ರೈತರ ಬದುಕು ಬದಲಿಸಿದ ಕೃಷಿ ಹೊಂಡ


Team Udayavani, Oct 4, 2018, 12:50 PM IST

blore-g-1.jpg

ದೇವನಹಳ್ಳಿ: ಈ ಹಿಂದಿನ ರಾಜ್ಯ ಸರ್ಕಾರದ ಮಹ ತ್ವಾಕಾಂಕ್ಷಿ ಕೃಷಿ ಹೊಂಡ ಯೋಜನೆ ಸುಸ್ಥಿರ ಕೃಷಿಗೆ ಪೂರಕವಾಗಿದ್ದು ನೀರಿಲ್ಲದೆ ಸೊರಗಿದ್ದ ಜಿಲ್ಲೆಯ ರೈತರು ಈಗೀಗ ನೆಮ್ಮದಿ ನಿಟ್ಟುಸಿರು ಬಿಡುತ್ತಿದ್ದಾರೆ. 2016ರಲ್ಲಿ ರಾಜ್ಯ ಸರ್ಕಾರ ಕೃಷಿಭಾಗ್ಯ ಯೋಜನೆಯನ್ನು ಜಾರಿಗೆ ತರುವುದರ ಮೂಲಕ ಆ ಯೋಜನೆಯಲ್ಲಿ ಕೃಷಿ ಹೊಂಡಗಳ ನಿರ್ಮಾಣಕ್ಕೆ ಆದ್ಯತೆ ನೀಡಿತ್ತು. ಕೃಷಿಭಾಗ್ಯ ಯೋಜನೆಯಲ್ಲಿ ನಿರ್ಮಿಸಿರುವ ಕೃಷಿ ಹೊಂಡಗಳಲ್ಲಿ ನೀರು ಸಂಗ್ರಹಗೊಳ್ಳುತ್ತಿದ್ದು ಇದರಿಂದ ರೈತರು ಮಳೆಗಾಲದ ಬಳಿಕವೂ ತೋಟಗಾರಿಕೆ ಬೆಳೆಗಳಲ್ಲಿ ಅಧಿಕ ಇಳುವರಿ ಪಡೆಯುತ್ತಿದ್ದಾರೆ.

ಅಗತ್ಯಕ್ಕೆ ತಕ್ಕ ನೀರು:ಇತ್ತೀಚಿನ ದಿನಗಳಲ್ಲಿ ಅಂತರ್ಜಲ ಕುಸಿತದಿಂದ 1200 ರಿಂದ 1500 ಅಡಿಗಳಿಗೆ ಬೋರ್‌ ವೆಲ್‌ ಗಳನ್ನು ಕೊರಸಿದರೂ ನೀರು ಸಿಗದ ಸ್ಥಿತಿ ನಿರ್ಮಾಣವಾಗಿದೆ. ಇರುವ ಅಲ್ಪ ಸ್ವಲ್ಪ ನೀರಿನಲ್ಲಿಯೇ ಕೃಷಿ ಚಟುವಟಿಕೆ ನಡೆಸುತ್ತಿದ್ದರು. ಕಳೆದ 4 ವರ್ಷಗಳಿಂದ ಜಿಲ್ಲೆಯಲ್ಲಿನ ರೈತರು ಕೃಷಿ ಹೊಂಡಗಳನ್ನು ನಿರ್ಮಿಸಿಕೊಳ್ಳುತ್ತಿದ್ದು ಅಗತ್ಯಕ್ಕೆ ತಕ್ಕಂತೆ ನೀರನ್ನು ಕೃಷಿಗೆ ಪೂರೈಸಿ ಕೊಳ್ಳುತ್ತಿದ್ದಾರೆ.

ರೈತ ಪುರುಷೋತ್ತಮ್‌ ಮಾತನಾಡಿ,ಕೃಷಿ ಹೊಂಡಗಳ ನಿರ್ಮಾಣದಿಂದ ರೈತರಿಗಾಗುವ ನೀರಿನ ಅಭಾವ ತಪ್ಪಿದೆ. ಮಳೆಯ ನೀರನ್ನು 5-6 ತಿಂಗಳು ಶೇಖರಿಸಿ ಬೆಳೆ ಬೆಳೆಯಲು ಅನುಕೂಲವಾಗಿದೆ. ಪ್ರತಿ ರೈತರು ಹನಿ ನೀರಾವರಿ ಅಳವಡಿಸಿಕೊಂಡರೆ ಇರುವ ನೀರಿನಲ್ಲಿಯೇ ಉತ್ತಮ ಬೆಳೆ ಬೆಳೆಯಬಹುದು ಎಂದರು. 

4615 ಕೃಷಿ ಹೊಂಡ ನಿರ್ಮಾಣ : ಬೆಂಗಳೂರು ಗ್ರಾಮಾಂತರ ಜಿಲ್ಲೆಯಲ್ಲಿ 4615 ರೈತರು ಕೃಷಿ ಭಾಗ್ಯ ಮತ್ತು ಜಲಾಯನ ಕಾರ್ಯಕ್ರಮದಡಿ ಕೃಷಿ ಹೊಂಡಗಳನ್ನು ನಿರ್ಮಿಸಿಕೊಂಡಿದ್ದಾರೆ. 3983 ಹೊಂಡಗಳಿಗೆ ಪಾಲಿಥಿನ್‌ ಹೊದಿಕೆ ಅಳವಡಿ ಸಲಾಗಿದೆ. 2492 ರೈತರು ಡೀಸೆಲ್‌ ಪಂಪ್‌ ಸೆಟ್‌, 1549 ರೈತರು ತುಂತುರು ನೀರಾವರಿ, 452 ಹನಿ
ನೀರಾವರಿ, 102 ನೆರಳು ಪರದೆ ಘಟಕಗಳನ್ನು ನಿರ್ಮಿಸಿಕೊಂಡಿದ್ದಾರೆ. 2014ರಿಂದ 2018ರವರೆಗೆ ಜಿಲ್ಲೆಯ 4 ತಾಲೂಕುಗಳಲ್ಲಿ ಕೃಷಿ ಹೊಂಡಗಳನ್ನು ಮಾಡಿಕೊಂಡು ರೈತರು ಕೃಷಿ ಮಾಡುತ್ತಿದ್ದಾರೆ. 

ಇದರಿಂದ ನೀರು ಉಳಿತಾಯವಾಗಿ ಅಂತರ್ಜಲವೂ ವೃದ್ಧಿಸುತ್ತಿದೆ. ಇನ್ನು ಜಿಲ್ಲೆಯಲ್ಲಿನ ಸರಾಸರಿ ಕೃಷಿ ಹೊಂಡಗಳು ಇಂತಿವೆ. 

ದೇವನಹಳ್ಳಿ ತಾಲೂಕು: 2014 ರಲ್ಲಿ 464, 2015 ರಲ್ಲಿ 131, 2016 ರಲ್ಲಿ 226, 2017 ರಲ್ಲಿ 297 ಹಾಗೂ ವಾಟರ್‌ ಶೆಡ್‌ 164, 2018 ರಲ್ಲಿ 163 ಒಟ್ಟು 1345 ಕೃಷಿ ಹೊಂಡಗಳು ನಿರ್ಮಾಣವಾಗಿದೆ. ದೊಡ್ಡಬಳ್ಳಾಪುರ ತಾಲೂಕು:2014 ರಲ್ಲಿ 397, 2015 ರಲ್ಲಿ 86 , 2016 ರಲ್ಲಿ 22, 2017 ರಲ್ಲಿ 90 ಹಾಗೂ ವಾಟರ್‌ ಶೆಡ್‌ 567, 2018 ರಲ್ಲಿ 60 ಒಟ್ಟು 1202 ಕೃಷಿ ಹೊಂಡಗಳು ನಿರ್ಮಾಣವಾಗಿದೆ. ನೆಲಮಂಗಲ ತಾಲೂಕು: 2014 ರಲ್ಲಿ 398, 2015 ರಲ್ಲಿ 68 , 2016 ರಲ್ಲಿ 40, 2017 ರಲ್ಲಿ 25 ಹಾಗೂ ವಾಟರ್‌ ಶೆಡ್‌ 240, 2018 ರಲ್ಲಿ 42 ಒಟ್ಟು 813 ಕೃಷಿ ಹೊಂಡಗಳು ನಿರ್ಮಾಣವಾಗಿದೆ.
 
ಹೊಸಕೋಟೆ ತಾಲೂಕು: 2014 ರಲ್ಲಿ 466, 2015 ರಲ್ಲಿ 89 , 2016 ರಲ್ಲಿ 19, 2017 ರಲ್ಲಿ 62 ಹಾಗೂ ವಾಟರ್‌ ಶೆಡ್‌ 452, 2018 ರಲ್ಲಿ 167 ಒಟ್ಟು 1255 ಕೃಷಿ ಹೊಂಡಗಳು ನಿರ್ಮಾಣವಾಗಿದೆ. ಕೃಷಿ ಭಾಗ್ಯ ಯೋಜನೆಯಡಿ ಪರಿಶಿಷ್ಟ ಜಾತಿ ಹಾಗೂ ಪಂಗಡ ರೈತರಿಗೆ ಶೇ. 90 ಹಾಗೂ ಸಾಮಾನ್ಯ ವರ್ಗದ ರೈತರಿಗೆ ಶೇ.80 ಸಹಾಯ ಧನ ಸಹಾಯ ನಿಗದಿ ಪಡಿಸಲಾಗಿದೆ. ಅದರಂತೆ ಕೃಷಿ ಹೊಂಡಗಳಲ್ಲಿನ ಪ್ರಾಣಹಾನಿ ತಡೆಯಲು ಮುನ್ನೆಚರಿಕೆಯಾಗಿ ತಂತಿ ಬೇಲಿ ನಿರ್ಮಾಣಕ್ಕಾಗಿ ಸಹಾಯ ಧನ 16 ಸಾವಿರ ರೂ.ಗಳನ್ನು ರಾಜ್ಯ ಸರ್ಕಾರ ನೀಡುತ್ತಿದೆ.

ರೈತರ ಖಾತೆಗೆ ಸಹಾಯಧನ ಜಿಲ್ಲೆಯಲ್ಲಿ 4615 ರೈತರು ಕೃಷಿ ಭಾಗ್ಯ ಯೋಜನೆ ಯಲ್ಲಿ ಕೃಷಿ ಹೊಂಡಗಳನ್ನು ನಿರ್ಮಿಸಿಕೊಂಡಿದ್ದಾರೆ. 4449 ರೈತರಿಗೆ ಕೃಷಿ ಹೊಂಡಗಳು ನಿರ್ಮಾಣ ಪಾಲಿಥಿನ್‌ ಅಳವಡಿಕೆ, ಡೀಸೆಲ್‌ ಪಂಪ್‌ ಸೆಟ್‌, ತುಂತುರು ನೀರಾವರಿ, ನೆರಳು ಪರದೆ ಅಳವಡಿಕೆಗೆ ಸಂಬಂಧಿಸಿದಂತೆ 2938.23 ಲಕ್ಷ ರೂ. ಸಹಾಯ ಧನವನ್ನು ರೈತರ ಖಾತೆ-ಸರಬ ರಾಜು ಸಂಸ್ಥೆಗೆ ವರ್ಗಾಹಿಸಲಾಗಿದೆ ಎಂದು ಕೃಷಿ ಜಿಲ್ಲಾ ಜಂಟಿ ನಿರ್ದೇಶಕ ಗಿರೀಶ್‌ ತಿಳಿಸಿದರು

ದೇವನಹಳ್ಳಿ ತಾಲೂಕಿನಲ್ಲಿ 1345 ಕೃಷಿ ಹೊಂಡಗಳು ನಿರ್ಮಾಣವಾಗಿದೆ. ರೈತರು ಕೃಷಿ ಹೊಂಡಗಳನ್ನು ಸದ್ಬಳಕೆ
ಮಾಡಿಕೊಳ್ಳುತ್ತಿದ್ದಾರೆ. 
ಮಂಜುಳಾ, ದೇವನಹಳ್ಳಿ ತಾಲೂಕು ಕೃಷಿ ಸಹಾಯಕ ನಿರ್ದೇಶಕಿ

ಟಾಪ್ ನ್ಯೂಸ್

police crime

Chitradurga: ಅನ್ಯಕೋಮಿನ ಯುವತಿಗೆ ಡ್ರಾಪ್ ನೀಡಿದ್ದಕ್ಕೆ ಹಲ್ಲೆ

1-wewq-eqwe

IPL; ರೋಚಕ ಪಂದ್ಯದಲ್ಲಿ ಪಂಜಾಬ್‌ ಎದುರು 9 ರನ್ ಜಯ ಸಾಧಿಸಿದ ಮುಂಬೈ

R. Ashok: ಬಿಜೆಪಿಯಲ್ಲಿ ಈಶ್ವರಪ್ಪನವರದು ಮುಗಿದ ಅಧ್ಯಾಯ: ಅಶೋಕ್‌

R. Ashok: ಬಿಜೆಪಿಯಲ್ಲಿ ಈಶ್ವರಪ್ಪನವರದು ಮುಗಿದ ಅಧ್ಯಾಯ: ಅಶೋಕ್‌

Dr. K Sudhakar: ಭ್ರಷ್ಟಾಚಾರದಿಂದಲೇ ಸಿದ್ದು ಸೋತಿದ್ದಾ?: ಸುಧಾಕರ್‌

Dr. K Sudhakar: ಭ್ರಷ್ಟಾಚಾರದಿಂದಲೇ ಸಿದ್ದು ಸೋತಿದ್ದಾ?: ಸುಧಾಕರ್‌

1-qwwqeqw

Thirthahalli;ಮಳೆಯ ಅಬ್ಬರಕ್ಕೆ ಮೊದಲ ಬಲಿ: ಆಗುಂಬೆ ಘಾಟಿಯಲ್ಲಿ ಟ್ರಾಫಿಕ್ ಜಾಮ್

Politics: ಡಿ.ಕೆ.ಶಿವಕುಮಾರ್‌ ಸಿಎಂ ಆಗುತ್ತಾರೆ: ಎಚ್‌.ವಿಶ್ವನಾಥ್‌

Politics: ಡಿ.ಕೆ.ಶಿವಕುಮಾರ್‌ ಸಿಎಂ ಆಗುತ್ತಾರೆ: ಎಚ್‌.ವಿಶ್ವನಾಥ್‌

13

Politics: ಸಿದ್ದರಾಮಯ್ಯ ಸರಕಾರ ಬಂದ ಬಳಿಕ ಮುಸ್ಲಿಂ ಮೂಲಭೂತವಾದಿಗಳು ಹೆಚ್ಚಳ; ಅಶೋಕ್‌


ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು

ಬೇಸಿಗೆ ಬಿಸಿಯೂಟ: 32,173 ಮಕ್ಕಳ ನೋಂದಣಿ

ಬೇಸಿಗೆ ಬಿಸಿಯೂಟ: 32,173 ಮಕ್ಕಳ ನೋಂದಣಿ

Devanahalli: ಬೇಸಿಗೆ ತಾಪಮಾನ ಹೆಚ್ಚಳ, ಇರಲಿ ಎಚ್ಚರ

Devanahalli: ಬೇಸಿಗೆ ತಾಪಮಾನ ಹೆಚ್ಚಳ, ಇರಲಿ ಎಚ್ಚರ

Doddaballapur: ಜಾತೀಯತೆಗೆ ಮಣೆ ಹಾಕದ ಕ್ಷೇತ್ರದ ‌ಮತದಾರರು

Doddaballapur: ಜಾತೀಯತೆಗೆ ಮಣೆ ಹಾಕದ ಕ್ಷೇತ್ರದ ‌ಮತದಾರರು

Lok Sabha polls: ಲೋಕಸಭೆ ಚುನಾವಣೆಯಲ್ಲಿ ಇಂದಿರಾಗಾಂಧಿ ನೆನಪು

Lok Sabha polls: ಲೋಕಸಭೆ ಚುನಾವಣೆಯಲ್ಲಿ ಇಂದಿರಾಗಾಂಧಿ ನೆನಪು

10

Electricity problem: ಬೇಸಿಗೆ ಬೆನ್ನಲ್ಲೇ ಕಾಡುತ್ತಿದೆ ವಿದ್ಯುತ್‌ ಸಮಸ್ಯೆ

MUST WATCH

udayavani youtube

‘ಕಸಿ’ ಕಟ್ಟುವ ಸುಲಭ ವಿಧಾನ

udayavani youtube

ಬೇಸಿಗೆಯಲ್ಲಿ ನಮ್ಮನ್ನು ಕಾಡುವ Heat Illnessಏನಿದು ಸಮಸ್ಯೆ ? ಪರಿಹಾರವೇನು ?

udayavani youtube

ದ್ವಾರಕೀಶ್ ನಿಧನಕ್ಕೆ ನಟ ಶಿವರಾಜ್ ಕುಮಾರ್ ಸಂತಾಪ

udayavani youtube

ದೇವೇಗೌಡರಿದ್ದ ವೇದಿಕೆಗೆ ನುಗ್ಗಿದ ಕಾಂಗ್ರೆಸ್‌ ಕಾರ್ಯಕರ್ತೆಯರು

udayavani youtube

ಮಂಗಳೂರಿನಲ್ಲಿ ಪ್ರಧಾನಿ ಶ್ರೀ Narendra Modi ಅವರ ಬೃಹತ್‌ ರೋಡ್‌ ಶೋ

ಹೊಸ ಸೇರ್ಪಡೆ

police crime

Chitradurga: ಅನ್ಯಕೋಮಿನ ಯುವತಿಗೆ ಡ್ರಾಪ್ ನೀಡಿದ್ದಕ್ಕೆ ಹಲ್ಲೆ

1-wewq-eqwe

IPL; ರೋಚಕ ಪಂದ್ಯದಲ್ಲಿ ಪಂಜಾಬ್‌ ಎದುರು 9 ರನ್ ಜಯ ಸಾಧಿಸಿದ ಮುಂಬೈ

1aaa

Austria Marathon: ಭಾರತವನ್ನು ಪ್ರತಿನಿಧಿಸಲಿರುವ ಕೊಡಗಿನ ಅಪ್ಪಚಂಗಡ ಬೆಳ್ಯಪ್ಪ

ಮೊಣಕಾಲಿನ ಗಾಯಕ್ಕೆ ಶಸ್ತ್ರಚಿಕಿತ್ಸೆ ಅಗತ್ಯ ಒಲಿಂಪಿಕ್ಸ್‌ನಿಂದ ಹೊರಬಿದ್ದ ಶ್ರೀಶಂಕರ್‌

ಮೊಣಕಾಲಿನ ಗಾಯಕ್ಕೆ ಶಸ್ತ್ರಚಿಕಿತ್ಸೆ ಅಗತ್ಯ ಒಲಿಂಪಿಕ್ಸ್‌ನಿಂದ ಹೊರಬಿದ್ದ ಶ್ರೀಶಂಕರ್‌

Virat Kohli: ಜೈಪುರದಲ್ಲಿ ಕೊಹ್ಲಿ ಪ್ರತಿಮೆ

Virat Kohli: ಜೈಪುರದಲ್ಲಿ ಕೊಹ್ಲಿ ಪ್ರತಿಮೆ

Thanks for visiting Udayavani

You seem to have an Ad Blocker on.
To continue reading, please turn it off or whitelist Udayavani.