ಎಲ್ಲಾ ವರ್ಗಗಳ ಅಭಿವೃದ್ಧಿ ಕಾಂಗ್ರೆಸ್ಸಿನಿಂದ ಮಾತ್ರ ಸಾಧ್ಯ


Team Udayavani, Jun 11, 2022, 12:47 PM IST

Untitled-1

ದೇವನಹಳ್ಳಿ: ಕೇಂದ್ರ, ರಾಜ್ಯ ಸರ್ಕಾರ ರೈತರ, ಸಾಮಾನ್ಯಜನರ, ಬಡವರ ಸಂಕಷ್ಟಕ್ಕೆ ಸ್ಪಂದಿಸುವ ಸರ್ಕಾರವಲ್ಲ. ಎಲ್ಲಾ ವರ್ಗಗಳ ಅಭಿವೃದ್ಧಿ ಕಾಂಗ್ರೆಸ್ಸಿ ನಿಂದ ಮಾತ್ರ ಸಾಧ್ಯ. ರಾಜ್ಯದಲ್ಲಿ ಕಾಂಗ್ರೆಸ್‌ ಅಧಿ ಕಾರ ದಲ್ಲಿದ್ದಿದ್ದರೆ ಇಷ್ಟೊತ್ತಿಗೆ ಎತ್ತಿನಹೊಳೆ ಯೋಜನೆ ಕಾಮಗಾರಿ ಮುಗಿಸಿ ನೀರು ಹರಿಯುತ್ತಿತ್ತು ಎಂದು ಕೇಂದ್ರ ಮಾಜಿ ಸಚಿವ ಎಂ.ವೀರಪ್ಪ ಮೊಯಿಲಿ ತಿಳಿಸಿದರು.

ಬೆಂ.ಗ್ರಾ. ಜಿಲ್ಲಾ ಕಾಂಗ್ರೆಸ್‌ ವತಿಯಿಂದ ಬೆಂಗಳೂರಿನಲ್ಲಿ ಹಮ್ಮಿಕೊಂಡಿದ್ದ ಕಾಂಗ್ರೆಸ್‌ ಜಿಲ್ಲಾ ಉಪಾಧ್ಯಕ್ಷರ ಆಯ್ಕೆ ಕಾರ್ಯಕ್ರಮದಲ್ಲಿ ಕಾಂಗ್ರೆಸ್‌ ಜಿಲ್ಲಾ ನೂತನ ಉಪಾಧ್ಯಕ್ಷ ದ್ಯಾವರಹಳ್ಳಿ ವಿ. ಶಾಂತಕುಮಾರ್‌ ಅವರಿಗೆ ಆದೇಶಪತ್ರ ವಿತರಿಸಿ ಮಾತ ನಾಡಿ, ಬಯಲುಸೀಮೆಯ ಪ್ರದೇಶದ ಜನರಿಗೆ ಶಾಶ್ವತ ನೀರಾವರಿ ಯೋಜನೆ ಕಲ್ಪಿಸುವ ದೃಷ್ಟಿಯಿಂದ ಎತ್ತಿನಹೊಳೆ ಯೋಜನೆ ಜಾರಿಗೆ ತರಲಾಗಿದ್ದು, ಕಾಂಗ್ರೆಸ್‌ ಸರ್ಕಾರ ಇದ್ದಾಗ 13 ಸಾವಿರ ಕೋಟಿ ಅನುದಾನ ನೀಡಲಾಗಿತ್ತು. ಬಿಜೆಪಿ ಸರ್ಕಾರ ಬಂದಮೇಲೆ ಎತ್ತಿನಹೊಳೆ ಯೋಜನೆ ಕುಂಠಿತಗೊಂಡಿದೆ ಎಂದರು.

ಕಾಂಗ್ರೆಸ್‌ ಪಕ್ಷ ಅಧಿಕಾರಕ್ಕೆ ತನ್ನಿ: ಸಿದ್ದರಾಮಯ್ಯ ನೇತೃತ್ವದ ಸರ್ಕಾರ ನಾಗವಾರ ಮತ್ತು ಹೆಬ್ಟಾಳ ಶುದ್ಧೀಕರಿಸಿದ ನೀರನ್ನು ಈ ಭಾಗದ ಕೆರೆಗಳಿಗೆ ಹರಿಸುವ ಭಗೀರಥ ಯೋಜನೆಯನ್ನು ಜಾರಿಗೆ ತಂದರು. ಬೆಂಗಳೂರು ಗ್ರಾಮಾಂತರ ಜಿಲ್ಲೆಯ ನಾಲ್ಕು ತಾಲೂಕುಗಳಲ್ಲಿ ಪಕ್ಷವನ್ನು ಸಂಘಟಿಸಿ ನಾಲ್ಕು ತಾಲೂಕುಗಳಲ್ಲೂ ಕಾಂಗ್ರೆಸ್‌ ಶಾಸಕರನ್ನು ಗೆಲ್ಲಿಸಿ 2023ರ ವಿಧಾನಸಭಾ ಚುನಾವಣೆಯಲ್ಲಿ ಕಾಂಗ್ರೆಸ್‌ ಪಕ್ಷವನ್ನು ಅಧಿಕಾರಕ್ಕೆ ತರಬೇಕು. ನೂತನ ಜಿಲ್ಲಾ ಕಾಂಗ್ರೆಸ್‌ ಉಪಾಧ್ಯಕ್ಷ ವಿ.ಶಾಂತಕುಮಾರ್‌ ಪಕ್ಷವನ್ನು ಸಂಘಟಿಸಬೇಕು. ಪ್ರತಿ ಬೂತ್‌ಮಟ್ಟದಲ್ಲಿ ಪಕ್ಷವನ್ನು ಸದೃಢವಾಗಿ ಬಲಪಡಿಸಬೇಕು ಎಂದರು.

ಪಠ್ಯಪುಸ್ತಕಗಳ ಪರಿಷ್ಕರಣೆ ಹೆಸರಲ್ಲಿ ಮಕ್ಕಳ ಹೃದಯದಲ್ಲಿ ಕೋಮುಭಾವನೆ ಬಿತ್ತುವ ಕೆಲಸ ಬಿಜೆಪಿ ಮಾಡುತ್ತಿದೆ. ಮನುಷ್ಯನೇ ಸರಿಯಿಲ್ಲ ಎಂದ ಮೇಲೆ ಅವನು ಕೊಟ್ಟ ವರದಿ ಹೇಗೆ ಸರಿ ಇರಲು ಸಾಧ್ಯವೆಂದು ಪಠ್ಯ ಪರಿಷ್ಕರಣೆ ಸಮಿತಿ ಅಧ್ಯಕ್ಷ ಲೋಹಿತ್‌ ಚಕ್ರತೀರ್ಥನ ವಿರುದ್ಧ ಮೊಯಿಲಿ ಕಿಡಿಕಾರಿದರು.

ಬೂತ್‌ಮಟ್ಟದಿಂದ ಸಂಘಟನೆ: ಬೆಂಗಳೂರು ಗ್ರಾಮಾಂತರ ಜಿಲ್ಲಾ ಕಾಂಗ್ರೆಸ್‌ ನೂತನ ಉಪಾಧ್ಯಕ್ಷ ದ್ಯಾವರಹಳ್ಳಿ ವಿ.ಶಾಂತಕುಮಾರ್‌ ಮಾತನಾಡಿ, ಪಕ್ಷವು ನಮಗೆ ನೀಡಿರುವ ಜವಾಬ್ದಾರಿಯನ್ನು ಪ್ರಾಮಾ ಣಿಕವಾಗಿ ನಿರ್ವಹಿಸುತ್ತೇನೆ. ನಾಲ್ಕು ತಾಲೂಕುಗಳಲ್ಲಿ ಪಕ್ಷವನ್ನು ಬೂತ್‌ಮಟ್ಟದಿಂದ ಸಂಘಟಿಸಲಾಗುವುದು. 2023ರ ವಿಧಾನಸಭಾ ಚುನಾವಣೆಯಲ್ಲಿ ರಾಜ್ಯದಲ್ಲಿ ಕಾಂಗ್ರೆಸ್‌ ಪಕ್ಷವನ್ನು ಅಧಿ ಕಾರಕ್ಕೆ ತರಲು ಶ್ರಮಿಸಲಾಗುವುದು. ಜಿಪಂ ಮತ್ತು ತಾಪಂ ಚುನಾವಣೆಗಳಲ್ಲಿ ಪಕ್ಷದ ಅಭ್ಯರ್ಥಿ ಗಳನ್ನು ಗೆಲ್ಲಿಸಲು ಶ್ರಮವಹಿಸಲಾಗುವುದು ಎಂದರು.

ಪಕ್ಷ ಸಂಘಟನೆಗೆ ಆದ್ಯತೆ ನೀಡಿ: ವಿಧಾನಪರಿಷತ್‌ ಸದಸ್ಯ ಎಸ್‌.ರವಿ ಮಾತನಾಡಿ, ರಾಜ್ಯ ಬಿಜೆಪಿ ಸರ್ಕಾರ ಶೇ.40ರಷ್ಟು ಕಮಿಷನ್‌ ಸರ್ಕಾರವಾಗಿದೆ. ಕೋವಿಡ್‌ ಸಂದರ್ಭದಲ್ಲಿ ಹೆಣದಲ್ಲೂ ಹಣ ಮಾಡಿದ ಸರ್ಕಾರವಾಗಿದೆ. ಭ್ರಷ್ಟಾಚಾರದಲ್ಲಿ ಬಿಜೆಪಿ ಸರ್ಕಾರ ಮುಳುಗಿದೆ. ನೂತನ ಜಿಲ್ಲಾ ಕಾಂಗ್ರೆಸ್‌ ಉಪಾಧ್ಯಕ್ಷ ವಿ. ಶಾಂತಕುಮಾರ್‌ ಪಕ್ಷ ಸಂಘಟನೆಗೆ ಆದ್ಯತೆ ನೀಡಬೇಕು ಎಂದರು.

ಕಾಂಗ್ರೆಸ್‌ ಜಿಲ್ಲಾಧ್ಯಕ್ಷ ಮುನಿಶಾಮಪ್ಪ, ಮಾಜಿ ಶಾಸಕ ವೆಂಕಟಸ್ವಾಮಿ, ಮುನಿನರಸಿಂಹಯ್ಯ, ಕೆಪಿ ಸಿಸಿ ಪ್ರಧಾನ ಕಾರ್ಯ ದರ್ಶಿ ಎ. ಸಿ. ಶ್ರೀನಿ ವಾಸ್‌, ಜಿಲ್ಲಾ ಕಾಂಗ್ರೆಸ್‌ ಪ್ರಚಾರ ಸಮಿತಿ ಅಧ್ಯಕ್ಷ ಚೇತನ್‌ ಗೌಡ, ಬ್ಲಾಕ್‌ ಕಾಂಗ್ರೆಸ್‌ ಅಧ್ಯಕ್ಷ ಪ್ರಸನ್ನ ಕು ಮಾರ್‌, ಪ್ರಧಾನ ಕಾರ್ಯದರ್ಶಿ ಎಸ್‌. ನಾಗೇಗೌಡ, ಜಿಲ್ಲಾ ಯುವ ಕಾಂಗ್ರೆಸ್‌ ಅಧ್ಯಕ್ಷ ಕೆ. ಆರ್‌. ನಾಗೇಶ್‌, ತೂಬಗೆರೆ ಹೋಬಳಿ ಅಧ್ಯಕ್ಷ ರಂಗಪ್ಪ, ಜಿಪಂ ಮಾಜಿ ಅಧ್ಯಕ್ಷ ವಿ.ಪ್ರಸಾದ್‌, ತಿರುವಂಗ ನಾರಾಯ ಣಸ್ವಾಮಿ ಹಾಗೂ ಮತ್ತಿತರರು ಇದ್ದರು.

ಟಾಪ್ ನ್ಯೂಸ್

1-ewqe

Minister ಜಮೀರ್ ಭಾಷಣದ ಅಬ್ಬರಕ್ಕೆ ಡಯಾಸ್ ನ ಗಾಜು ಪುಡಿ ಪುಡಿ!!

ರಾಜ್ಯ ಸರ್ಕಾರ ರೈತರಿಗೆ ಪ್ರಾಮಾಣಿಕವಾಗಿ ತಲುಪಿಸುವ ಕೆಲಸ ಮಾಡಲಿ: ಸಿ.ಟಿ ರವಿ

ರಾಜ್ಯ ಸರ್ಕಾರ ರೈತರಿಗೆ ಪ್ರಾಮಾಣಿಕವಾಗಿ ಹಣ ತಲುಪಿಸುವ ಕೆಲಸ ಮಾಡಲಿ: ಸಿ.ಟಿ ರವಿ

15

Ranveer Singh : ʼಹನುಮಾನ್‌ʼ ನಿರ್ದೇಶಕನ ಸಿನಿಮಾದಲ್ಲಿ ರಣ್ವೀರ್‌ ಸಿಂಗ್‌ ನಟನೆ?

Yadagiri: ದೇಶದಲ್ಲಿ ಕಾಂಗ್ರೆಸ್ ನೆಲ ಕಚ್ಚಿದೆ: ಯತ್ನಾಳ ಟೀಕೆ

Yadagiri: ದೇಶದಲ್ಲಿ ಕಾಂಗ್ರೆಸ್ ನೆಲ ಕಚ್ಚಿದೆ: ಯತ್ನಾಳ ಟೀಕೆ

ಭಾರತದ ಹಿರಿಮೆ ಹೆಚ್ಚಿಸಿದ ಮೋದಿ ಅವರು ಮತ್ತೊಮ್ಮೆ ಪ್ರಧಾನಿಯಾಗಲಿ: ಶಾಸಕ ಜನಾರ್ದನ ರೆಡ್ಡಿ

ಭಾರತದ ಹಿರಿಮೆ ಹೆಚ್ಚಿಸಿದ ಮೋದಿ ಅವರು ಮತ್ತೊಮ್ಮೆ ಪ್ರಧಾನಿಯಾಗಲಿ: ಶಾಸಕ ಜನಾರ್ದನ ರೆಡ್ಡಿ

Central Govt ನಾಲ್ಕಾನೆಯಷ್ಟೂ ಬರ ಪರಿಹಾರ ನೀಡಿಲ್ಲ: ಸಿಎಂ ಸಿದ್ದರಾಮಯ್ಯ

Central Govt ನಾಲ್ಕಾಣೆಯಷ್ಟೂ ಬರ ಪರಿಹಾರ ನೀಡಿಲ್ಲ: ಸಿಎಂ ಸಿದ್ದರಾಮಯ್ಯ

14

Tollywood: ಅಧಿಕೃತವಾಗಿ ರಿವೀಲ್‌ ಆಯಿತು ‘ಕಲ್ಕಿ 2898 ಎಡಿʼ ಸಿನಿಮಾದ ರಿಲೀಸ್‌ ಡೇಟ್


ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು

ಬೇಸಿಗೆ ಬಿಸಿಯೂಟ: 32,173 ಮಕ್ಕಳ ನೋಂದಣಿ

ಬೇಸಿಗೆ ಬಿಸಿಯೂಟ: 32,173 ಮಕ್ಕಳ ನೋಂದಣಿ

Devanahalli: ಬೇಸಿಗೆ ತಾಪಮಾನ ಹೆಚ್ಚಳ, ಇರಲಿ ಎಚ್ಚರ

Devanahalli: ಬೇಸಿಗೆ ತಾಪಮಾನ ಹೆಚ್ಚಳ, ಇರಲಿ ಎಚ್ಚರ

Doddaballapur: ಜಾತೀಯತೆಗೆ ಮಣೆ ಹಾಕದ ಕ್ಷೇತ್ರದ ‌ಮತದಾರರು

Doddaballapur: ಜಾತೀಯತೆಗೆ ಮಣೆ ಹಾಕದ ಕ್ಷೇತ್ರದ ‌ಮತದಾರರು

Lok Sabha polls: ಲೋಕಸಭೆ ಚುನಾವಣೆಯಲ್ಲಿ ಇಂದಿರಾಗಾಂಧಿ ನೆನಪು

Lok Sabha polls: ಲೋಕಸಭೆ ಚುನಾವಣೆಯಲ್ಲಿ ಇಂದಿರಾಗಾಂಧಿ ನೆನಪು

10

Electricity problem: ಬೇಸಿಗೆ ಬೆನ್ನಲ್ಲೇ ಕಾಡುತ್ತಿದೆ ವಿದ್ಯುತ್‌ ಸಮಸ್ಯೆ

MUST WATCH

udayavani youtube

ವೈಭವದ ಹಿರಿಯಡ್ಕ ಸಿರಿಜಾತ್ರೆ ಸಂಪನ್ನ

udayavani youtube

ಯಾವೆಲ್ಲಾ ಚರ್ಮದ ಕಾಯಿಲೆಗಳಿವೆ ಹಾಗೂ ಪರಿಹಾರಗಳೇನು?

udayavani youtube

Mangaluru ಹೆಬ್ಬಾವಿನ ದೇಹದಲ್ಲಿ ಬರೋಬ್ಬರಿ 11 ಬುಲೆಟ್‌ ಪತ್ತೆ!

udayavani youtube

ನನ್ನ ಕಥೆ ನಿಮ್ಮ ಜೊತೆ

udayavani youtube

‘ಕಸಿ’ ಕಟ್ಟುವ ಸುಲಭ ವಿಧಾನ

ಹೊಸ ಸೇರ್ಪಡೆ

1-eewq-ewq

Yadgir; ಮೇ.1 ರಂದು ಕಾಂಗ್ರೆಸ್ ನಾಯಕರ ಸಮಾಗಮ

1-ewqe

Minister ಜಮೀರ್ ಭಾಷಣದ ಅಬ್ಬರಕ್ಕೆ ಡಯಾಸ್ ನ ಗಾಜು ಪುಡಿ ಪುಡಿ!!

ರಾಜ್ಯ ಸರ್ಕಾರ ರೈತರಿಗೆ ಪ್ರಾಮಾಣಿಕವಾಗಿ ತಲುಪಿಸುವ ಕೆಲಸ ಮಾಡಲಿ: ಸಿ.ಟಿ ರವಿ

ರಾಜ್ಯ ಸರ್ಕಾರ ರೈತರಿಗೆ ಪ್ರಾಮಾಣಿಕವಾಗಿ ಹಣ ತಲುಪಿಸುವ ಕೆಲಸ ಮಾಡಲಿ: ಸಿ.ಟಿ ರವಿ

15

Ranveer Singh : ʼಹನುಮಾನ್‌ʼ ನಿರ್ದೇಶಕನ ಸಿನಿಮಾದಲ್ಲಿ ರಣ್ವೀರ್‌ ಸಿಂಗ್‌ ನಟನೆ?

Yadagiri: ದೇಶದಲ್ಲಿ ಕಾಂಗ್ರೆಸ್ ನೆಲ ಕಚ್ಚಿದೆ: ಯತ್ನಾಳ ಟೀಕೆ

Yadagiri: ದೇಶದಲ್ಲಿ ಕಾಂಗ್ರೆಸ್ ನೆಲ ಕಚ್ಚಿದೆ: ಯತ್ನಾಳ ಟೀಕೆ

Thanks for visiting Udayavani

You seem to have an Ad Blocker on.
To continue reading, please turn it off or whitelist Udayavani.