ಜೋಳದ ಬೆಳೆಗೆ ಫಾಲ್‌ ಸೈನಿಕ ಹುಳು ಕಾಟ!


Team Udayavani, Jun 3, 2020, 6:37 AM IST

sain kaata

ದೊಡ್ಡಬಳ್ಳಾಪುರ: ತಾಲೂಕಿನಲ್ಲಿ ಜೋಳದ ಬೆಳೆಗೆ ಫಾಲ್‌ ಸೈನಿಕ ಹುಳು ಕಾಟದ ಬಾಧೆ ತಗುಲಿದ್ದು, ರೈತರು ಜೋಳದ ಬೆಳೆ ನಷ್ಟ ಅನುಭವಿಸುವ ಆತಂಕದಲ್ಲಿದ್ದಾರೆ. ಬೀಜೋಪಚಾರದಿಂದಲೇ ತಜ್ಞರ ಸಲಹೆ ಪಾಲಿಸಿದರೆ, ಕೀಟ  ನಿಯಂತ್ರದಲ್ಲಿಡ ಬಹುದು ಎಂದು ಕೃಷಿ ವಿಜ್ಞಾನ ಕೇಂದ್ರದ ಮುಖ್ಯಸ್ಥ ಡಾ. ಎ.ಪಿ. ಮಲ್ಲಿಕಾರ್ಜುನಗೌಡ, ಸಸ್ಯ ಸಂರಕ್ಷಣೆ ವಿಜ್ಞಾನಿ ಡಾ.ಬಿ. ಮಂಜುನಾಥ್‌ ಸಲಹೆ ನೀಡಿದ್ದಾರೆ.

ಈ ಕುರಿತು ಮಾಹಿತಿ ನೀಡಿ, ಫಾಲ್‌ಸೈನಿಕ ಹುಳು,  ಅಮೆರಿಕ ದಿಂದ ಆಫ್ರಿಕಾ ಮೂಲಕ ಭಾರತಕ್ಕೆ ಬಂದಿದೆ. ಈ ಲದ್ದಿಹುಳು ಆಹಾರ ಖಾಲಿಯಾದ ತಕ್ಷಣ ಅನ್ವೇಷನೆ ಆರಂಭಿಸುತ್ತದೆ. ಒಂದು ಬಹುಬೆಳೆ ಭಕ್ಷಕ ಕೀಟವಾಗಿದ್ದು, ಆಕ್ರಮಣಕಾರಿ ಪ್ರವೃತ್ತಿ ಹೊಂದಿದೆ. ಸುಮಾರು 80ಕ್ಕಿಂತ  ಹೆಚ್ಚು ಆಸರೆ ಸಸ್ಯ ಹೊಂದಿದ್ದು, ಮುಖ್ಯವಾಗಿ ಹುಲ್ಲುಗಾವಲು, ಹುರಳಿ, ಹತ್ತಿ, ಗೋವಿನಜೋಳ, ರಾಗಿ, ಓಟ್ಸ್‌, ಕಡಲೆ, ಭತ್ತ, ಜೋಳ, ಸಕ್ಕರೆ,  ಬಿಟ್‌ರೂಟ್‌, ಸೋಯಾಬಿನ್‌, ಕಬ್ಬು, ತಂಬಾಕು, ಗೋಧಿ, ಕಿರು ಧಾನ್ಯ ಮತ್ತು ಮೇವಿನ ಬೆಳೆ  ಗಳು ಕೀಟದ ಬಾಧೆಗೆ ತುತ್ತಾ ಗುತ್ತವೆ. ತರಕಾರಿ ಬೆಳೆಗಳು ಮತ್ತು ಹಣ್ಣಿನ ಬೆಳೆಗಳ ಮೇಲೆ ಕೆಲವೊಮ್ಮೆ ಮಾತ್ರ ದಾಳಿ ನಡೆಸುತ್ತವೆ ಎಂದರು.

ಹಾನಿಯ ಲಕ್ಷಣಗಳು: ಕೀಟಗಳು ಪ್ರಮುಖ ವಾಗಿ ಎಲೆ ಸೇವಿಸುತ್ತವೆ. ಕೀಟದ ಬಾಧೆ ತೀವ್ರ ವಾದಲ್ಲಿ ಸುಳಿ ತಿಂದು ಅಧಿಕ ಪ್ರಮಾಣ ದಲ್ಲಿ ಹಿಕ್ಕೆ ಹಾಕುತ್ತವೆ. ತೆನೆ ತುದಿಯಲ್ಲಿ ಮೊದಲು ತುಪ್ಪಳ ಆಹಾರ ಸೇವಿಸಿ, ಬಳಿ ಸಿಪ್ಪೆ ಯೊ ಳಗೆ  ಪ್ರವೇಶಿಸಿ ಕಾಳು ತಿಂದು ನಾಶಪಡಿ ಸುತ್ತವೆ. ಈ ಕೀಟ ಹೆಚ್ಚಾಗಿ 40ರಿಂದ 50 ದಿ® ‌ದೊಳಗಿನ ಬೆಳೆ ನಾಶಮಾಡುತ್ತವೆ. ಈ ಕೀಟಗಳು ಆಹಾರ ಅನ್ವೇಷಣೆಯಲ್ಲಿ ಒಂದು ಹೊಲದಿಂದ ಮತ್ತೂಂದು ಹೊಲಕ್ಕೆ ಸೈನಿಕ ರೋಪಾದಿಯಲ್ಲಿ  ಪಸರಿಸುವ ಶಕ್ತಿ ಹೊಂದಿವೆ ಎಂದರು.

ನಿರ್ವಹಣೆ ಕ್ರಮಗಳು: ಸಾಮಾನ್ಯವಾಗಿ ರೈತರು ಸೂಕ್ತ ವಿಧಾನ ಅನುಸರಿಸದೇ ರಾಸಾ ಯನಿಕ ಅಂಗಡಿಗಳಿಂದ ತಂದ ಕೀಟನಾಶಕ ಬಳಸುತ್ತಾರೆ. 10 ದಿನಗಳ ನಂತರ ಮತ್ತೆ ಕೀಟ  ಗಳು ಆರಂಭಗೊಳ್ಳುತ್ತದೆ. ಈ ನಿಟ್ಟಿನಲ್ಲಿ ರೈತರು ಸೂಕ್ತ  ಕೀಟ ನಾಶಕ ಬಳಸಬೇಕು. ಅಡ ಗಿ ರುವ ಹುಳುಗಳು ಸಂಜೆ ಹೊತ್ತು ಹೆಚ್ಚಾಗಿ ಹೊರಬರುವುದರಿಂದ ಸಂಜೆ ಹೊತ್ತು ಮಾತ್ರ ಕೀಟ ನಾಶಕ ಸಿಂಪಡಿಸಬೇಕು ಎಂದರು.

ಮುಸುಕಿನ ಜೋಳದಲ್ಲಿ ಸೈನಿಕ ಹುಳುವಿನ ಹತೋಟಿಗೆ ಸೈಯಂತ್ರನಿಲಿಪೊಲ್‌, ಥಯೋ ಮೆಥಕ್ಸಾಮ್‌- 6 ಮಿ.ಲೀ.  ಜತೆಗೆ 4 ಮಿ.ಲೀ. ನೀರು ಪ್ರತಿ ಕಿಲೋಗ್ರಾಂ ಬೀಜಕ್ಕೆ ಬೀಜೋಪ ಚಾರ ಮಾಡಿ ಬಿತ್ತನೆ ಮಾಡುವುದು ಸೂಕ್ತ. ಬೇವಿನ ಬೀಜದ ಕಷಾಯವನ್ನು  ಶೇ.5ರಂತೆ ಅಥವಾ ಬೇವಿನ  ಮೂಲದ ಕೀಟ ನಾಶಕ ಅಜಾಡಿರೆಕ್ಟಿನ್‌ 10,000 ಪಿಪಿಎಂ 2 ಮೀ.ಲೀ ಒಂದು  ಲೀ. ನೀರಿಗೆ ಮಿಶ್ರಣ ಮಾಡಿ, ಸುಳಿಯಲ್ಲಿ ಸಿಂಪರಣೆ ಮಾಡು ವುದರಿಂದ ಮೊಟ್ಟೆ ಮತ್ತು ಮರಿಹುಳು ನಾಶಪಡಿಸ ಬಹುದು.

ಸ್ಟ್ರೈನೊಟರಮ್‌ 11.7 ಎಸ್‌ಸಿ, 0.5  ಮಿ.ಲೀ/ಲೀ., ನೀರಿಗೆ ಅಥವಾ ಕ್ಲೊರಾಂ ಟ್ರಿನೀಲಿ ಪೋಲ್‌ 18.5 ಎಸ್‌ಸಿ 0.4 ಮಿ.ಲೀ. ಅಥವಾ 0.4 ಗ್ರಾಂ. ಎಮಾಮೆಕ್ಟಿನ್‌ ಬೆಂಜೋಯೇಟ್‌ 5 ಎಸ್‌.ಜಿ. ಯನ್ನು ಒಂದು ಲೀಟರ್‌ ನೀರಿಗೆ ಮಿಶ್ರಣ ಮಾಡಿ ಸಿಂಪರಣೆ ಮಾಡಬೇಕು ಎಂದು  ತಿಳಿಸಿದರು.

ಟಾಪ್ ನ್ಯೂಸ್

1-24-saturday

Daily Horoscope: ಪಾಲುದಾರಿಕೆ ವ್ಯವಹಾರದಲ್ಲಿ ಲಾಭ ಹೆಚ್ಚಳ, ಆರೋಗ್ಯ ಉತ್ತಮ

CM ಆಪ್ತರ ಜತೆ ನಾಡಿದ್ದು ಸಿಎಂ ದಿಲ್ಲಿಗೆ; ವಾಲ್ಮೀಕಿ, ಮುಡಾ ಹಗರಣ: ಹೈಕಮಾಂಡ್‌ಗೆ ವಿವರಣೆ?

CM ಆಪ್ತರ ಜತೆ ನಾಡಿದ್ದು ಸಿಎಂ ದಿಲ್ಲಿಗೆ; ವಾಲ್ಮೀಕಿ, ಮುಡಾ ಹಗರಣ: ಹೈಕಮಾಂಡ್‌ಗೆ ವಿವರಣೆ?

Ramanagara ಜಿಲ್ಲೆ ಇನ್ನು ಬೆಂಗಳೂರು ದಕ್ಷಿಣ; ರಾಜ್ಯ ಸಚಿವ ಸಂಪುಟದಲ್ಲಿ ನಿರ್ಧಾರ

Ramanagara ಜಿಲ್ಲೆ ಇನ್ನು ಬೆಂಗಳೂರು ದಕ್ಷಿಣ; ರಾಜ್ಯ ಸಚಿವ ಸಂಪುಟದಲ್ಲಿ ನಿರ್ಧಾರ

Siddaramaiah ನನ್ನ ವಿರುದ್ಧ ವಿಪಕ್ಷ ಷಡ್ಯಂತ್ರ

Siddaramaiah ನನ್ನ ವಿರುದ್ಧ ವಿಪಕ್ಷ ಷಡ್ಯಂತ್ರ

Pilikula Biological Park: ಕಾಳಿಂಗ ಸರ್ಪಗಳಿಗೆ “ಮೈಕ್ರೋ ಚಿಪ್‌’!

Pilikula Biological Park: ಕಾಳಿಂಗ ಸರ್ಪಗಳಿಗೆ “ಮೈಕ್ರೋ ಚಿಪ್‌’!

1-aaasdeqweqw

India-Sri Lanka ಟಿ20 ಸರಣಿ ಇಂದಿನಿಂದ : ಸೂರ್ಯ, ಗಂಭೀರ್‌ ಯುಗಾರಂಭ

1-hockey

Paris Olympics ಹಾಕಿ ಕಂಚಿನಿಂದಾಚೆ ಮಿಂಚಲಿ ಭಾರತ


ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು

Crime: ಕಾಂಗ್ರೆಸ್‌ ಪುರಸಭೆ ಸದಸ್ಯನ ಭೀಕರ ಹತ್ಯೆ; ಆನೇಕಲ್‌ನಲ್ಲಿ ಉದ್ವಿಗ್ನ ಸ್ಥಿತಿ

Crime: ಕಾಂಗ್ರೆಸ್‌ ಪುರಸಭೆ ಸದಸ್ಯನ ಭೀಕರ ಹತ್ಯೆ; ಆನೇಕಲ್‌ನಲ್ಲಿ ಉದ್ವಿಗ್ನ ಸ್ಥಿತಿ

Ganja peddler: ಪೊಲೀಸರ ಮೇಲೆಯೇ  ಹಲ್ಲೆಗೆ ಯತ್ನಿಸಿದ ಗಾಂಜಾ ಪೆಡ್ಲರ್‌ಗೆ ಗುಂಡೇಟು; ಸೆರೆ

Ganja peddler: ಪೊಲೀಸರ ಮೇಲೆಯೇ  ಹಲ್ಲೆಗೆ ಯತ್ನಿಸಿದ ಗಾಂಜಾ ಪೆಡ್ಲರ್‌ಗೆ ಗುಂಡೇಟು; ಸೆರೆ

R.Ashok

Assembly Electionನಲ್ಲಿ ಮೈತ್ರಿಗೆ ದೇವೇಗೌಡರು ಒಪ್ಪಲಿಲ್ಲ: ಅಶೋಕ್‌

BRural

Devanahalli: ಗ್ರಾಮ ಪಂಚಾಯಿತಿಗಳಲ್ಲಿ ಇ- ಜನ್ಮ ದಾಖಲೆ

Wheeling: ಬೆಂಗಳೂರು ಹುಡುಗರಿಗೆ ವ್ಹೀಲಿಂಗ್‌ ಅಡ್ಡೆಯಾದ ಹೆದ್ದಾರಿ!

Wheeling: ಬೆಂಗಳೂರು ಹುಡುಗರಿಗೆ ವ್ಹೀಲಿಂಗ್‌ ಅಡ್ಡೆಯಾದ ಹೆದ್ದಾರಿ!

MUST WATCH

udayavani youtube

ಸರ್ಕಾರದ ವಿರುದ್ಧ ವಿಧಾನಸಭೆಯಲ್ಲಿ ಬಿಜೆಪಿ-JDS ಶಾಸಕರಿಂದ ಭಜನೆ

udayavani youtube

ಶಿರೂರು ಗುಡ್ಡಕುಸಿತ; ಕಾಣೆಯಾದವರ ಹುಡುಕಾಟಕ್ಕೆ ಡ್ರೋನ್ ಬಳಸಿ ಕಾರ್ಯಾಚರಣೆ

udayavani youtube

ಕರ್ಮಫಲ ಶಿಕ್ಷಣದಿಂದ ಆತ್ಮೋನ್ನತಿ

udayavani youtube

ತಪ್ತ ಮುದ್ರಾ ಧಾರಣೆ ವಿಶೇಷ ಮಹತ್ವದ್ದು, ಯಾಕೆ?

udayavani youtube

ಬಾಳೆಯಿಂದ ವಾರ್ಷಿಕ 50-60 ಲಕ್ಷ ರೂ. ಆದಾಯ

ಹೊಸ ಸೇರ್ಪಡೆ

1-24-saturday

Daily Horoscope: ಪಾಲುದಾರಿಕೆ ವ್ಯವಹಾರದಲ್ಲಿ ಲಾಭ ಹೆಚ್ಚಳ, ಆರೋಗ್ಯ ಉತ್ತಮ

CM ಆಪ್ತರ ಜತೆ ನಾಡಿದ್ದು ಸಿಎಂ ದಿಲ್ಲಿಗೆ; ವಾಲ್ಮೀಕಿ, ಮುಡಾ ಹಗರಣ: ಹೈಕಮಾಂಡ್‌ಗೆ ವಿವರಣೆ?

CM ಆಪ್ತರ ಜತೆ ನಾಡಿದ್ದು ಸಿಎಂ ದಿಲ್ಲಿಗೆ; ವಾಲ್ಮೀಕಿ, ಮುಡಾ ಹಗರಣ: ಹೈಕಮಾಂಡ್‌ಗೆ ವಿವರಣೆ?

Ramanagara ಜಿಲ್ಲೆ ಇನ್ನು ಬೆಂಗಳೂರು ದಕ್ಷಿಣ; ರಾಜ್ಯ ಸಚಿವ ಸಂಪುಟದಲ್ಲಿ ನಿರ್ಧಾರ

Ramanagara ಜಿಲ್ಲೆ ಇನ್ನು ಬೆಂಗಳೂರು ದಕ್ಷಿಣ; ರಾಜ್ಯ ಸಚಿವ ಸಂಪುಟದಲ್ಲಿ ನಿರ್ಧಾರ

Siddaramaiah ನನ್ನ ವಿರುದ್ಧ ವಿಪಕ್ಷ ಷಡ್ಯಂತ್ರ

Siddaramaiah ನನ್ನ ವಿರುದ್ಧ ವಿಪಕ್ಷ ಷಡ್ಯಂತ್ರ

Pilikula Biological Park: ಕಾಳಿಂಗ ಸರ್ಪಗಳಿಗೆ “ಮೈಕ್ರೋ ಚಿಪ್‌’!

Pilikula Biological Park: ಕಾಳಿಂಗ ಸರ್ಪಗಳಿಗೆ “ಮೈಕ್ರೋ ಚಿಪ್‌’!

Thanks for visiting Udayavani

You seem to have an Ad Blocker on.
To continue reading, please turn it off or whitelist Udayavani.