ಕುಟುಂಬಗಳ ನಡುವೆ ಮಾರಾಮಾರಿ


Team Udayavani, Nov 28, 2021, 1:13 PM IST

ಕುಟುಂಬಗಳ ನಡುವೆ ಮಾರಾಮಾರಿ

ದೇವನಹಳ್ಳಿ: ಜಮೀನಿಗೆ ಸಂಬಂಧಿಸಿದಂತೆ ಎರಡು ಕುಟುಂಬಸ್ಥರ ನಡುವೆ ನಡೆದಿರುವ ಗಲಾಟೆಯಲ್ಲಿ ಇಬ್ಬರು ಗಾಯಗೊಂಡು ಆಸ್ಪತ್ರೆಗೆ ದಾಖಲಾಗಿರುವ ಘಟನೆ ಬೈಚಾಪುರ ಗ್ರಾಮದಲ್ಲಿ ನಡೆದಿದ್ದು, ಪೊಲೀಸ್‌ ಠಾಣೆಯಲ್ಲಿ ದೂರು ದಾಖಲಾಗಿದೆ.

ತಾಲೂಕಿನ ಅಣ್ಣೇಶ್ವರ ಗ್ರಾಪಂ ವ್ಯಾಪ್ತಿಯ ಬೈಚಾಪುರ ಗ್ರಾಮದ ಸ.ನಂ.17ರಲ್ಲಿ 3 ಎಕರೆ 34 ಗುಂಟೆ ಪೈಕಿ 1 ಎಕರೆ 15 ಗುಂಟೆ ವಿಸ್ತಿ ರ್ಣದ ಜಮೀನು ನಮ್ಮ ತಾಯಿ ಲಕ್ಷ್ಮಮ್ಮ ಎಂಬುವವರ ಹೆಸ ರಿನಲ್ಲಿ ಖಾತೆಯಾಗಿದ್ದು, ಈ ಜಮೀನಿನಲ್ಲಿ ಜೋಳದ ಬೆಳೆ ಬೆಳೆದಿ ದ್ದೇವೆ. ಇತ್ತೀಚಿಗೆ ಬಿದ್ದ ಅಕಾಲಿಕ ಮಳೆಯಿಂದಾಗಿ ಬೆಳೆ ಹಾಳಾ ಗಿದ್ದು, ದನಕರುಗಳಿಗೆ ಕಟಾವು ಮಾಡಿಕೊಂಡು ಹೋಗುವಂತೆ ರೈತರಿಗೆ ಉಚಿತವಾಗಿ ಕೊಟ್ಟಿದ್ದೇವೆ. ದನಕರುಗಳಿಗೆ ಜೋಳ ಕಟಾವು ಮಾಡುವಾಗ ಮುನಿಕೃಷ್ಣಪ್ಪ ಹಾಗೂ ಅವರ ಸಹಚರರು ಏಕಾಏಕಿ ದೊಣ್ಣೆಗಳು ಹಿಡಿದು ಕಟಾವು ಮಾಡುತ್ತಿದ್ದವರನ್ನು ಅವಾಚ್ಯಶಬ್ದಗಳಿಂದ ನಿಂದಿಸಿ, ಹಲ್ಲೆ ಮಾಡಲು ಮುಂದಾಗಿದ್ದರು. ಅವರನ್ನು ತಡೆಯಲು ಹೋದಾಗ ನಮ್ಮ ಕುಟುಂಬದವರ ಮೇಲೆ ಹಲ್ಲೆ ನಡೆಸಿದ್ದಾರೆ ಎಂದು ಶಶಿಧರ್‌ ಎಂಬುವವರು ಪೊಲೀಸರಿಗೆ ದೂರು ನೀಡಿದ್ದಾರೆ.

ಇದೇ ಗ್ರಾಮದ ಮತ್ತೂಂದು ಗುಂಪಿನ ಬಿ.ಎಂ.ಮುನಿಕೃಷ್ಣಪ್ಪ ಎಂಬುವವರು, ಬೈಚಾಪುರ ಗ್ರಾಮದ ಸ.ನಂ.17ರಲ್ಲಿ 4 ಎಕರೆ ಪೈಕಿ 0.39 ಗುಂಟೆ ಜಮೀನು ನಮಗೆ ದಾಖಲಾತಿಯಾಗಿದ್ದು, ಈ ವಿಚಾ ರವಾಗಿ ಗಲಾಟೆಯಾಗಿದೆ. ನಾನು ಮನೆಗೆ ಹೋಗುವಾಗ ದಾರಿಗೆ ಕಲ್ಲುಹಾಕಿ ಅಡ್ಡಗಟ್ಟಿ ನನ್ನ ಹಾಗೂ ನಮ್ಮ ಕುಟುಂಬದವರ ಮೇಲೆ ಮಾರಣಾಂತಿಕ ಹಲ್ಲೆ ನಡೆಸಿದ್ದಾರೆ. ಕೊಲೆ ಬೆದರಿಕೆ ಹಾಕಿದ್ದಾರೆ. ನಮ್ಮ ಜಮೀನಿನಲ್ಲಿ ಜೋಳದ ಕಡ್ಡಿಗಳು ಕಟಾವು ಮಾಡಲಿಕ್ಕೆ ಸುಮಾರು 200ಕ್ಕೂ ಹೆಚ್ಚು ಮಂದಿಯನ್ನು ಕರೆಯಿಸಿ, ದೌರ್ಜನ್ಯ ಮಾಡಿಸಿ, ನನ್ನ ಮೇಲೆ ಹಲ್ಲೆ ಮಾಡಿಸಿದ್ದಾರೆ ಎಂದು ದೂರು ನೀಡಿದ್ದಾರೆ. ಗಲಾಟೆಯಲ್ಲಿ ಮುನಿಕೃಷ್ಣಪ್ಪ ಮತ್ತು ಶಶಿಧರ್‌ ಎಂಬುವವರು ಗಾಯಗೊಂಡಿದ್ದು, ಆಸ್ಪತ್ರೆಯಲ್ಲಿ ಚಿಕಿತ್ಸೆ ಪಡೆಯುತ್ತಿದ್ದಾರೆ.

ಟಾಪ್ ನ್ಯೂಸ್

1-wqeqewqe

Muslim ಆದ್ಯತೆ ಹೇಳಿಕೆ ನೀಡಿಲ್ಲವೆಂದು ಸಾಬೀತುಪಡಿಸಿ: ‘ಕೈ’ಗೆ ಮೋದಿ ಸವಾಲು

1-qweqewqe

IPL;ಮುಂಬೈ ಇಂಡಿಯನ್ಸ್‌ ಎದುರಾಳಿ: ಸೇಡಿನ ತವಕದಲ್ಲಿ ಡೆಲ್ಲಿ

Akki

Report; 2023ರಲ್ಲಿ 28.2 ಕೋಟಿ ಜನರಿಗೆ ತೀವ್ರ ಆಹಾರ ಬಿಕ್ಕಟ್ಟು

SHriramulu (2)

BJP ಶ್ರೀರಾಮುಲುಗೆ ಗೆಲುವು ಅನಿವಾರ್ಯ; ಕ್ಷೇತ್ರ ವಶಕ್ಕೆ ಕೈ ತವಕ

1—ewqewqe

IPL; ಅಗ್ರಸ್ಥಾನಿ ರಾಜಸ್ಥಾನ್‌-ಲಕ್ನೋ: ಬಲಿಷ್ಠರ ಸೆಣಸಾಟ

congress

BJP ಅಭ್ಯರ್ಥಿ ಅವಿರೋಧ ಆಯ್ಕೆ: ಸೂರತ್‌ನ ಕಾಂಗ್ರೆಸ್‌ ಅಭ್ಯರ್ಥಿ ಉಚ್ಚಾಟನೆ

1-visa

India VISA ನೀತಿ ಬಗ್ಗೆ ಅಲ್ಲಿನ ಸರಕಾರ ಮಾತನಾಡಲಿ: ಅಮೆರಿಕ


ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು

ಬೇಸಿಗೆ ಬಿಸಿಯೂಟ: 32,173 ಮಕ್ಕಳ ನೋಂದಣಿ

ಬೇಸಿಗೆ ಬಿಸಿಯೂಟ: 32,173 ಮಕ್ಕಳ ನೋಂದಣಿ

Devanahalli: ಬೇಸಿಗೆ ತಾಪಮಾನ ಹೆಚ್ಚಳ, ಇರಲಿ ಎಚ್ಚರ

Devanahalli: ಬೇಸಿಗೆ ತಾಪಮಾನ ಹೆಚ್ಚಳ, ಇರಲಿ ಎಚ್ಚರ

Doddaballapur: ಜಾತೀಯತೆಗೆ ಮಣೆ ಹಾಕದ ಕ್ಷೇತ್ರದ ‌ಮತದಾರರು

Doddaballapur: ಜಾತೀಯತೆಗೆ ಮಣೆ ಹಾಕದ ಕ್ಷೇತ್ರದ ‌ಮತದಾರರು

Lok Sabha polls: ಲೋಕಸಭೆ ಚುನಾವಣೆಯಲ್ಲಿ ಇಂದಿರಾಗಾಂಧಿ ನೆನಪು

Lok Sabha polls: ಲೋಕಸಭೆ ಚುನಾವಣೆಯಲ್ಲಿ ಇಂದಿರಾಗಾಂಧಿ ನೆನಪು

10

Electricity problem: ಬೇಸಿಗೆ ಬೆನ್ನಲ್ಲೇ ಕಾಡುತ್ತಿದೆ ವಿದ್ಯುತ್‌ ಸಮಸ್ಯೆ

MUST WATCH

udayavani youtube

ವೈಭವದ ಹಿರಿಯಡ್ಕ ಸಿರಿಜಾತ್ರೆ ಸಂಪನ್ನ

udayavani youtube

ಯಾವೆಲ್ಲಾ ಚರ್ಮದ ಕಾಯಿಲೆಗಳಿವೆ ಹಾಗೂ ಪರಿಹಾರಗಳೇನು?

udayavani youtube

Mangaluru ಹೆಬ್ಬಾವಿನ ದೇಹದಲ್ಲಿ ಬರೋಬ್ಬರಿ 11 ಬುಲೆಟ್‌ ಪತ್ತೆ!

udayavani youtube

ನನ್ನ ಕಥೆ ನಿಮ್ಮ ಜೊತೆ

udayavani youtube

‘ಕಸಿ’ ಕಟ್ಟುವ ಸುಲಭ ವಿಧಾನ

ಹೊಸ ಸೇರ್ಪಡೆ

1-wqeqewqe

Muslim ಆದ್ಯತೆ ಹೇಳಿಕೆ ನೀಡಿಲ್ಲವೆಂದು ಸಾಬೀತುಪಡಿಸಿ: ‘ಕೈ’ಗೆ ಮೋದಿ ಸವಾಲು

1-qweqewqe

IPL;ಮುಂಬೈ ಇಂಡಿಯನ್ಸ್‌ ಎದುರಾಳಿ: ಸೇಡಿನ ತವಕದಲ್ಲಿ ಡೆಲ್ಲಿ

Akki

Report; 2023ರಲ್ಲಿ 28.2 ಕೋಟಿ ಜನರಿಗೆ ತೀವ್ರ ಆಹಾರ ಬಿಕ್ಕಟ್ಟು

SHriramulu (2)

BJP ಶ್ರೀರಾಮುಲುಗೆ ಗೆಲುವು ಅನಿವಾರ್ಯ; ಕ್ಷೇತ್ರ ವಶಕ್ಕೆ ಕೈ ತವಕ

1—ewqewqe

IPL; ಅಗ್ರಸ್ಥಾನಿ ರಾಜಸ್ಥಾನ್‌-ಲಕ್ನೋ: ಬಲಿಷ್ಠರ ಸೆಣಸಾಟ

Thanks for visiting Udayavani

You seem to have an Ad Blocker on.
To continue reading, please turn it off or whitelist Udayavani.