ರಾಗಿ ಖರೀದಿ ಕೇಂದ್ರದಲ್ಲಿ ನೂಕು ನುಗ್ಗಲು


Team Udayavani, Apr 26, 2022, 2:42 PM IST

Untitled-1

ದೊಡ್ಡಬಳ್ಳಾಪುರ: ನಗರದ ಎಪಿಎಂಸಿ ಆವರಣದಲ್ಲಿ ಆಹಾರ ಮಟ್ಟು ನಾಗರಿಕ ಸರಬರಾಜು ಇಲಾಖೆಯಿಂದ ಬೆಂಬಲ ಬೆಲೆಯಲ್ಲಿ ಖರೀದಿಸಲಾಗುವ ರಾಗಿ ಖರೀದಿ ನೋಂದಣಿ ಕೇಂದ್ರಕ್ಕೆ ಭಾನುವಾರ ರಾತ್ರಿಯಿಂದಲೇ ನೂರಾರು ರೈತರು ಆಗಮಿಸಿದ್ದರು. ಬೆಳಗಿನ ವೇಳೆಗೆ ನೂಕು ನುಗ್ಗಲು ಉಂಟಾಗಿ, ಪರಿಸ್ಥಿತಿ ನಿಭಾಯಿಸಲು ಪೊಲೀಸರು ಹರಸಾಹಸ ಪಡಬೇಕಾಯಿತು.

ರಾಜ್ಯ ಸರ್ಕಾರದ ಆದೇಶದಂತೆ ಜಿಲ್ಲೆಯಲ್ಲಿ 2021-22ನೇ ಸಾಲಿನ ಕನಿಷ್ಠ ಬೆಂಬಲ ಬೆಲೆ ಯೋಜನೆಯಡಿ ಜಿಲ್ಲೆಯ 6 ತಾಲೂಕುಗಳಲ್ಲಿ ರಾಗಿ ಖರೀದಿ ಕೇಂದ್ರಗಳನ್ನು ತೆರೆದು ನಿಯಮಾನುಸಾರ ಫ್ರೂಟ್ಸ್‌ ತಂತ್ರಾಶದಲ್ಲಿ ನೋಂದಾಯಿಸಿಕೊಂಡಿರುವ ರೈತರಿಂದ ರಾಗಿ ಖರೀದಿ ಮಾಡಲಾಗಿದೆ. ಕಳೆದ ಮಾರ್ಚ್‌ 31ರ ಅಂತ್ಯಕ್ಕೆ ಜಿಲ್ಲೆಯ 4,148 ರೈತರಿಂದ ಒಟ್ಟು 59,772.00 ಕ್ವಿಂಟಲ್‌ ರಾಗಿ ಖರೀದಿ ಮಾಡಲಾಗಿದೆ.

ಹೆಚ್ಚುವರಿ ರಾಗಿ ಖರೀದಿಸುವಂತಿಲ್ಲ: ರೈತರಿಂದ ಪ್ರತಿ ಎಕರೆಗೆ 10 ಕ್ವಿಂಟಲ್‌ನಂತೆ ಗರಿಷ್ಠ 20 ಕ್ವಿಂಟಲ್‌ವರೆಗೆ ಮಾತ್ರ ಖರೀದಿಸಲಾಗುವುದು. ಸರ್ಕಾರ ನಿಗದಿಪಡಿಸಿದ ಪ್ರಮಾಣವನ್ನು ಮೀರಿ ಹೆಚ್ಚುವರಿಯಾಗಿ ರಾಗಿಯನ್ನು ಖರೀದಿಸುವಂತಿಲ್ಲ ಎಂದು ಸೂಚನೆ ನೀಡಲಾಗಿದೆ. ರಾಗಿ ಖರೀದಿ ಕುರಿತಂತೆ ರಾಜ್ಯ ಸರ್ಕಾರ ಏ.19ರಂದು ಆದೇಶ ಹೊರಡಿಸಿದೆ.

ಈ ಆದೇಶದಂತೆ 2021-22ನೇ ಸಾಲಿನ ಮುಂಗಾರು ಹಂಗಾಮಿನಲ್ಲಿ ಕೇಂದ್ರ ಸರ್ಕಾರದ ಕನಿಷ್ಠ ಬೆಂಬಲ ಬೆಲೆ ಯೋಜನೆಯಡಿ ಈಗಾಗಲೇ ರಾಗಿ ಮಾರಾಟ ಮಾಡಿರುವ ರೈತರನ್ನು ಹೊರತುಪಡಿಸಿ, ಇನ್ನುಳಿದ ರಾಗಿ ಬೆಳೆದ ಅರ್ಹ ರೈತರಿಂದ ಪ್ರತಿ ಕ್ವಿಂಟಲ್‌ಗೆ 3377 ರೂ. ದರದಲ್ಲಿ ರಾಜ್ಯ ಸರ್ಕಾರವು ರಾಗಿ ನೋಂದಣಿ ಮತ್ತು ಖರೀದಿಗೆ ಅವಕಾಶ ನೀಡಿದೆ.

ಟೋಕನ್‌ ವ್ಯವಸ್ಥೆ ಜಾರಿ: ಸೋಮವಾರ ಬೆಳಗ್ಗೆ ಸಾವಿರಾರು ರೈತರು ಎಪಿಎಂಸಿ ಆವರಣಕ್ಕೆ ಆಗಮಿಸಿದ್ದರಿಂದ ನೂಕು ನುಗ್ಗಲು ಉಂಟಾಯಿತು. ಶಾಸಕ ಟಿ.ವೆಂಕಟರಮಣಯ್ಯ, ತಹಶೀಲ್ದಾರ್‌ ಮೋಹನ ಕುಮಾರಿ ಸ್ಥಳಕ್ಕೆ ಭೇಟಿ ನೀಡಿ, ರೈತರ ನೂಕು ನುಗ್ಗಲು ತಪ್ಪಿಸಲು ಟೋಕನ್‌ ವ್ಯವಸ್ಥೆ ಜಾರಿ ಮಾಡುವಂತೆ ಅಧಿಕಾರಿಗಳಿಗೆ ಸೂಚನೆ ನೀಡಿದರು. ಅದರಂತೆ ಎರಡು ಸಾವಿರ ರೈತರಿಗೆ ಟೋಕನ್‌ ನೀಡಲಾಗಿದ್ದು, ಮಂಗಳವಾರ ಒಂದು ಸಾವಿರ, ಬುಧವಾರ ಒಂದು ಸಾವಿರ ರೈತರಿಗೆ ಇಂಡೆಂಟ್‌ ನೀಡುವ ಪ್ರಕ್ರಿಯೆ ಜಾರಿಗೊಳಿಸಲಾಗಿದೆ ಎಂದು ಅಧಿಕಾರಿಗಳು ತಿಳಿಸಿದ್ದಾರೆ.

ರೈತರೊಂದಿಗೆ ರಸ್ತೆ ತಡೆ ನಡೆಸಿದ ಶಾಸಕ: ಭಾನುವಾರ ರಾತ್ರಿಯಿಂದಲೇ ಸಾವಿರಾರು ರೈತರು ಎಪಿಎಂಸಿಗೆ ಲಗ್ಗೆ ಹಾಕಿದ್ದರು. ಆದರೆ, ನೋಂದಣಿ ಪ್ರಕ್ರಿಯೆಗೆ ಸರ್ವರ್‌ ಓಪನ್‌ ಆಗದ ಹಿನ್ನೆಲೆಯಲ್ಲಿ ಮಧ್ಯಾಹ್ನದವರೆಗೂ ಪ್ರಯತ್ನ ನಡೆಸಿದ ಅಧಿಕಾರಿಗಳು, ಏ.28ರ ನಂತರ ನೋಂದಣಿ ಮಾಡುವುದಾಗಿ ತಿಳಿಸಿದರು. ಇದರಿಂದ ರೈತರು ಅಧಿಕಾರಿಗಳು ಹಾಗೂ ಸರ್ಕಾರದ ವಿರುದ್ಧ ಆಕ್ರೋಶ ವ್ಯಕ್ತಪಡಿಸಿದರು.

ರಾಗಿ ಖರೀದಿ ಪ್ರಕ್ರಿಯೆಯಲ್ಲಿ ಮತ್ತೆ ಗೊಂದಲ ಮುಂದುವರಿದಿದ್ದು, ಮಧ್ಯಾಹ್ನದವರೆಗೂ ಸಾಲುಗಟ್ಟಿ ನಿಂತರು ನೋಂದಣಿಯಾಗದ ಕಾರಣ ಬೇಸತ್ತ ರೈತರು, ಶಾಸಕ ಟಿ.ವೆಂಕಟರಮಣಯ್ಯ ನೇತೃತ್ವದಲ್ಲಿ ಎಪಿಎಂಸಿ ಮುಂಭಾಗದಲ್ಲಿ ರಸ್ತೆ ತಡೆ ನಡೆಸಿದರು. ಸಮರ್ಪಕವಾಗಿ ವ್ಯವಸ್ಥೆ ಮಾಡಿಕೊಳ್ಳದೆ ಖರೀದಿ ಮಾಡಲು ನೋಂದಣಿ ಮಾಡುವುದಾಗಿ ತಿಳಿಸಿ, ರೈತರ ಸಮಯವನ್ನು ವ್ಯರ್ಥ ಮಾಡುತ್ತಿರುವ ಸರ್ಕಾರದ ವಿರುದ್ಧ ಎಪಿಎಂಸಿ ಮುಂಭಾಗದಲ್ಲಿ ರಾಷ್ಟ್ರೀಯ ಹೆದ್ದಾರಿ ರಸ್ತೆಯಲ್ಲಿ ಪ್ರತಿಭಟನೆ ನಡೆಸಿದರು.

ವಿಷಯ ತಿಳಿದು ಸ್ಥಳಕ್ಕೆ ಆಗಮಿಸಿದ ತಹಶೀಲ್ದಾರ್‌ ಮೋಹನಕುಮಾರಿ ಮತ್ತು ಡಿವೈಎಸ್‌ಪಿ ನಾಗರಾಜ್‌ ಅವರು, ಶಾಸಕರು ಹಾಗೂ ರೈತರಿಗೆ ನೋಂದಣಿಗೆ ಎದುರಾದ ಸಮಸ್ಯೆಗಳನ್ನು ವಿವರಿಸಿ, ಪ್ರತಿಭಟನೆ ಹಿಂಪಡೆಯದಂತೆ ಮನವಿ ಮಾಡಿದರು.

ಟಾಪ್ ನ್ಯೂಸ್

Tragedy: ಛತ್ತೀಸ್‌ಗಢದಲ್ಲಿ ಭೀಕರ ಅಪಘಾತ… ಮಕ್ಕಳು ಸೇರಿ 8 ಮಂದಿ ಸಾವು, 22 ಮಂದಿಗೆ ಗಾಯ

Tragedy: ಛತ್ತೀಸ್‌ಗಢದಲ್ಲಿ ಭೀಕರ ಅಪಘಾತ… ಮಕ್ಕಳು ಸೇರಿ 8 ಮಂದಿ ಮೃತ್ಯು, 22 ಮಂದಿಗೆ ಗಾಯ

Untitled-1

MP Srinivas Prasad: ಚಾಮರಾಜನಗರ ಸಂಸದ ಶ್ರೀನಿವಾಸ್ ಪ್ರಸಾದ್ ನಿಧನ

Udupi-Chikmagalur ಲೋಕಸಭಾ ಕ್ಷೇತ್ರ: ಯಾರೇ ಗೆದ್ದರೂ ಸಣ್ಣ ಅಂತರದ ಗೆಲುವು ಸಾಧ್ಯತೆ

Udupi-Chikmagalur ಲೋಕಸಭಾ ಕ್ಷೇತ್ರ: ಯಾರೇ ಗೆದ್ದರೂ ಸಣ್ಣ ಅಂತರದ ಗೆಲುವು ಸಾಧ್ಯತೆ

HD Revanna, ಪ್ರಜ್ವಲ್‌ ಮೇಲೆ ಲೈಂಗಿಕ ದೌರ್ಜನ್ಯ ಕೇಸ್‌!

HD Revanna, ಪ್ರಜ್ವಲ್‌ ಮೇಲೆ ಲೈಂಗಿಕ ದೌರ್ಜನ್ಯ ಕೇಸ್‌!

CET ಮೌಲ್ಯಮಾಪನ: 50 ಪಠ್ಯೇತರ ಪ್ರಶ್ನೆಗೆ ಕೊಕ್‌; ಮರು ಪರೀಕ್ಷೆ ನಡೆಸದಿರಲು ನಿರ್ಧಾರ

CET ಮೌಲ್ಯಮಾಪನ: 50 ಪಠ್ಯೇತರ ಪ್ರಶ್ನೆಗೆ ಕೊಕ್‌; ಮರು ಪರೀಕ್ಷೆ ನಡೆಸದಿರಲು ನಿರ್ಧಾರ

1-qweqweqw

Chennai ಅಪಾರ್ಟ್‌ಮೆಂಟ್‌ನ ಟಿನ್ ರೂಫ್‌ನಲ್ಲಿ ಸಿಲುಕಿದ ಮಗುವಿನ ರೋಚಕ ರಕ್ಷಣೆ

1-weweqwe

Vande Bharat Metro ರೈಲು ಸೇವೆ ಜುಲೈಯಿಂದ ಶುರು? ವಿಶೇಷತೆಗಳೇನು?


ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು

8

Devanahalli: ಬೇಸಿಗೆ ಬಿಸಿ; ಹುರುಳಿಕಾಯಿ ದರ ದುಬಾರಿ

ಬೇಸಿಗೆ ಬಿಸಿಯೂಟ: 32,173 ಮಕ್ಕಳ ನೋಂದಣಿ

ಬೇಸಿಗೆ ಬಿಸಿಯೂಟ: 32,173 ಮಕ್ಕಳ ನೋಂದಣಿ

Devanahalli: ಬೇಸಿಗೆ ತಾಪಮಾನ ಹೆಚ್ಚಳ, ಇರಲಿ ಎಚ್ಚರ

Devanahalli: ಬೇಸಿಗೆ ತಾಪಮಾನ ಹೆಚ್ಚಳ, ಇರಲಿ ಎಚ್ಚರ

Doddaballapur: ಜಾತೀಯತೆಗೆ ಮಣೆ ಹಾಕದ ಕ್ಷೇತ್ರದ ‌ಮತದಾರರು

Doddaballapur: ಜಾತೀಯತೆಗೆ ಮಣೆ ಹಾಕದ ಕ್ಷೇತ್ರದ ‌ಮತದಾರರು

Lok Sabha polls: ಲೋಕಸಭೆ ಚುನಾವಣೆಯಲ್ಲಿ ಇಂದಿರಾಗಾಂಧಿ ನೆನಪು

Lok Sabha polls: ಲೋಕಸಭೆ ಚುನಾವಣೆಯಲ್ಲಿ ಇಂದಿರಾಗಾಂಧಿ ನೆನಪು

MUST WATCH

udayavani youtube

ವೈಭವದ ಹಿರಿಯಡ್ಕ ಸಿರಿಜಾತ್ರೆ ಸಂಪನ್ನ

udayavani youtube

ಯಾವೆಲ್ಲಾ ಚರ್ಮದ ಕಾಯಿಲೆಗಳಿವೆ ಹಾಗೂ ಪರಿಹಾರಗಳೇನು?

udayavani youtube

Mangaluru ಹೆಬ್ಬಾವಿನ ದೇಹದಲ್ಲಿ ಬರೋಬ್ಬರಿ 11 ಬುಲೆಟ್‌ ಪತ್ತೆ!

udayavani youtube

ನನ್ನ ಕಥೆ ನಿಮ್ಮ ಜೊತೆ

udayavani youtube

‘ಕಸಿ’ ಕಟ್ಟುವ ಸುಲಭ ವಿಧಾನ

ಹೊಸ ಸೇರ್ಪಡೆ

Tragedy: ಛತ್ತೀಸ್‌ಗಢದಲ್ಲಿ ಭೀಕರ ಅಪಘಾತ… ಮಕ್ಕಳು ಸೇರಿ 8 ಮಂದಿ ಸಾವು, 22 ಮಂದಿಗೆ ಗಾಯ

Tragedy: ಛತ್ತೀಸ್‌ಗಢದಲ್ಲಿ ಭೀಕರ ಅಪಘಾತ… ಮಕ್ಕಳು ಸೇರಿ 8 ಮಂದಿ ಮೃತ್ಯು, 22 ಮಂದಿಗೆ ಗಾಯ

Untitled-1

MP Srinivas Prasad: ಚಾಮರಾಜನಗರ ಸಂಸದ ಶ್ರೀನಿವಾಸ್ ಪ್ರಸಾದ್ ನಿಧನ

Udupi-Chikmagalur ಲೋಕಸಭಾ ಕ್ಷೇತ್ರ: ಯಾರೇ ಗೆದ್ದರೂ ಸಣ್ಣ ಅಂತರದ ಗೆಲುವು ಸಾಧ್ಯತೆ

Udupi-Chikmagalur ಲೋಕಸಭಾ ಕ್ಷೇತ್ರ: ಯಾರೇ ಗೆದ್ದರೂ ಸಣ್ಣ ಅಂತರದ ಗೆಲುವು ಸಾಧ್ಯತೆ

HD Revanna, ಪ್ರಜ್ವಲ್‌ ಮೇಲೆ ಲೈಂಗಿಕ ದೌರ್ಜನ್ಯ ಕೇಸ್‌!

HD Revanna, ಪ್ರಜ್ವಲ್‌ ಮೇಲೆ ಲೈಂಗಿಕ ದೌರ್ಜನ್ಯ ಕೇಸ್‌!

CET ಮೌಲ್ಯಮಾಪನ: 50 ಪಠ್ಯೇತರ ಪ್ರಶ್ನೆಗೆ ಕೊಕ್‌; ಮರು ಪರೀಕ್ಷೆ ನಡೆಸದಿರಲು ನಿರ್ಧಾರ

CET ಮೌಲ್ಯಮಾಪನ: 50 ಪಠ್ಯೇತರ ಪ್ರಶ್ನೆಗೆ ಕೊಕ್‌; ಮರು ಪರೀಕ್ಷೆ ನಡೆಸದಿರಲು ನಿರ್ಧಾರ

Thanks for visiting Udayavani

You seem to have an Ad Blocker on.
To continue reading, please turn it off or whitelist Udayavani.