ಕೆಐಎಡಿಬಿ ವಿರುದ್ಧ ಕಾನೂನು ಹೋರಾಟಕ್ಕೆ ಸಿದ್ದರಾದ ರೈತರು


Team Udayavani, Apr 24, 2022, 1:09 PM IST

Untitled-1

ನೆಲಮಂಗಲ: ರೈತರ ಭೂಮಿಯನ್ನು ಕಸಿದು ಕೊಂಡು ಅಧಿಕಾರಿಗಳ ಇಚ್ಛೆಯಂತೆ ಎಕರೆಗೆ 90 ಲಕ್ಷ ನಿಗದಿ ಮಾಡಿ ಭೂ ಮಾಲೀಕರಿಗೆ ಅನ್ಯಾಯ ಮಾಡುತ್ತಿದ್ದಾರೆ. ರೈತರ ಭೂಮಿಯ ದರ ಮರು ನಿಗಧಿಯಾಗಬೇಕು ಎಂದು ಭೂಮಿ ಕಳೆದುಕೊಳ್ಳುತ್ತಿರುವ ರೈತರು ಕೆಐಎಡಿಬಿ ವಿರುದ್ಧ ನ್ಯಾಯಾಲಯದ ಮೆಟ್ಟಿಲು ಏರಲು ಸಿದ್ಧರಾಗಿದ್ದಾರೆ.

ತಾಲೂಕಿನ ತ್ಯಾಮಗೊಂಡ್ಲು ಹೋಬಳಿ ಓಬಳಾಪುರ ಕೈಗಾರಿಕಾ ಪ್ರದೇಶ ಎಂದು ಗುರುತಿಸಿ ಸುತ್ತಲಿನ ಐದಾರು ಹಳ್ಳಿಗಳ 879 ಎಕರೆ ಭೂಮಿ ಸ್ವಾಧೀನಪಡಿಸಿಕೊಳ್ಳಲು ರೈತರಿಗೆ ನೋಟಿಸ್‌ ನೀಡಲಾಗುತ್ತಿದೆ. ಇದರ ವಿರುದ್ಧ ಈಗಾಗಲೇ ನಾಲ್ಕು ಬಾರಿ ರೈತರು ರಸ್ತೆ ತಡೆದು ಗ್ರಾಮದಲ್ಲಿ ದರ ಮರು ನಿಗದಿ ಮಾಡುವಂತೆ ಪ್ರತಿಭಟಿಸಿದ್ದರು. ಅಧಿಕಾರಿಗಳು ಯಾವುದೇ ರೀತಿಯಲ್ಲಿಯೂ ಪ್ರತಿಕ್ರಿಯಿಸಿಲ್ಲ. ಇಂದಿನ ನಮ್ಮ ಭೂಮಿಗೆ ಸರ್ಕಾರಿ ಬೆಲೆ ಅಡಿಯಲ್ಲಿ 1.40 ಕೋಟಿ ರೂ. ಹಣವನ್ನು ನೀಡಬೇಕಾಗು ತ್ತದೆ. ಆದ್ದರಿಂದ, ಸೂಕ್ತ ಬೆಲೆ ನಿಗದಿ ಮಾಡಬೇಕು. ಇಲ್ಲವಾದಲ್ಲಿ ನಾವು ಕೋರ್ಟ್‌ ಮೊರೆ ಹೋಗುತ್ತೇವೆ ಎಂದು ಗ್ರಾಮಸ್ಥರು ಓಬಳಾಪುರ ಗ್ರಾಮದ ಗಂಗಸಂದ್ರಮ್ಮ ದೇವಾಲಯ ಆವರಣದಲ್ಲಿ ನಡೆದ ಸಭೆಯಲ್ಲಿ ಕಟ್ಟುನಿಟ್ಟಾಗಿ ನಿರ್ಧರಿಸಿದ್ದಾರೆ.

ಗ್ರಾಮಸ್ಥರ ಆರೋಪ: ಓಬಳಾಪುರ ಗ್ರಾಮ ದಲ್ಲಿ ಹಾದು ಹೋಗಿರುವ ರಾಷ್ಟ್ರೀಯ ಹೆದ್ದಾರಿ 207ರ ರಸ್ತೆ ಅಗಲೀಕರಣಕ್ಕೆ ಭೂ ಸ್ವಾಧೀನ ಪಡಿಸಿಕೊಂಡಿದ್ದು, ಎಕರೆಗೆ ಉಪನೋಂದಣಿ ಇಲಾಖೆಯ ಸರ್ಕಾರಿ ಬೆಲೆಯಲ್ಲಿ ನೀಡಿದ್ದಾರೆ. ಅಡಕೆ, ತೆಂಗು ಮರಗಳಿಗೆ 8000 ದಿಂದ 18000 ಸಾವಿರ ರೂ.ವರೆಗೂ ಪರಿಹಾರ ನೀಡಿದ್ದಾರೆ. ಆದರೆ, ಕೆಐಎಡಿಬಿಯವರು ಹಣ ಮಾಡಲು ರೈತರ ಭೂಮಿಯನ್ನು ಕೊಳ್ಳೆ ಹೊಡೆಯುತ್ತಿದ್ದಾರೆ ಎಂದು ಗ್ರಾಮಸ್ಥರು ಆರೋಪಿಸಿದರು.

ಶಾಸಕರ ವಿರುದ್ಧ ಅಸಮಾಧಾನ: ನೆಲ ಮಂಗಲ ಶಾಸಕ ಡಾ.ಕೆ.ಶ್ರೀನಿವಾಸಮೂರ್ತಿ ಸ್ವಗ್ರಾಮದಲ್ಲೇ 500 ಎಕರೆ ಭೂಮಿ ಕಳೆದುಕೊಳ್ಳುತ್ತಿರುವ ರೈತರ ಪರವಾಗಿ ನಿಂತು ಪರಿಹಾರ ಕೊಡಿಸಲು ವಿಫಲರಾಗಿದ್ದಾರೆ. ಗ್ರಾಮದಲ್ಲಿ ಈ ಸಂಬಂಧವಾಗಿ ನಡೆಯುವ ಯಾವುದೇ ಸಭೆಗಳಿಗೆ ಬರುವುದಿಲ್ಲ. ಅಧಿಕಾರಿಗಳ ಜೊತೆಯಲ್ಲಿ ಚರ್ಚಿಸುತ್ತಿಲ್ಲ. ಸದನದಲ್ಲಿ ಈ ವಿಚಾರವಾಗಿ ಪ್ರಶ್ನೆ ಮಾಡುತ್ತೇನೆ ಎಂದವರು ಎಲ್ಲಿ ಹೋದರು. ಇವರಿಂದ ಗ್ರಾಮಕ್ಕೆ ಯಾವುದೇ ಅನುಕೂಲಗಳಿಲ್ಲ ಎಂದು ರೈತರು ಅಸಮಾಧಾನ ವ್ಯಕ್ತಪಡಿಸಿದರು.

ಕಾನೂನು ಹೋರಾಟದ ಎಚ್ಚರಿಕೆ: ಓಬಳಾಪುರ ಗ್ರಾಮದ ಮುಖಂಡ ವಕೀಲ ಹನುಮಂತೇಗೌಡ ಮಾತನಾಡಿ, ನಮ್ಮ ಗ್ರಾಮದಲ್ಲಿ ಅಡಕೆ, ತೆಂಗು ಮಾವು ಮತ್ತು ಕೋಳಿ ಸಾಕಾಣಿಕೆಯಿಂದ ಜೀವನ ನಡೆಸುತ್ತಿರುವ ರೈತರು ಸಾಕಷ್ಟು ಮಂದಿ ಇದ್ದಾರೆ. ಭೂಸ್ವಾಧೀನ ವಿರೋಧಿಸಿ ಆಕ್ಷೇಪಣೆ ಸಲ್ಲಿಸಿದರೂ, ಯಾವುದೇ ಪ್ರಯೋಜನ ಆಗಿಲ್ಲ. ನಮ್ಮ ಭೂಮಿಗೆ ಸೂಕ್ತವಾದ ಬೆಲೆ ನೀಡಬೇಕು. ಇಲ್ಲವಾದ್ದಲ್ಲಿ ನ್ಯಾಯಾಲಯದ ಮೊರೆ ಹೋಗಿ ಕಾನೂನು ಹೋರಾಟ ಮಾಡಬೇಕಾಗುತ್ತದೆ ಎಂದು ಎಚ್ಚರಿಸಿದ್ದಾರೆ.

ಗ್ರಾಮದ ಮುಖಂಡ ವಿಜಯಣ್ಣ ಕಾರಾಳಪ್ಪ, ಶಂಕರಪ್ಪ, ಹನುಮಂತರಾಜು, ಮಹಿಮಣ್ಣ, ಟಿಎಪಿಎಂಸಿ ಅದ್ಯಕ್ಷ ಗುರುಪ್ರಕಾಶ್‌, ಗ್ರಾಪಂ ಸದಸ್ಯ ಶ್ರೀಧರ್‌, ಸೋಮಶೇಖರ್‌, ಬಾಬು, ರಂಗನಾಥ್‌ ಹಾಗೂ ಗ್ರಾಮಸ್ಥರು ಇದ್ದರು.

ಟಾಪ್ ನ್ಯೂಸ್

ಅನಂತಸ್ವಾಮಿ ಧಾಟಿಯಲ್ಲೇ ನಾಡಗೀತೆ; ರಾಜ್ಯ ಸರಕಾರದ ಆದೇಶ ಎತ್ತಿಹಿಡಿದ ಹೈಕೋರ್ಟ್‌

ಅನಂತಸ್ವಾಮಿ ಧಾಟಿಯಲ್ಲೇ ನಾಡಗೀತೆ; ರಾಜ್ಯ ಸರಕಾರದ ಆದೇಶ ಎತ್ತಿಹಿಡಿದ ಹೈಕೋರ್ಟ್‌

ಕೈಗೆ ಪಿತ್ರೋಡಾರ್ಜಿತ ಸಂಕಟ! ಬಿಜೆಪಿಗೆ ಸಿಕ್ಕಿದ ಹೊಸ ಅಸ್ತ್ರ ; ಕಂಗೆಟ್ಟ ಕಾಂಗ್ರೆಸ್‌

ಕೈಗೆ ಪಿತ್ರೋಡಾರ್ಜಿತ ಸಂಕಟ! ಬಿಜೆಪಿಗೆ ಸಿಕ್ಕಿದ ಹೊಸ ಅಸ್ತ್ರ ; ಕಂಗೆಟ್ಟ ಕಾಂಗ್ರೆಸ್‌

Today World Malaria Day; ಕರಾವಳಿಯಲ್ಲಿ ಇಳಿಕೆಯಾಗುತ್ತಿದೆ ಮಲೇರಿಯಾ

Today World Malaria Day; ಕರಾವಳಿಯಲ್ಲಿ ಇಳಿಕೆಯಾಗುತ್ತಿದೆ ಮಲೇರಿಯಾ

Exam; ದ್ವಿತೀಯ ಪಿಯು ವಾರ್ಷಿಕ ಪರೀಕ್ಷೆ-2ಕ್ಕೆ 1.49 ಲಕ್ಷ ವಿದ್ಯಾರ್ಥಿಗಳ ನೋಂದಣಿ

Exam; ದ್ವಿತೀಯ ಪಿಯು ವಾರ್ಷಿಕ ಪರೀಕ್ಷೆ-2ಕ್ಕೆ 1.49 ಲಕ್ಷ ವಿದ್ಯಾರ್ಥಿಗಳ ನೋಂದಣಿ

ಹಿಂದುತ್ವಕ್ಕೆ ಬದ್ಧತೆ, ಸಮಗ್ರ ಅಭಿವೃದ್ಧಿಗೆ ಆದ್ಯತೆ: ಕ್ಯಾಪ್ಟನ್‌ ಬ್ರಿಜೇಶ್‌ ಚೌಟ

ಹಿಂದುತ್ವಕ್ಕೆ ಬದ್ಧತೆ, ಸಮಗ್ರ ಅಭಿವೃದ್ಧಿಗೆ ಆದ್ಯತೆ: ಕ್ಯಾಪ್ಟನ್‌ ಬ್ರಿಜೇಶ್‌ ಚೌಟ

ಕೋಮುಸೂಕ್ಷ್ಮ ಹಣೆಪಟ್ಟಿ ಕಳಚಿ, ಅಭಿವೃದ್ಧಿಗಾಗಿ ಕಾಂಗ್ರೆಸ್‌ ಬೆಂಬಲಿಸಿ: ಪದ್ಮರಾಜ್‌ ಪೂಜಾರಿ

ಕೋಮುಸೂಕ್ಷ್ಮ ಹಣೆಪಟ್ಟಿ ಕಳಚಿ, ಅಭಿವೃದ್ಧಿಗಾಗಿ ಕಾಂಗ್ರೆಸ್‌ ಬೆಂಬಲಿಸಿ: ಪದ್ಮರಾಜ್‌ ಪೂಜಾರಿ

ಕೆಂಪಡಿಕೆ ಧಾರಣೆ ಏರಿಕೆ; ಚಾಲಿ ಅಡಿಕೆಗೂ ಬೇಡಿಕೆ: ಚುನಾವಣೆ ಬಳಿಕ ಮತ್ತಷ್ಟು ಹೆಚ್ಚಳ ಸಾಧ್ಯತೆ

ಕೆಂಪಡಿಕೆ ಧಾರಣೆ ಏರಿಕೆ; ಚಾಲಿ ಅಡಿಕೆಗೂ ಬೇಡಿಕೆ: ಚುನಾವಣೆ ಬಳಿಕ ಮತ್ತಷ್ಟು ಹೆಚ್ಚಳ ಸಾಧ್ಯತೆ


ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು

ಬೇಸಿಗೆ ಬಿಸಿಯೂಟ: 32,173 ಮಕ್ಕಳ ನೋಂದಣಿ

ಬೇಸಿಗೆ ಬಿಸಿಯೂಟ: 32,173 ಮಕ್ಕಳ ನೋಂದಣಿ

Devanahalli: ಬೇಸಿಗೆ ತಾಪಮಾನ ಹೆಚ್ಚಳ, ಇರಲಿ ಎಚ್ಚರ

Devanahalli: ಬೇಸಿಗೆ ತಾಪಮಾನ ಹೆಚ್ಚಳ, ಇರಲಿ ಎಚ್ಚರ

Doddaballapur: ಜಾತೀಯತೆಗೆ ಮಣೆ ಹಾಕದ ಕ್ಷೇತ್ರದ ‌ಮತದಾರರು

Doddaballapur: ಜಾತೀಯತೆಗೆ ಮಣೆ ಹಾಕದ ಕ್ಷೇತ್ರದ ‌ಮತದಾರರು

Lok Sabha polls: ಲೋಕಸಭೆ ಚುನಾವಣೆಯಲ್ಲಿ ಇಂದಿರಾಗಾಂಧಿ ನೆನಪು

Lok Sabha polls: ಲೋಕಸಭೆ ಚುನಾವಣೆಯಲ್ಲಿ ಇಂದಿರಾಗಾಂಧಿ ನೆನಪು

10

Electricity problem: ಬೇಸಿಗೆ ಬೆನ್ನಲ್ಲೇ ಕಾಡುತ್ತಿದೆ ವಿದ್ಯುತ್‌ ಸಮಸ್ಯೆ

MUST WATCH

udayavani youtube

ವೈಭವದ ಹಿರಿಯಡ್ಕ ಸಿರಿಜಾತ್ರೆ ಸಂಪನ್ನ

udayavani youtube

ಯಾವೆಲ್ಲಾ ಚರ್ಮದ ಕಾಯಿಲೆಗಳಿವೆ ಹಾಗೂ ಪರಿಹಾರಗಳೇನು?

udayavani youtube

Mangaluru ಹೆಬ್ಬಾವಿನ ದೇಹದಲ್ಲಿ ಬರೋಬ್ಬರಿ 11 ಬುಲೆಟ್‌ ಪತ್ತೆ!

udayavani youtube

ನನ್ನ ಕಥೆ ನಿಮ್ಮ ಜೊತೆ

udayavani youtube

‘ಕಸಿ’ ಕಟ್ಟುವ ಸುಲಭ ವಿಧಾನ

ಹೊಸ ಸೇರ್ಪಡೆ

ಅನಂತಸ್ವಾಮಿ ಧಾಟಿಯಲ್ಲೇ ನಾಡಗೀತೆ; ರಾಜ್ಯ ಸರಕಾರದ ಆದೇಶ ಎತ್ತಿಹಿಡಿದ ಹೈಕೋರ್ಟ್‌

ಅನಂತಸ್ವಾಮಿ ಧಾಟಿಯಲ್ಲೇ ನಾಡಗೀತೆ; ರಾಜ್ಯ ಸರಕಾರದ ಆದೇಶ ಎತ್ತಿಹಿಡಿದ ಹೈಕೋರ್ಟ್‌

ಕೈಗೆ ಪಿತ್ರೋಡಾರ್ಜಿತ ಸಂಕಟ! ಬಿಜೆಪಿಗೆ ಸಿಕ್ಕಿದ ಹೊಸ ಅಸ್ತ್ರ ; ಕಂಗೆಟ್ಟ ಕಾಂಗ್ರೆಸ್‌

ಕೈಗೆ ಪಿತ್ರೋಡಾರ್ಜಿತ ಸಂಕಟ! ಬಿಜೆಪಿಗೆ ಸಿಕ್ಕಿದ ಹೊಸ ಅಸ್ತ್ರ ; ಕಂಗೆಟ್ಟ ಕಾಂಗ್ರೆಸ್‌

Today World Malaria Day; ಕರಾವಳಿಯಲ್ಲಿ ಇಳಿಕೆಯಾಗುತ್ತಿದೆ ಮಲೇರಿಯಾ

Today World Malaria Day; ಕರಾವಳಿಯಲ್ಲಿ ಇಳಿಕೆಯಾಗುತ್ತಿದೆ ಮಲೇರಿಯಾ

Exam; ದ್ವಿತೀಯ ಪಿಯು ವಾರ್ಷಿಕ ಪರೀಕ್ಷೆ-2ಕ್ಕೆ 1.49 ಲಕ್ಷ ವಿದ್ಯಾರ್ಥಿಗಳ ನೋಂದಣಿ

Exam; ದ್ವಿತೀಯ ಪಿಯು ವಾರ್ಷಿಕ ಪರೀಕ್ಷೆ-2ಕ್ಕೆ 1.49 ಲಕ್ಷ ವಿದ್ಯಾರ್ಥಿಗಳ ನೋಂದಣಿ

ಹಿಂದುತ್ವಕ್ಕೆ ಬದ್ಧತೆ, ಸಮಗ್ರ ಅಭಿವೃದ್ಧಿಗೆ ಆದ್ಯತೆ: ಕ್ಯಾಪ್ಟನ್‌ ಬ್ರಿಜೇಶ್‌ ಚೌಟ

ಹಿಂದುತ್ವಕ್ಕೆ ಬದ್ಧತೆ, ಸಮಗ್ರ ಅಭಿವೃದ್ಧಿಗೆ ಆದ್ಯತೆ: ಕ್ಯಾಪ್ಟನ್‌ ಬ್ರಿಜೇಶ್‌ ಚೌಟ

Thanks for visiting Udayavani

You seem to have an Ad Blocker on.
To continue reading, please turn it off or whitelist Udayavani.