ಶಾಲಾ ಆರಂಭಕ್ಕೆ ಅಗತ್ಯ ಕ್ರಮ: ಬಿಇಒ ಕೆ.ಸಿ.ರಮೇಶ್‌

ತರಗತಿ ಆರಂಭಕ್ಕೆ ಮುಂದಾದ ಸರ್ಕಾರದಕ್ರಮಕ್ಕೆ ಸ್ವಾಗತ; ಕೋವಿಡ್‌ ಮಾರ್ಗಸೂಚಿ ಅನ್ವಯ ತರಗತಿ ಪ್ರಾರಂಭ

Team Udayavani, Aug 20, 2021, 6:47 PM IST

ಶಾಲಾ ಆರಂಭಕ್ಕೆ ಅಗತ್ಯ ಕ್ರಮ: ಬಿಇಒ ಕೆ.ಸಿ.ರಮೇಶ್‌

ನೆಲಮಂಗಲ: ಕೋವಿಡ್‌ ಮಹಾಮಾರಿಯಿಂದಾಗಿ ಸ್ಥಗಿತಗೊಂಡಿರುವ ಶಾಲಾ-ಕಾಲೇಜುಗಳು ಹಂತ-ಹಂತವಾಗಿ ಪ್ರಾರಂಭವಾಗುತ್ತಿರುವುದು ತಾಲೂಕಿನ ವಿದ್ಯಾರ್ಥಿಗಳಲ್ಲಷ್ಟೇ ಅಲ್ಲದೆ ಶಿಕ್ಷಕರು ಮತ್ತು ಪೋಷಕರಲ್ಲಿ ಸಂತಸ ಮೂಡಿಸಿದೆ.

ತಾಲೂಕಿನಲ್ಲಿ ಸರ್ಕಾರಿ 11, ಅನುದಾನಿತ19 ಹಾಗೂ 28 ಖಾಸಗಿ ಪ್ರೌಢಶಾಲೆಗಳು ಸೇರಿ ಒಟ್ಟಾರೆ 58 ಪ್ರೌಢಶಾಲೆಗಳಿವೆ. 9, 10ನೇ ತರಗತಿಗೆ ಸೇರಿದ ಆರು ಸಾವಿರ ವಿದ್ಯಾರ್ಥಿಗಳಿದ್ದು, ಶಾಲಾ ಆವರಣ ಮತ್ತು ತರಗತಿಗಳಲ್ಲಿ ಸರ್ಕಾರದ ಕೋವಿಡ್‌ ಮಾರ್ಗಸೂಚಿ ಅನ್ವಯ ತರಗತಿ ಆರಂಭಕ್ಕೆ ಮುಂದಾಗಿರುವ ಸರ್ಕಾರದ ಕ್ರಮವನ್ನು ವಿದ್ಯಾರ್ಥಿಗಳು, ಪೋಷಕರು ಸ್ವಾಗತಿಸಿದ್ದಾರೆ.

ಈ ನಿಟ್ಟಿನಲ್ಲಿ ಸಾರ್ವಜನಿಕ ಶಿಕ್ಷಣ ಇಲಾಖೆ ಕ್ಷೇತ್ರ ಶಿಕ್ಷಣಾಧಿಕಾರಿ ಕೆ.ಸಿ.ರಮೇಶ್‌ ಶಾಲೆಗಳ ಮುಖ್ಯ ಶಿಕ್ಷಕರ ಜೊತೆ ಸಭೆ ನಡೆಸಿ ನೀತಿ-ನಿಯಮ ಅಳವಡಿಕೆಯ ಕುರಿತು ಸೂಚನೆ ನೀಡಿದ್ದಾರೆ. ಅಲ್ಲದೇ ಶಿಕ್ಷಕರು ವಿದ್ಯಾರ್ಥಿಗಳ ಪೋಷಕರಿಗೆ ಸರ್ಕಾರದ ಎಸ್‌ಪಿ ನಿಯಮ ಅಲ್ಲದೇ ವಿದ್ಯಾರ್ಥಿಗಳನ್ನು ಶಾಲೆಗೆ ಕಳುಹಿಸಲು ಪೋಷಕರಿಂದ ಒಪ್ಪಿಗೆ ಪತ್ರ ಸ್ವೀಕರಿಸಿ ಶಾಲಾ ಆರಂಭಿಸಲು ತಾಲೂಕಿನ ಶಿಕ್ಷಣ ಇಲಾಖೆ ಸನ್ನದ್ಧವಾಗಿದೆ.

ಇದನ್ನೂ ಓದಿ:ರವಿಚಂದ್ರನ್ ಚಿನ್ನದ ಹೃದಯದ ವ್ಯಕ್ತಿ : ನಟ ಜಗ್ಗೇಶ್ ಹೀಗೇ ಹೇಳಿದ್ದೇಕೆ ?

ಕಾಳಜಿ: ಒಂದೂವರೆ ವರ್ಷದ ಬಳಿಕ ಶಾಲೆ ಆರಂಭವಾಗುತ್ತಿದ್ದು ಶಾಲಾ ಕೊಠಡಿಗಳನ್ನು ಸ್ಯಾನಿಟೈಸ್‌ ಮಾಡಿಸಲಾಗಿದ್ದು, ಶಾಲೆಗೆ
ಹಾಜರಾಗಲಿರುವ ಪ್ರತಿ ವಿದ್ಯಾರ್ಥಿಯ ಆರೋಗ್ಯ ತಪಾಸಣೆ ನಡೆಸಲಿದೆ. ಥರ್ಮಲ್‌ ಸ್ಕ್ಯಾನ್‌ ಮತ್ತು ಸ್ಯಾನಿಟೈಸರ್‌ ವ್ಯವಸ್ಥೆ ಮಾಡಲಾಗಿದೆ. ವಿದ್ಯಾರ್ಥಿ ಆರೋಗ್ಯದಲ್ಲಿ ವ್ಯತ್ಯಯವಾದರೇ ಸೂಕ್ತ ಕ್ರಮ ವಹಿಸಲು ಶಿಕ್ಷಕರಿಗೆ ತಿಳಿಸುವಂತೆ ಸೂಚಿಸಲಾಗಿದೆ ಎಂದು ಬಿಇಒ ಕೆ.ಸಿ.ರಮೇಶ್‌ ತಿಳಿಸಿದ್ದಾರೆ.

ಬಿಸಿ ಊಟಕ್ಕೆ ಬ್ರೇಕ್‌: ಸೋಮವಾರ ಪ್ರಾರಂಭವಾಗುವ 9 ಮತ್ತು 10ನೇ ತರಗತಿಯ ಮಕ್ಕಳಿಗೆ ಸರಕಾರಿ ಶಾಲೆಗಳಲ್ಲಿ ಬಿಸಿಯೂಟ ನೀಡುವ ವ್ಯವಸ್ಥೆಗೆ ಬ್ರೇಕ್‌ ಹಾಕಲಾಗಿದೆ, ಕೋವಿಡ್‌ ಪೂರ್ವದಲ್ಲಿ ವಿದ್ಯಾರ್ಥಿಗಳಿಗೆ ಮಧ್ಯಾಹ್ನ ಬಿಸಿಯೂಟ ನೀಡಲಾಗುತಿತ್ತು. ಕೋವಿಡ್‌  ಹಿನ್ನೆಲೆ ಬಿಸಿಯೂಟದ ವ್ಯವಸ್ಥೆ ತಾತ್ಕಾಲಿಕವಾಗಿ ರದ್ದು ಮಾಡಲಾಗಿದೆ. ಒಟ್ಟಾರೆ ಶಿಕ್ಷಣ ಸಚಿವರು ಹೇಳಿರುವಂತೆ ಶೇ.2ಕ್ಕೂ ಹೆಚ್ಚು ಸೋಂಕು ಕಂಡುಬಂದರೆ ಶಾಲೆಗಳಿಗೆ ರಜಾ ಘೋಷಿಸಬೇಕೆಂದು ಹೇಳಲಾಗಿದೆ. ಶಾಲೆ ಆರಂಭವಾದ ಬಳಿಕ ಕೋವಿಡ್‌ ಮಹಾಮಾರಿ ಯಾವ ರೀತಿ ಸ್ವರೂಪ ಪಡೆಯಲಿದೆ ಕಾದು ನೋಡಬೇಕಿದೆ. ಒಟ್ಟಿನಲ್ಲಿ ಮಕ್ಕಳು ಸುರಕ್ಷಿತವಾಗಿರಲಿ ಎಂಬುದೇ ನಮ್ಮ ಆಶಯ.

ಮಾರ್ಗಸೂಚಿ ಪಾಲನೆ
ತಾಲೂಕಿನಲ್ಲಿ ಸೋಮವಾರದಿಂದ 9 ಮತ್ತು 10ನೇ ತರಗತಿಗಳನ್ನು ಪ್ರಾರಂಭಿಸುವ ನಿಟ್ಟಿನಲ್ಲಿ ಸರಕಾರದ ಎಸ್‌ಒಪಿಯನ್ನುಕಟ್ಟುನಿಟ್ಟಾಗಿ
ಜಾರಿಮಾಡಲಾಗಿದೆ, ಪ್ರತಿಯೊಂದು ತರಗತಿಯಲ್ಲಿ 15 ರಿಂದ 20 ಮಕ್ಕಳನ್ನು 3ರಿಂದ 6ಅಡಿ ಅಂತರದಲ್ಲಿಕುಳಿತುಕೊಳ್ಳಲು ವ್ಯವಸ್ಥೆ
ಮಾಡಲಾಗಿದೆ. ಎಲ್ಲ ಶಾಲಾ ಶಿಕ್ಷಕರು ಮತ್ತು ಆಡಳಿತ ಮಂಡಳಿಗಳ ಜೊತೆ ಸಭೆ ನಡೆಸಿ ಸರ್ಕಾರದ ನೀತಿ-ನಿಯಮದ ಬಗ್ಗೆ ಅರಿವು
ಮೂಡಿಸಲಾಗಿದೆ. ಪ್ರತಿ 10 ಮಕ್ಕಳಿಗೆ ಒಬ್ಬರು ಶಿಕ್ಷರನ್ನು ಆರೋಗ್ಯ ಮೇಲ್ವಿಚಾರಕರ ಜವಾಬ್ದಾರಿ ನೀಡಲಾಗಿದೆ. ಒಂದು ವಾರಗಳಕಾಲ ನಿತ್ಯ
ತರಗತಿಗಳನ್ನು ನಡೆಸಲಾಗುತಿದ್ದು ನಂತರದ ಯಾವ ರೀತಿಯಲ್ಲಿ ಪ್ರತಿಕ್ರಿಯೆ ಬರುತ್ತದೆ ಅದನ್ನು ಇಲಾಖೆ ಅಧಿಕಾರಿಗಳಿಗೆ ವರದಿ ನೀಡಲಾಗುತ್ತದೆ ಎಂದು ಉದಯವಾಣಿಗೆಕ್ಷೇತ್ರ ಶಿಕ್ಷಣಾಧಿಕಾರಿ ಕೆ.ಸಿ.ರಮೇಶ್‌ ಮಾಹಿತಿ ನೀಡಿದರು.

 – ಕೊಟ್ರೇಶ್‌.ಆರ್‌

ಟಾಪ್ ನ್ಯೂಸ್

Thirthahalli; ಬಿಜೆಪಿಯಿಂದ ಶ್ರೀಮಂತರ ಓಲೈಕೆ ; ಕಿಮ್ಮ‌ನೆ ರತ್ನಾಕರ್

Thirthahalli; ಬಿಜೆಪಿಯಿಂದ ಶ್ರೀಮಂತರ ಓಲೈಕೆ ; ಕಿಮ್ಮ‌ನೆ ರತ್ನಾಕರ್

1-aaaaaa

BJP ಮೋದಿ ಮಾಡೆಲ್ ಹೆಸರಿನಲ್ಲಿ ಚೊಂಬಿನ ಮಾಡೆಲ್ ನೀಡಿದೆ: ಸುರ್ಜೇವಾಲ

1-weqwewqe

Davangere: 10 ರೂ.ಗಳ ನಾಣ್ಯ ರೂಪದಲ್ಲಿ 25 ಸಾವಿರ ರೂ. ಠೇವಣಿ ಕಟ್ಟಿದ ಅಭ್ಯರ್ಥಿ!

Exam

CET ಸುಗಮವಾಗಿ ನಡೆದಿದೆ: ಆಕ್ಷೇಪಣೆ ಸಲ್ಲಿಕೆಗೆ ಏ.27ರವರೆಗೆ ಅವಕಾಶ

1-wwqwqe

BJP ಶ್ರೀರಾಮುಲು, ಗಾಯತ್ರಿ ಸಿದ್ದೇಶ್ವರ್ ಈಗಾಗಲೇ ಗೆದ್ದಿದ್ದಾರೆ: ಜನಾರ್ದನ ರೆಡ್ಡಿ

Outrage over mistakes in CET exam question paper; Request for mercy marks

CET ಪರೀಕ್ಷೆ ಪ್ರಶ್ನೆಪತ್ರಿಕೆಯಲ್ಲಿ ಲೋಪಕ್ಕೆ ಆಕ್ರೋಶ; ಕೃಪಾಂಕಕ್ಕೆ ಆಗ್ರಹ

1-qweeweq

Viral video; ಯಾರಿವರು ಇಶಾ ಅರೋರಾ? ಮತದಾನದ ದಿನ ಭಾರಿ ಸುದ್ದಿ


ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು

ಬೇಸಿಗೆ ಬಿಸಿಯೂಟ: 32,173 ಮಕ್ಕಳ ನೋಂದಣಿ

ಬೇಸಿಗೆ ಬಿಸಿಯೂಟ: 32,173 ಮಕ್ಕಳ ನೋಂದಣಿ

Devanahalli: ಬೇಸಿಗೆ ತಾಪಮಾನ ಹೆಚ್ಚಳ, ಇರಲಿ ಎಚ್ಚರ

Devanahalli: ಬೇಸಿಗೆ ತಾಪಮಾನ ಹೆಚ್ಚಳ, ಇರಲಿ ಎಚ್ಚರ

Doddaballapur: ಜಾತೀಯತೆಗೆ ಮಣೆ ಹಾಕದ ಕ್ಷೇತ್ರದ ‌ಮತದಾರರು

Doddaballapur: ಜಾತೀಯತೆಗೆ ಮಣೆ ಹಾಕದ ಕ್ಷೇತ್ರದ ‌ಮತದಾರರು

Lok Sabha polls: ಲೋಕಸಭೆ ಚುನಾವಣೆಯಲ್ಲಿ ಇಂದಿರಾಗಾಂಧಿ ನೆನಪು

Lok Sabha polls: ಲೋಕಸಭೆ ಚುನಾವಣೆಯಲ್ಲಿ ಇಂದಿರಾಗಾಂಧಿ ನೆನಪು

10

Electricity problem: ಬೇಸಿಗೆ ಬೆನ್ನಲ್ಲೇ ಕಾಡುತ್ತಿದೆ ವಿದ್ಯುತ್‌ ಸಮಸ್ಯೆ

MUST WATCH

udayavani youtube

‘ಕಸಿ’ ಕಟ್ಟುವ ಸುಲಭ ವಿಧಾನ

udayavani youtube

ಬೇಸಿಗೆಯಲ್ಲಿ ನಮ್ಮನ್ನು ಕಾಡುವ Heat Illnessಏನಿದು ಸಮಸ್ಯೆ ? ಪರಿಹಾರವೇನು ?

udayavani youtube

ದ್ವಾರಕೀಶ್ ನಿಧನಕ್ಕೆ ನಟ ಶಿವರಾಜ್ ಕುಮಾರ್ ಸಂತಾಪ

udayavani youtube

ದೇವೇಗೌಡರಿದ್ದ ವೇದಿಕೆಗೆ ನುಗ್ಗಿದ ಕಾಂಗ್ರೆಸ್‌ ಕಾರ್ಯಕರ್ತೆಯರು

udayavani youtube

ಮಂಗಳೂರಿನಲ್ಲಿ ಪ್ರಧಾನಿ ಶ್ರೀ Narendra Modi ಅವರ ಬೃಹತ್‌ ರೋಡ್‌ ಶೋ

ಹೊಸ ಸೇರ್ಪಡೆ

Thirthahalli; ಬಿಜೆಪಿಯಿಂದ ಶ್ರೀಮಂತರ ಓಲೈಕೆ ; ಕಿಮ್ಮ‌ನೆ ರತ್ನಾಕರ್

Thirthahalli; ಬಿಜೆಪಿಯಿಂದ ಶ್ರೀಮಂತರ ಓಲೈಕೆ ; ಕಿಮ್ಮ‌ನೆ ರತ್ನಾಕರ್

1-aaaaaa

BJP ಮೋದಿ ಮಾಡೆಲ್ ಹೆಸರಿನಲ್ಲಿ ಚೊಂಬಿನ ಮಾಡೆಲ್ ನೀಡಿದೆ: ಸುರ್ಜೇವಾಲ

1-weqwewqe

Davangere: 10 ರೂ.ಗಳ ನಾಣ್ಯ ರೂಪದಲ್ಲಿ 25 ಸಾವಿರ ರೂ. ಠೇವಣಿ ಕಟ್ಟಿದ ಅಭ್ಯರ್ಥಿ!

Minchu

Bidar; ಬಿರುಗಾಳಿ‌ ಸಹಿತ ಭಾರಿ ಮಳೆ :ಸಿಡಿಲು ಬಡಿದು‌ ರೈತ ಸಾವು

1-wewqewqe

Kalaburgi: ಮಹಿಳೆಯ ಬಾತ್ ರೂಮ್ ವಿಡಿಯೋ ರೆಕಾರ್ಡ್ ಮಾಡಿದ ಸೆಕ್ಯೂರಿಟಿ ಗಾರ್ಡ್

Thanks for visiting Udayavani

You seem to have an Ad Blocker on.
To continue reading, please turn it off or whitelist Udayavani.