ಗೌರಿ ಗಣೇಶ ಹಬ್ಬಕ್ಕೆ ಬೆಲೆ ಏರಿಕೆಯ ಬಿಸಿ


Team Udayavani, Sep 1, 2019, 3:00 AM IST

gowri-ganes

ದೇವನಹಳ್ಳಿ: ಮಳೆಯ ಅಭಾವ ಹಾಗೂ ಬೆಲೆ ಏರಿಕೆಯ ನಡುವೆಯೂ ಗೌರಿ ಗಣೇಶ ಹಬ್ಬಕ್ಕೆ ಖರೀದಿ ಬರಾಟೆ ಜೋರಾಗಿದ್ದು, ಮಾರುಕಟೆಯಲ್ಲಿ ಜನರು ಹೂ, ಹಣ್ಣು ತರಕಾರಿಗಳನ್ನು ಕೊಳ್ಳುತ್ತಿದ್ದಾರೆ. ಬರಗಾಲ ಇದ್ದರೂ ಜಿಲ್ಲೆಯಲ್ಲಿ ಮಾತ್ರ ಹಬ್ಬದ ಸಂಭ್ರಮಕ್ಕೆ ಯಾವುದೇ ಅಡ್ಡಿ ಇಲ್ಲದೆ ಖರೀದಿ ಭರಾಟೆ ಜೋರಾಗಿ ಸಾಗಿದೆ.

ಹಲವು ದಿನಗಳ ಹಿಂದೆ ಉಂಟಾದ ಮಹಾ ಮಳೆಗೆ ಇಡೀ ಉತ್ತರ ತತ್ತರಿಸಿದರೆ, ಇತ್ತ ಬಯಲು ಸೀಮೆ ಜಿಲ್ಲೆಗಳಲ್ಲಿ ಮಳೆ ಕಾಣದೆ ಹನಿ ನೀರಿಗಾಗಿ ಪರದಾಡುವಂತಾಗಿದೆ. ಈ ವರ್ಷ ಜಿಲ್ಲೆಯಲ್ಲಿ ಗಣೇಶ ಹಬ್ಬದ ಸಂಭ್ರಮಕ್ಕೆ ಬೆಲೆ ಏರಿಕೆ ಬಿಸಿ ಜನರಿಗೆ ತಟ್ಟುತ್ತಿದೆ. ಸತತ 6-7ವರ್ಷಗಳಿಂದ ತೀವ್ರ ಬರಗಾಲಕ್ಕೆ ತುತ್ತಾಗಿರುವ ಜಿಲ್ಲೆ, ಮಳೆ ಕೊರತೆಯಿಂದ ಕೃಷಿ ಉತ್ಪಾದನೆಯಲ್ಲಿಯೂ ಕುಂಠಿತವಾಗಿ ಪ್ರಸಕ್ತ ವರ್ಷವೂ ಸಹ ಜಿಲ್ಲೆಯಲ್ಲಿ ಬರಗಾಲ ಎದುರಾಗಿದೆ.

ಮಣ್ಣನ ಮೂರ್ತಿಗೆ ಬೇಡಿಕೆ: ಪ್ಲಾಸ್ಟರ್‌-ಆಫ್‌-ಪ್ಯಾರಿಸ್‌ನಿಂದ ತಯಾರಿಸಿದ ಗಣೇಶ ಮೂರ್ತಿ ನಿಷೇಧ ಮಾಡಲಾಗಿದ್ದು, ಮಣ್ಣಿನ ಗಣೇಶ ಮೂರ್ತಿಗೆ ಬೇಡಿಕೆ ಹೆಚ್ಚಾಗಿದ್ದು, ಕನಿಷ್ಠ 30ರೂ. ಯಿಂದ 25 ಸಾವಿರದ ವರೆಗೆ ಮೂರ್ತಿಗಳ ಮೂರ್ತಿಗಳು ಮಾರಾಟವಾಗುತ್ತಿವೆ. ಪ್ರತಿ ಹಳ್ಳಿ ಮತ್ತು ನಗರದ ಪ್ರತಿ ಬೀದಿ ಬೀದಿಗಳಲ್ಲಿ ವ್ಯಾಪಾರ ಜೋರಾಗಿದೆ.

ಹೂ, ತರಕಾರಿ ದುಬಾರಿ: ಸುತ್ತಲಿನ ಹಳ್ಳಿ ರೈತರು ಮಾವಿನಸೊಪ್ಪು, ಬಾಳೆದಿಂಡು, ಹೂ, ಹಣ್ಣುಗಳನ್ನು ತಂದು ಹಳೇ ಬಸ್‌ ನಿಲ್ದಾಣ, ಬಜಾರ್‌ ರಸ್ತೆಯಲ್ಲಿ ಮಾರಾಟ ಮಾಡುತ್ತಿದ್ದಾರೆ.ವ್ಯಾಪಾರಿಗಳು ದುಬಾರಿ ಬೆಲೆಗೆ ಪೂಜಾ ಸಾಮಾಗ್ರಿಗಳನ್ನು ಮಾರಾಟ ಮಾಡುತ್ತಿದ್ದರು, ಜನ ಬೆಲೆ ಏರಿಕೆ ಬಗ್ಗೆ ಕಿವಿಗೊಡದೆ ಖರೀದಿಸುತ್ತಿದ್ದಾರೆ. ಮಳೆ ಕೊರತೆಯಿಂದ ಹೂ-ಹಣ್ಣುಗಳು ಬೆಲೆ ಗಗನಕ್ಕೆ ಏರಿದೆ.

ಆದರೂ ಹಬ್ಬ ಆಚರಿಸಬೇಕಾಗಿರುವುದರಿಂದ ಗ್ರಾಹಕರು ಅನಿವಾರ್ಯವಾಗಿ ಖರೀದಿಸುತ್ತಿದ್ದಾರೆ. ಪೂರ್ವಜರ ಕಾಲದಿಂದಲೂ ಗಣೇಶ ಹಬ್ಬವನ್ನು ಆಚರಿಸಿಕೊಂಡು ಬಂದಿದ್ದೇವೆ. ವಸ್ತುಗಳ ಬೆಲೆ ಏರಿಕೆಯಾಗಿವೆ ಎಂಬ ಕಾರಣಕ್ಕೆ ಹಬ್ಬ ಆಚರಣೆ ಮಾಡದಿರಲು ಸಾಧ್ಯವಿಲ್ಲ, ನಮ್ಮ ಆರ್ಥಿಕ ಶಕ್ತಿಯನುಗುಣವಾಗಿ ಆಚರಿಸುತ್ತಿದ್ದೇವೆಂದು ಸಾರ್ವಜನಿಕರು ಹೇಳುತ್ತಾರೆ.

ಹೂ, ಹಣ್ಣು ಗಳ ದರ (ಕೆ.ಜಿ ದರ): ಕನಕಂಬರ 1200 ರೂ, ಮಲ್ಲಿಗೆ-ಕಾಕಡ 800 ರೂ, ಕರಿಷ್ಮ ಗುಲಾಬಿ 160-200 ರೂ, ಸೇವಂತಿಗೆ 200 ರೂ, ಚೆಂಡು ಹೂ 40 ರೂ, ಸಂಪಿಗೆ 300 ರೂ, ಬಟನ್ಸ್‌ 160ರೂ, ಯಾಲಕ್ಕಿ ಬಾಳೆಹಣ್ಣು 40ರೂ, ಪಚ್ಚಬಾಳೆ 45ರೂ, ಸೀಬೆಹಣ್ಣು 80 ರೂ, ಸಪೋಟ 54 ರೂ, ಅನಾನಸ್‌ 60 ರೂ, ಕಿತ್ತಲೆ ಹಣ್ಣು 72 ರೂ, ಮೊಸಂಬಿ 69 ರೂ, ಸೇಬು 160-180ರೂ,

ಗಣೇಶ ಮೂರ್ತಿ ವ್ಯಾಪಾರ ಕಳೆದ ವರ್ಷಕ್ಕೆ ಹೊಲಿಸಿದರೆ ಕಡಿಮೆಯಾಗಿದೆ. ಪ್ಲಾಸ್ಟರ್‌ಆಫ್‌ಪ್ಯಾರೀಸ್‌ ಮೂರ್ತಿ ನಿಷೇಧ ಮಾಡಿರುವುದರಿಂದ ಜನರು ಮಣ್ಣಿನ ಮೂರ್ತಿಗಳನ್ನು ಖರೀದಿಸುತ್ತಿದ್ದಾರೆ.
-ಗೋಪಾಲ್‌, ಮೂರ್ತಿ ಮಾರಾಟಗಾರ

ಟಾಪ್ ನ್ಯೂಸ್

Kalaburagi: ನನ್ನ ಹೆಣದ ಮೇಲೆ ಬಿಜೆಪಿ ಚುನಾವಣೆ ಮಾಡಲು ಹೊರಟಿದೆ: ಪ್ರಿಯಾಂಕ್

Kalaburagi: ನನ್ನ ಹೆಣದ ಮೇಲೆ ಬಿಜೆಪಿ ಚುನಾವಣೆ ಮಾಡಲು ಹೊರಟಿದೆ: ಪ್ರಿಯಾಂಕ್

9-joshi

ದಿಂಗಾಲೇಶ್ವರ ಸ್ವಾಮೀಜಿಗೆ ತಪ್ಪು ತಿಳಿವಳಿಕೆಯಾಗಿದ್ದರೆ ಸರಿಪಡಿಸುವೆ: ಸಚಿವ ಪ್ರಹ್ಲಾದ ಜೋಶಿ

ಲೋಕಸಭಾ ಚುನಾವಣೆ: ಈ ಬಾರಿ ತೆಲಂಗಾಣದಲ್ಲಿ 10ಕ್ಕೂ ಅಧಿಕ ಕ್ಷೇತ್ರಗಳಲ್ಲಿ ಗೆಲುವು; ಅಭಯ ಪಾಟೀಲ

ಲೋಕಸಭಾ ಚುನಾವಣೆ: ಈ ಬಾರಿ ತೆಲಂಗಾಣದಲ್ಲಿ 10ಕ್ಕೂ ಅಧಿಕ ಕ್ಷೇತ್ರಗಳಲ್ಲಿ ಗೆಲುವು; ಅಭಯ ಪಾಟೀಲ

8-gadag

Gadag: ಭ್ರಷ್ಟ ಅಧಿಕಾರಿಗೆ ಬಿಸಿ ಮುಟ್ಟಿಸಿದ ಲೋಕಾಯುಕ್ತ ಅಧಿಕಾರಿಗಳು

Arunachal Village: ಕೇವಲ ಒಂದು ಮತಕ್ಕಾಗಿ ಚುನಾವಣಾ ಅಧಿಕಾರಿಗಳ 40 ಕಿ.ಮೀ ಕಾಲ್ನಡಿಗೆ!

Arunachal Village: ಕೇವಲ ಒಂದು ಮತಕ್ಕಾಗಿ ಚುನಾವಣಾ ಅಧಿಕಾರಿಗಳ 40 ಕಿ.ಮೀ ಕಾಲ್ನಡಿಗೆ!

SSLC ಪರೀಕ್ಷೆ ವೇಳೆ ಉತ್ತರ ತೋರಿಸಲಿಲ್ಲ ಎಂದು ಸಹಪಾಠಿಗೆ ಚಾಕು ಇರಿದ ವಿದ್ಯಾರ್ಥಿಗಳು

SSLC ಪರೀಕ್ಷೆ ವೇಳೆ ಉತ್ತರ ತೋರಿಸಲಿಲ್ಲ ಎಂದು ಸಹಪಾಠಿಗೆ ಚಾಕು ಇರಿದ ವಿದ್ಯಾರ್ಥಿಗಳು

Shocking: ಮುಸುಧಾರಿಗಳಿಂದ ಗುರುದ್ವಾರದ ಸಿಬಂದಿಯ ಗುಂಡಿಕ್ಕಿ ಹತ್ಯೆ… ಭಯಾನಕ ದೃಶ್ಯ ಸೆರೆ

Shocking: ಮುಸುಧಾರಿಗಳಿಂದ ಗುರುದ್ವಾರದ ಸಿಬ್ಬಂದಿಯ ಗುಂಡಿಕ್ಕಿ ಹತ್ಯೆ.. ಭಯಾನಕ ದೃಶ್ಯ ಸೆರೆ


ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು

10

Electricity problem: ಬೇಸಿಗೆ ಬೆನ್ನಲ್ಲೇ ಕಾಡುತ್ತಿದೆ ವಿದ್ಯುತ್‌ ಸಮಸ್ಯೆ

Kanakapura ಚುನಾವಣೆ ಉಸ್ತುವಾರಿ ಹೊಣೆ ನಾನೇ ಹೊತ್ತುಕೊಳ್ಳುವೆ: ಸಿಪಿವೈ

Kanakapura ಚುನಾವಣೆ ಉಸ್ತುವಾರಿ ಹೊಣೆ ನಾನೇ ಹೊತ್ತುಕೊಳ್ಳುವೆ: ಸಿಪಿವೈ

Lok sabha polls: ಬೆಂ. ಗ್ರಾಮಾಂತರ; ಡಾ.ಮಂಜುನಾಥ್‌ ಸ್ಪರ್ಧೆ

Lok sabha polls: ಬೆಂ. ಗ್ರಾಮಾಂತರ; ಡಾ.ಮಂಜುನಾಥ್‌ ಸ್ಪರ್ಧೆ

Bannerghatta Biological Park: ಚಿರತೆ ಮರಿಗಳಿಗೆ ಉದ್ಯಾನವನದ ಸಿಬ್ಬಂದಿ ಆಸರೆ

Bannerghatta Biological Park: ಚಿರತೆ ಮರಿಗಳಿಗೆ ಉದ್ಯಾನವನದ ಸಿಬ್ಬಂದಿ ಆಸರೆ

Road Dispute: ರಸ್ತೆ ವಿವಾದ; ಪೊಲೀಸ್‌ ಠಾಣೆ ಮೆಟ್ಟಿಲೇರಿದ ಪ್ರಕರಣ

Road Dispute: ರಸ್ತೆ ವಿವಾದ; ಪೊಲೀಸ್‌ ಠಾಣೆ ಮೆಟ್ಟಿಲೇರಿದ ಪ್ರಕರಣ

MUST WATCH

udayavani youtube

ಟೌನಶಿಪ್’ನ ಬಾಡಿಗೆ ಮನೆಯೊಂದರಲ್ಲಿ ಕಳ್ಳತನ ರೂ: 47 ಸಾವಿರ ಕಳವು

udayavani youtube

ವಿಶ್ವ ಗುಬ್ಬಚ್ಚಿಗಳ ದಿನ | ಈ ಮನೆ ನೂರಾರು ಗುಬ್ಬಚ್ಚಿಗಳ ತವರು

udayavani youtube

ಬಡವರ ಸೇವೆಯೇ ಶ್ರೀರಾಮ ದೇವರ ಸೇವೆ : ಪೇಜಾವರಶ್ರೀ

udayavani youtube

ಕೆಂಪು ಹರಿವೆ ಸೊಪ್ಪು ಬೆಳೆಯುವ ಸೂಕ್ತ ವಿಧಾನ

udayavani youtube

ರಾಜಕೀಯದತ್ತ ಒಲವು ತೋರಿದ್ರಾ ಚಕ್ರವರ್ತಿ ಸೂಲಿಬೆಲೆ ?

ಹೊಸ ಸೇರ್ಪಡೆ

Sandalwood: ಗಾಡ್‌ ಪ್ರಾಮಿಸ್‌ಗೆ ಸ್ಕ್ರಿಪ್ಟ್  ಪೂಜೆ

Sandalwood: ಗಾಡ್‌ ಪ್ರಾಮಿಸ್‌ಗೆ ಸ್ಕ್ರಿಪ್ಟ್  ಪೂಜೆ

Kalaburagi: ನನ್ನ ಹೆಣದ ಮೇಲೆ ಬಿಜೆಪಿ ಚುನಾವಣೆ ಮಾಡಲು ಹೊರಟಿದೆ: ಪ್ರಿಯಾಂಕ್

Kalaburagi: ನನ್ನ ಹೆಣದ ಮೇಲೆ ಬಿಜೆಪಿ ಚುನಾವಣೆ ಮಾಡಲು ಹೊರಟಿದೆ: ಪ್ರಿಯಾಂಕ್

Mollywood: “ಆಡುಜೀವಿತಂ” ಮೇಲೆ ಪೃಥ್ವಿರಾಜ್‌ ನಿರೀಕ್ಷೆ

Mollywood: “ಆಡುಜೀವಿತಂ” ಮೇಲೆ ಪೃಥ್ವಿರಾಜ್‌ ನಿರೀಕ್ಷೆ

9-joshi

ದಿಂಗಾಲೇಶ್ವರ ಸ್ವಾಮೀಜಿಗೆ ತಪ್ಪು ತಿಳಿವಳಿಕೆಯಾಗಿದ್ದರೆ ಸರಿಪಡಿಸುವೆ: ಸಚಿವ ಪ್ರಹ್ಲಾದ ಜೋಶಿ

ಲೋಕಸಭಾ ಚುನಾವಣೆ: ಈ ಬಾರಿ ತೆಲಂಗಾಣದಲ್ಲಿ 10ಕ್ಕೂ ಅಧಿಕ ಕ್ಷೇತ್ರಗಳಲ್ಲಿ ಗೆಲುವು; ಅಭಯ ಪಾಟೀಲ

ಲೋಕಸಭಾ ಚುನಾವಣೆ: ಈ ಬಾರಿ ತೆಲಂಗಾಣದಲ್ಲಿ 10ಕ್ಕೂ ಅಧಿಕ ಕ್ಷೇತ್ರಗಳಲ್ಲಿ ಗೆಲುವು; ಅಭಯ ಪಾಟೀಲ

Thanks for visiting Udayavani

You seem to have an Ad Blocker on.
To continue reading, please turn it off or whitelist Udayavani.