ಗುಣಮಟ್ಟಕ್ಕೆ ಶಿಕ್ಷಕರಿಗೇ ಪರೀಕ್ಷೆ 


Team Udayavani, Jul 18, 2018, 1:49 PM IST

18-july-10.jpg

ಬೆಂಗಳೂರು: ಬಿಬಿಎಂಪಿಯ ಶಾಲಾ-ಕಾಲೇಜುಗಳಲ್ಲಿನ ಶಿಕ್ಷಣದ ಗುಣಮಟ್ಟ ವೃದ್ಧಿಗಾಗಿ ಪಾಠ ಮಾಡುವ ಶಿಕ್ಷಕರನ್ನೇ ಪರೀಕ್ಷೆಗೊಳಪಡಿಸಲು ಪಾಲಿಕೆ ಚಿಂತನೆ ನಡೆಸಿದೆ. ಬಿಬಿಎಂಪಿ ವ್ಯಾಪ್ತಿಯ ಶಾಲಾ-ಕಾಲೇಜುಗಳ ಅಭಿವೃದ್ಧಿಗೆ ಒತ್ತು ನೀಡಿ, ಮೂಲಸೌಕರ್ಯ, ಮಾನವ ಸಂಪನ್ಮೂಲ ಕಲ್ಪಿಸಿದರೂ ಪಾಲಿಕೆ ಶಾಲಾ-ಕಾಲೇಜುಗಳು ಪ್ರತಿವರ್ಷ ಉತ್ತಮ ಫ‌ಲಿತಾಂಶ ಪಡೆಯುವಲ್ಲಿ ಹಿಂದೆ ಬಿದ್ದಿವೆ. ಆ ಹಿನ್ನೆಲೆಯಲ್ಲಿ ಪಠ್ಯಕ್ರಮದ ಕುರಿತು ಶಿಕ್ಷಕರು ಹೊಂದಿರುವ ಜ್ಞಾನದ ಕುರಿತು ತಿಳಿಯಲು ಪಠ್ಯಕ್ರಮ ಪರೀಕ್ಷೆ ನಡೆಸಲು ಮುಂದಾಗಿದೆ. 

ರಾಷ್ಟ್ರೀಯ ಶಿಕ್ಷಣ ಸಂಶೋಧನೆ ಹಾಗೂ ತರಬೇತಿ ಪರಿಷತ್ತು (ಎನ್‌ ಸಿಇಆರ್‌ಟಿ) 2 ವರ್ಷಗಳ ಹಿಂದೆ ಪ್ರೌಢ ಹಾಗೂ ಕಾಲೇಜು ಶಿಕ್ಷಣದ ಪಠ್ಯಕ್ರಮ ಬದಲಿಸಿದೆ. ಆದರೆ, ಪಠ್ಯಕ್ರಮದ ಕುರಿತು ಶಿಕ್ಷಕರಿಗೆ ಮಾಹಿತಿ ನೀಡುವ ಅಥವಾ ತರಬೇತಿ ನೀಡುವ ಕೆಲಸವಾಗಿಲ್ಲ. ಹೀಗಾಗಿ ಪಠ್ಯಕ್ರಮ ಸಂಪೂರ್ಣವಾಗಿ ಅರ್ಥ ಮಾಡಿಕೊಳ್ಳಲು ಆಗದ ಶಿಕ್ಷಕರು ತಮಗೆ ತಿಳಿದಷ್ಟು ವಿಷಯವನ್ನು ವಿದ್ಯಾರ್ಥಿಗಳಿಗೆ ಹೇಳಿ ಕೊಡುತ್ತಿದ್ದಾರೆ. ಹೀಗಾಗಿಯೇ ಪಾಲಿಕೆಯ ಶಾಲೆಗಳಲ್ಲಿ ಫ‌ಲಿತಾಂಶ ಕಡಿಮೆಯಾಗುತ್ತಿದೆ ಎಂಬ ಅಂಶಗಳು ಬೆಳಕಿಗೆ ಬಂದಿವೆ.

ಶಿಕ್ಷಕರು ಎಡವುತ್ತಿರುವುದೆಲ್ಲಿ?: ಶಿಕ್ಷಣ ಸ್ಥಾಯಿ ಸಮಿತಿ ಹಾಗೂ ಶಿಕ್ಷಣ ವಿಭಾಗದ ಹಿರಿಯ ಅಧಿಕಾರಿಗಳು ಪಾಲಿಕೆಯ ಶಾಲಾ-ಕಾಲೇಜುಗಳಿಗೆ ದಿಢೀರ್‌ ಭೇಟಿ ನೀಡಿ ಪರಿಶೀಲಿಸಿದಾಗ, ಆಂಗ್ಲ ಭಾಷಾ ಶಿಕ್ಷಕರಿಗೆ ಸಮರ್ಪಕವಾಗಿ ಆಂಗ್ಲ ಭಾಷೆ ಮಾತನಾಡಲಾಗದಿರುವುದು. ವ್ಯಾಕರಣ ಗೊತ್ತಿಲ್ಲದಿರುವುದು, ಗಣಿತ ಶಿಕ್ಷಕರಿಗೆ ನೂತನ ಪಠ್ಯಕ್ರಮ ಅರ್ಥವಾಗದಿರುವುದು, ಹೆಚ್ಚಿನ ಶಿಕ್ಷಕರು ಗೈಡ್‌ಗಳನ್ನು ಬಳಸಿ ಪಾಠ ಮಾಡುವುದು ತಿಳಿದುಬಂದಿತ್ತು. ಹೀಗಾಗಿ ಪಾಲಿಕೆ ಅಧಿಕಾರಿಗಳು ಈ ಕ್ರಮಕ್ಕೆ ಮುಂದಾಗಿದ್ದಾರೆ.

ಪಾಲಿಕೆಗೆ ಹಾಸನ ಮಾದರಿ: ನೂತನ ಪಠ್ಯಕ್ರಮ ಶಿಕ್ಷಕರಿಗೆ ಎಷ್ಟರ ಮಟ್ಟಿಗೆ ಅರ್ಥವಾಗಿದೆ ಎಂಬುದನ್ನು ತಿಳಿಯುವ ಉದ್ದೇಶದಿಂದ ಪಠ್ಯಕ್ರಮದ ಕುರಿತು ಶಿಕ್ಷಕರಿಗೆ ಪರೀಕ್ಷೆ ನಡೆಸುವುದಾಗಿ ಹಾಸನ ಜಿಲ್ಲಾಧಿಕಾರಿಗಳು ಇತ್ತೀಚೆಗೆ ಹೇಳಿಕೆ ನೀಡಿದ್ದರು. ಅದನ್ನು ಗಂಭೀರವಾಗಿ ಪರಿಗಣಿಸಿರುವ ಪಾಲಿಕೆಯ ಅಧಿಕಾರಿಗಳು ಅದೇ ಮಾದರಿಯಲ್ಲಿ ಪಾಲಿಕೆಯ ವ್ಯಾಪ್ತಿಯ ಶಿಕ್ಷಕರಿಗೂ ಪರೀಕ್ಷೆ ನಡೆಸಿ, ಆ ಮೂಲಕ ಶಾಲಾ-ಕಾಲೇಜುಗಳಲ್ಲಿ ಗುಣಮಟ್ಟ ಹೆಚ್ಚಿಸಲು ನಿರ್ಧರಿಸಿದ್ದಾರೆ.

ಶಿಕ್ಷಕರಿಗೆ ತಜ್ಞರಿಂದ ತರಬೇತಿ: ಪಾಲಿಕೆಯ ಕಾಯಂ ಹಾಗೂ ಗುತ್ತಿಗೆ ಶಿಕ್ಷಕರಿಗೆ ಪಠ್ಯಕ್ರಮದ ಕುರಿತಂತೆ ಪರೀಕ್ಷೆ ನಡೆಸಲಾಗುತ್ತದೆ. ಈ ವೇಳೆ ಪರೀಕ್ಷೆಯಲ್ಲಿ ಕಡಿಮೆ ಅಂಕಗಳನ್ನು ಪಡೆದ ಶಿಕ್ಷಕರ ಹೆಸರನ್ನು ಎಲ್ಲಿಯೂ ಪ್ರಕಟಿಸುವುದಿಲ್ಲ. ಬದಲಿಗೆ ಅಂತಹ ಶಿಕ್ಷಕರಿಗೆ ತರಬೇತಿ ನೀಡಿ ಪಠ್ಯಕ್ರಮ ಅರ್ಥಮಾಡಿಸಲಾಗುತ್ತದೆ. ಇದರಿಂದ ಶಿಕ್ಷಕರೂ ಮಕ್ಕಳಿಗೆ ಉತ್ತಮವಾಗಿ ಬೋಧಿಸಲು ಸಾಧ್ಯವಾಗುತ್ತದೆ ಎಂಬುದು ಪಾಲಿಕೆಯ ಅಧಿಕಾರಿಗಳ ಅಭಿಪ್ರಾಯ. 

ನೂತನ ಪಠ್ಯಕ್ರಮ ಶಿಕ್ಷಕರಿಗೆ ಸಮರ್ಪಕವಾಗಿ ಅರ್ಥವಾಗಿದೆಯೇ ಎಂಬುದನ್ನು ತಿಳಿಯುವ ಉದ್ದೇಶದಿಂದ ಶಿಕ್ಷಕರಿಗೆ ಪಠ್ಯಕ್ರಮದ ಪರೀಕ್ಷೆ ನಡೆಸಲು ಉದ್ದೇಶಿಸಿದ್ದು, ಈ ಕುರಿತು ಹಿರಿಯ ಅಧಿಕಾರಿಗಳೊಂದಿಗೆ ಚರ್ಚಿಸಿ ಕ್ರಮಕೈಗೊಳ್ಳಲಾಗುವುದು. 
 ●ಕೆ.ಆರ್‌.ಪಲ್ಲವಿ, ಪಾಲಿಕೆಯ ಹೆಚ್ಚುವರಿ
ಉಪ ಸಹಾಯಕ ಆಯುಕ್ತರು

●ವೆಂ.ಸುನೀಲ್‌ಕುಮಾರ್‌

ಟಾಪ್ ನ್ಯೂಸ್

Lokayukta

Bellary; ಲೋಕಾಯುಕ್ತ ಬಲೆಗೆ ಬಿದ್ದ 6 ಮಂದಿ ಭ್ರಷ್ಟ ಅಧಿಕಾರಿಗಳು: ಲಕ್ಷ ಲಕ್ಷ ರೂ. ಲಂಚ!

Lok Sabha Election: ಮೋದಿಗೆ ಮತ ಕೇಳುವ ಹಕ್ಕಿಲ್ಲ: ಸಿದ್ದರಾಮಯ್ಯ

Lok Sabha Election: ಮೋದಿಗೆ ಮತ ಕೇಳುವ ಹಕ್ಕಿಲ್ಲ: ಸಿದ್ದರಾಮಯ್ಯ

1-asaa

Heart beats; ಭಾರತದ ಹೃದಯ ಪಾಕಿಸ್ಥಾನದ ಯುವತಿಗೆ ಹೊಸ ಜೀವನ ನೀಡಿತು..

who will be the Indian fast bowlers for t20 world cup

T20 World Cup; ಯಾರಿಲ್ಲ.. ಯಾರಿಲ್ಲ.. ವಿಶ್ವಕಪ್ ಗೆ ವೇಗದ ಬೌಲರ್ ಗಳು ಯಾರೆಲ್ಲಾ?

ಸಿನಿಮಾದಲ್ಲಿ ಖ್ಯಾತಿ, ಭಾರತೀಯರ ಪ್ರೀತಿಗಳಿಸಿದರೂ ಈ ಸೆಲೆಬ್ರಿಟಿಗಳು ಮತದಾನ ಮಾಡುವ ಹಾಗಿಲ್ಲ

ಸಿನಿಮಾದಲ್ಲಿ ಖ್ಯಾತಿ, ಭಾರತೀಯರ ಪ್ರೀತಿಗಳಿಸಿದರೂ ಈ ಸೆಲೆಬ್ರಿಟಿಗಳು ಮತದಾನ ಹಕ್ಕು ಹೊಂದಿಲ್ಲ

1-qwqwewqe

IPL ಅಕ್ರಮ ಪ್ರಸಾರ ಕೇಸ್; ನಟಿ ತಮನ್ನಾಗೆ ಸಂಕಷ್ಟ: ಸೈಬರ್ ಸೆಲ್ ನೋಟಿಸ್

1-wqqwewqe

BJP; ಖೂಬಾ ಮತ್ತೊಮ್ಮೆ ಸಚಿವರಾಗ್ತಾರೆ : ಔರಾದ್ ನಲ್ಲಿ ಯಡಿಯೂರಪ್ಪ ಘೋಷಣೆ


ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು

ಬೇಸಿಗೆ ಬಿಸಿಯೂಟ: 32,173 ಮಕ್ಕಳ ನೋಂದಣಿ

ಬೇಸಿಗೆ ಬಿಸಿಯೂಟ: 32,173 ಮಕ್ಕಳ ನೋಂದಣಿ

Devanahalli: ಬೇಸಿಗೆ ತಾಪಮಾನ ಹೆಚ್ಚಳ, ಇರಲಿ ಎಚ್ಚರ

Devanahalli: ಬೇಸಿಗೆ ತಾಪಮಾನ ಹೆಚ್ಚಳ, ಇರಲಿ ಎಚ್ಚರ

Doddaballapur: ಜಾತೀಯತೆಗೆ ಮಣೆ ಹಾಕದ ಕ್ಷೇತ್ರದ ‌ಮತದಾರರು

Doddaballapur: ಜಾತೀಯತೆಗೆ ಮಣೆ ಹಾಕದ ಕ್ಷೇತ್ರದ ‌ಮತದಾರರು

Lok Sabha polls: ಲೋಕಸಭೆ ಚುನಾವಣೆಯಲ್ಲಿ ಇಂದಿರಾಗಾಂಧಿ ನೆನಪು

Lok Sabha polls: ಲೋಕಸಭೆ ಚುನಾವಣೆಯಲ್ಲಿ ಇಂದಿರಾಗಾಂಧಿ ನೆನಪು

10

Electricity problem: ಬೇಸಿಗೆ ಬೆನ್ನಲ್ಲೇ ಕಾಡುತ್ತಿದೆ ವಿದ್ಯುತ್‌ ಸಮಸ್ಯೆ

MUST WATCH

udayavani youtube

ವೈಭವದ ಹಿರಿಯಡ್ಕ ಸಿರಿಜಾತ್ರೆ ಸಂಪನ್ನ

udayavani youtube

ಯಾವೆಲ್ಲಾ ಚರ್ಮದ ಕಾಯಿಲೆಗಳಿವೆ ಹಾಗೂ ಪರಿಹಾರಗಳೇನು?

udayavani youtube

Mangaluru ಹೆಬ್ಬಾವಿನ ದೇಹದಲ್ಲಿ ಬರೋಬ್ಬರಿ 11 ಬುಲೆಟ್‌ ಪತ್ತೆ!

udayavani youtube

ನನ್ನ ಕಥೆ ನಿಮ್ಮ ಜೊತೆ

udayavani youtube

‘ಕಸಿ’ ಕಟ್ಟುವ ಸುಲಭ ವಿಧಾನ

ಹೊಸ ಸೇರ್ಪಡೆ

Lokayukta

Bellary; ಲೋಕಾಯುಕ್ತ ಬಲೆಗೆ ಬಿದ್ದ 6 ಮಂದಿ ಭ್ರಷ್ಟ ಅಧಿಕಾರಿಗಳು: ಲಕ್ಷ ಲಕ್ಷ ರೂ. ಲಂಚ!

Lok Sabha Election: ಮೋದಿಗೆ ಮತ ಕೇಳುವ ಹಕ್ಕಿಲ್ಲ: ಸಿದ್ದರಾಮಯ್ಯ

Lok Sabha Election: ಮೋದಿಗೆ ಮತ ಕೇಳುವ ಹಕ್ಕಿಲ್ಲ: ಸಿದ್ದರಾಮಯ್ಯ

1-asaa

Heart beats; ಭಾರತದ ಹೃದಯ ಪಾಕಿಸ್ಥಾನದ ಯುವತಿಗೆ ಹೊಸ ಜೀವನ ನೀಡಿತು..

who will be the Indian fast bowlers for t20 world cup

T20 World Cup; ಯಾರಿಲ್ಲ.. ಯಾರಿಲ್ಲ.. ವಿಶ್ವಕಪ್ ಗೆ ವೇಗದ ಬೌಲರ್ ಗಳು ಯಾರೆಲ್ಲಾ?

ನರಗುಂದ: ಸಮಾಜದಲ್ಲಿ ದೇವಸ್ಥಾನಗಳು ಭಕ್ತಿಯ ಸಂಗಮ- ಶಾಂತಲಿಂಗ ಸ್ವಾಮೀಜಿ

ನರಗುಂದ: ಸಮಾಜದಲ್ಲಿ ದೇವಸ್ಥಾನಗಳು ಭಕ್ತಿಯ ಸಂಗಮ- ಶಾಂತಲಿಂಗ ಸ್ವಾಮೀಜಿ

Thanks for visiting Udayavani

You seem to have an Ad Blocker on.
To continue reading, please turn it off or whitelist Udayavani.