ಬೆಲೆ ಏರಿಕೆಗೆ ಗ್ರಾಹಕರು ಕಂಗಾಲು


Team Udayavani, Oct 24, 2020, 2:30 PM IST

br-tdy-1

ಹೊಸಕೋಟೆ: ವಿಜಯದಶಮಿ ಆಚರಣೆಗೆ ಬೆಲೆ ಏರಿಕೆಯ ಬಿಸಿ ತಟ್ಟಿದೆ. ಗೌರಿ ಗಣೇಶ ಹಬ್ಬಕ್ಕೆ ಹೋಲಿಸಿದಲ್ಲಿ ಕೆಲವು ಹೂಗಳ ಬೆಲೆಯಲ್ಲಿ ಗಣನೀಯ ಪ್ರಮಾಣದಲ್ಲ ಏರಿಕೆಯಾಗಿರುವ ಕಾರಣ ವಹಿವಾಟು ಕುಂಠಿತ ಗೊಂಡಿದ್ದು, ವ್ಯಾಪಾರಿಗಳಿಗೂ ನಿರಾಸೆಯಾಗಿದೆ.

ನಿರಂತರವಾಗಿ ಮಳೆಯಾಗುತ್ತಿರುವ ಕಾರಣಹೂಗಳನ್ನು ಹೆಚ್ಚು ಕಾಲ ಶೇಖರಣೆ ಮಾಡಿದಲ್ಲಿ ಹಾಳಾಗುವ ಸಾಧ್ಯತೆಯಿಂದ ವ್ಯಾಪಾರಿಗಳು ಕಡಿಮೆ ಪ್ರಮಾಣದಲ್ಲಿ ಮಾರಾಟ ಮಾಡಿ ನಷ್ಟ ನಿವಾರಿಸಿಕೊಳ್ಳಬೇಕಿದೆ.

ಆದಾಯ ಕುಂಠಿತಗೊಂಡಿರುವ ಕಾರಣ ಗ್ರಾಹಕರು ಸಹ ಹಬ್ಬದ ಆಚರಣೆಗೆನಿರ್ಬಂಧಗಳನ್ನು ವಿಧಿಸಿಕೊಂಡು ಸರಳವಾಗಿ ಆಚರಿಸಲು ನಿರ್ಧರಿಸಿರುವುದು ವ್ಯಾಪಾರದ ಮೇಲೆ ಪರಿಣಾಮ ಬೀರಲು ಕಾರಣವಾಗಿದೆ. ಸಿಹಿ ತಿನಿಸುಗಳ ಮಾರಾಟಗಾರರುಆಯುಧಪೂಜೆಗಾಗಿ ರಿಯಾಯಿತಿ ದರ ಪ್ರಕಟಿಸಿದರೂ ಗ್ರಾಹಕರಿಂದ ನಿರೀಕ್ಷಿತ ಪ್ರತಿಕ್ರಿಯೆ ವ್ಯಕ್ತವಾಗುತ್ತಿಲ್ಲ.

ಹೂ (ದರ ಪ್ರತಿ ಕೆಜಿಗೆ): ಕನಕಾಂಬರ 1,000 ರೂ., ಮಲ್ಲಿಗೆ, ಕಾಕಡ 1,200 ರೂ., ಮೇರಿಗೋಲ್ಡ್‌ 240 ರೂ., ಬಿಳಿ, ಹಳದಿ ಶ್ಯಾಮಂತಿಗೆ 160 ರೂ., ರೋಸ್‌ 260 ರೂ., ಚೆಂಡು, 80 ರೂ.ಗಳಂತೆ ಮಾರಾಟವಾಗುತ್ತಿದೆ.

ಹಣ್ಣುಗಳು: ದಾಳಿಂಬೆ, ಸೀತಾಫ‌ಲ, ಸೇಬು 100 ರೂ., ಏಲಕ್ಕಿ ಬಾಳೆಹಣ್ಣು 80 ರೂ., ಫೈನಾಪಲ್‌ 2ಕ್ಕೆ 50 ರೂ., ಸಾಮಾನ್ಯ ಗಾತ್ರದ ಬಾಳೆ ಕಂದು 50 ರೂ.ಗಳಾಗಿತ್ತು.

ದಸರಾ: ಬೆಲೆ ಏರಿಕೆ ಬಿಸಿ :

ದೊಡ್ಡಬಳ್ಳಾಪುರ: ಈ ಬಾರಿ ಹಬ್ಬ ಉತ್ಸವಗಳಿಗೆ ಕೋವಿಡ್ ಕಂಕಟವಿದ್ದರೂ, ಹೂ, ಹಣ್ಣು, ಬಾಳೆಕಂದು, ಬೂದು ಕುಂಬಳ ಸೇರಿದಂತೆ ಅಗತ್ಯ ವಸ್ತುಗಳ ಬೆಲೆಗಳು ದುಬಾರಿಯಾಗಿವೆ.

ತಾಲೂಕಿನಲ್ಲಿ ಆಯುಧ ಪೂಜೆ, ವಿಜಯದಶಮಿ ಹಬ್ಬಕ್ಕೆ ಸ್ವಾಗತ ನಡೆದಿದ್ದು,ನಗರದ ಮಾರುಕಟ್ಟೆ ಪ್ರದೇಶದಲ್ಲಿಅಂಗಡಿಗಳು ಹಬ್ಬಕ್ಕೆಂದೇ ತೆರೆದಿವೆ. ಆದರೆ,ಹೂ, ಬೂದು ಕುಂಬಳದ ಬೆಲೆ ಗಗನಕ್ಕೇರಿವೆ. ಬೂದು ಕುಂಬಳಕಾಯಿಕೆಜಿಗೆ 30ರಿಂದ 40ರೂ ಇದೆ. ಕಾಕಡ, ಮಳ್ಳೆ ಹೂವಿನ ಬೆಲೆ ಕೆ.ಜಿಗೆ 700ರಿಂದ 800 ರೂ. ವರೆಗಿದ್ದರೆ, ಕನಕಾಂಬರ 1,400ರೂ. ಶಾಮಂತಿಗೆ, ಬಟನ್ಸ್‌ , ಗುಲಾಬಿ ಮೊದಲಾದ ಹೂವಿನ ಬೆಲೆಗಳು ಕೆ.ಜಿಗೆ 200 ದಾಟಿವೆ. ಬಾಳೆ ಹಣ್ಣು ಕೆಜಿಗೆ 30 ರಿಂದ 80ರೂ, ಸೇರಿದಂತೆ ಇತರಹಣ್ಣುಗಳ ಬೆಲೆಗಳೂ ಕೆಜಿಗೆ ಶೇ.20 ರಿಂದ 30 ರಷ್ಟು ಹೆಚ್ಚಾಗಿವೆ. ಬಾಳೆಕಂದುಗಳ ಬೆಲೆ ಸಹ ಹೆಚ್ಚಾಗಿದ್ದು, ಆಯುಧ ಪೂಜೆಗಾಗಿ ಮಗ್ಗಗಳು ಯಂತ್ರಗಳು, ವಾಹನಗಳುಮೊದಲಾದವುಗಳನ್ನು ಶುದ್ದ ಮಾಡಿ ಪೂಜೆಗೆ ಅಣಿ ಮಾಡಿಕೊಳ್ಳುತ್ತಿರುವ ದೃಶ್ಯ ಸಾಮಾನ್ಯವಾಗಿತ್ತು.

ಕಳೆದ ಒಂದು ವಾರದಿಂದ ತಾಲೂಕಿನಲ್ಲಿ ಬೀಳುತ್ತಿದ್ದು, ಹೂವುಗಳ ತೇವಾಂಶ ಹೆಚ್ಚಾಗಿ ಸಹಜವಾಗಿ ಬೆಲೆಗಳು ಹೆಚ್ಚಾಗಿವೆ. ಕೊರೊನಾದಿಂದ ನೇಕಾರಿಕೆ ಉದ್ಯಮ ಕುಸಿದಿದ್ದು, ಕೃಷಿ ಚಟುವಟಿಕೆಗಳು ಚೇತರಿಸಿಕೊಳ್ಳಬೇಕಿದೆ.

ಈ ನಡುವೆ ಈ ವರ್ಷ ಕೋವಿಡ್ ಕಂಟಕ ಎದುರಾಗಿದೆ. ಎಲ್ಲದಕ್ಕೂ ಬೆಲೆದುಬಾರಿಯಾಗಿವೆ. ಬೆಲೆ ಏರಿಕೆನೋಡಿದರೆ, ಹಬ್ಬ ಮಾಡಲು ಉತ್ಸಾಹ ಇಲ್ಲದಿದ್ದರೂ, ಹಿಂದಿನಿಂದಲೂ ಆಚರಿಸುತ್ತಿರುವ ಹಬ್ಬಗಳನ್ನು ಆಚರಿಸಲೇಬೇಕಲ್ಲ ಎನ್ನುತ್ತಾರೆ ಬಹುಪಾಲು ಸಾರ್ವಜನಿಕರು

ಟಾಪ್ ನ್ಯೂಸ್

Road Mishap; ಪಡುಬಿದ್ರಿ: ವಿದ್ಯುತ್ ಕಂಬಕ್ಕೆ ಕಾರು ಢಿಕ್ಕಿ: ಮಹಿಳೆ ಸಾವು

Road Mishap; ಪಡುಬಿದ್ರಿ: ವಿದ್ಯುತ್ ಕಂಬಕ್ಕೆ ಕಾರು ಢಿಕ್ಕಿ: ಮಹಿಳೆ ಸಾವು

Sringeri Sharadamba Temple; ಪ್ರಧಾನಿ ಮೋದಿ ಹೆಸರಲ್ಲಿ ಸಹಸ್ರನಾಮ ಪೂಜೆ

Sringeri Sharadamba Temple; ಪ್ರಧಾನಿ ಮೋದಿ ಹೆಸರಲ್ಲಿ ಸಹಸ್ರನಾಮ ಪೂಜೆ

Mangaluru: ಸಂಪರ್ಕ ಸೇತುವೆ ಇಲ್ಲದೆ ಬೋಟ್ ಮೂಲಕ ಬಂದು ಮತ ಚಲಾಯಿಸಿದ ಜನ

Mangaluru: ಸಂಪರ್ಕ ಸೇತುವೆ ಇಲ್ಲದೆ ಬೋಟ್ ಮೂಲಕ ಬಂದು ಮತ ಚಲಾಯಿಸಿದ ಜನ

INDIA ಒಕ್ಕೂಟ ಅಧಿಕಾರಕ್ಕೆ ಬಂದರೆ ರೈತರ ಸಾಲಮನ್ನಾ, ನಿರುದ್ಯೋಗ ನಿವಾರಣೆಗೆ ಆದ್ಯತೆ: ರಾಹುಲ್

INDIA ಒಕ್ಕೂಟ ಅಧಿಕಾರಕ್ಕೆ ಬಂದರೆ ರೈತರ ಸಾಲಮನ್ನಾ, ನಿರುದ್ಯೋಗ ನಿವಾರಣೆಗೆ ಆದ್ಯತೆ: ರಾಹುಲ್

Lok Sabha Polls: ಧರ್ಮಸ್ಥಳದಲ್ಲಿ ಧರ್ಮಾಧಿಕಾರಿ ಡಾ.ಡಿ.ವೀರೇಂದ್ರ ಹೆಗ್ಗಡೆ ಮತದಾನ

Lok Sabha Polls: ಧರ್ಮಸ್ಥಳದಲ್ಲಿ ಧರ್ಮಾಧಿಕಾರಿ ಡಾ.ಡಿ.ವೀರೇಂದ್ರ ಹೆಗ್ಗಡೆ ಮತದಾನ

WhatsApp ಭಾರತದಲ್ಲಿ ಸ್ಥಗಿತಗೊಳಿಸ್ತೇವೆ; ಹೈಕೋರ್ಟ್‌ ಮೆಟ್ಟಿಲೇರಿದ ಪ್ರಕರಣ, ಏನಿದು?

WhatsApp ಭಾರತದಲ್ಲಿ ಸ್ಥಗಿತಗೊಳಿಸ್ತೇವೆ; ಹೈಕೋರ್ಟ್‌ ಮೆಟ್ಟಿಲೇರಿದ ಪ್ರಕರಣ, ಏನಿದು?

Eletion: ತೀರ್ಥಹಳ್ಳಿಯಲ್ಲಿ ಪ್ರಚಾರದ ವೇಳೆ ತಮಿಳಿನಲ್ಲೆ ಮಾತನಾಡಿದ ನಟ ಶಿವರಾಜ್ ಕುಮಾರ್

Eletion: ತೀರ್ಥಹಳ್ಳಿಯಲ್ಲಿ ಪ್ರಚಾರದ ವೇಳೆ ತಮಿಳಿನಲ್ಲೆ ಮಾತನಾಡಿದ ನಟ ಶಿವರಾಜ್ ಕುಮಾರ್


ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು

ಬೇಸಿಗೆ ಬಿಸಿಯೂಟ: 32,173 ಮಕ್ಕಳ ನೋಂದಣಿ

ಬೇಸಿಗೆ ಬಿಸಿಯೂಟ: 32,173 ಮಕ್ಕಳ ನೋಂದಣಿ

Devanahalli: ಬೇಸಿಗೆ ತಾಪಮಾನ ಹೆಚ್ಚಳ, ಇರಲಿ ಎಚ್ಚರ

Devanahalli: ಬೇಸಿಗೆ ತಾಪಮಾನ ಹೆಚ್ಚಳ, ಇರಲಿ ಎಚ್ಚರ

Doddaballapur: ಜಾತೀಯತೆಗೆ ಮಣೆ ಹಾಕದ ಕ್ಷೇತ್ರದ ‌ಮತದಾರರು

Doddaballapur: ಜಾತೀಯತೆಗೆ ಮಣೆ ಹಾಕದ ಕ್ಷೇತ್ರದ ‌ಮತದಾರರು

Lok Sabha polls: ಲೋಕಸಭೆ ಚುನಾವಣೆಯಲ್ಲಿ ಇಂದಿರಾಗಾಂಧಿ ನೆನಪು

Lok Sabha polls: ಲೋಕಸಭೆ ಚುನಾವಣೆಯಲ್ಲಿ ಇಂದಿರಾಗಾಂಧಿ ನೆನಪು

10

Electricity problem: ಬೇಸಿಗೆ ಬೆನ್ನಲ್ಲೇ ಕಾಡುತ್ತಿದೆ ವಿದ್ಯುತ್‌ ಸಮಸ್ಯೆ

MUST WATCH

udayavani youtube

ವೈಭವದ ಹಿರಿಯಡ್ಕ ಸಿರಿಜಾತ್ರೆ ಸಂಪನ್ನ

udayavani youtube

ಯಾವೆಲ್ಲಾ ಚರ್ಮದ ಕಾಯಿಲೆಗಳಿವೆ ಹಾಗೂ ಪರಿಹಾರಗಳೇನು?

udayavani youtube

Mangaluru ಹೆಬ್ಬಾವಿನ ದೇಹದಲ್ಲಿ ಬರೋಬ್ಬರಿ 11 ಬುಲೆಟ್‌ ಪತ್ತೆ!

udayavani youtube

ನನ್ನ ಕಥೆ ನಿಮ್ಮ ಜೊತೆ

udayavani youtube

‘ಕಸಿ’ ಕಟ್ಟುವ ಸುಲಭ ವಿಧಾನ

ಹೊಸ ಸೇರ್ಪಡೆ

ಗದಗ: ತೋಟದಾರ್ಯ ಮಠ ಅನ್ನ-ಅಕ್ಷರ ದಾಸೋಹಕ್ಕೆ ಪ್ರಸಿದ್ಧ

ಗದಗ: ತೋಟದಾರ್ಯ ಮಠ ಅನ್ನ-ಅಕ್ಷರ ದಾಸೋಹಕ್ಕೆ ಪ್ರಸಿದ್ಧ

Road Mishap; ಪಡುಬಿದ್ರಿ: ವಿದ್ಯುತ್ ಕಂಬಕ್ಕೆ ಕಾರು ಢಿಕ್ಕಿ: ಮಹಿಳೆ ಸಾವು

Road Mishap; ಪಡುಬಿದ್ರಿ: ವಿದ್ಯುತ್ ಕಂಬಕ್ಕೆ ಕಾರು ಢಿಕ್ಕಿ: ಮಹಿಳೆ ಸಾವು

ಚನ್ನಮ್ಮನ ಕಿತ್ತೂರು: ಮಹಾನ್‌ ಯೋಗಿಗಳು-ಸೂಫಿ ಸಂತರ ನಾಡಿದು- ಶಿಲೇದಾರ

ಚನ್ನಮ್ಮನ ಕಿತ್ತೂರು: ಮಹಾನ್‌ ಯೋಗಿಗಳು-ಸೂಫಿ ಸಂತರ ನಾಡಿದು- ಶಿಲೇದಾರ

Sringeri Sharadamba Temple; ಪ್ರಧಾನಿ ಮೋದಿ ಹೆಸರಲ್ಲಿ ಸಹಸ್ರನಾಮ ಪೂಜೆ

Sringeri Sharadamba Temple; ಪ್ರಧಾನಿ ಮೋದಿ ಹೆಸರಲ್ಲಿ ಸಹಸ್ರನಾಮ ಪೂಜೆ

ಮೊದಲ ಬಾರಿ ಕುಂದಾನಗರಿಯಲ್ಲಿ ಪ್ರಧಾನಿ ಮೋದಿ ವಾಸ್ತವ್ಯ; 28ಕ್ಕೆ ಸಮಾವೇಶ

ಮೊದಲ ಬಾರಿ ಕುಂದಾನಗರಿಯಲ್ಲಿ ಪ್ರಧಾನಿ ಮೋದಿ ವಾಸ್ತವ್ಯ; 28ಕ್ಕೆ ಸಮಾವೇಶ

Thanks for visiting Udayavani

You seem to have an Ad Blocker on.
To continue reading, please turn it off or whitelist Udayavani.