ಕೋವಿಡ್ ಭೀತಿಗೆ ಗ್ರಾಮ ತೊರೆದ ರೈತರು

ಮನೆ ಅಕ್ಕಪಕ್ಕ ಕಂಟೈನ್ಮೆಂಟ್‌ ಘೋಷಿಸಿದರೆ ಕೃಷಿ ಕೆಲಸಕ್ಕೆ ಹೊಡೆತ; ಜಾನುವಾರುಗಳಿಗೂ ಸಂಕಷ್ಟ

Team Udayavani, Aug 7, 2020, 9:56 AM IST

ಕೋವಿಡ್ ಭೀತಿಗೆ ಗ್ರಾಮ ತೊರೆದ ರೈತರು

ದೊಡ್ಡಬಳ್ಳಾಪುರ: ಗ್ರಾಮಾಂತರ ಪ್ರದೇಶಕ್ಕೂ ಕೋವಿಡ್‌-19 ಹರಡುತ್ತಿರುವುದರಿಂದ ರೈತರ ಕೃಷಿ ಚಟುವಟಿಕೆ ಮೇಲೆ ಪರಿಣಾಮ ಬೀರುತ್ತಿದೆ. ಹೀಗಾಗಿ ಗ್ರಾಮಗಳನ್ನು ತೊರೆಯುತ್ತಿರುವ ರೈತರು, ಹೊಲಗಳಲ್ಲೇ ತಾತ್ಕಾಲಿಕವಾಗಿ ಗುಡಿಸಲುಗಳನ್ನು ನಿರ್ಮಿಸಿಕೊಂಡು ವಾಸ ಮಾಡಲು ಮುಂದಾಗಿದ್ದಾರೆ.

ತಾಲೂಕಿನ ಉಜ್ಜನಿ ಗ್ರಾಮ ತಾಲೂಕು ಕೇಂದ್ರದಿಂದ ಸುಮಾರು 25 ಕಿ.ಮೀ ದೂರದಲ್ಲಿದೆ. ಈ ಗ್ರಾಮದಲ್ಲಿ ಸುಮಾರು 100 ಕುಟುಂಬಗಳಿವೆ. ಇದರಲ್ಲಿ 40ಕ್ಕೂ ಹೆಚ್ಚಿನ ಕುಟುಂಬಗಳು, ಗ್ರಾಮವನ್ನು ತೊರೆದು ತಮ್ಮ ಹೊಲ, ತೋಟಗಳಲ್ಲೇ ತೆಂಗಿನ ಗರಿಗಳಿಂದ ತಾತ್ಕಾಲಿಕ ಗುಡಿಸಲು ನಿರ್ಮಿಸಿಕೊಂಡಿವೆ. ಅಲ್ಲದೇ, ಅಗತ್ಯಕ್ಕೆ ತಕ್ಕಷ್ಟು ಅಡುಗೆ ಪರಿಕರ, ದಿನಸಿ, ಬಟ್ಟೆಗಳನ್ನು ಮಾತ್ರ ಗ್ರಾಮದಲ್ಲಿನ ಮನೆಗಳಿಂದ ತೆಗೆದುಕೊಂಡು ಹೋಗಿದ್ದಾರೆ.

ಕೋವಿಡ್‌-19 ದೃಢಪಟ್ಟ ಮನೆಗಳ ಸುತ್ತ ಕಂಟೈನ್ಮೆಂಟ್‌ ಪ್ರದೇಶವನ್ನಾಗಿ ಮಾಡಲಾಗುತ್ತಿದೆ. ಇದರಿಂದ ಮನೆಯವರು ಎಲ್ಲೂ ಹೋಗಲು, ಯಾವುದೇ ರೀತಿಯ ದಿನ ನಿತ್ಯದ ಚಟುವಟಿಕೆಗಳಲ್ಲೂ ತೊಡಗಿಕೊಳ್ಳಲು ಸಾಧ್ಯವಾಗುವುದಿಲ್ಲ. ಗ್ರಾಮಗಳಲ್ಲಿನ ರೈತರು ಮನೆಯಲ್ಲಿನ ದನ, ಕರು, ಮೇಕೆಗಳಿಗೆ ಹೊಲಕ್ಕೆ ಹೋಗಿ ಮೇವುತಂದು ಹಾಕುವುದು ಕಷ್ಟವಾಗುತ್ತದೆ. ಈಗ, ಮುಂಗಾರು ಆರಂಭವಾಗಿದ್ದು ರಾಗಿ, ಜೋಳ ಬಿತ್ತನೆ ಮಾಡಲಾಗಿದೆ. ಗ್ರಾಮದಲ್ಲಿ ಯಾರಿಗಾದರೂ ಕೋವಿಡ್‌-19 ದೃಢಪಟ್ಟು, ಕಂಟೈನ್ಮೆಂಟ್‌ ವಲಯ ಘೋಷಿಸಿದರೆ ಕೃಷಿ ಕೆಲಸಗಳೇ ನಿಂತು ಹೋಗುತ್ತದೆ. ಹೀಗಾಗಿ ಕೋವಿಡ್ ಹಾವಳಿ ತಗ್ಗಿದ ನಂತರ ಗ್ರಾಮದಲ್ಲಿನ ಮನೆಗೆಮರುಳು ತ್ತೇವೆ ಎಂದು ಉಜ್ಜನಿ ಗ್ರಾಮದ ರೈತರಾದ ರಾಮಣ್ಣ, ಮುನಿ  ರಾಜಪ್ಪ ತಿಳಿಸಿದ್ದಾರೆ.

ಹೊಲದಲ್ಲಿದ್ದರೆ ಕೃಷಿ ಚಟುವಟಿಕೆಗೆ ಸಹಕಾರಿ :  ಈ ಹಿಂದೆ ಗ್ರಾಮದಲ್ಲಿ ಒಬ್ಬರಲ್ಲಿ ಕೊರೊನಾ ಸೋಂಕು ಇರುವುದು ತಿಳಿಯುತ್ತಿದ್ದಂತೆ ಇಡೀ ಬೀದಿಯನ್ನು ಬಂದ್‌ ಮಾಡಲಾಗಿತ್ತು. ಆ ಸಮಯದಲ್ಲಿ ಇನ್ನು ಮಳೆಗಾಲ ಆರಂಭವಾಗಿರಲಿಲ್ಲ. ಈಗ ಮಳೆಯಾಗುತ್ತಿದ್ದು ರಾಗಿ, ಜೋಳ ಬಿತ್ತನೆ ಮಾಡಲಾಗಿದೆ. ಕೊರೊನಾ ಹಾವಳಿ ಕಡಿಮೆಯಾಗುವವರೆಗೂ ಗ್ರಾಮದಲ್ಲಿನ ಮನೆಯಲ್ಲಿ ಇದ್ದು ಬಂಧಿಯಾಗುವುದಕ್ಕಿಂತಲೂ ಹೊಲದಲ್ಲಿಯೇ ತಾತ್ಕಾಲಿಕವಾಗಿ ಗುಡಿಸಲು ನಿರ್ಮಿಸಿಕೊಂಡಿದ್ದೇವೆ. ಇದರಿಂದ ಕೃಷಿ ಚಟುವಟಿಕೆಗಳಿಗೆ ಸಹಕಾರಿಯಾಗಿದೆ ಎಂದು ಉಜ್ಜನಿ ಗ್ರಾಮದ ರೈತ ರಾಮಣ್ಣ ತಿಳಿಸಿದ್ದಾರೆ.

ಟಾಪ್ ನ್ಯೂಸ್

Gadag Incident; ದರೋಡೆಯ ಉದ್ದೇಶವಿಲ್ಲ; ಕೊಲೆ ಮಾಡಲೆಂದೆ ಬಂದಿದ್ದಾರೆ; ಐಜಿಪಿ ಹೇಳಿಕೆ

Gadag Incident; ದರೋಡೆಯ ಉದ್ದೇಶವಿಲ್ಲ; ಕೊಲೆ ಮಾಡಲೆಂದೆ ಬಂದಿದ್ದಾರೆ; ಐಜಿಪಿ ಹೇಳಿಕೆ

Gujarat Lok Sabha Constituency: ಗುಜರಾತ್‌ ಎಂಬ ಕೇಸರಿ ಕೋಟೆಗೆ ಲಗ್ಗೆ ಸಾಧ್ಯವೇ?

Gujarat Lok Sabha Constituency: ಗುಜರಾತ್‌ ಎಂಬ ಕೇಸರಿ ಕೋಟೆಗೆ ಲಗ್ಗೆ ಸಾಧ್ಯವೇ?

Israel – Iran: ಕ್ಷಿಪಣಿ ದಾಳಿಯ ಮೂಲಕ ಸೇಡು ತೀರಿಸಿಕೊಂಡ ಇಸ್ರೇಲ್; ಎಚ್ಚರಿಕೆ ನೀಡಿದ ಇರಾನ್

Israel – Iran: ಕ್ಷಿಪಣಿ ದಾಳಿಯ ಮೂಲಕ ಸೇಡು ತೀರಿಸಿಕೊಂಡ ಇಸ್ರೇಲ್; ಎಚ್ಚರಿಕೆ ನೀಡಿದ ಇರಾನ್

4-gadaga

Gadaga ಹತ್ಯೆ ಪ್ರಕರಣ; ಆರೋಪಿಗಳ ಪತ್ತೆಗೆ ಪರಿಶೀಲನೆ ಮುಂದುವರೆದಿದೆ: ಗದಗ ಎಸ್‌ಪಿ

Vote: ದಾಖಲೆ ಸಂಖ್ಯೆಯಲ್ಲಿ ಮತ ಚಲಾಯಿಸಿ…: ಮತದಾರರಲ್ಲಿ ಮನವಿ ಮಾಡಿದ ಪ್ರಧಾನಿ ಮೋದಿ

Vote: ದಾಖಲೆ ಸಂಖ್ಯೆಯಲ್ಲಿ ಮತ ಚಲಾಯಿಸಿ…: ಮತದಾರರಲ್ಲಿ ಮನವಿ ಮಾಡಿದ ಪ್ರಧಾನಿ ಮೋದಿ

3-gadaga

Gadaga: ಒಂದೇ ಕುಟುಂಬದ ನಾಲ್ವರ ಭೀಕರ ಹತ್ಯೆ; ದುಷ್ಕರ್ಮಿಗಳು ಪರಾರಿ

Polls: ಇಂದು 102 ಕ್ಷೇತ್ರಗಳಲ್ಲಿ ಮೊದಲ ಹಂತದ ಮತದಾನ, ಮತದಾರರ ಕೈಯಲ್ಲಿ ಅಭ್ಯರ್ಥಿಗಳ ಭವಿಷ್ಯ

Polls: ಇಂದು 102 ಕ್ಷೇತ್ರಗಳಲ್ಲಿ ಮೊದಲ ಹಂತದ ಮತದಾನ, ಮತದಾರರ ಕೈಯಲ್ಲಿ ಅಭ್ಯರ್ಥಿಗಳ ಭವಿಷ್ಯ


ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು

ಬೇಸಿಗೆ ಬಿಸಿಯೂಟ: 32,173 ಮಕ್ಕಳ ನೋಂದಣಿ

ಬೇಸಿಗೆ ಬಿಸಿಯೂಟ: 32,173 ಮಕ್ಕಳ ನೋಂದಣಿ

Devanahalli: ಬೇಸಿಗೆ ತಾಪಮಾನ ಹೆಚ್ಚಳ, ಇರಲಿ ಎಚ್ಚರ

Devanahalli: ಬೇಸಿಗೆ ತಾಪಮಾನ ಹೆಚ್ಚಳ, ಇರಲಿ ಎಚ್ಚರ

Doddaballapur: ಜಾತೀಯತೆಗೆ ಮಣೆ ಹಾಕದ ಕ್ಷೇತ್ರದ ‌ಮತದಾರರು

Doddaballapur: ಜಾತೀಯತೆಗೆ ಮಣೆ ಹಾಕದ ಕ್ಷೇತ್ರದ ‌ಮತದಾರರು

Lok Sabha polls: ಲೋಕಸಭೆ ಚುನಾವಣೆಯಲ್ಲಿ ಇಂದಿರಾಗಾಂಧಿ ನೆನಪು

Lok Sabha polls: ಲೋಕಸಭೆ ಚುನಾವಣೆಯಲ್ಲಿ ಇಂದಿರಾಗಾಂಧಿ ನೆನಪು

10

Electricity problem: ಬೇಸಿಗೆ ಬೆನ್ನಲ್ಲೇ ಕಾಡುತ್ತಿದೆ ವಿದ್ಯುತ್‌ ಸಮಸ್ಯೆ

MUST WATCH

udayavani youtube

‘ಕಸಿ’ ಕಟ್ಟುವ ಸುಲಭ ವಿಧಾನ

udayavani youtube

ಬೇಸಿಗೆಯಲ್ಲಿ ನಮ್ಮನ್ನು ಕಾಡುವ Heat Illnessಏನಿದು ಸಮಸ್ಯೆ ? ಪರಿಹಾರವೇನು ?

udayavani youtube

ದ್ವಾರಕೀಶ್ ನಿಧನಕ್ಕೆ ನಟ ಶಿವರಾಜ್ ಕುಮಾರ್ ಸಂತಾಪ

udayavani youtube

ದೇವೇಗೌಡರಿದ್ದ ವೇದಿಕೆಗೆ ನುಗ್ಗಿದ ಕಾಂಗ್ರೆಸ್‌ ಕಾರ್ಯಕರ್ತೆಯರು

udayavani youtube

ಮಂಗಳೂರಿನಲ್ಲಿ ಪ್ರಧಾನಿ ಶ್ರೀ Narendra Modi ಅವರ ಬೃಹತ್‌ ರೋಡ್‌ ಶೋ

ಹೊಸ ಸೇರ್ಪಡೆ

Gadag Incident; ದರೋಡೆಯ ಉದ್ದೇಶವಿಲ್ಲ; ಕೊಲೆ ಮಾಡಲೆಂದೆ ಬಂದಿದ್ದಾರೆ; ಐಜಿಪಿ ಹೇಳಿಕೆ

Gadag Incident; ದರೋಡೆಯ ಉದ್ದೇಶವಿಲ್ಲ; ಕೊಲೆ ಮಾಡಲೆಂದೆ ಬಂದಿದ್ದಾರೆ; ಐಜಿಪಿ ಹೇಳಿಕೆ

5-congress

Udupi-ಚಿಕ್ಕಮಗಳೂರಿನಲ್ಲಿ ಬಿಜೆಪಿಗರೂ ಜೆಪಿ-ಜೆಪಿ ಎನ್ನುತ್ತಿದ್ದಾರೆ: ನಿಕೇತ್‌ರಾಜ್‌ ಮೌರ್ಯ

Food Safety: ಆಹಾರ ಸುರಕ್ಷೆ- ನೂರು ಪ್ರತಿಶತ ಖಾತರಿ ಅಗತ್ಯ‌

Food Safety: ಆಹಾರ ಸುರಕ್ಷೆ- ನೂರು ಪ್ರತಿಶತ ಖಾತರಿ ಅಗತ್ಯ‌

Gujarat Lok Sabha Constituency: ಗುಜರಾತ್‌ ಎಂಬ ಕೇಸರಿ ಕೋಟೆಗೆ ಲಗ್ಗೆ ಸಾಧ್ಯವೇ?

Gujarat Lok Sabha Constituency: ಗುಜರಾತ್‌ ಎಂಬ ಕೇಸರಿ ಕೋಟೆಗೆ ಲಗ್ಗೆ ಸಾಧ್ಯವೇ?

Lok Sabha Election: ಮಠಾಧೀಶರ ಆಶೀರ್ವಾದ ಪಡೆದ ಬಿಜೆಪಿ ಅಭ್ಯರ್ಥಿ ಗಾಯಿತಿ ಸಿದ್ದೇಶ್ವರ

Lok Sabha Election: ಮಠಾಧೀಶರ ಆಶೀರ್ವಾದ ಪಡೆದ ಬಿಜೆಪಿ ಅಭ್ಯರ್ಥಿ ಗಾಯತ್ರಿ ಸಿದ್ದೇಶ್ವರ

Thanks for visiting Udayavani

You seem to have an Ad Blocker on.
To continue reading, please turn it off or whitelist Udayavani.