ರೈತರಿಗೆ ಸಹಕಾರ ಸಂಘದಿಂದ ಸೌಲಭ್ಯ


Team Udayavani, Feb 11, 2019, 7:23 AM IST

raai.jpg

ದೇವನಹಳ್ಳಿ: ಗ್ರಾಮೀಣ ಪ್ರದೇಶದಲ್ಲಿ ಸಹಕಾರ ಸಂಘಗಳಿಂದ ಸೌಲಭ್ಯ ಸಿಗುತ್ತಿದ್ದು, ಸ್ಥಳೀಯ ರೈತರು ಇದರ ಸದುಪಯೋಗ ಮಾಡಿಕೊಳ್ಳಬೇಕೆಂದು ಶಾಸಕ ನಿಸರ್ಗ ಎಲ್‌.ಎನ್‌.ನಾರಾಯಣಸ್ವಾಮಿ ಅವರು ಸಲಹೆ ನೀಡಿದರು. ತಾಲೂಕಿನ ಬಿದಲೂರು ವ್ಯವ‌ಸಾಯ ಸಹಕಾರ ಸಂಘ ಆವರಣದ ಬಳಿ ಸಂಘದ ಸ್ವಂತ ಬಂಡವಾಳದಲ್ಲಿ ನಿರ್ಮಿಸಿರುವ ರಸ ಗೊಬ್ಬರ ಗೋದಾಮು, ಮಳಿಗೆ ಉದ್ಘಾಟಿಸಿ ಮಾತನಾಡಿದರು.

ಸಂಘದಿಂದ ಉತ್ತಮ ಕಾರ್ಯ: ರಸ ಗೊಬ್ಬರ, ಕ್ರಿಮಿನಾಶಕ ಔಷಧಿ ಸೇರಿದಂತೆ ವಿವಿಧ ಸಾಮಗ್ರಿಗಳನ್ನು ದಾಸ್ತಾನು ಮಾಡಲು ಸ್ವಂತ ಬಂಡವಾಳದಲ್ಲಿ ಬಿದಲೂರು ವ್ಯವ‌ ಸಾಯ ಸೇವಾ ಸಹಕಾರ ಸಂಘ ಉತ್ತಮ ಕಾರ್ಯ ಮಾಡಿದೆ. ರೈತರು ಇದರ ಸ‌ದುಪ ಯೋಗ ಮಾಡಿಕೊಳ್ಳಬೇಕೆಂದು ಹೇಳಿದರು.

ಜಮೀನು ಕೊಟ್ಟ ರೈತರಿಗೆ ಸೂರು: ವ್ಯಾಪ್ತಿಯ ರೈತರಿಗೆ ಸಹಕಾರಿಯಾಗಿದೆ. ಸಹಕಾರ ಸಂಘಗಳು ರೈತರ ಆರ್ಥಿಕ ಅಭಿ ವೃದ್ಧಿಗೆ ಅನುಕೂಲ ಮಾಡುತ್ತದೆ. ಗ್ರಾಮೀಣ ಪ್ರದೇಶದಲ್ಲಿ ಸಹಕಾರ ಸಂಘಗಳು ಉತ್ತಮ ಸೇವೆ ನೀಡುತ್ತಿವೆ. ಅಂತಾರಾಷ್ಟ್ರೀಯ ವಿಮಾನ ನಿಲ್ದಾಣಕ್ಕೆ ಜಮೀನು ಕೊಟ್ಟವರು ನಿರ್ಗತಿ ಕರಾಗಿದ್ದಾರೆ. ಅವರಿಗೆ ಸೂರು ನೀಡುವಂತಾ ಗಬೇಕು. ತಾಲೂಕಿನಲ್ಲಿ ಗೋಮಾಳ ಇತರೆ ಜಾಗಗಳಿಗೆ ಸಂಬಂಧಿಸಿದಂತೆ ವಿಧಾನಸಭೆ ಅಧಿವೇಶನದಲ್ಲಿ ಪ್ರಶ್ನೋತ್ತರ ವೇಳೆಯಲ್ಲಿ ಮಾತನಾಡುತ್ತೇನೆ. ಬಿದಲೂರು ವಿಎಸ್‌ಎಸ್‌ಎನ್‌ ಮಾದರಿ ಸಂಘವಾಗಲಿ ಎಂದು ಹೇಳಿದರು.

ರೈತರಿಗೆ ಅನುಕೂಲ: ಬಿದಲೂರು ವ್ಯವ‌ ಸಾಯ ಸಹಕಾರ ಸಂಘದ ಅಧ್ಯಕ್ಷ ಆನಂದ್‌ ಮಾತನಾಡಿ, ಸಂಘದ ಸ್ವಂತ ಬಂಡವಾಳದಲ್ಲಿ 15.50 ಲಕ್ಷ ರೂ.ವೆಚ್ಚದಲ್ಲಿ ರಸಗೊಬ್ಬರ ಗೋದಾಮು, ಮಳಿಗೆ ನಿರ್ಮಾಣ ಮಾಡ ಲಾಗಿದೆ. ರೈತರಿಗೆ ಸಹಕಾರ ಸಂಘದಿಂದ ಉತ್ತಮ ಕಾರ್ಯಕ್ರಮ ರೂಪಿಸಲಾಗುತ್ತಿದೆ.

ಸುತ್ತಮುತ್ತಲಿನ ರೈತರಿಗೆ ಇದರಿಂದ ಅನುಕೂಲವಾಗಿದೆ. ಎಲ್ಲರ ಸಹಕಾರ ಪಡೆದು ಸಂಘದ ಸರ್ವತೋಮುಖ ಅಭಿವೃದ್ಧಿಗೆ ಶ್ರಮಿಸಲಾಗುತ್ತಿದೆ ಎಂದು ಹೇಳಿದರು. ಈ ಸಂದರ್ಭದಲ್ಲಿ ಬೆಂಗಳೂರು ಹಾಲು ಒಕ್ಕೂಟದ ಉಪಾಧ್ಯಕ್ಷ ಶ್ರೀನಿವಾಸ್‌, ಎಪಿಎಂಸಿ ಅಧ್ಯಕ್ಷ ಕೆ.ವಿ.ಮಂಜುನಾಥ್‌, ಜಿಪಂ ಸದಸ್ಯೆ ರಾಧಮ್ಮ, ಗ್ರಾಪಂ ಅಧ್ಯಕ್ಷ ನಾಗೇಗೌಡ, ಪಿಕಾರ್ಡ್‌ ಬ್ಯಾಂಕ್‌ ಅಧ್ಯಕ್ಷ ಮುನಿರಾಜು, ಬಿಡಿಸಿಸಿ ಬ್ಯಾಂಕ್‌ ನಿರ್ದೇಶಕ ಸೊಣ್ಣಪ್ಪ,

ವಿಎಸ್‌ಎಸ್‌ಎನ್‌ ಮುಖ್ಯ ಕಾರ್ಯನಿರ್ವಣಾಧಿಕಾರಿ ವೆಂಕಟೇಶ್‌, ವಿಎಸ್‌ಎಸ್‌ಎನ್‌ ಉಪಾಧ್ಯಕ್ಷ ತಿಮ್ಮಯ್ಯ, ಸದಸ್ಯರಾದ ಚಿಕ್ಕನಾರಾಯಣಸ್ವಾಮಿ, ಮಹೇಶ್‌, ನಾಗರಾಜ್‌, ಯಂಬ್ರಹಳ್ಳಿ ರವಿ, ದಾಕ್ಷಾ ಯಣಮ್ಮ, ನೇತ್ರಾವತಿ, ಜಿಲ್ಲಾ ಸಹಕಾರಿ ಒಕ್ಕೂಟದ ಅಧ್ಯಕ್ಷ ಎ.ಸಿ.ನಾಗರಾಜ್‌, ಗ್ರಾಪಂ ಸದಸ್ಯ ಮುನಿರಾಜು, ಮಾಜಿ ಅಧ್ಯಕ್ಷ ಮುನಿ ಶಾಮಪ್ಪ ಸೇರಿದಂತೆ ಸ್ಥಳೀಯ ಮುಖಂಡರು, ಗ್ರಾಮಸಸ್ಥರು ಮತ್ತಿತರರು ಹಾಜರಿದ್ದರು.

ಟಾಪ್ ನ್ಯೂಸ್

UPSC ಪರೀಕ್ಷೆಯಲ್ಲಿ 101ನೇ ರ್‍ಯಾಂಕ್ ಪಡೆದ ಸೌಭಾಗ್ಯಗೆ ಗುರುವಾಗಿ ನಿಂತದ್ದು ಡಾ.ಅಶ್ವಿನಿ

UPSC ಪರೀಕ್ಷೆಯಲ್ಲಿ 101ನೇ ರ್‍ಯಾಂಕ್ ಪಡೆದ ಸೌಭಾಗ್ಯಗೆ ಗುರುವಾಗಿ ನಿಂತದ್ದು ಡಾ.ಅಶ್ವಿನಿ

ಛತ್ತೀಸ್‌ಗಢದ ಕಂಕೇರ್‌ನಲ್ಲಿ ಎನ್ ಕೌಂಟರ್: ನಕ್ಸಲ್ ನಾಯಕ ಸೇರಿ 18 ಮಾವೋವಾದಿಗಳ ಹತ್ಯೆ

ಛತ್ತೀಸ್‌ಗಢದ ಕಂಕೇರ್‌ನಲ್ಲಿ ಎನ್ ಕೌಂಟರ್: ನಕ್ಸಲ್ ನಾಯಕ ಸೇರಿ 18 ಮಾವೋವಾದಿಗಳ ಹತ್ಯೆ

UPSC Result: ಬೀದರ್ ನ ಮೊಹಮ್ಮದ್ ಅಸೀಮ್‌ ಮುಜತೇಬಾಗೆ 481ನೇ ರ‍್ಯಾಂಕ್‌

UPSC Result: ಬೀದರ್ ನ ಮೊಹಮ್ಮದ್ ಅಸೀಮ್‌ ಮುಜತೇಬಾಗೆ 481ನೇ ರ‍್ಯಾಂಕ್‌

ವಿಜಯಪುರ: ಗಂಡನಿಂದ ಕಿತ್ತು ಹೆಂಡತಿಗೆ ಕೊಡುವುದೇ ಸಿದ್ದು ಗ್ಯಾರಂಟಿ: ಸಿ.ಟಿ.ರವಿ ವಾಗ್ದಾಳಿ

ವಿಜಯಪುರ: ಗಂಡನಿಂದ ಕಿತ್ತು ಹೆಂಡತಿಗೆ ಕೊಡುವುದೇ ಸಿದ್ದು ಗ್ಯಾರಂಟಿ: ಸಿ.ಟಿ.ರವಿ ವಾಗ್ದಾಳಿ

Bigg Boss OTT ಸೀಸನ್‌ -3 ಅನೌನ್ಸ್:‌ ಈ ಬಾರಿ ಮತ್ತೆ ಸಲ್ಮಾನ್‌ ಖಾನ್ ನಿರೂಪಣೆ

Bigg Boss OTT ಸೀಸನ್‌ -3 ಅನೌನ್ಸ್:‌ ಈ ಬಾರಿ ಮತ್ತೆ ಸಲ್ಮಾನ್‌ ಖಾನ್ ನಿರೂಪಣೆ

Dwarakish:ಸೋಲು, ಗೆಲುವಿನ ಪಯಣ; ವ್ಯಾಪಾರ ಬಿಟ್ಟು ಖ್ಯಾತ ನಟನಾದ ಪ್ರಚಂಡ ಕುಳ್ಳ ದ್ವಾರಕೀಶ್!

Dwarakish:ಸೋಲು, ಗೆಲುವಿನ ಪಯಣ; ವ್ಯಾಪಾರ ಬಿಟ್ಟು ಖ್ಯಾತ ನಟನಾದ ಪ್ರಚಂಡ ಕುಳ್ಳ ದ್ವಾರಕೀಶ್!

19

Aamir Khan: ರಾಜಕೀಯ ಪಕ್ಷದ ಪರ ಪ್ರಚಾರ; ನಕಲಿ ವಿಡಿಯೋ ವಿರುದ್ಧ FIR ದಾಖಲಿಸಿದ ಆಮಿರ್‌


ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು

ಬೇಸಿಗೆ ಬಿಸಿಯೂಟ: 32,173 ಮಕ್ಕಳ ನೋಂದಣಿ

ಬೇಸಿಗೆ ಬಿಸಿಯೂಟ: 32,173 ಮಕ್ಕಳ ನೋಂದಣಿ

Devanahalli: ಬೇಸಿಗೆ ತಾಪಮಾನ ಹೆಚ್ಚಳ, ಇರಲಿ ಎಚ್ಚರ

Devanahalli: ಬೇಸಿಗೆ ತಾಪಮಾನ ಹೆಚ್ಚಳ, ಇರಲಿ ಎಚ್ಚರ

Doddaballapur: ಜಾತೀಯತೆಗೆ ಮಣೆ ಹಾಕದ ಕ್ಷೇತ್ರದ ‌ಮತದಾರರು

Doddaballapur: ಜಾತೀಯತೆಗೆ ಮಣೆ ಹಾಕದ ಕ್ಷೇತ್ರದ ‌ಮತದಾರರು

Lok Sabha polls: ಲೋಕಸಭೆ ಚುನಾವಣೆಯಲ್ಲಿ ಇಂದಿರಾಗಾಂಧಿ ನೆನಪು

Lok Sabha polls: ಲೋಕಸಭೆ ಚುನಾವಣೆಯಲ್ಲಿ ಇಂದಿರಾಗಾಂಧಿ ನೆನಪು

10

Electricity problem: ಬೇಸಿಗೆ ಬೆನ್ನಲ್ಲೇ ಕಾಡುತ್ತಿದೆ ವಿದ್ಯುತ್‌ ಸಮಸ್ಯೆ

MUST WATCH

udayavani youtube

‘ಕಸಿ’ ಕಟ್ಟುವ ಸುಲಭ ವಿಧಾನ

udayavani youtube

ಬೇಸಿಗೆಯಲ್ಲಿ ನಮ್ಮನ್ನು ಕಾಡುವ Heat Illnessಏನಿದು ಸಮಸ್ಯೆ ? ಪರಿಹಾರವೇನು ?

udayavani youtube

ದ್ವಾರಕೀಶ್ ನಿಧನಕ್ಕೆ ನಟ ಶಿವರಾಜ್ ಕುಮಾರ್ ಸಂತಾಪ

udayavani youtube

ದೇವೇಗೌಡರಿದ್ದ ವೇದಿಕೆಗೆ ನುಗ್ಗಿದ ಕಾಂಗ್ರೆಸ್‌ ಕಾರ್ಯಕರ್ತೆಯರು

udayavani youtube

ಮಂಗಳೂರಿನಲ್ಲಿ ಪ್ರಧಾನಿ ಶ್ರೀ Narendra Modi ಅವರ ಬೃಹತ್‌ ರೋಡ್‌ ಶೋ

ಹೊಸ ಸೇರ್ಪಡೆ

UPSC ಪರೀಕ್ಷೆಯಲ್ಲಿ 101ನೇ ರ್‍ಯಾಂಕ್ ಪಡೆದ ಸೌಭಾಗ್ಯಗೆ ಗುರುವಾಗಿ ನಿಂತದ್ದು ಡಾ.ಅಶ್ವಿನಿ

UPSC ಪರೀಕ್ಷೆಯಲ್ಲಿ 101ನೇ ರ್‍ಯಾಂಕ್ ಪಡೆದ ಸೌಭಾಗ್ಯಗೆ ಗುರುವಾಗಿ ನಿಂತದ್ದು ಡಾ.ಅಶ್ವಿನಿ

7-

Obsessive Psychiatry: ಗೀಳು ಮನೋರೋಗ

ಛತ್ತೀಸ್‌ಗಢದ ಕಂಕೇರ್‌ನಲ್ಲಿ ಎನ್ ಕೌಂಟರ್: ನಕ್ಸಲ್ ನಾಯಕ ಸೇರಿ 18 ಮಾವೋವಾದಿಗಳ ಹತ್ಯೆ

ಛತ್ತೀಸ್‌ಗಢದ ಕಂಕೇರ್‌ನಲ್ಲಿ ಎನ್ ಕೌಂಟರ್: ನಕ್ಸಲ್ ನಾಯಕ ಸೇರಿ 18 ಮಾವೋವಾದಿಗಳ ಹತ್ಯೆ

6-thyroid

Thyroid Disease: ಥೈರಾಯ್ಡ್ ಅನಾರೋಗ್ಯ ನಿರ್ಲಕ್ಷಿಸಿದರೆ ಮಾರಕವಾದೀತು ಎಚ್ಚರ!

5-shirva

ಮೂಡುಬೆಳ್ಳೆ ಶ್ರೀಮಹಾಲಿಂಗೇಶ್ವರ, ಶ್ರೀ ಮಹಾಗಣಪತಿ, ಶ್ರೀ ಸೂರ್ಯನಾರಾಯಣ ದೇವಸ್ಥಾನ

Thanks for visiting Udayavani

You seem to have an Ad Blocker on.
To continue reading, please turn it off or whitelist Udayavani.