ಪರೀಕ್ಷೆ ಅರ್ಧಕ್ಕೆ ಸ್ಥಗಿತ : ವಿದ್ಯಾರ್ಥಿಗಳು ಆತಂಕ

ಮೂರ್‍ನಾಲ್ಕು ಬಾರಿ ಮುಂದೂಡಿದ್ದ ಪಿಪಿಎ ಪರೀಕ್ಷೆ , ಬೆಂಗಳೂರು ವಿಶ್ವ ವಿದ್ಯಾಲಯದ ವಿರುದ್ಧ ಆಕ್ರೋಶ

Team Udayavani, Oct 13, 2020, 12:40 PM IST

ಪರೀಕ್ಷೆ ಅರ್ಧಕ್ಕೆ ಸ್ಥಗಿತ : ವಿದ್ಯಾರ್ಥಿಗಳು ಆತಂಕ

ನೆಲಮಂಗಲ ನಗರದ ಸರ್ಕಾರಿ ಪ್ರಥಮ ದರ್ಜೆ ಕಾಲೇಜಿನ ಪರೀಕ್ಷೆ ಸ್ಥಗಿತಗೊಂಡ ಹಿನ್ನೆಲೆಯಲ್ಲಿ ಪರೀಕ್ಷಾ ಕೇಂದ್ರದಿಂದ ಹೊರ ಬಂದ ವಿದ್ಯಾರ್ಥಿಗಳು.

ನೆಲಮಂಗಲ: ನಗರದ ಸರ್ಕಾರಿ ಪ್ರಥಮ ದರ್ಜೆ ಕಾಲೇಜಿನಲ್ಲಿ ಪರೀಕ್ಷೆ ಬರೆಯುತ್ತಿದ್ದ ವಿದ್ಯಾರ್ಥಿಗಳಿಂದ ಉತ್ತರ ಪತ್ರಿಕೆ ವಾಪಸ್‌ ಪಡೆದು ಪರೀಕ್ಷೆ ಮುಂದೂಡಲಾಗಿದೆ ಎಂದು ಶಾಕ್‌ ನೀಡಿದ್ದು, ವಿದ್ಯಾರ್ಥಿಗಳಲ್ಲಿ ಆತಂಕ ಎದುರಾಗಿದೆ.

ಬೆಂಗಳೂರು ವಿಶ್ವವಿದ್ಯಾಲಯದ ವಾಣಿಜ್ಯ ವಿಭಾಗದ ಪಿಪಿಎ (ಪ್ರಿನ್ಸಿಪಾಲ್‌ ಮತ್ತು ಪ್ರಾಕ್ಟೀಸ್‌ ಆಫ್ ಆಡಿಟಿಂಗ್‌) ಪರೀಕ್ಷೆಯು ಆನ್‌ಲಾಕ್‌ ಆರಂಭವಾದ ನಂತರ ಮೂರ್‍ನಾಲ್ಕು ಬಾರಿ ಮುಂದೂಡಿ ಅಂತಿಮ ಪರೀಕ್ಷೆಯಾಗಿ ಅ.12 ಸೋಮವಾರ 2 ಗಂಟೆಗೆ ನಿಗದಿಯಾಗಿತ್ತು. ಅದರಂತೆ ವಿದ್ಯಾರ್ಥಿಗಳು ಪರೀಕ್ಷೆಗೆ ತಯಾರಾಗಿ ಪರೀಕ್ಷಾ ಕೇಂದ್ರಗಳಿಗೆ ಹಾಜರಾಗಿ ಪರೀಕ್ಷೆ ಬರೆಯು ವಾಗ ಅರ್ಧದಲ್ಲಿ ಸ್ಥಗಿತಗೊಳಿಸಿದ್ದಾರೆ.

ಚೆಲ್ಲಾಟ: ಒಂದು ಪರೀಕ್ಷೆ ನಡೆಸಲು ಮೂರ್‍ನಾಲ್ಕು ಭಾರಿ ಮೂಂದೂಡಿ ಕೊನೆಯಲ್ಲಿ ಮೂಕ್ಕಾಲು ಭಾಗ ಪರೀಕ್ಷೆ ಬರೆದ ನಂತರ ಪರೀಕ್ಷೆ ಸ್ಥಗಿತಗೊಳಿಸಿ ಮುಂದೂಡಲಾಗಿದೆ ಎಂದು ಉತ್ತರ ಹಾಗೂ ಪ್ರಶ್ನೆ ಪತ್ರಿಕೆ ವಾಪಸ್‌ ಪಡೆದುಕೊಂಡಿದ್ದಾರೆ. ನಮ್ಮ ಪರಿಶ್ರಮ ಸಂಪೂರ್ಣ ವ್ಯರ್ಥವಾಗಿದ್ದು, ವಿದ್ಯಾರ್ಥಿಗಳ ಜತೆ ವಿವಿಚೆಲ್ಲಾಟವಾಡುತಿದೆ. ರಾಜ್ಯದ ಎಲ್ಲಾ ವಿವಿಗಳಲ್ಲಿ ಅಂತಿಮ ವರ್ಷದ ಪದವಿ ಪರೀಕ್ಷೆಗಳು ಮುಗಿದಿದ್ದು ಬೆಂಗಳೂರು ವಿವಿಯಲ್ಲಿ ಮಾತ್ರ ಬಾಕಿ ಇದೆ ಎಂದು ವಿದ್ಯಾರ್ಥಿಗಳು ಆಕ್ರೋಶ ವ್ಯಕ್ತಪಡಿಸಿದರು.

ತಡವಾಗಿ ಬಂದ ಪರಿ ವೀಕ್ಷಕ: ನೆಲಮಂಗಲದ ಸರ್ಕಾರಿ ಪ್ರಥಮ ದರ್ಜೆ ಕಾಲೇಜಿನ ವಾಣಿಜ್ಯ ವಿಭಾಗದ 178ಕ್ಕೂ ಹೆಚ್ಚು ವಿದ್ಯಾರ್ಥಿಗಳು ಪರೀಕ್ಷಾ ಕೇಂದ್ರದಲ್ಲಿ 1 ಗಂಟೆಗಳ ಕಾಲ ಪರೀಕ್ಷೆ ಬರೆದ ನಂತರ3.15ರ ಸುಮಾರಿಗೆ ಬಂದ ಪರಿವೀಕ್ಷಕ ನರಸಿಂಹಮೂರ್ತಿ ಸೂಚನೆಯ ಮೇರೆಗೆ ಪಿಪಿಎ ಪರೀಕ್ಷೆ ಸ್ಥಗಿತ ಗೊಳಿಸಲಾಯಿತು ಎಂದು ಕಾಲೇಜಿನ ಅಧ್ಯಾಪಕರು ತಿಳಿಸಿದ್ದು, ಪರಿವೀಕ್ಷಕರು ತಡವಾಗಿ ಮಾಹಿತಿ ನೀಡಿದ್ದಾರೆ ಎಂದು ಪ್ರಾಂಶುಪಾಲರು ತಿಳಿಸಿದ್ದಾರೆ.

ಕಣ್ಣೀರಿಟ್ಟ ವಿದ್ಯಾರ್ಥಿಗಳು: ಕೋವಿಡ್ ಆತಂಕದಲ್ಲಿಯೂ ಭವಿಷ್ಯದ ದೃಷ್ಟಿಯಿಂದ ಪರೀಕ್ಷೆಗೆ ತಯಾರಿ ಮಾಡಿಕೊಂಡು ಬಂದು ಪರೀಕ್ಷೆ ಬರೆಯುವಾಗ ಅರ್ಧಕ್ಕೆ ಉತ್ತರ ಪತ್ರಿಕೆ ಪಡೆದು ಪರೀಕ್ಷೆ ಮುಂದೂಡಲಾಗಿದೆ ಎಂದರೆ ನಮ್ಮ ಭವಿಷ್ಯದ ಗತಿ ಏನು. ಬೆಂಗಳೂರು ವಿವಿ ನಮ್ಮ ಭವಿಷ್ಯದ ಜತೆ ಚೆಲ್ಲಾಟವಾಡುತಿದೆ ಎಂದು ವಿದ್ಯಾರ್ಥಿಗಳು ಕಣ್ಣೀರಿಟ್ಟರು. ದಿನಾಂಕ ಪ್ರಕಟಿಸದ ವಿವಿ: ಪಿಪಿಎ ಪರೀಕ್ಷೆ ಅರ್ಧಕ್ಕೆ ಸ್ಥಗಿತಗೊಳಿಸಿದ ಬೆಂ.ವಿವಿ ಮುಂದಿನ ಪರೀಕ್ಷೆ ದಿನಾಂಕ ಪ್ರಕಟಗೊಳಿಸದ ಕಾರಣ ವಿದ್ಯಾರ್ಥಿಗಳಲ್ಲಿ ಆತಂಕದ ಜತೆ ಗೊಂದಲ ಹೆಚ್ಚಾಗಿದ್ದು ವಿವಿ ನಡೆಗೆ ವಿದ್ಯಾರ್ಥಿಗಳು ಖಂಡನೆ ವ್ಯಕ್ತಪಡಿಸಿದ್ದಾರೆ.

ಪರೀಕ್ಷೆ ಮುಂದೂಡಿರುವ ಬಗ್ಗೆ 2 ಗಂಟೆಗೆ ಮೊಬೈಲ್‌ಗೆ ಸಂದೇಶ ಕಳುಹಿಸಲಾಗಿದೆ. ಆದರೆ ಮೊಬೈಲ್‌ ಪರೀಕ್ಷಾ ಕೇಂದ್ರದ ಬಳಿ ತರುವುದಿಲ್ಲ. ನನಗೆ 3.15ರ ಸುಮಾರಿಗೆ ಮುಂದೂಡಿರುವ ಬಗ್ಗೆ ಮಾಹಿತಿ ತಿಳಿಯಿತು. ತಕ್ಷಣ ಪರೀಕ್ಷೆ ಸ್ಥಗಿತಗೊಳಿಸಲಾಯಿತು. ನರಸಿಂಹಮೂರ್ತಿ, ಪರೀಕ್ಷಾ ಕೇಂದ್ರದ ಪರಿ ವೀಕ್ಷಕ

ಪರೀಕ್ಷೆ ಮುಗಿಯಿತು ಫ‌ಲಿತಾಂಶ ಶೀಘ್ರದಲ್ಲಿ ಬರಲಿದೆ ಮುಂದಿನ ಕೋರ್ಸ್‌ ಆಯ್ಕೆ ಮಾಡಿಕೊಳ್ಳಬಹುದು ಎನ್ನುವಷ್ಟರಲ್ಲೇ ಪ್ರಶ್ನೆ ಹಾಗೂ ಉತ್ತರ ಪತ್ರಿಕೆ ಪಡೆದು ಪರೀಕ್ಷೆ ಸ್ಥಗಿತ ಎಂದು ಹೇಳಿ ನಮ್ಮ ಭವಿಷ್ಯದ ಜತೆ ಚೆಲ್ಲಾಟಆಡುತ್ತಿರುವ ವಿವಿ ನಡೆ ಸರಿಯಲ್ಲ. ಪರೀಕ್ಷೆಯಲ್ಲಿ ಎಲ್ಲರನ್ನು ಉತೀರ್ಣ ಮಾಡಿ ಫ‌ಲಿತಾಂಶ ನೀಡಲಿ. ರಾಜೇಶ್‌, ಪರೀಕ್ಷೆ ಬರೆದ ವಿದ್ಯಾರ್ಥಿ

ಟಾಪ್ ನ್ಯೂಸ್

1-assam

UNESCO ವಿಶ್ವ ಪಾರಂಪರಿಕ ತಾಣ ಪಟ್ಟಿಗೆ ‘ದಿಬ್ಬ ಸಮಾಧಿಗಳು’: ಏನಿದು ಮೊಯಿಡಮ್ಸ್‌?

New Gang; ಮೋಸದಾಟದಲ್ಲಿ ಸಕ್ರಿಯವಾಗಿದೆ “ಆರ್ಡರ್‌ ಗ್ಯಾಂಗ್‌’

New Gang; ಮೋಸದಾಟದಲ್ಲಿ ಸಕ್ರಿಯವಾಗಿದೆ “ಆರ್ಡರ್‌ ಗ್ಯಾಂಗ್‌’

1-kanwar-msid

Uttara Khand; ಕನ್ವರ್‌ ಯಾತ್ರೆ: ಮಸೀದಿಗೇ ಪರದೆ ಹಾಕಿದ ಹರಿದ್ವಾರ ಆಡಳಿತ!

court

Court; ದೇಶಾದ್ಯಂತ 5 ಕೋಟಿ ಕೇಸು ಇತ್ಯರ್ಥಕ್ಕೆ ಬಾಕಿ: ಉ.ಪ್ರ.ದಲ್ಲೇ ಹೆಚ್ಚು!

robbers

Note!;ಕಳ್ಳತನಕ್ಕೆಂದು ಬಂದವ ತಾನೇ 20 ರೂಪಾಯಿ ನೋಟು ಇಟ್ಟು ಹೋದ!

1-tatoo

Mumbai: 22 ಶತ್ರುಗಳ ಹೆಸರು ಟ್ಯಾಟೂ ಹಾಕಿಸಿಕೊಂಡಾತನ ಕೊಲೆ!

1-wewqewq

Mumbai; 2005ರ ಭೀಕರ ಪ್ರವಾಹ ನೆನಪಿಸಿದ ಮಳೆ!:19 ವರ್ಷ ಹಿಂದಿನ ಸ್ಥಿತಿ ಮರುಕಳಿಸಲಿದೆಯೇ?


ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು

Crime: ಕಾಂಗ್ರೆಸ್‌ ಪುರಸಭೆ ಸದಸ್ಯನ ಭೀಕರ ಹತ್ಯೆ; ಆನೇಕಲ್‌ನಲ್ಲಿ ಉದ್ವಿಗ್ನ ಸ್ಥಿತಿ

Crime: ಕಾಂಗ್ರೆಸ್‌ ಪುರಸಭೆ ಸದಸ್ಯನ ಭೀಕರ ಹತ್ಯೆ; ಆನೇಕಲ್‌ನಲ್ಲಿ ಉದ್ವಿಗ್ನ ಸ್ಥಿತಿ

Ganja peddler: ಪೊಲೀಸರ ಮೇಲೆಯೇ  ಹಲ್ಲೆಗೆ ಯತ್ನಿಸಿದ ಗಾಂಜಾ ಪೆಡ್ಲರ್‌ಗೆ ಗುಂಡೇಟು; ಸೆರೆ

Ganja peddler: ಪೊಲೀಸರ ಮೇಲೆಯೇ  ಹಲ್ಲೆಗೆ ಯತ್ನಿಸಿದ ಗಾಂಜಾ ಪೆಡ್ಲರ್‌ಗೆ ಗುಂಡೇಟು; ಸೆರೆ

R.Ashok

Assembly Electionನಲ್ಲಿ ಮೈತ್ರಿಗೆ ದೇವೇಗೌಡರು ಒಪ್ಪಲಿಲ್ಲ: ಅಶೋಕ್‌

BRural

Devanahalli: ಗ್ರಾಮ ಪಂಚಾಯಿತಿಗಳಲ್ಲಿ ಇ- ಜನ್ಮ ದಾಖಲೆ

Wheeling: ಬೆಂಗಳೂರು ಹುಡುಗರಿಗೆ ವ್ಹೀಲಿಂಗ್‌ ಅಡ್ಡೆಯಾದ ಹೆದ್ದಾರಿ!

Wheeling: ಬೆಂಗಳೂರು ಹುಡುಗರಿಗೆ ವ್ಹೀಲಿಂಗ್‌ ಅಡ್ಡೆಯಾದ ಹೆದ್ದಾರಿ!

MUST WATCH

udayavani youtube

ಸರ್ಕಾರದ ವಿರುದ್ಧ ವಿಧಾನಸಭೆಯಲ್ಲಿ ಬಿಜೆಪಿ-JDS ಶಾಸಕರಿಂದ ಭಜನೆ

udayavani youtube

ಶಿರೂರು ಗುಡ್ಡಕುಸಿತ; ಕಾಣೆಯಾದವರ ಹುಡುಕಾಟಕ್ಕೆ ಡ್ರೋನ್ ಬಳಸಿ ಕಾರ್ಯಾಚರಣೆ

udayavani youtube

ಕರ್ಮಫಲ ಶಿಕ್ಷಣದಿಂದ ಆತ್ಮೋನ್ನತಿ

udayavani youtube

ತಪ್ತ ಮುದ್ರಾ ಧಾರಣೆ ವಿಶೇಷ ಮಹತ್ವದ್ದು, ಯಾಕೆ?

udayavani youtube

ಬಾಳೆಯಿಂದ ವಾರ್ಷಿಕ 50-60 ಲಕ್ಷ ರೂ. ಆದಾಯ

ಹೊಸ ಸೇರ್ಪಡೆ

1-assam

UNESCO ವಿಶ್ವ ಪಾರಂಪರಿಕ ತಾಣ ಪಟ್ಟಿಗೆ ‘ದಿಬ್ಬ ಸಮಾಧಿಗಳು’: ಏನಿದು ಮೊಯಿಡಮ್ಸ್‌?

New Gang; ಮೋಸದಾಟದಲ್ಲಿ ಸಕ್ರಿಯವಾಗಿದೆ “ಆರ್ಡರ್‌ ಗ್ಯಾಂಗ್‌’

New Gang; ಮೋಸದಾಟದಲ್ಲಿ ಸಕ್ರಿಯವಾಗಿದೆ “ಆರ್ಡರ್‌ ಗ್ಯಾಂಗ್‌’

1-kanwar-msid

Uttara Khand; ಕನ್ವರ್‌ ಯಾತ್ರೆ: ಮಸೀದಿಗೇ ಪರದೆ ಹಾಕಿದ ಹರಿದ್ವಾರ ಆಡಳಿತ!

court

Court; ದೇಶಾದ್ಯಂತ 5 ಕೋಟಿ ಕೇಸು ಇತ್ಯರ್ಥಕ್ಕೆ ಬಾಕಿ: ಉ.ಪ್ರ.ದಲ್ಲೇ ಹೆಚ್ಚು!

robbers

Note!;ಕಳ್ಳತನಕ್ಕೆಂದು ಬಂದವ ತಾನೇ 20 ರೂಪಾಯಿ ನೋಟು ಇಟ್ಟು ಹೋದ!

Thanks for visiting Udayavani

You seem to have an Ad Blocker on.
To continue reading, please turn it off or whitelist Udayavani.