ಪೆಟ್ರೋಲ್ ಬಂಕ್ ಬಳಿ ನಿಂತಿದ್ದ ಲಾರಿಗೆ ಬೆಂಕಿ: ತಪ್ಪಿದ ಭಾರಿ ದುರಂತ
Team Udayavani, Mar 10, 2022, 10:27 AM IST
ನೆಲಮಂಗಲ: ಪೆಟ್ರೋಲ್ ಬಂಕ್ ಬಳಿ ನಿಂತಿದ್ದ ಕಂಟೈನರ್ ಲಾರಿಗೆ ಬೆಂಕಿಬಿದ್ದು ಹೊತ್ತಿಕೊಂಡ ಘಟನೆ ಬುಧವಾರ ರಾತ್ರಿ ನಡೆದಿದೆ.
ಬೆಂಗಳೂರು ಹೊರವಲಯ ನೆಲಮಂಗಲ ತಾಲೂಕಿನ ರಾಯರಪಾಳ್ಯ ಪೆಟ್ರೋಲ್ ಬಂಕ್ ಬಳಿ ಘಟನೆ ನಡೆದಿದ್ದು, ಕೊರಿಯರ್ ಬಾಕ್ಸ್ ತುಂಬಿದ ಲಾರಿಯಲ್ಲಿ ಬೆಂಕಿ ಕಾಣಿಸಿಕೊಂಡಿದೆ.
ಲಾರಿಗೆ ಬೆಂಕಿ ಬಿದ್ದಿದೆ ಎಂದು ಠಾಣೆಗೆ ಮಾಹಿತಿ ಬಂದ ಕೂಡಲೇ ಸ್ಥಳಕ್ಕೆ, ಡಾಬಸ್ ಪೇಟೆ ಪೊಲೀಸರು ಆಗಮಿಸಿ ಬೆಂಕಿ ನಂದಿಸಿ, ಭಾರಿ ಅನಾಹುತ ತಪ್ಪಿಸಿದ್ದಾರೆ.
ಇದನ್ನೂ ಓದಿ:ಸರಪಂಚ್ ನನ್ನು ಗುಂಡಿಕ್ಕಿ ಹತ್ಯೆಗೈದ ಉಗ್ರರು!
ಬೆಂಕಿ ಅವಘಡದಿಂದ ಅದೃಷ್ಟವಶಾತ್ ಯಾವುದೇ ತೊಂದರೆಯಾಗಿಲ್ಲ. ಡಾಬಸ್ ಪೇಟೆ ಪೊಲೀಸ್ ಠಾಣಾ ವ್ಯಾಪ್ತಿಯಲ್ಲಿ ಪ್ರಕರಣ ದಾಖಲಾಗಿದೆ.