ಶುಂಠಿ ಬೆಳೆಯಿಂದ ಬದುಕು ಕಟ್ಟಿಕೊಳ್ಳುತ್ತಿರುವ ರೈತರು

ನೀರಿನ ಕೊರತೆ ನಡುವೆಯೂ ಬೆಳೆಗಾರರು ಹೆಚ್ಚಳ ,78 ಎಕರೆಯಲ್ಲಿದ್ದ ಬೆಳೆ, ಈ ಬಾರಿ 178 ಎಕರೆಗೆ ಹೆಚ್ಚಳ

Team Udayavani, Sep 14, 2020, 12:26 PM IST

ಶುಂಠಿ ಬೆಳೆಯಿಂದ ಬದುಕು ಕಟ್ಟಿಕೊಳ್ಳುತ್ತಿರುವ ರೈತರು

ದೇವನಹಳ್ಳಿ: ನೀರಿನ ಕೊರತೆ ನಡುವೆಯೂ ರೈತರು ಶುಂಠಿ ಬೆಳೆಯಲು ಮುಂದಾಗಿದ್ದು, ಈ ಬಾರಿ ಉತ್ತಮ ಇಳುವರಿಯಿಂದ ಬಂಪರ್‌ ಬೆಳೆಯ ನಿರೀಕ್ಷೆಯಲ್ಲಿದ್ದಾರೆ.

ಈ ವರ್ಷ ಪ್ರಸ್ತುತ ಮಳೆ ಉತ್ತಮವಾಗಿ ಆಗುತ್ತಿರುವುದರಿಂದ ಶುಂಠಿ ಬೆಳೆಗೆ ನೀರುಣಿಸುವುದು ಕಷ್ಟವಾಗುತ್ತಿಲ್ಲ. ಸಕಾಲದಲ್ಲಿ ಮಳೆಯಾಗುತ್ತಿರುವುದರಿಂದ ಈ ಮಧ್ಯೆ 15 ದಿನ ಮಳೆ ಬಂದಿರಲಿಲ್ಲ. ಕಳೆದ 3-4 ದಿನಗಳಿಂದ ಮತ್ತೇ ಮಳೆ ಸುರಿಯುತ್ತಿದೆ. ಸಾಧಾರಣ ಮಳೆಯಾದರೆ ಸಾಕು ಹೆಚ್ಚು ಮಳೆ ಬಂದುಬೆಳೆಯಲ್ಲಿ ನೀರು ತುಂಬಿದರೆ ಬೇರು ಹಾಗೂ ಮಣ್ಣಿನ ತೇವಾಂಶಕ್ಕೆ ಕೊಳೆತು ಹೋಗುತ್ತದೆ. ಇದನ್ನು ಅರಿತು ಶುಂಠಿ ಬೆಳೆ ಜಮೀನಿನಲ್ಲಿ ನೀರು ನಿಲ್ಲದಂತೆ, ಬಸಿ ಕಾಲುವೆಯನ್ನು ಅಳವಡಿಸಿಕೊಳ್ಳಲಾಗುತ್ತಿದೆ ಎಂದು ರೈತರು ಹೇಳುತ್ತಿದ್ದಾರೆ. ಬೇಡಿಕೆ ಹೆಚ್ಚಳ:ಜಿಲ್ಲೆಯಲ್ಲಿ ಶುಂಠಿ ಬೆಳೆ ಪ್ರಸಕ್ತ ವರ್ಷದಲ್ಲಿ 178 ಎಕರೆಯಲ್ಲಿದೆ. ಕಳೆದ ವರ್ಷ 78 ಎಕರೆಯಲ್ಲಿತ್ತು. ವಾರ್ಷಿಕವಾಗಿ ಶುಂಠಿ ಬೆಳೆ ವಿಸ್ತೀರ್ಣದಲ್ಲಿ ಹೆಚ್ಚಳ ಕಂಡುಬರುತ್ತಿದೆ. ಈ ವರ್ಷವೂ ಶುಂಠಿ ಬೆಳೆಗೆ ಬೇಡಿಕೆ ಹೆಚ್ಚಾಗುವ ಸಾಧ್ಯತೆ ಇದೆ ಎಂದು ತೋಟಗಾರಿಕಾ ಇಲಾಖಾಧಿಕಾರಿಗಳು ಮಾಹಿತಿ ನೀಡಿದ್ದಾರೆ.

ಅಲ್ಪ ನೀರಿನಲ್ಲಿ ಬೆಳೆ: ಶುಂಠಿಯನ್ನು ಈಗಾಗಲೇ ತಾಲೂ ಕಿನಲ್ಲಿ ಅನೇಕ ಕಡೆ ನಾಟಿ ಮಾಡಿ, ಬೆಳೆಯಲು ರೈತರು ಮುಂದಾಗಿದ್ದಾರೆ. ಒಂದು ವರ್ಷದ ಅವಧಿ ನೀರಾವರಿ ಅವಲಂಬಿತ ಶುಂಠಿ ಬೆಳೆ ಬಿತ್ತನೆ ಮಾಡಿ, ಈಗಾಗಲೇ 3 ತಿಂಗಳು ಕಳೆಯುತ್ತಿವೆ. ತಾಲೂಕು ಮತ್ತು ಜಿಲ್ಲೆಯಲ್ಲಿ ಅಂತರ್ಜಲಮಟ್ಟ ಪ್ರತಿವರ್ಷ ಕುಸಿಯುತ್ತಿದೆ. 1200 ರಿಂದ 1500 ಅಡಿಗಳಿಗೆ ಕೊಳವೆ ಬಾವಿ ಕೊರೆಸಿದರೂ ನೀರು ಸಿಗದ ಸ್ಥಿತಿನಿರ್ಮಾಣ ವಾಗಿದೆ. ಇರುವ ಅಲ್ಪಸ್ವಲ್ಪದ ನೀರಿನಲ್ಲಿಯೇ ಶುಂಠಿ ಇತರೆ ಬೆಳೆಗಳನ್ನು ರೈತರು ಬೆಳೆಯುತ್ತಿದ್ದಾರೆ. ಮತ್ತೂಂದು ಕಡೆ ಅಂತಾರಾಷ್ಟ್ರೀಯ ವಿಮಾನ ನಿಲ್ದಾಣ ಬಂದ ಮೇಲೆ ರೈತರ ಜಮೀನು ಬಡಾವಣೆ, ಲೇಔಟ್‌ಗಳ ನಿರ್ಮಾಣಕ್ಕೆ ಮಾರಾಟ ವಾಗುತ್ತಿದೆ. ಉಳಿದ ಭೂಮಿಯಲ್ಲಿಯೇರೈತರು ತರಕಾರಿ, ಇತರೆ ಬೆಳೆ ಬೆಳೆಯುತ್ತಿದ್ದಾರೆ. ಕಳೆದ 6-7 ವರ್ಷಗಳ ಹಿಂದೆ ಪ್ರಾಯೋಗಿಕವಾಗಿ ಬೆಳೆಯಲು ಪ್ರಾರಂಭಿಸಿದ ರೈತರು, ವಾಣಿಜ್ಯ ಬೆಳೆ, ಸಾಂಬಾರು ಪದಾರ್ಥದಲ್ಲಿ ಪ್ರಮುಖವಾಗಿರುವ ಶುಂಠಿಬೆಳೆಗೆ ಹೆಚ್ಚು ಒತ್ತು ನೀಡಿದ್ದಾರೆ.

ಶುಂಠಿ ಬೆಳೆ ಬೆಳೆಯಲು ಪ್ರಥಮ ಬಾರಿಗೆ ಕೈ ಹಾಕಿದ್ದೇನೆ. 1 ಎಕರೆಗೆ ಶುಂಠಿ ಬೀಜ, ಉಳುಮೆ, ಬಿತ್ತನೆ, ಕೊಟ್ಟಿಗೆ ಗೊಬ್ಬರ, ಕ್ರಿಮಿನಾಶಕ ಸೇರಿ 60 ಸಾವಿರ ರೂ.ವೆಚ್ಚವಾಗಿದೆ. ನಿರೀಕ್ಷೆ ಮೀರಿ ಶುಂಠಿ ಬೆಳೆ ಬರುತ್ತದೆ ಎಂದು ಭಾವಿಸಿದ್ದೇನೆ. 2ಲಕ್ಷ ರೂ.ಲಾಭ ಬರುವ ಸಾಧ್ಯತೆ ಇದೆ. ಎಸ್‌.ಪಿ.ಮುನಿರಾಜು, ಶುಂಠಿ ಬೆಳೆಗಾರ, ಸಾವಕನಹಳ್ಳಿ ಎಂಪಿಸಿಎಸ್‌ ಅಧ್ಯಕ್ಷ

ರೈತರು ತಾವು ಯಾವ ಬೆಳೆ ಬೆಳೆಯುತ್ತೇವೆಂಬುವುದರ ಬಗ್ಗೆ ತೋಟಗಾರಿಕಾಇಲಾಖೆಯಿಂದ ಮಾಹಿತಿ ನೀಡುತ್ತೇವೆ. ಶುಂಠಿ ಫಸಲು ಉತ್ತಮವಾಗಿ ಬೆಳವಣಿಗೆ ಕಾಣುತ್ತಿದೆ. ಈ ಬೆಳೆಗೆ ಬರುವ ರೋಗ ನಿವಾರಣೆಗೆ ಆಯಾ ತಾಲೂಕಿನ ತೋಟಗಾರಿಕೆ ಅಧಿಕಾರಿಗಳನ್ನುಸಂಪರ್ಕಿಸಿ ಮಾಹಿತಿ ಪಡೆಯಬಹುದು. ಮಹಂತೇಶ್‌ ಮುರುಗೋಡ್‌, ಜಿಲ್ಲಾ ತೋಟಗಾರಿಕಾ ಇಲಾಖೆ ಉಪನಿರ್ದೇಶಕ

 

ಎಸ್‌.ಮಹೇಶ್‌

ಟಾಪ್ ನ್ಯೂಸ್

1-weweew

Congress; ತಮ್ಮ ಆಸ್ತಿ ಉಳಿಕೆಗೆ ರಾಜೀವ್‌ರಿಂದ ಉತ್ತರಾಧಿಕಾರ ಕಾಯ್ದೆ ರದ್ದು: ಪಿಎಂ

yogi-3

Congress ಬಂದರೆ ತಾಲಿಬಾನ್‌ ಶೈಲಿ ಆಡಳಿತ: ಯೋಗಿ

supreem

WhatsApp ಮೂಲಕ ವಕೀಲರಿಗೆ ಎಲ್ಲ ಮಾಹಿತಿ: ಸುಪ್ರೀಂ ಕೋರ್ಟ್‌

jairam ramesh

Wealth redistribution ಬಗ್ಗೆ ಕೈ ಪ್ರಣಾಳಿಕೆಯಲ್ಲಿ ಎಲ್ಲಿದೆ?: ಜೈರಾಂ

1-wqewq-eqw

Modi ಕೈ ಬಲಪಡಿಸಲು, ದ.ಕ. ಸಮಗ್ರ ಸುಧಾರಣೆಗಾಗಿ ಬಿಜೆಪಿಗೆ ಮತ ನೀಡಿ: ಚೌಟ

1-asasas

Naxal ಬಾಧಿತ ಮತಗಟ್ಟೆಗಳ ಭದ್ರತೆಗೆ ಹೆಚ್ಚುವರಿ ಆದ್ಯತೆ: ಮುಲ್ಲೈ ಮುಗಿಲನ್‌

D. K. Shivakumar: ಡೆತ್‌, ಬರ್ತ್‌ ಯಾವ ಟ್ಯಾಕ್ಸೂ ಇಲ್ಲ; ಡಿಕೆಶಿ

D. K. Shivakumar: ಡೆತ್‌, ಬರ್ತ್‌ ಯಾವ ಟ್ಯಾಕ್ಸೂ ಇಲ್ಲ; ಡಿಕೆಶಿ


ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು

ಬೇಸಿಗೆ ಬಿಸಿಯೂಟ: 32,173 ಮಕ್ಕಳ ನೋಂದಣಿ

ಬೇಸಿಗೆ ಬಿಸಿಯೂಟ: 32,173 ಮಕ್ಕಳ ನೋಂದಣಿ

Devanahalli: ಬೇಸಿಗೆ ತಾಪಮಾನ ಹೆಚ್ಚಳ, ಇರಲಿ ಎಚ್ಚರ

Devanahalli: ಬೇಸಿಗೆ ತಾಪಮಾನ ಹೆಚ್ಚಳ, ಇರಲಿ ಎಚ್ಚರ

Doddaballapur: ಜಾತೀಯತೆಗೆ ಮಣೆ ಹಾಕದ ಕ್ಷೇತ್ರದ ‌ಮತದಾರರು

Doddaballapur: ಜಾತೀಯತೆಗೆ ಮಣೆ ಹಾಕದ ಕ್ಷೇತ್ರದ ‌ಮತದಾರರು

Lok Sabha polls: ಲೋಕಸಭೆ ಚುನಾವಣೆಯಲ್ಲಿ ಇಂದಿರಾಗಾಂಧಿ ನೆನಪು

Lok Sabha polls: ಲೋಕಸಭೆ ಚುನಾವಣೆಯಲ್ಲಿ ಇಂದಿರಾಗಾಂಧಿ ನೆನಪು

10

Electricity problem: ಬೇಸಿಗೆ ಬೆನ್ನಲ್ಲೇ ಕಾಡುತ್ತಿದೆ ವಿದ್ಯುತ್‌ ಸಮಸ್ಯೆ

MUST WATCH

udayavani youtube

ವೈಭವದ ಹಿರಿಯಡ್ಕ ಸಿರಿಜಾತ್ರೆ ಸಂಪನ್ನ

udayavani youtube

ಯಾವೆಲ್ಲಾ ಚರ್ಮದ ಕಾಯಿಲೆಗಳಿವೆ ಹಾಗೂ ಪರಿಹಾರಗಳೇನು?

udayavani youtube

Mangaluru ಹೆಬ್ಬಾವಿನ ದೇಹದಲ್ಲಿ ಬರೋಬ್ಬರಿ 11 ಬುಲೆಟ್‌ ಪತ್ತೆ!

udayavani youtube

ನನ್ನ ಕಥೆ ನಿಮ್ಮ ಜೊತೆ

udayavani youtube

‘ಕಸಿ’ ಕಟ್ಟುವ ಸುಲಭ ವಿಧಾನ

ಹೊಸ ಸೇರ್ಪಡೆ

1-weweew

Congress; ತಮ್ಮ ಆಸ್ತಿ ಉಳಿಕೆಗೆ ರಾಜೀವ್‌ರಿಂದ ಉತ್ತರಾಧಿಕಾರ ಕಾಯ್ದೆ ರದ್ದು: ಪಿಎಂ

yogi-3

Congress ಬಂದರೆ ತಾಲಿಬಾನ್‌ ಶೈಲಿ ಆಡಳಿತ: ಯೋಗಿ

supreem

WhatsApp ಮೂಲಕ ವಕೀಲರಿಗೆ ಎಲ್ಲ ಮಾಹಿತಿ: ಸುಪ್ರೀಂ ಕೋರ್ಟ್‌

jairam ramesh

Wealth redistribution ಬಗ್ಗೆ ಕೈ ಪ್ರಣಾಳಿಕೆಯಲ್ಲಿ ಎಲ್ಲಿದೆ?: ಜೈರಾಂ

1-wqewq-eqw

Modi ಕೈ ಬಲಪಡಿಸಲು, ದ.ಕ. ಸಮಗ್ರ ಸುಧಾರಣೆಗಾಗಿ ಬಿಜೆಪಿಗೆ ಮತ ನೀಡಿ: ಚೌಟ

Thanks for visiting Udayavani

You seem to have an Ad Blocker on.
To continue reading, please turn it off or whitelist Udayavani.