ನೂತನ ಮೋಟಾರು ಕಾಯ್ದೆ ಕೈಬಿಡಲು ಒತ್ತಾಯ


Team Udayavani, Sep 21, 2019, 3:00 AM IST

nootana

ದೇವನಹಳ್ಳಿ: ಕೇಂದ್ರ ಸರ್ಕಾರದ ಮೋಟಾರು ಕಾಯ್ದೆ ತಿದ್ದುಪಡಿ ಕೈಬಿಡಬೇಕೆಂದು ಒತ್ತಾಯಿಸಿ ನ್ಯಾಯಾಲಯದ ಕಲಾಪ ಬಹಿಷ್ಕರಿಸಿ ತಾಲೂಕು ವಕೀಲರ ಸಂಘದ ಸದಸ್ಯರು ನಗರದ ನ್ಯಾಯಾಲಯದ ಆವರಣದಲ್ಲಿ ಪ್ರತಿಭಟನೆ ನಡೆಸಿದರು.

ಸಾಮಾನ್ಯ ಜನರಿಗೆ ಹೊರೆ: ಕೇಂದ್ರ ಸರ್ಕಾರ ಮೋಟಾರು ಕಾಯ್ದೆ ತಿದ್ದುಪಡಿ ಮಾಡಿರುವುದರಿಂದ ವಾಹನ ಸವಾರರು ಹಣಕಾಸಿನ ಸಮಸ್ಯೆ ಎದುರಿಸುತ್ತಿದ್ದಾರೆ. ಮೊದಲು ವಾಹನ ವಿಮೆ ಕಡಿಮೆಯಿತ್ತು. ಈಗ ಪ್ರೀಮಿಯಂ ಹೆಚ್ಚಾಗಿದ್ದು, ಜತೆಗೆ ಕಡ್ಡಾಯವಾಗಿದೆ. ವಿಮೆ ಕಂಪನಿಗಳಿಗೆ ಅನುಕೂಲ ಕಲ್ಪಿಸಲು ಕೇಂದ್ರ ತಿದ್ದುಪಡಿ ಮಾಡಿದೆ. ಅಪಘಾತದಲ್ಲಿ ವ್ಯಕ್ತಿ ಮೃಪಟ್ಟರೆ ವಾಹನ ಮಾಲಿಕನು ಪರಿಹಾರ ಕೇಳಲು ಸಾಧ್ಯವಾಗುವುದಿಲ್ಲ. ವಿಮೆ ಕಂಪನಿಗಳು ನೀಡುವ 5 ಲಕ್ಷ ರೂ. ಪರಿಹಾರ ಸಾಕಾಗುವುದಿಲ್ಲ. ಈಗಾಗಲೇ ಜನರು ಆರ್ಥಿಕ ಸಂಕಷ್ಟದಲ್ಲಿ ಸಿಲುಕಿದ್ದಾರೆ. ದುಬಾರಿ ದಂಡ ಕಟ್ಟಲು ಸಾಮಾನ್ಯ ಜನರಿಗೆ ಹೊರೆಯಾಗಿದೆ ಎಂದು ಆಕ್ಷೇಪ್ತ ವ್ಯಕ್ತಪಡಿಸಿದರು.

ನಿಯಮ ಅವೈಜ್ಞಾನಿಕ: ಒಂದು ಕಡೆ ಅತಿವೃಷ್ಟಿ ಮತ್ತೂಂದೆಡೆ ಅನಾವೃಷ್ಟಿ ಇದ್ದಾಗಲೂ, ಕೇಂದ್ರ ಸರ್ಕಾರ ಮೋಟಾರು ಕಾಯ್ದೆ ತಿದ್ದುಪಡಿ ಮಾಡಿರುವುದು ಜನರ ಆರ್ಥಿಕ ಸ್ಥಿತಿಗತಿ ಮೇಲೆ ಪರಿಣಾಮ ಬೀರುತ್ತಿದೆ. ಹಳ್ಳಿಗಾಡಿನ ಜನರು ನಗರ ಪ್ರದೇಶಗಳಿಗೆ ಬರಬೇಕು ಹಾಗೂ ಹೊಲ ಗದ್ದೆಗಳಿಗೆ ತೆರಳಲು ದ್ವಿಚಕ್ರ ವಾಹನ ಬಳಸುತ್ತಾರೆ. ಆದರೆ, ವಾಹನ ಚಾಲನೆ ಮಾಡುವಾಗ ಚಪ್ಪಲಿ ಬಳಸ ಬಾರದು, ಶೂ ಬಳಸಬೇಕು ಎನ್ನುವ ನಿಯಮ ಅವೈಜ್ಞಾನಿಕವಾಗಿದೆ ಎಂದು ಕಿಡಿಕಾರಿದರು.

ಕೇಂದ್ರದ ಹಗಲು ದರೋಡೆ ಆರೋಪ: ಈಗಾಗಲೇ ದೇಶದ ಆರ್ಥಿಕತೆ ದಿನದಿಂದ ದಿನಕ್ಕೆ ಕುಸಿಯುತ್ತಿದ್ದು, ಆದರೂ ಪ್ರಧಾನಿ ಮೋದಿ ಸರ್ವಾಧಿಕಾರಿ ಧೋರಣೆ ಅನುಸರಿಸುತ್ತಿದ್ದಾರೆ. ಈ ಯೋಜನೆಯ ಸಾಧಕ, ಭಾದಕಗಳನ್ನು ಅರಿಯದೆ ಕೇಂದ್ರ ಸರ್ಕಾರ ಏಕಾಏಕಿ ಜಾರಿಗೆ ತಂದು, ಹಗಲು ದರೋಡೆ ಮಾಡಲು ಹೊರಟಿದೆ ಎಂದು ಆರೋಪಿಸಿದರು. ಇದೊಂದು ದೇಶ ದ್ರೋಹದ ಕಾಯ್ದೆಯಾಗಿದೆ. ಜನ ಸಾಮಾನ್ಯರ ಹಣ ಕಿತ್ತುಕೊಳ್ಳುವ ಕಾಯ್ದೆಯಾಗಿದ್ದು, ಕೇಂದ್ರ ಸರ್ಕಾರ ವಾಪಾಸ್ಸು ಪಡೆಯಬೇಕು ಎಂದು ಒತ್ತಾಯಿಸಿದರು.

ತಾಲೂಕು ವಕೀಲರ ಸಂಘದ ಅಧ್ಯಕ್ಷ ಆರ್‌.ಮಾರೇಗೌಡ , ತಾಲೂಕು ವಕೀಲರ ಸಂಘದ ಮಾಜಿ ಅಧ್ಯಕ್ಷ ಬಿ.ಎಂ.ಭೈರೇಗೌಡ, ಎನ್‌.ಶ್ರೀನಿವಾಸ್‌ ಮೂರ್ತಿ, ಮಾಜಿ ಕಾರ್ಯದರ್ಶಿ ಮುನಿರಾಜು, ತಾಲೂಕು ಸಂಘದ ಉಪಾಧ್ಯಕ್ಷ ಜಯರಾಮಪ್ಪ, ಕಾರ್ಯದರ್ಶಿ ಆನಂದ್‌, ಖಜಾಂಚಿ ವೆಂಕಟೇಶ್‌, ವಕೀಲ ನಾರಾಯಣಸ್ವಾಮಿ, ರಮೇಶ್‌, ಕೇಶವ ಮೂರ್ತಿ, ಬೀರಪ್ಪ, ಪ್ರಭಾಕರ್‌, ಕೆಂಪೇಗೌಡ, ಮನೋಜ್‌ ಇದ್ದರು.

ಟಾಪ್ ನ್ಯೂಸ್

10-uv-fusion

Challenges of Life: ಬದುಕಿನ ಸವಾಲುಗಳ ಎದುರಿಸಿ ಮುನ್ನಡೆಯೋಣ…

Kannada ನಾಮಫ‌ಲಕ; ತತ್‌ಕ್ಷಣ ಕ್ರಮ ಬೇಡ: ಹೈಕೋರ್ಟ್‌

Kannada ನಾಮಫ‌ಲಕ; ತತ್‌ಕ್ಷಣ ಕ್ರಮ ಬೇಡ: ಹೈಕೋರ್ಟ್‌

Udupi; ಬಿಜೆಪಿ ಭದ್ರಕೋಟೆಯಾಗಿರುವ ಕರಾವಳಿ-ಮಲೆನಾಡಿನ ಕ್ಷೇತ್ರ

Udupi; ಬಿಜೆಪಿ ಭದ್ರಕೋಟೆಯಾಗಿರುವ ಕರಾವಳಿ-ಮಲೆನಾಡಿನ ಕ್ಷೇತ್ರ

ಪಿಯು ಮೌಲ್ಯಮಾಪನಕ್ಕೆ ವಿರೋಧ

Second PU ಮೌಲ್ಯಮಾಪನಕ್ಕೆ ವಿರೋಧ

1-24-tuesday

Daily Horoscope: ಹಿತವಾದುದನ್ನು ಮಾತ್ರ ಆರಿಸಿಕೊಳ್ಳುವುದು ವಿವೇಕಿಗಳ ಲಕ್ಷಣ

Lok Sabha Election 2024; ಬಿಜೆಪಿ 2ನೇ ಪಟ್ಟಿ ಇನ್ನೆರಡು ದಿನ ವಿಳಂಬ?

Lok Sabha Election 2024; ಬಿಜೆಪಿ 2ನೇ ಪಟ್ಟಿ ಇನ್ನೆರಡು ದಿನ ವಿಳಂಬ?

Congress

21 ಕಾಂಗ್ರೆಸ್‌ ಅಭ್ಯರ್ಥಿ ಪಟ್ಟಿ ಇಂದು?ದಿಲ್ಲಿಯಲ್ಲಿ ಮಂಗಳವಾರ ಪಕ್ಷದ ಚುನಾವಣ ಸಮಿತಿ ಸಭೆ


ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು

Kanakapura ಚುನಾವಣೆ ಉಸ್ತುವಾರಿ ಹೊಣೆ ನಾನೇ ಹೊತ್ತುಕೊಳ್ಳುವೆ: ಸಿಪಿವೈ

Kanakapura ಚುನಾವಣೆ ಉಸ್ತುವಾರಿ ಹೊಣೆ ನಾನೇ ಹೊತ್ತುಕೊಳ್ಳುವೆ: ಸಿಪಿವೈ

Lok sabha polls: ಬೆಂ. ಗ್ರಾಮಾಂತರ; ಡಾ.ಮಂಜುನಾಥ್‌ ಸ್ಪರ್ಧೆ

Lok sabha polls: ಬೆಂ. ಗ್ರಾಮಾಂತರ; ಡಾ.ಮಂಜುನಾಥ್‌ ಸ್ಪರ್ಧೆ

Bannerghatta Biological Park: ಚಿರತೆ ಮರಿಗಳಿಗೆ ಉದ್ಯಾನವನದ ಸಿಬ್ಬಂದಿ ಆಸರೆ

Bannerghatta Biological Park: ಚಿರತೆ ಮರಿಗಳಿಗೆ ಉದ್ಯಾನವನದ ಸಿಬ್ಬಂದಿ ಆಸರೆ

Road Dispute: ರಸ್ತೆ ವಿವಾದ; ಪೊಲೀಸ್‌ ಠಾಣೆ ಮೆಟ್ಟಿಲೇರಿದ ಪ್ರಕರಣ

Road Dispute: ರಸ್ತೆ ವಿವಾದ; ಪೊಲೀಸ್‌ ಠಾಣೆ ಮೆಟ್ಟಿಲೇರಿದ ಪ್ರಕರಣ

ನೆಲಮಂಗಲ: ಸಾಹಿತ್ಯ ಸಮ್ಮೇಳನ- ಕಂಪನಿಗಳು ಕನ್ನಡಿಗರಿಗೆ ಉದ್ಯೋಗ ನೀಡಲಿ

ನೆಲಮಂಗಲ: ಸಾಹಿತ್ಯ ಸಮ್ಮೇಳನ- ಕಂಪನಿಗಳು ಕನ್ನಡಿಗರಿಗೆ ಉದ್ಯೋಗ ನೀಡಲಿ

MUST WATCH

udayavani youtube

ರಾಜಕೀಯದತ್ತ ಒಲವು ತೋರಿದ್ರಾ ಚಕ್ರವರ್ತಿ ಸೂಲಿಬೆಲೆ ?

udayavani youtube

ಇಲ್ಲಿ ಗ್ರಾಹಕರನ್ನ ನೋಡಿಕೊಳ್ಳುವ ರೀತಿಗೆ ಎಂಥಹವರೂ ಫಿದಾ ಆಗ್ತಾರೆ

udayavani youtube

ಶ್ರೀ ಪಣಿಯಾಡಿ ಅನಂತಪದ್ಮನಾಭ ದೇವಸ್ಥಾನ,ಪಣಿಯಾಡಿ|

udayavani youtube

Rameshwaram Cafe: ಹೇಗಾಯ್ತು ಸ್ಫೋಟ? ಭಯಾನಕ ಸಿಸಿಟಿವಿ ದೃಶ್ಯ ನೋಡಿ

udayavani youtube

ಅಯೋಧ್ಯೆ ಶ್ರೀ ರಾಮನ ಸೇವೆಯಲ್ಲಿ ಉಡುಪಿಯ ಬೆಳ್ಕಳೆ ಚಂಡೆ ಬಳಗ

ಹೊಸ ಸೇರ್ಪಡೆ

10-uv-fusion

Challenges of Life: ಬದುಕಿನ ಸವಾಲುಗಳ ಎದುರಿಸಿ ಮುನ್ನಡೆಯೋಣ…

Kannada ನಾಮಫ‌ಲಕ; ತತ್‌ಕ್ಷಣ ಕ್ರಮ ಬೇಡ: ಹೈಕೋರ್ಟ್‌

Kannada ನಾಮಫ‌ಲಕ; ತತ್‌ಕ್ಷಣ ಕ್ರಮ ಬೇಡ: ಹೈಕೋರ್ಟ್‌

Udupi; ಬಿಜೆಪಿ ಭದ್ರಕೋಟೆಯಾಗಿರುವ ಕರಾವಳಿ-ಮಲೆನಾಡಿನ ಕ್ಷೇತ್ರ

Udupi; ಬಿಜೆಪಿ ಭದ್ರಕೋಟೆಯಾಗಿರುವ ಕರಾವಳಿ-ಮಲೆನಾಡಿನ ಕ್ಷೇತ್ರ

ಪಿಯು ಮೌಲ್ಯಮಾಪನಕ್ಕೆ ವಿರೋಧ

Second PU ಮೌಲ್ಯಮಾಪನಕ್ಕೆ ವಿರೋಧ

1-24-tuesday

Daily Horoscope: ಹಿತವಾದುದನ್ನು ಮಾತ್ರ ಆರಿಸಿಕೊಳ್ಳುವುದು ವಿವೇಕಿಗಳ ಲಕ್ಷಣ

Thanks for visiting Udayavani

You seem to have an Ad Blocker on.
To continue reading, please turn it off or whitelist Udayavani.