ನೀತಿ ಸಂಹಿತೆ ಉಲ್ಲಂಘನೆ ತಪಾಸಣೆಗೆ ತಂಡಗಳ ರಚನೆ


Team Udayavani, Mar 30, 2018, 12:20 PM IST

TAX.jpg

ಹೊಸಕೋಟೆ: ವಿಧಾನಸಭಾ ಚುನಾವಣೆ ಹಿನ್ನೆಲೆಯಲ್ಲಿ ತಾಲೂಕಿನಲ್ಲಿ ಮಾ.27ರಿಂದ ಜಾರಿಗೊಂಡಿರುವ ನೀತಿ ಸಂಹಿತೆಯ ಉಲ್ಲಂಘನೆಯ ಪ್ರಕರಣಗಳನ್ನು ತಪಾಸಣೆ ಮಾಡಲು ವಿವಿಧ ತಂಡಗಳನ್ನು ರಚಿಸಲಾಗಿದೆ ಎಂದು ತಹಶೀಲ್ದಾರ್‌, ಸಹಾಯಕ ಚುನಾವಣಾಧಿಕಾರಿ ನಾರಾಯಣ ವಿಠಲ್‌ ತಿಳಿಸಿದ್ದಾರೆ.

ಸರ್ಕಾರದ ವಿವಿಧ ಇಲಾಖೆಗಳ 36 ಅಧಿಕಾರಿ, ಸಿಬ್ಬಂದಿ, ಪೊಲೀಸರನ್ನು ಒಳಗೊಂಡ 9 ಸಂಚಾರ ತಂಡ ರಚಿಸಲಾಗಿದ್ದು 3 ಪಾಳಿಗಳಲ್ಲಿ 24 ಗಂಟೆಗಳೂ ಕಾರ್ಯನಿರ್ವಹಿಸುವರು. ವಾಹನಗಳಲ್ಲಿ ಅಕ್ರಮವಾಗಿ ಹಣ, ಮಾದಕ ವಸ್ತು, ಉಡುಗೊರೆಯಂತಹ ವಸ್ತುಗಳನ್ನು ಸಾಗಣೆ ಮಾಡುವುದನ್ನು ಪತ್ತೆಹಚ್ಚಲು ಗಡಿ ಪ್ರದೇಶಗಳಲ್ಲಿ ವಾಹನಗಳನ್ನು ತಪಾಸಣೆ ಮಾಡಲು 5 ಚೆಕ್‌ಪೋಸ್ಟ್‌ಗಳನ್ನು ನಿರ್ಮಿಸಲಾಗಿದ್ದು ಅಧಿಕಾರಿಗಳೊಂದಿಗೆ ಸೂಕ್ತ ಪೊಲೀಸ್‌ ಸಿಬ್ಬಂದಿ ನಿಯೋಜಿಸಲಾಗಿದೆ.

ಇದರೊಂದಿಗೆ ಸಹಾಯಕ ವೆಚ್ಚ ಪರಿವೀಕ್ಷಕರನ್ನು ನೇಮಿಸಿದ್ದು ಯಾವುದೇ ಸಭೆ, ಸಮಾರಂಭಗಳನ್ನು ವಿಡಿಯೋ ಮಾಡಲು 3 ವಿಡಿಯೋ ಸರ್ವೇಲೆನ್ಸ್‌ ತಂಡ, 3 ವೀಕ್ಷಣಾ ತಂಡಗಳನ್ನು ರಚಿಸಲಾಗಿದೆ. ರಾಜಕೀಯ ಪಕ್ಷಗಳಿಗೆ ಸಂಬಂಧಪಟ್ಟಂತೆ ಮುದ್ರಣ, ದೃಶ್ಯ ಮಾಧ್ಯಮಗಳಲ್ಲಿ ಪ್ರಕಟವಾಗುವ ಸುದ್ದಿ, ಜಾಹೀರಾತುಗಳ ಬಗ್ಗೆಯೂ ನಿಗಾವಹಿಸಿ ಯಾವುದೇ ಹಣ ಪಡೆದು ಪ್ರಕಟಿಸಿದ ಸುದ್ದಿಗಳ ಬಗ್ಗೆ ಸಲ್ಲಿಸುವ ದೂರುಗಳನ್ನು ದಾಖಲಿಸಿಕೊಂಡು ತನಿಖೆ ಕೈಗೊಳ್ಳಲಾಗುವುದು.

ಈಗಾಗಲೇ ಗ್ರಾಮೀಣ ಪ್ರದೇಶಗಳಲ್ಲಿ ಅಳವಡಿಸಿದ್ದ ಫ್ಲೆಕ್ಸ್‌, ಬ್ಯಾನರ್‌ಗಳನ್ನು ಆಯಾ ಗ್ರಾಪಂ ಸಿಬ್ಬಂದಿ, ಪಟ್ಟಣದ ವ್ಯಾಪ್ತಿಯಲ್ಲಿ ನಗರಸಭೆ ಸಿಬ್ಬಂದಿ ತೆರವುಗೊಳಿಸಿದ್ದಾರೆ. ಆದರೂ ಯಾವುದೇ ಶಾಶ್ವತವಾಗಿ ಅಳವಡಿಸಿರುವ ನಾಮಫ‌ಲಕಗಳಲ್ಲಿ ಪಕ್ಷದ ಚಿಹ್ನೆ, ಮುಖಂಡರ ಭಾವಚಿತ್ರಗಳಿದ್ದಲ್ಲಿ ಅವುಗಳನ್ನು ತಾತ್ಕಾಲಿಕವಾಗಿ ಮುಚ್ಚಲು ಸೂಚಿಸಲಾಗಿದೆ. ಯಾವುದೇ ಸಾರ್ವಜನಿಕ ಸಭೆ, ಕಾರ್ಯಕ್ರಮಗಳನ್ನು ಏರ್ಪಡಿಸಲು ಮುಂಚಿತವಾಗಿಯೇ ಚುನಾವಣಾಧಿಕಾರಿಗಳಿಂದ ಕಡ್ಡಾಯವಾಗಿ ಲಿಖೀತ ಅನುಮತಿ ಪಡೆಯಬೇಕಾಗಿದೆ.

ಸಾಮಾನ್ಯ ಧಾರ್ಮಿಕ ಕಾರ್ಯಗಳಿಗೆ ಅನುಮತಿ ಅವಶ್ಯವಿಲ್ಲವಾದರೂ ರಾಜಕೀಯ ಪಕ್ಷಗಳ ಮುಖಂಡರು ಪಾಲ್ಗೊಂಡಲ್ಲಿ ಪೂರ್ವಾನುಮತಿ ಪಡೆಯಬೇಕು. ರಾತ್ರಿ 10 ಗಂಟೆಯಿಂದ ಬೆಳಗ್ಗೆ 6 ಗಂಟೆಯವರೆಗೂ ಧ್ವನಿವರ್ಧಕ ಬಳಸುವುದನ್ನು ಸಂಪೂರ್ಣವಾಗಿ ನಿಷೇಧಿಸಲಾಗಿದೆ. ಚುನಾವಣಾ ಪ್ರಕ್ರಿಯೆ ಮುಕ್ತಾಯಗೊಳ್ಳುವವರೆಗೂ ನೀತಿ ಸಂಹಿತೆ ಜಾರಿಯಲ್ಲಿದ್ದು ಯಾವುದೇ ಉಲ್ಲಂಘನೆಗಳು ಕಂಡುಬಂದಲ್ಲಿ ಆಯೋಗದ ಸೂಚನೆಯನ್ವಯ ಕ್ರಮ ಕೈಗೊಳ್ಳಲಾಗುವುದು ಎಂದು ತಿಳಿಸಿದ್ದಾರೆ.

ಟಾಪ್ ನ್ಯೂಸ್

16-

Chikkaballapur: ಕೃಷಿ ಹೊಂಡದಲ್ಲಿ ಈಜಲು ಹೋಗಿ ಇಬ್ಬರು ವಿದ್ಯಾರ್ಥಿಗಳು ಸಾವು

13

Gangolli: ಮಹಿಳೆಗೆ ಬೈಕ್‌ ಢಿಕ್ಕಿ; ಗಾಯ

HDK ಹೇಳುತ್ತಿದ್ದದ್ದು ಪ್ರಜ್ವಲ್‌ ಪೆನ್‌ಡ್ರೈವ್‌ ಇರಬೇಕು: ಜಮೀರ್‌

HDK ಹೇಳುತ್ತಿದ್ದದ್ದು ಪ್ರಜ್ವಲ್‌ ಪೆನ್‌ಡ್ರೈವ್‌ ಇರಬೇಕು: ಜಮೀರ್‌

15-hunsur

Hunsur: ಕುಡಿತದ ಚಟಕ್ಕೆ ಯುವಕ ಬಲಿ

Koppala; ಸಿಎಂ ಸಿದ್ದರಾಮಯ್ಯ ಎದುರೇ ಸ್ಪೋಟಗೊಂಡ ಗಂಗಾವತಿ ಕಾಂಗ್ರೆಸ್ ಬಣ ಬಡಿದಾಟ

Koppala; ಸಿಎಂ ಸಿದ್ದರಾಮಯ್ಯ ಎದುರೇ ಸ್ಪೋಟಗೊಂಡ ಗಂಗಾವತಿ ಕಾಂಗ್ರೆಸ್ ಬಣ ಬಡಿದಾಟ

12

Karkala: ಹಿಮ್ಮುಖ ಚಲಿಸಿದ ಟಿಪ್ಪರ್‌; ಸ್ಕೂಟರ್‌ ಜಖಂ

ಮಗನ ಪರ ಸೆರಗೊಡ್ಡಿ ಮತಯಾಚಿಸಿದ ಸಚಿವೆ ಹೆಬ್ಬಾಳಕರ್

ಮಗನ ಪರ ಸೆರಗೊಡ್ಡಿ ಮತಯಾಚಿಸಿದ ಸಚಿವೆ ಹೆಬ್ಬಾಳಕರ್


ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು

8

Devanahalli: ಬೇಸಿಗೆ ಬಿಸಿ; ಹುರುಳಿಕಾಯಿ ದರ ದುಬಾರಿ

ಬೇಸಿಗೆ ಬಿಸಿಯೂಟ: 32,173 ಮಕ್ಕಳ ನೋಂದಣಿ

ಬೇಸಿಗೆ ಬಿಸಿಯೂಟ: 32,173 ಮಕ್ಕಳ ನೋಂದಣಿ

Devanahalli: ಬೇಸಿಗೆ ತಾಪಮಾನ ಹೆಚ್ಚಳ, ಇರಲಿ ಎಚ್ಚರ

Devanahalli: ಬೇಸಿಗೆ ತಾಪಮಾನ ಹೆಚ್ಚಳ, ಇರಲಿ ಎಚ್ಚರ

Doddaballapur: ಜಾತೀಯತೆಗೆ ಮಣೆ ಹಾಕದ ಕ್ಷೇತ್ರದ ‌ಮತದಾರರು

Doddaballapur: ಜಾತೀಯತೆಗೆ ಮಣೆ ಹಾಕದ ಕ್ಷೇತ್ರದ ‌ಮತದಾರರು

Lok Sabha polls: ಲೋಕಸಭೆ ಚುನಾವಣೆಯಲ್ಲಿ ಇಂದಿರಾಗಾಂಧಿ ನೆನಪು

Lok Sabha polls: ಲೋಕಸಭೆ ಚುನಾವಣೆಯಲ್ಲಿ ಇಂದಿರಾಗಾಂಧಿ ನೆನಪು

MUST WATCH

udayavani youtube

ವೈಭವದ ಹಿರಿಯಡ್ಕ ಸಿರಿಜಾತ್ರೆ ಸಂಪನ್ನ

udayavani youtube

ಯಾವೆಲ್ಲಾ ಚರ್ಮದ ಕಾಯಿಲೆಗಳಿವೆ ಹಾಗೂ ಪರಿಹಾರಗಳೇನು?

udayavani youtube

Mangaluru ಹೆಬ್ಬಾವಿನ ದೇಹದಲ್ಲಿ ಬರೋಬ್ಬರಿ 11 ಬುಲೆಟ್‌ ಪತ್ತೆ!

udayavani youtube

ನನ್ನ ಕಥೆ ನಿಮ್ಮ ಜೊತೆ

udayavani youtube

‘ಕಸಿ’ ಕಟ್ಟುವ ಸುಲಭ ವಿಧಾನ

ಹೊಸ ಸೇರ್ಪಡೆ

16-

Chikkaballapur: ಕೃಷಿ ಹೊಂಡದಲ್ಲಿ ಈಜಲು ಹೋಗಿ ಇಬ್ಬರು ವಿದ್ಯಾರ್ಥಿಗಳು ಸಾವು

13

Gangolli: ಮಹಿಳೆಗೆ ಬೈಕ್‌ ಢಿಕ್ಕಿ; ಗಾಯ

HDK ಹೇಳುತ್ತಿದ್ದದ್ದು ಪ್ರಜ್ವಲ್‌ ಪೆನ್‌ಡ್ರೈವ್‌ ಇರಬೇಕು: ಜಮೀರ್‌

HDK ಹೇಳುತ್ತಿದ್ದದ್ದು ಪ್ರಜ್ವಲ್‌ ಪೆನ್‌ಡ್ರೈವ್‌ ಇರಬೇಕು: ಜಮೀರ್‌

15-hunsur

Hunsur: ಕುಡಿತದ ಚಟಕ್ಕೆ ಯುವಕ ಬಲಿ

Koppala; ಸಿಎಂ ಸಿದ್ದರಾಮಯ್ಯ ಎದುರೇ ಸ್ಪೋಟಗೊಂಡ ಗಂಗಾವತಿ ಕಾಂಗ್ರೆಸ್ ಬಣ ಬಡಿದಾಟ

Koppala; ಸಿಎಂ ಸಿದ್ದರಾಮಯ್ಯ ಎದುರೇ ಸ್ಪೋಟಗೊಂಡ ಗಂಗಾವತಿ ಕಾಂಗ್ರೆಸ್ ಬಣ ಬಡಿದಾಟ

Thanks for visiting Udayavani

You seem to have an Ad Blocker on.
To continue reading, please turn it off or whitelist Udayavani.