ಜ್ಯುವೆಲ್ಲರಿ ಅಂಗಡಿ ಶಟರ್‌ ಮುರಿದು ಕಳ್ಳತನ

Theft ಶಿರೂರು: ಜ್ಯುವೆಲ್ಲರಿ ಅಂಗಡಿ ಶಟರ್‌ ಮುರಿದು ಕಳ್ಳತನ

90 ದಿನದಲ್ಲಿ ನೇಹಾ ಕುಟುಂಬಕ್ಕೆ ನ್ಯಾಯ ಸಿಗುವ ವಿಶ್ವಾಸವಿದೆ..: ರಣದೀಪ್ ಸಿಂಗ್ ಸುರ್ಜೇವಾಲಾ

90 ದಿನದಲ್ಲಿ ನೇಹಾ ಕುಟುಂಬಕ್ಕೆ ನ್ಯಾಯ ಸಿಗುವ ವಿಶ್ವಾಸವಿದೆ..: ರಣದೀಪ್ ಸಿಂಗ್ ಸುರ್ಜೇವಾಲಾ

ನಮ್ಮ ಆರಾಧನ ಪದ್ಧತಿ ಯುವ ಪೀಳಿಗೆಗೆ ಪರಿಚಯಿಸುವ ಅಗತ್ಯವಿದೆ: ರಾಕೇಶ್‌ ಶೆಟ್ಟಿ ಬೆಳ್ಳಾರೆ

ನಮ್ಮ ಆರಾಧನ ಪದ್ಧತಿ ಯುವ ಪೀಳಿಗೆಗೆ ಪರಿಚಯಿಸುವ ಅಗತ್ಯವಿದೆ: ರಾಕೇಶ್‌ ಶೆಟ್ಟಿ ಬೆಳ್ಳಾರೆ

Thanks for visiting Udayavani

You seem to have an Ad Blocker on.
To continue reading, please turn it off or whitelist Udayavani.