ಅಂತರಸಂತೆ ಅರಣ್ಯದಲಿ ಬೆಂಕಿರೇಖೆ ಕಾರ್ಯಾಚರಣೆ ಬಹುತೇಕ ಪೂರ್ಣ


Team Udayavani, Jan 16, 2021, 12:56 PM IST

Forest fire line operation

ಎಚ್‌.ಡಿ.ಕೋಟೆ: ತಾಲೂಕಿನ ಅಂತರಸಂತೆ ಅರಣ್ಯ ವ್ಯಾಪ್ತಿಯ ನಾಗರಹೊಳೆ ಹುಲಿ ಸಂರಕ್ಷಿತ ಅರಣ್ಯ ಪ್ರದೇಶದಲ್ಲಿ ಕಾಡ್ಗಿಚ್ಚು ತಡೆತಟ್ಟುವ ಉದ್ದೇಶದಿಂದ 238 ಕಿ.ಮೀ. ವ್ಯಾಪ್ತಿಯಲ್ಲಿ ಬೆಂಕಿ ರೇಖೆ (ಫೈರ್‌ಲೈನ್‌) ಕಾರ್ಯಾಚರಣೆ ಪೂರ್ಣ ಗೊಳಿಸಿರುವುದಾಗಿ ಅರಣ್ಯ ಇಲಾಖೆಯಿಂದ ತಿಳಿದು ಬಂದಿದೆ.

ತಾಲೂಕು ವಿಶಾಲವಾದ ಅರಣ್ಯ ಪ್ರದೇಶ ಹೊಂದಿದ್ದು, ಏಷ್ಯಾದಲ್ಲೇ ಹೆಚ್ಚಿನ ಹುಲಿ ಅವಾಸ ಸ್ಥಾನ ಅನ್ನುವ ಕೀರ್ತಿಗೆ ಎಚ್‌.ಡಿ.ಕೋಟೆ ಪಾತ್ರ ವಾಗಿದೆ. ಅಲ್ಲದೇ ಕಪ್ಪು ಚಿರತೆ, ಕಾಡಾನೆಗಳು, ಕಾಡೆಮ್ಮೆ, ಜಿಂಕೆಗಳು, ಕಡವೆ ಸೇರಿದಂತೆ ವನ್ಯ ಜೀವಿಗಳ ಅವಾಸಸ್ಥಾನ ಅನಿಸಿಕೊಂಡಿರುವ ತಾಲೂಕಿನಲ್ಲಿ ವಿಶಾಲವಾಗಿ ಬಂಡೀಪುರ ಮತ್ತು ನಾಗರಹೊಳೆ ಅರಣ್ಯ ಪ್ರದೇಶ ಆವರಿಸಿಕೊಂಡಿದೆ.

ಬೇಸಿಗೆ ಕಾಲ ಆರಂಭಗೊಳ್ಳುತ್ತಿದ್ದಂತೆಯೇ ಕಾಡ್ಗಿಚ್ಚು ಕಾಣಿಸಿಕೊಂಡು ಬಹುತೇಕ ಅರಣ್ಯ ಸಂಪತ್ತು ನಾಶವಾಗುವುದರ ಜೊತೆಗೆ ವನ್ಯಜೀವಿ ಗಳ ಜೀವಕ್ಕೂ ಸಂಚಕಾರ ಬಂದಿತ್ತು. ಹೀಗಾಗಿ ಅರಣ್ಯದ ಸಂರಕ್ಷಣೆ ದೃಷ್ಟಿಯಿಂದ ಸರ್ಕಾರ ಪ್ರತಿವರ್ಷ ಅರಣ್ಯ ಇಲಾಖೆ ಮೂಲಕ ವಿಶೇಷ ಅನುದಾನ ಬಿಡುಗಡೆಗೊಳಿಸಿ ಅರಣ್ಯದಲ್ಲಿ ಅಗತ್ಯ ಇರುವ ಕಡೆಗಳಲ್ಲಿ ಕಡ್ಡಾಯವಾಗಿ ಬೆಂಕಿ ರೇಖೆ ಗಳನ್ನು ನಿರ್ಮಿಸಿ ಕಾಡ್ಗಿಚ್ಚು ಅರಣ್ಯ ಆವರಿಸದಂತೆ ಕಟ್ಟುನಿಟ್ಟಿನ ಕ್ರಮ ಕೈಗೊಳ್ಳಲು ಆದೇಶ ನೀಡುತ್ತದೆ.

ಇದನ್ನೂ ಓದಿ:ಬೇಗೂರು ಬಳಿ ಮಿತಿಮೀರಿದ ಕಾಡಾನೆ ದಾಳಿ

ಅದರಂತೆಯೇ ಸ್ಥಳೀಯ ಅರಣ್ಯ ಇಲಾಖೆ ಅಧಿಕಾರಿಗಳು ಸ್ಥಳೀಯರ ಅದರಲ್ಲೂ ವಿಶೇಷ ವಾಗಿ ಕಾಡಂಚಿನಲ್ಲಿ ವಾಸವಾಗಿರುವ ಆದಿವಾಸಿ ಗರನ್ನು ಬಳಕೆ ಮಾಡಿಕೊಂಡು ಅರಣ್ಯದೊಳಗೆ ಬೆಂಕಿ ರೇಖೆ ನಿರ್ಮಿಸಲಾಗುತ್ತಿದೆ. ಈ ಬಾರಿಯೂ ನಾಗರಹೊಳೆ ಹುಲಿ ಸಂರಕ್ಷಿತ ಪ್ರದೇಶದ ಅಂತರ ಸಂತೆ ಅರಣ್ಯ ವಲಯಕ್ಕೆ ಸೇರಿದ ಸುಮಾರು 236 ಕಿ.ಮೀ. ಅರಣ್ಯ ಪ್ರದೇಶದಲ್ಲಿ ಫೈರ್‌ಲೈನ್‌ ಮಾಡಿದ ಜಾಗಗಳಲ್ಲಿ ಶೇಖರಣೆಯಾಗಿದ್ದ ತ್ಯಾಜ್ಯ ವಸ್ತುಗಳಿಗೆ ಬೆಂಕಿ ಹೊತ್ತಿಸುವ ಕಾರ್ಯ ನಡೆಯುತ್ತಿದೆ.

ಆದಿವಾಸಿಗರಿಗೆ ಆದ್ಯತೆ: ಅರಣ್ಯದಲ್ಲಿ ಬೆಂಕಿರೇಖೆ ನಿರ್ಮಾಣ ಮತ್ತು ಅರಣ್ಯ ಸಂರಕ್ಷಣೆಗೆ ಕಾಡಂ ಚಿನಲ್ಲಿ ವಾಸಿವಾಗಿರುವ ಆದಿವಾಸಿಗರನ್ನೇ ಬಹು ಸಂಖ್ಯೆಯಲ್ಲಿ ಬಳಕೆ ಮಾಡಿಕೊಳ್ಳಲಾಗುತ್ತಿದೆ. ಜೊತೆಗೆ ಅರಣ್ಯ ಇಲಾಖೆಗೆ ಅಗತ್ಯವಾಗಿ ಬೇಕಾದ ವಾಚರ್‌ಗಳು, ರಾತ್ರಿ ಕಾವಲುಗಾರರು ಸೇರಿದಂತೆ ಇನ್ನಿತರ ಕೆಲಸಗಳಿಗೆ ಹೆಚ್ಚಿನ ಆದ್ಯತೆ ಆದಿವಾಸಿ ಗರೇ ನೀಡಲಾಗಿದೆ. ಈಗಲೂ ಬಹುತೇಕ ಅರಣ್ಯ ಇಲಾಖೆಗಳಲ್ಲಿ ಕಾರ್ಯನಿರ್ವಹಿಸುವವರಲ್ಲಿ ಆದಿವಾಸಿಗರೇ ಬಹುಸಂಖ್ಯೆಯಲ್ಲಿದ್ದಾರೆ. ತುಂತುರು ಮಳೆಯಿಂದ ಉಪಯೋಗವಿಲ್ಲ: ಪ್ರತಿವರ್ಷ ಜೂನ್‌ ಮೊದಲ ವಾರದಲ್ಲಿ ಆರಂಭ ಗೊಳ್ಳುತ್ತಿದ್ದ ಮಳೆ ಈ ಬಾರಿ ಆಗಾಗ ಬೀಳುತ್ತಿದೆ ಯಾದರೂ ಅರಣ್ಯಕ್ಕೆ ಇರದಿಂದ ಏನೂ ಉಪ ಯೋಗವಿಲ್ಲ.

ಆಗಾಗ ಬೀಳುವ ಮಳೆ ಸತತ ವಾರಗಟ್ಟಲೆ ಸುರಿದರೆ ಭೂಮಿ ತಂಪಾಗಿ ಹಸಿರು ಬೆಳೆಯುವುದರಿಂದ ಅರಣ್ಯಕ್ಕೆ ಬೆಂಕಿ ಬೀಳುವು ದಿಲ್ಲ ಅನ್ನಬಹುದು. ಇಲ್ಲಿ ಆಗಾಗ ತುಂತುರು ಮಳೆ ಬೀಳುತ್ತಿರುವುದರಿಂದ ಉಪಯೋಗವಿಲ್ಲ. ಒಟ್ಟಾರೆ ಹೇಳುವುದಾದರೆ ಬೇಸಿಗೆ ಆರಂಭ ಗೊಳ್ಳುತ್ತಿರುವುದರಿಂದ ತಾಲೂಕಿನ ಬಂಡೀಪುರ, ನಾಗರಹೊಳೆ ಅರಣ್ಯ ಪ್ರದೇಶಗಳ ಬೆಂಕಿರೇಖೆ ಕಾರ್ಯಾಚರಣೆ ಬಹುತೇಕ ಪೂರ್ಣಗೊಂಡಿದ್ದು ಯಾವುದೇ ಅನಾಹುತವಾಗುವುದಿಲ್ಲ ಅನ್ನುವ ವಿಶ್ವಾಸ ಅರಣ್ಯ ಇಲಾಖೆ ಮೂಲಗಳಿಂದ ಕೇಳಿ ಬರುತ್ತಿದೆ.

ಎಚ್‌.ಬಿ.ಬಸವರಾಜು

ಟಾಪ್ ನ್ಯೂಸ್

1-weweew

Congress; ತಮ್ಮ ಆಸ್ತಿ ಉಳಿಕೆಗೆ ರಾಜೀವ್‌ರಿಂದ ಉತ್ತರಾಧಿಕಾರ ಕಾಯ್ದೆ ರದ್ದು: ಪಿಎಂ

yogi-3

Congress ಬಂದರೆ ತಾಲಿಬಾನ್‌ ಶೈಲಿ ಆಡಳಿತ: ಯೋಗಿ

supreem

WhatsApp ಮೂಲಕ ವಕೀಲರಿಗೆ ಎಲ್ಲ ಮಾಹಿತಿ: ಸುಪ್ರೀಂ ಕೋರ್ಟ್‌

jairam ramesh

Wealth redistribution ಬಗ್ಗೆ ಕೈ ಪ್ರಣಾಳಿಕೆಯಲ್ಲಿ ಎಲ್ಲಿದೆ?: ಜೈರಾಂ

1-wqewq-eqw

Modi ಕೈ ಬಲಪಡಿಸಲು, ದ.ಕ. ಸಮಗ್ರ ಸುಧಾರಣೆಗಾಗಿ ಬಿಜೆಪಿಗೆ ಮತ ನೀಡಿ: ಚೌಟ

1-asasas

Naxal ಬಾಧಿತ ಮತಗಟ್ಟೆಗಳ ಭದ್ರತೆಗೆ ಹೆಚ್ಚುವರಿ ಆದ್ಯತೆ: ಮುಲ್ಲೈ ಮುಗಿಲನ್‌

D. K. Shivakumar: ಡೆತ್‌, ಬರ್ತ್‌ ಯಾವ ಟ್ಯಾಕ್ಸೂ ಇಲ್ಲ; ಡಿಕೆಶಿ

D. K. Shivakumar: ಡೆತ್‌, ಬರ್ತ್‌ ಯಾವ ಟ್ಯಾಕ್ಸೂ ಇಲ್ಲ; ಡಿಕೆಶಿ


ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು

ಬೇಸಿಗೆ ಬಿಸಿಯೂಟ: 32,173 ಮಕ್ಕಳ ನೋಂದಣಿ

ಬೇಸಿಗೆ ಬಿಸಿಯೂಟ: 32,173 ಮಕ್ಕಳ ನೋಂದಣಿ

Devanahalli: ಬೇಸಿಗೆ ತಾಪಮಾನ ಹೆಚ್ಚಳ, ಇರಲಿ ಎಚ್ಚರ

Devanahalli: ಬೇಸಿಗೆ ತಾಪಮಾನ ಹೆಚ್ಚಳ, ಇರಲಿ ಎಚ್ಚರ

Doddaballapur: ಜಾತೀಯತೆಗೆ ಮಣೆ ಹಾಕದ ಕ್ಷೇತ್ರದ ‌ಮತದಾರರು

Doddaballapur: ಜಾತೀಯತೆಗೆ ಮಣೆ ಹಾಕದ ಕ್ಷೇತ್ರದ ‌ಮತದಾರರು

Lok Sabha polls: ಲೋಕಸಭೆ ಚುನಾವಣೆಯಲ್ಲಿ ಇಂದಿರಾಗಾಂಧಿ ನೆನಪು

Lok Sabha polls: ಲೋಕಸಭೆ ಚುನಾವಣೆಯಲ್ಲಿ ಇಂದಿರಾಗಾಂಧಿ ನೆನಪು

10

Electricity problem: ಬೇಸಿಗೆ ಬೆನ್ನಲ್ಲೇ ಕಾಡುತ್ತಿದೆ ವಿದ್ಯುತ್‌ ಸಮಸ್ಯೆ

MUST WATCH

udayavani youtube

ವೈಭವದ ಹಿರಿಯಡ್ಕ ಸಿರಿಜಾತ್ರೆ ಸಂಪನ್ನ

udayavani youtube

ಯಾವೆಲ್ಲಾ ಚರ್ಮದ ಕಾಯಿಲೆಗಳಿವೆ ಹಾಗೂ ಪರಿಹಾರಗಳೇನು?

udayavani youtube

Mangaluru ಹೆಬ್ಬಾವಿನ ದೇಹದಲ್ಲಿ ಬರೋಬ್ಬರಿ 11 ಬುಲೆಟ್‌ ಪತ್ತೆ!

udayavani youtube

ನನ್ನ ಕಥೆ ನಿಮ್ಮ ಜೊತೆ

udayavani youtube

‘ಕಸಿ’ ಕಟ್ಟುವ ಸುಲಭ ವಿಧಾನ

ಹೊಸ ಸೇರ್ಪಡೆ

1-weweew

Congress; ತಮ್ಮ ಆಸ್ತಿ ಉಳಿಕೆಗೆ ರಾಜೀವ್‌ರಿಂದ ಉತ್ತರಾಧಿಕಾರ ಕಾಯ್ದೆ ರದ್ದು: ಪಿಎಂ

yogi-3

Congress ಬಂದರೆ ತಾಲಿಬಾನ್‌ ಶೈಲಿ ಆಡಳಿತ: ಯೋಗಿ

supreem

WhatsApp ಮೂಲಕ ವಕೀಲರಿಗೆ ಎಲ್ಲ ಮಾಹಿತಿ: ಸುಪ್ರೀಂ ಕೋರ್ಟ್‌

jairam ramesh

Wealth redistribution ಬಗ್ಗೆ ಕೈ ಪ್ರಣಾಳಿಕೆಯಲ್ಲಿ ಎಲ್ಲಿದೆ?: ಜೈರಾಂ

1-wqewq-eqw

Modi ಕೈ ಬಲಪಡಿಸಲು, ದ.ಕ. ಸಮಗ್ರ ಸುಧಾರಣೆಗಾಗಿ ಬಿಜೆಪಿಗೆ ಮತ ನೀಡಿ: ಚೌಟ

Thanks for visiting Udayavani

You seem to have an Ad Blocker on.
To continue reading, please turn it off or whitelist Udayavani.