ಕಾಡ್ಗಿಚ್ಚು ತಡೆಗೆ “ಬೆಂಕಿ ರೇಖೆ’


Team Udayavani, Jan 31, 2020, 11:49 AM IST

br-tdy-1

ಸಾಂಧರ್ಬಿಕ ಚಿತ್ರ

ದೇವನಹಳ್ಳಿ: ಕಾಡ್ಗಿಚ್ಚು ಇಡೀ ಜಗತ್ತನ್ನೇ ಕಾಡುತ್ತಿರುವ ದೊಡ್ಡ ಸಮಸ್ಯೆ. ಇತ್ತೀಚೆಗೆ ರಾಜ್ಯದ ಬಂಡೀಪುರ, ಆಸ್ಟ್ರೇಲಿಯ ಕಾಡಿನಲ್ಲಿ ಹಬ್ಬಿದ್ದ ಕಾಡ್ಗಿಚ್ಚಿಗೆ ಲಕ್ಷಾಂತರ ಪ್ರಾಣಿ ಮತ್ತು ಪಕ್ಷಿ ಸಂಕುಲ ಸೇರಿದಂತೆ ಅರಣ್ಯ ಸಂಪತ್ತನ್ನು ಕ್ಷಣ ಮಾತ್ರದಲ್ಲಿ ಬೆಂಕಿ ಆವರಿಸಿ ಸಂಪೂರ್ಣ ಕಾಡು ಬೆಂಕಿಯ ಕೆನ್ನಾಲಿಗೆಗೆ ಗುರಿಯಾಗಿತ್ತು. ಈ ರೀತಿ ಅನಾಹುತಗಳು ಜಿಲ್ಲೆಯಲ್ಲಿ ಆಗಬಾರದೆಂಬ ಉದ್ದೇಶದಿಂದ ಅರಣ್ಯ ಇಲಾಖೆ ಬೆಂಕಿ ರೇಖೆಗಳನ್ನು ನಿರ್ಮಿಸುವುದರ ಮೂಲಕ ಮುನ್ನೆಚ್ಚರಿಕಾ ಕ್ರಮ ವಹಿಸಿದೆ.

ಜಿಲ್ಲೆಯ ಅರಣ್ಯ ಪ್ರದೇಶದಲ್ಲಿರುವ ಕಡೆಗಳಲ್ಲಿ ಕಳೆದ ವರ್ಷದಿಂದಲೇ ಜೆಸಿಬಿ ಯಂತ್ರದ ಮೂಲಕ ಬೆಂಕಿ ರೇಖೆಗಳನ್ನು ಅಳವಡಿಸಿ ಬೆಂಕಿಯನ್ನು ನಂದಿಸುವುದಕ್ಕೆ ಅನುಕೂಲಕರ ವಾತಾವರಣ ಸೃಷ್ಟಿಸಲಾಗಿದೆ. ಜಿಲ್ಲೆಯ ವಿವಿಧ ಕಡೆಗಳಲ್ಲಿನ ಅರಣ್ಯ ಪ್ರದೇಶದಲ್ಲಿ ಬೆಂಕಿ ರೇಖೆಗಳನ್ನು ನಿರ್ಮಾಣ ಮಾಡಲಾಗಿದೆ. ಇದರಿಂದ ಕಾಡ್ಗಿಚ್ಚನ್ನು ನಿಯಂತ್ರಿಸಬಹುದು. ದೇವನಹಳ್ಳಿ ತಾಲೂಕಿನಲ್ಲಿ ಅಂತಾರಾಷ್ಟ್ರೀಯ ವಿಮಾನ ನಿಲ್ದಾಣ ಪ್ರಾರಂಭವಾಗುವ ಸಂದ ರ್ಭದಲ್ಲಿ ಸುಮಾರು 540 ಎಕರೆ ವಿಮಾನ

ಜಾಗವನು ನಿಲ್ದಾಣಕ್ಕಾಗಿ ವಶಕ್ಕೆ ಪಡೆದುಕೊಳ್ಳಲಾಗಿತ್ತು. ಅದಕ್ಕೆ ಬದಲಿ ಜಾಗವಾಗಿ ದೊಡ್ಡಬಳ್ಳಾಪುರದಲ್ಲಿ 540 ಎಕರೆ ಸರ್ಕಾರ ಕಾಡು ಬೆಳೆಸಲು ಜಾಗವನ್ನು ನೀಡಿದೆ. ಜಿಲ್ಲೆಯ ಎಲ್ಲೆಡೆ ಅರಣ್ಯ ಪ್ರದೇಶ ಬೆಂಕಿಗೆ ಆಹುತಿಯಾಗಬಾರದೆಂಬ ಉದ್ದೇಶವನ್ನು ಹೊಂದಿದ್ದು, ಮುನ್ನಚರಿಕೆಯ ಕ್ರಮಗಳನ್ನು ಕೈಗೊಳ್ಳಲಾಗಿದೆ.

ಬೆಂಕಿ ಹರಡುವುದು ಹೇಗೆ ?: ಬೆಂಕಿ ರೇಖೆಗಳನ್ನು ನಿರ್ಮಿಸುವುದರಿಂದ ಅನಾಹುತಗಳನ್ನು ತಡೆಯಬಹುದು. ಕಾಡ್ಗಿಚ್ಚು ಆವರಿಸಿದ ಕೂಡಲೇ ಬೆಂಕಿ ನಿಂದಿಸಲು ಅನುಕೂಲವಾಗುವಂತೆ ರೇಖೆಗಳನ್ನು ನಿರ್ಮಿಸಲಾಗಿದೆ. ಮಾನವ ಕಾಡಿನ ಅಂಚಿನಲ್ಲಿ ಓಡ ನಾಟ ಇದ್ದಾಗ ಬೀಡಿ, ಸಿಗರೇಟ್‌ ಸೇದಿ ಬಿಸಾಡುವುದು, ಅಕ್ರಮವಾಗಿ ಅರಣ್ಯ ಪ್ರವೇಶಿಸಿ ಮೋಜು-ಮಸ್ತಿ ಸಂದರ್ಭದಲ್ಲಿ ಅಡುಗೆ ಮಾಡಿಕೊಳ್ಳುವುದು. ಉದ್ದೇಶ ಪೂರಕವಾಗಿ ಬೆಂಕಿ ಕಳೆ ಮುಂತಾದ ಬೇಡದಗಿಡಗಳ ನಾಶಕ್ಕೆ ಬೆಂಕಿ ಹಚ್ಚುವುದರಿಂದ ಅರಣ್ಯಗಳಲ್ಲಿ ಬೆಂಕಿ ಕಾಣಿಸಿಕೊಳ್ಳುತ್ತದೆ. ಜಿಲ್ಲೆಯ ನೆಲಮಂಗಲ ತಾಲೂಕಿನ ಬಳಗೆರೆ ಸುತ್ತಮುತ್ತಲಿನ ಅರಣ್ಯ ಪ್ರದೇಶ, ಕೊರಟಗೆರೆ ಮತ್ತು ನೆಲಮಂಗಲ ತಾಲೂಕಿನ ಗಡಿ ಅಂಚಿನಲ್ಲಿ, ಮಾಗಡಿ ಮತ್ತು ನೆಲಮಂಗಲ ಗಡಿಪ್ರದೇಶ, ದೇವನಹಳ್ಳಿ ತಾಲೂಕಿನ ಕೊುರಾ ಬೆಟ್ಟ, ಕೋಡಗುರ್ಕಿ, ಕಾರಹಳ್ಳಿ ಸಮೀಪದಲ್ಲಿರುವ ಪಂಚಗಿರಿಧಾಮಗಳಲ್ಲಿ ಒಂದಾದ ದಿಬ್ಬಗಿರಿ ಬೆಟ್ಟ, ನಾರಾಯಣಪುರ, ಬೆಟ್ಟಕೋಟೆ, ರಾಯಸಂದ್ರ, ಕೋರಮಂಗಲ ಅರಣ್ಯೇತರ ಪ್ರದೇಶಗಳಲ್ಲಿ ಬೆಂಕಿ ಕಾಣಿಸಿಕೊಳ್ಳುತ್ತದೆ. ಇತ್ತೀಚೆಗಿನ ದಿನಗಳಲ್ಲಿ ಕೊಯಿರ ಬೆಟ್ಟದಲ್ಲಿ, ದೊಡ್ಡಬಳ್ಳಾಪುರ ತಾಲೂಕಿನ ಸಾಸಲು ಹೋಬಳಿಯ ಅರಣ್ಯ ಪ್ರದೇಶದ ಸುತ್ತಮುತ್ತಲಿನಲ್ಲಿ ಕಾಡ್ಗಿಚ್ಚು ಹರಡುತ್ತಿದೆ.

ನೀಲಗಿರಿ ಮರಗಳ ತೆರವು: ಜಿಲ್ಲೆಯ ವ್ಯಾಪ್ತಿಯಲ್ಲಿ ಅರಣ್ಯದಲ್ಲಿ ಅತೀ ಹೆಚ್ಚು ಪ್ರಮಾಣದಲ್ಲಿರುವ ನೀಲಗಿರಿ ಮರಗಳೇ ಕಾಡಿಗೆ ಅಪಾಯಕಾರಿಯಾಗಿ ಪರಿಣಮಿಸಿವೆ ಎಂದು ವರದಿಗಳಿಂದ ತಿಳಿದು ಬಂದಿದೆ.ಈ ಮರಗಳ ನೆರಳಿನಲ್ಲಿ ಯಾವುದೇ ಗಿಡಮರಗಳು ಬೆಳೆಯುವುದಿಲ್ಲ. ಭೂಮಿಯೊಳಗಿನ ನೀರಿನ ಅಂಶವನ್ನು ಅತೀ ಹೆಚ್ಚು ಪ್ರಮಾಣದಲ್ಲಿ ಹೀರಿಕೊಳ್ಳುವ ಮರಗಳು ಇವಾಗಿವೆ. ಅಲ್ಲದೆ, ನೀಲಗಿರಿ ಮರಗಳು ಬೆಂಕಿ ಬಿದ್ದಂತಹ ಸಮಯದಲ್ಲಿ ಕಾಡಿಗೆ ಬೆಂಕಿ ವ್ಯಾಪಿಸುವುದಕ್ಕೆ ಸಹಕಾರಿ ಯಾಗುವುದಲ್ಲದೆ, ಅತೀ ಶೀಘ್ರಗತಿಯಲ್ಲಿ ಬೆಂಕಿಯ ಕಿನ್ನಾಲಿಗೆ ಅರಣ್ಯಕ್ಕೆ ವ್ಯಾಪಿಸುತ್ತದೆ. ಹೀಗಾಗಿ ನೀಲಗಿರಿ ಮರಗಳನ್ನು ತೆರವುಗೊಳಿಸಲು ಜಿಲ್ಲಾಡಳಿತ ಮುಂದಾಗಿದೆ.

ಜಿಲ್ಲೆಯಲ್ಲಿ 700 ಎಕರೆ ಅರಣ್ಯ ಪ್ರದೇಶ ಬೆಳೆಸಲು ಕ್ರಮ ಕೈಗೊಳ್ಳಲಾಗುತ್ತಿದೆ. ಕಾಡ್ಗಿಚ್ಚು ತಡೆಗೆ ಬೆಂಕಿ ರೇಖೆಗಳ ನಿರ್ಮಾಣ ಮಾಡಲಾಗುತ್ತಿದೆ. ಅರಣ್ಯ ಪ್ರದೇಶದ ಸುತ್ತಮುತ್ತಲಿನ ಗ್ರಾಮಸ್ಥರಲ್ಲಿ ಅರಿವು ಮೂಡಿಸುವ ಸಲುವಾಗಿ, ಬೀದಿ ನಾಟಕಗಳನ್ನು ಏರ್ಪಡಿಸಲಾಗುತ್ತಿದೆ. ಸಾರ್ವಜನಿಕರು ಸಲಹೆ ನೀಡಿದರೆ ಕಾಡ್ಗಿಚ್ಚು ತಡೆಗೆ ಸಹಕಾರಿಯಾಗುತ್ತದೆ. ಆಂಟೋನಿ ಮರಿಯಪ್ಪ ಉಪ ಅರಣ್ಯ ಸಂರಕ್ಷಣಾಧಿಕಾರಿ

 

-ಎಸ್‌.ಮಹೇಶ್‌

ಟಾಪ್ ನ್ಯೂಸ್

9

6.69 ಕೋಟಿ ರೂ. ಖೋಟಾನೋಟು ವಶಕ್ಕೆ: ಕೇಂದ್ರ ಏಜೆನ್ಸಿ ತನಖೆ ಆರಂಭ

1-a-DK-SHI

D.K. Suresh ಅವರದ್ದು ಹೃದಯವಂತಿಕೆಯಲ್ಲವೇ?: ಡಿಸಿಎಂ ಡಿ.ಕೆ. ಶಿವಕುಮಾರ್ ವಾಗ್ದಾಳಿ

1-wewqeqwe

Lok Sabha Polls: ಶಿಂಧೆ ಸೇನೆ ಸೇರ್ಪಡೆಯಾದ ಖ್ಯಾತ ನಟ ಗೋವಿಂದ

Lok Sabha Polls: ಚುನಾವಣೆಯಲ್ಲಿ 238 ಬಾರಿ ಸೋತರೂ ಛಲಬಿಡದ ಸರದಾರ.. ಈ ಬಾರಿ ಮತ್ತೆ ಕಣಕ್ಕೆ

Lok Sabha Polls: ಚುನಾವಣೆಯಲ್ಲಿ 238 ಬಾರಿ ಸೋತರೂ ಛಲಬಿಡದ ಸರದಾರ.. ಈ ಬಾರಿ ಮತ್ತೆ ಕಣಕ್ಕೆ

1—-wewqe

Punjab ಮುಖ್ಯಮಂತ್ರಿ ಭಗವಂತ್ ಮಾನ್ ಅವರಿಗೆ ಹೆಣ್ಣು ಮಗುವಿನ ಜನನ

8

ʼAadujeevithamʼ Twitter review: ಪೃಥ್ವಿರಾಜ್‌ ಅಭಿನಯಕ್ಕೆ ಬಹುಪರಾಕ್; ಹೇಗಿದೆ ಸಿನಿಮಾ?

12-baikampady

Fire; ಬೈಕಂಪಾಡಿ ಕೈಗಾರಿಕಾ ಪ್ರದೇಶದಲ್ಲಿ ಅಗ್ನಿ ಅವಘಡ


ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು

10

Electricity problem: ಬೇಸಿಗೆ ಬೆನ್ನಲ್ಲೇ ಕಾಡುತ್ತಿದೆ ವಿದ್ಯುತ್‌ ಸಮಸ್ಯೆ

Kanakapura ಚುನಾವಣೆ ಉಸ್ತುವಾರಿ ಹೊಣೆ ನಾನೇ ಹೊತ್ತುಕೊಳ್ಳುವೆ: ಸಿಪಿವೈ

Kanakapura ಚುನಾವಣೆ ಉಸ್ತುವಾರಿ ಹೊಣೆ ನಾನೇ ಹೊತ್ತುಕೊಳ್ಳುವೆ: ಸಿಪಿವೈ

Lok sabha polls: ಬೆಂ. ಗ್ರಾಮಾಂತರ; ಡಾ.ಮಂಜುನಾಥ್‌ ಸ್ಪರ್ಧೆ

Lok sabha polls: ಬೆಂ. ಗ್ರಾಮಾಂತರ; ಡಾ.ಮಂಜುನಾಥ್‌ ಸ್ಪರ್ಧೆ

Bannerghatta Biological Park: ಚಿರತೆ ಮರಿಗಳಿಗೆ ಉದ್ಯಾನವನದ ಸಿಬ್ಬಂದಿ ಆಸರೆ

Bannerghatta Biological Park: ಚಿರತೆ ಮರಿಗಳಿಗೆ ಉದ್ಯಾನವನದ ಸಿಬ್ಬಂದಿ ಆಸರೆ

Road Dispute: ರಸ್ತೆ ವಿವಾದ; ಪೊಲೀಸ್‌ ಠಾಣೆ ಮೆಟ್ಟಿಲೇರಿದ ಪ್ರಕರಣ

Road Dispute: ರಸ್ತೆ ವಿವಾದ; ಪೊಲೀಸ್‌ ಠಾಣೆ ಮೆಟ್ಟಿಲೇರಿದ ಪ್ರಕರಣ

MUST WATCH

udayavani youtube

ಟೌನಶಿಪ್’ನ ಬಾಡಿಗೆ ಮನೆಯೊಂದರಲ್ಲಿ ಕಳ್ಳತನ ರೂ: 47 ಸಾವಿರ ಕಳವು

udayavani youtube

ವಿಶ್ವ ಗುಬ್ಬಚ್ಚಿಗಳ ದಿನ | ಈ ಮನೆ ನೂರಾರು ಗುಬ್ಬಚ್ಚಿಗಳ ತವರು

udayavani youtube

ಬಡವರ ಸೇವೆಯೇ ಶ್ರೀರಾಮ ದೇವರ ಸೇವೆ : ಪೇಜಾವರಶ್ರೀ

udayavani youtube

ಕೆಂಪು ಹರಿವೆ ಸೊಪ್ಪು ಬೆಳೆಯುವ ಸೂಕ್ತ ವಿಧಾನ

udayavani youtube

ರಾಜಕೀಯದತ್ತ ಒಲವು ತೋರಿದ್ರಾ ಚಕ್ರವರ್ತಿ ಸೂಲಿಬೆಲೆ ?

ಹೊಸ ಸೇರ್ಪಡೆ

9

6.69 ಕೋಟಿ ರೂ. ಖೋಟಾನೋಟು ವಶಕ್ಕೆ: ಕೇಂದ್ರ ಏಜೆನ್ಸಿ ತನಖೆ ಆರಂಭ

ಲೋಕಸಭೆ ಅಖಾಡ 2024: ಸವಾಲು ಗೆದ್ದ ಶೆಟ್ಟರ್‌ ಮುಂದಿದೆ ಅಗ್ನಿ ಪರೀಕ್ಷೆ

ಲೋಕಸಭೆ ಅಖಾಡ 2024: ಸವಾಲು ಗೆದ್ದ ಶೆಟ್ಟರ್‌ ಮುಂದಿದೆ ಅಗ್ನಿ ಪರೀಕ್ಷೆ

ಬಾಗಲಕೋಟೆ: ಕೋಟೆ ನಾಡಿನ ದಾಹ ತೀರಿಸುವ ದಾನಿಗಳು!

ಬಾಗಲಕೋಟೆ: ಕೋಟೆ ನಾಡಿನ ದಾಹ ತೀರಿಸುವ ದಾನಿಗಳು!

1-a-DK-SHI

D.K. Suresh ಅವರದ್ದು ಹೃದಯವಂತಿಕೆಯಲ್ಲವೇ?: ಡಿಸಿಎಂ ಡಿ.ಕೆ. ಶಿವಕುಮಾರ್ ವಾಗ್ದಾಳಿ

1-wewqeqwe

Lok Sabha Polls: ಶಿಂಧೆ ಸೇನೆ ಸೇರ್ಪಡೆಯಾದ ಖ್ಯಾತ ನಟ ಗೋವಿಂದ

Thanks for visiting Udayavani

You seem to have an Ad Blocker on.
To continue reading, please turn it off or whitelist Udayavani.