ರೈತರ ಅಹೋರಾತ್ರಿ ಧರಣಿಗೆ ಬಿಎಸ್ಪಿ ಬೆಂಬಲ


Team Udayavani, Jun 13, 2022, 3:08 PM IST

Untitled-1

ವಿಜಯಪುರ: ರೈತರು ಭೂಸ್ವಾಧೀನ ಪ್ರಕ್ರಿಯೆ ವಿರೋಧಿಸಿ ನಡೆಸುತ್ತಿರುವ ಅಹೋರಾತ್ರಿ ಧರಣಿಗೆ ಬಿಎಸ್‌ಪಿ ಪಕ್ಷದಿಂದ ಬೆಂಬಲ ವ್ಯಕ್ತಪಡಿಸಿ, ಹೋರಾಟ ನಡೆಸಿದರು.

ಬಿಎಸ್ಪಿ ಪಕ್ಷದ ರಾಜ್ಯ ಮುಖಂಡ ಆರ್‌. ಮುನಿ ಯಪ್ಪ ಮಾತನಾಡಿ, ಬೆಂಗಳೂರು ಹಾಗೂ ಅಂತಾರಾಷ್ಟ್ರೀಯ ವಿಮಾನ ನಿಲ್ದಾಣಕ್ಕೆ ಹತ್ತಿರವಾಗಿದೆ ಎನ್ನುವ ಕಾರಣದಿಂದ ಸರ್ಕಾರ, ನೀರಾವರಿಯಿಂದ ಸಂಪದ್ಭರಿತವಾಗಿರುವ ಭೂಮಿಯನ್ನು ಸ್ವಾಧೀನ ಪಡಿಸಿಕೊಳ್ಳಲಿಕ್ಕೆ ಮುಂದಾಗಿದ್ದಾರೆ. ಇದರಲ್ಲಿ ಬಹು ತೇಕ ರಾಜಕಾರಣಿಗಳೇ ಕೆಐಎಡಿಬಿಯ ಮೂಲಕ ಬಂಡವಾಳ ಹೂಡಿಕೆ ಮಾಡಿಕೊಂಡಿದ್ದಾರೆ. ಇದ ರಿಂದ ಅವರಿಗೆ ಮುಂದಿನ ದಿನಗಳಲ್ಲಿ ಹೆಚ್ಚು ಲಾಭದಾಯಕ ಆಗಲಿರುವ ಕಾರಣಕ್ಕಾಗಿ ರೈತರು ಹೋರಾಟ ನಡೆಸುತ್ತಿದ್ದರೂ, ಅವರು ಈ ಕಡೆಗೆ ಸುಳಿದಿಲ್ಲ ಎಂದು ಆರೋಪಿಸಿದರು.

ರೈತರು ಒಗ್ಗಟ್ಟು ಕಾಪಾಡಿಕೊಳ್ಳಬೇಕು. ಯಾವುದೇ ಕಾರಣಕ್ಕೂ ಒಂದಿಂಚು ಭೂಮಿಯನ್ನು ಬಿಟ್ಟುಕೊಡಲಿಕ್ಕೆ ಮುಂದಾಗಬಾರದು. ಹಿಂದೆ ಭೂಮಿಯನ್ನು ಕೊಟ್ಟಿರುವವರ ಸ್ಥಿತಿಗತಿ ಏನಾಗಿವೆ ಎನ್ನುವುದನ್ನು ಗಮನಿಸಿಕೊಳ್ಳಬೇಕು ಎಂದರು.

ರಾಜ್ಯ ಮುಖಂಡ ನರಸಿಂಹಯ್ಯ ಮಾತನಾಡಿ, ರಾಜ್ಯ ಸರ್ಕಾರ, ಕೆಐಎಡಿಬಿ ಮುಂದಿಟ್ಟುಕೊಂಡು ರೈತರನ್ನು ಒಕ್ಕಲೆಬ್ಬಿಸುತ್ತಿದೆ. ತಾಲೂಕಿನಲ್ಲಿ ರೈತರ ಭೂಮಿಯನ್ನು ಕೈಗಾರಿಕಾ ವಲಯವನ್ನಾಗಿ ಮಾಡುವ ಮುನ್ನಾ ಶಾಸನ ಸಭೆಯಲ್ಲಿ ಚರ್ಚೆ ನಡೆ ಯುತ್ತದೆ. ಈ ಸಮಯದಲ್ಲಿ ಸ್ಥಳೀಯ ಶಾಸಕರಿಗೆ ಮಾಹಿತಿ ಇದ್ದರೂ ಕೂಡಾ, ರಿಯಲ್‌ ಎಸ್ಟೇಟ್‌ ಉದ್ಯಮದಲ್ಲಿ ತೊಡಗಿಸಿ ಕೊಂಡಿರುವ ಅವರೂ ಕೂಡಾ ಇದಕ್ಕೆ ಒಪ್ಪಿಗೆ ಸೂಚಿಸಿರುವ ಕಾರಣದಿಂದ ರಾಜ್ಯಪತ್ರದಲ್ಲಿ ಕೈಗಾರಿಕೆ ಪ್ರದೇಶವೆಂದು ಗುರುತಿಸ ಲಾಗಿದೆ ಎಂದರು.

 ಭೂಮಿ ಬಿಟ್ಟು ಕೊಡುವುದಿಲ್ಲ: ಈಗ ರೈತರ ಬಳಿ ಯಲ್ಲಿ ಬಂದು ಮೊಸಳೆ ಕಣ್ಣೀರು ಸುರಿಸುತ್ತಿದ್ದಾರೆ. ಅವರೂ ಕೂಡಾ ಸಾಕಷ್ಟು ಬಂಡ ವಾಳ ಹೂಡಿಕೆ ಮಾಡಲಿಕ್ಕೆ ಮುಂದಾಗಿದ್ದು, ಶೇ.80 ರಷ್ಟು ರೈತರು ಭೂಮಿ ಕೊಡಲಿಕ್ಕೆ ಮುಂದಾಗಿದ್ದಾರೆ ಎಂದು ಹೇಳಿಕೆ ನೀಡುವ ಮೂಲಕ ರೈತರಲ್ಲಿ ಆತ್ಮಸ್ಥೈರ್ಯ ಕುಗ್ಗಿ ಸುವಂತಹ ಮಾತುಗಳನ್ನಾಡಿದ್ದಾರೆ. ನಾವು ಯಾವುದೇ ಕಾರಣಕ್ಕೂ ರೈತರ ಒಂದಿಂಚು ಭೂಮಿ ಯನ್ನು ಬಿಟ್ಟು ಕೊಡುವುದಿಲ್ಲ. ನಮ್ಮ ಹೋರಾಟ ರೈತರಿಗೆ ನ್ಯಾಯ ಸಿಗುವ ತನಕ ನಡೆಯಲಿದೆ ಎಂದು ಹೇಳಿದರು.

ದೃತಿಗೆಡುವುದು ಬೇಡ: ಜಿಲ್ಲಾ ಮುಖಂಡ ತಿಮ್ಮ ರಾಯಪ್ಪ ಮಾತನಾಡಿ, ರೈತರು ಒಗ್ಗಟ್ಟು ಕಾಪಾಡಿ ಕೊಂಡರೆ ಸರ್ಕಾರವನ್ನು ನಡುಗಿಸುವಂತಹ ಶಕ್ತಿ ರೈತರಿಗಿದೆ. ರೈತರ ಪರವಾದ ನಮ್ಮ ಹೋರಾಟ ತೀವ್ರವಾಗಲಿದೆ. ಮುಖ್ಯಮಂತ್ರಿಯ ಮನೆಗೆ ಮುತ್ತಿಗೆ ಹಾಕಲಿಕ್ಕೂ ಕೂಡಾ ನಾವು ಸಿದ್ಧರಾಗಿದ್ದೇವೆ. ರೈತರು ದೃತಿಗೆಡುವುದು ಬೇಡ. ಸರ್ಕಾರಕ್ಕೆ ಪಾಠ ಕಲಿಸಬೇಕಾ ಗಿದೆ ಎಂದರು.

ರಾಜ್ಯ ಮುಖಂಡ ನಂದಿಗುಂದ ವೆಂಕ ಟೇಶ್‌, ತಾಲೂಕು ಅಧ್ಯಕ್ಷ ಬಂಗಾರಪ್ಪ, ಮುಖಂಡ ನಾರಾ ಯಣಸ್ವಾಮಿ, ನರಸಿಂಹರಾಜು, ಲಕ್ಷ್ಮೀಶ್‌ ರೈತ ಮುಖಂಡ ಸಿ.ಕೆ.ರಾಮಚಂದ್ರಪ್ಪ, ನಲ್ಲಪ್ಪನಹಳ್ಳಿ ನಂಜಪ್ಪ, ಕಾರಹಳ್ಳಿ ಶ್ರೀನಿವಾಸ್‌, ಮಾರೇಗೌಡ, ವೆಂಕ ಟರಮಣಪ್ಪ, ನಂಜೇಗೌಡ, ಅಶ್ವಥಪ್ಪ, ಮುಕುಂದ್‌, ಲಕ್ಷ್ಮಮ್ಮ, ಮಾರುತೇಶ್‌, ಮೋಹನ್‌ ಕುಮಾರ್‌ ಹಾಗೂ ರೈತ ಮುಖಂಡರು ಇದ್ದರು.

ಟಾಪ್ ನ್ಯೂಸ್

Politics: ನಾನು ಮನಸ್ಸು ಮಾಡಿದರೆ ರೆಡ್ಡಿಯನ್ನು ಬೆತ್ತಲೆ ನಿಲ್ಲಿಸುತ್ತೇನೆ; ಸಚಿವ ತಂಗಡಗಿ

Politics: ನಾನು ಮನಸ್ಸು ಮಾಡಿದರೆ ರೆಡ್ಡಿಯನ್ನು ಬೆತ್ತಲೆ ನಿಲ್ಲಿಸುತ್ತೇನೆ; ಸಚಿವ ತಂಗಡಗಿ

Sumalatha Ambareesh: ಟ್ವೀಟ್‌ನಲ್ಲಿ ಸಂಸದೆ ಸುಮಲತಾ ಅಂಬರೀಶ್‌ ವಿವೇಕದ ಪಾಠ

Sumalatha Ambareesh: ಟ್ವೀಟ್‌ನಲ್ಲಿ ಸಂಸದೆ ಸುಮಲತಾ ಅಂಬರೀಶ್‌ ವಿವೇಕದ ಪಾಠ

1-WQEWQEWQ

Eshwarappa ಅವರಿಂದ ನಾನೇನು ಕಲಿಯಬೇಕಾಗಿಲ್ಲ: ಗೀತಾ ಶಿವರಾಜ್ ಕುಮಾರ್

Vijayendra (2)

PM ಮೋದಿಯವರಿಂದ ಏ.28 ಮತ್ತು 29 ರಂದು 5 ಕಡೆ ಪ್ರಚಾರ: ವಿಜಯೇಂದ್ರ ಮಾಹಿತಿ

Lokayukta

Bellary; ಲೋಕಾಯುಕ್ತ ಬಲೆಗೆ ಬಿದ್ದ 6 ಮಂದಿ ಭ್ರಷ್ಟ ಅಧಿಕಾರಿಗಳು: ಲಕ್ಷ ಲಕ್ಷ ರೂ. ಲಂಚ!

Lok Sabha Election: ಮೋದಿಗೆ ಮತ ಕೇಳುವ ಹಕ್ಕಿಲ್ಲ: ಸಿದ್ದರಾಮಯ್ಯ

Lok Sabha Election: ಮೋದಿಗೆ ಮತ ಕೇಳುವ ಹಕ್ಕಿಲ್ಲ: ಸಿದ್ದರಾಮಯ್ಯ

1-asaa

Heart beats; ಭಾರತದ ಹೃದಯ ಪಾಕಿಸ್ಥಾನದ ಯುವತಿಗೆ ಹೊಸ ಜೀವನ ನೀಡಿತು..


ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು

ಬೇಸಿಗೆ ಬಿಸಿಯೂಟ: 32,173 ಮಕ್ಕಳ ನೋಂದಣಿ

ಬೇಸಿಗೆ ಬಿಸಿಯೂಟ: 32,173 ಮಕ್ಕಳ ನೋಂದಣಿ

Devanahalli: ಬೇಸಿಗೆ ತಾಪಮಾನ ಹೆಚ್ಚಳ, ಇರಲಿ ಎಚ್ಚರ

Devanahalli: ಬೇಸಿಗೆ ತಾಪಮಾನ ಹೆಚ್ಚಳ, ಇರಲಿ ಎಚ್ಚರ

Doddaballapur: ಜಾತೀಯತೆಗೆ ಮಣೆ ಹಾಕದ ಕ್ಷೇತ್ರದ ‌ಮತದಾರರು

Doddaballapur: ಜಾತೀಯತೆಗೆ ಮಣೆ ಹಾಕದ ಕ್ಷೇತ್ರದ ‌ಮತದಾರರು

Lok Sabha polls: ಲೋಕಸಭೆ ಚುನಾವಣೆಯಲ್ಲಿ ಇಂದಿರಾಗಾಂಧಿ ನೆನಪು

Lok Sabha polls: ಲೋಕಸಭೆ ಚುನಾವಣೆಯಲ್ಲಿ ಇಂದಿರಾಗಾಂಧಿ ನೆನಪು

10

Electricity problem: ಬೇಸಿಗೆ ಬೆನ್ನಲ್ಲೇ ಕಾಡುತ್ತಿದೆ ವಿದ್ಯುತ್‌ ಸಮಸ್ಯೆ

MUST WATCH

udayavani youtube

ವೈಭವದ ಹಿರಿಯಡ್ಕ ಸಿರಿಜಾತ್ರೆ ಸಂಪನ್ನ

udayavani youtube

ಯಾವೆಲ್ಲಾ ಚರ್ಮದ ಕಾಯಿಲೆಗಳಿವೆ ಹಾಗೂ ಪರಿಹಾರಗಳೇನು?

udayavani youtube

Mangaluru ಹೆಬ್ಬಾವಿನ ದೇಹದಲ್ಲಿ ಬರೋಬ್ಬರಿ 11 ಬುಲೆಟ್‌ ಪತ್ತೆ!

udayavani youtube

ನನ್ನ ಕಥೆ ನಿಮ್ಮ ಜೊತೆ

udayavani youtube

‘ಕಸಿ’ ಕಟ್ಟುವ ಸುಲಭ ವಿಧಾನ

ಹೊಸ ಸೇರ್ಪಡೆ

IPL: ಎಲ್ಲೆ ಮೀರಿ ವಿಕೆಟ್‌ ಸಂಭ್ರಮಾಚರಣೆಡೆಲ್ಲಿ ವೇಗಿ ರಸಿಕ್‌ ಸಲಾಂಗೆ ಛೀಮಾರಿ

IPL: ಎಲ್ಲೆ ಮೀರಿ ವಿಕೆಟ್‌ ಸಂಭ್ರಮಾಚರಣೆಡೆಲ್ಲಿ ವೇಗಿ ರಸಿಕ್‌ ಸಲಾಂಗೆ ಛೀಮಾರಿ

IPL: ಇಂಪ್ಯಾಕ್ಟ್ ಪ್ಲೇಯರ್‌ ನಿಯಮಕ್ಕೆ ಅಕ್ಷರ್‌ ಪಟೇಲ್‌ ಕೂಡ ವಿರೋಧ

IPL: ಇಂಪ್ಯಾಕ್ಟ್ ಪ್ಲೇಯರ್‌ ನಿಯಮಕ್ಕೆ ಅಕ್ಷರ್‌ ಪಟೇಲ್‌ ಕೂಡ ವಿರೋಧ

Politics: ನಾನು ಮನಸ್ಸು ಮಾಡಿದರೆ ರೆಡ್ಡಿಯನ್ನು ಬೆತ್ತಲೆ ನಿಲ್ಲಿಸುತ್ತೇನೆ; ಸಚಿವ ತಂಗಡಗಿ

Politics: ನಾನು ಮನಸ್ಸು ಮಾಡಿದರೆ ರೆಡ್ಡಿಯನ್ನು ಬೆತ್ತಲೆ ನಿಲ್ಲಿಸುತ್ತೇನೆ; ಸಚಿವ ತಂಗಡಗಿ

Sumalatha Ambareesh: ಟ್ವೀಟ್‌ನಲ್ಲಿ ಸಂಸದೆ ಸುಮಲತಾ ಅಂಬರೀಶ್‌ ವಿವೇಕದ ಪಾಠ

Sumalatha Ambareesh: ಟ್ವೀಟ್‌ನಲ್ಲಿ ಸಂಸದೆ ಸುಮಲತಾ ಅಂಬರೀಶ್‌ ವಿವೇಕದ ಪಾಠ

12

B.S.Yediyurappa: ಶಾಸಕ ಪ್ರಭು ಚವ್ಹಾಣ ಹೆಸರು ಹೇಳುತ್ತಿದ್ದಂತೆ ಬಿಎಸ್‌ವೈ ಗರಂ

Thanks for visiting Udayavani

You seem to have an Ad Blocker on.
To continue reading, please turn it off or whitelist Udayavani.