ಯೋಗಾ ದಿನಾಚರಣೆಗೆ ಸಕಲ ಸಿದ್ಧತೆ


Team Udayavani, Jun 20, 2019, 3:00 AM IST

yog-din

ದೊಡ್ಡಬಳ್ಳಾಪುರ: ಜೂನ್‌ 21ರಂದು ಇಲ್ಲಿನ ಭಗತ್‌ಸಿಂಗ್‌ ಕ್ರೀಡಾಂಗಣದಲ್ಲಿ ಅಂತಾರಾಷ್ಟ್ರೀಯ ಯೋಗ ದಿನಾಚರಣೆಗೆ ಸಕಲ ಸಿದ್ಧತೆಗಳನ್ನು ಕೈಗೊಳ್ಳಲಾಗಿದೆ. ಕೇದ್ರ ಸರ್ಕಾರದ ನಿಯಾಮವಳಿಯಂತೆ ಸರಳ ಯೋಗ ಆಯಾಮಗಳನ್ನು ಯೋಗ ಪಟುಗಳಿಗೆ ಮಾಡಿಸಲಾಗುವುದು ಎಂದು ವಿಶ್ವ ಯೋಗ ದಿನಾಚರಣೆ ಸಮಿತಿಯ ಗೌರವ ಅಧ್ಯಕ್ಷ ಶ್ರೀ ಜ್ಞಾನಾನಂದಗಿರಿ ಸ್ವಾಮೀಜಿ ತಿಳಿಸಿದರು.

ಅವರು ಅಂತಾರಾಷ್ಟ್ರೀಯ ಯೋಗದಿನ ಆಚರಣೆ ಪೂರ್ವಭಾವಿಯಾಗಿ ವಿಶ್ವ ಯೋಗ ದಿನಾಚರಣೆ ಸಮಿತಿ ನೇತೃತ್ವದಲ್ಲಿ ಶ್ರೀರಾಮಾಂಜನೇಯ ಕಲ್ಯಾಣ ಮಂಟಪದಲ್ಲಿ ನಡೆದ ಪತ್ರಿಕಾಗೋಷ್ಠಿಯಲ್ಲಿ ಮಾತನಾಡಿದರು.

ವಿಶ್ವ ಯೋಗದಿನಾಚರಣೆಯಲ್ಲಿ ಭಗತ್‌ಸಿಂಗ್‌ ಕ್ರೀಡಾಂಗಣದಲ್ಲಿ ನಡೆಯುವ ಯೋಗಬ್ಯಾಸಕ್ಕೆ ಸುಮಾರು 5 ಸಾವಿರಕ್ಕೂ ಹೆಚ್ಚು ಮಂದಿ ಪಾಲ್ಗೊಳ್ಳಲಿದ್ದಾರೆ. ಈ ನಿಟ್ಟಿನಲ್ಲಿ ಸಮಿತಿ ಒಂದು ತಿಂಗಳಿಂದ ಸತತವಾಗಿ ಸಿದ್ಧತೆಗಳನ್ನು ನಡೆಸುತ್ತಿದೆ.

ಈ ಹಾದಿಯಲ್ಲಿ ಪೂರ್ವಸಿದ್ಧತೆ ಸಭೆಗಳು ನಡೆದಿವೆ. ಕಾರ್ಯಕ್ರಮ ಪಕ್ಷಾತೀತವಾಗಿ ಕೇಂದ್ರ ರೇಷ್ಮೆ ಮಂಡಲಿ ಅಧ್ಯಕ್ಷ ಕೆ.ಎಂ.ಹನುಮಂತರಾಯಪ್ಪ ಹಾಗೂ ಸಮಿತಿ ಮುಖಂಡರ ಮುಂದಾಳತ್ವದಲ್ಲಿ ನಡೆಯಲಿದೆ. ಎಲ್ಲಾ ರಾಜಕೀಯ ಪಕ್ಷಗಳ ಮುಖಂಡರು ಕಾರ್ಯಕ್ರಮದಲ್ಲಿ ಪಾಲ್ಗೊಳ್ಳಲಿದ್ದಾರೆ.

ಶಾಲಾ ಕಾಲೇಜು ವಿದ್ಯಾರ್ಥಿಗಳು ಹೆಚ್ಚಿನ ಸಂಖ್ಯೆಯಲ್ಲಿ ಪಾಲ್ಗೊಳ್ಳಲಿದ್ದಾರೆ. ತಾಲೂಕು ಮತ್ತು ನಗರದ ಎಲ್ಲಾ ಸಂಘ ಸಂಸ್ಥೆಗಳು, ಟ್ರಸ್ಟ್‌ಗಳು, ಯೋಗ ತರಬೇತಿ ಕೇಂದ್ರಗಳು ಪಾಲ್ಗೊಳ್ಳಲಿವೆ. ಬೆಳಗ್ಗೆ 6.15 ರಿಂದ 7 ಗಂಟೆಯವರೆಗೆ ಯೋಗಾಬ್ಯಾಸ ನಡೆಯಲಿದೆ ಎಂದರು.

ಸೂಕ್ಷ್ಮ, ಉತ್ತಮ ಆರೋಗ್ಯ, ಶರೀರದ ಸ್ವಾಸ್ಥ್ಯ, ಮನಸ್ಸಿನ ಶಾಂತಿ, ಉಲ್ಲಾಸದ ಜೀವನ ನಡೆಸುವಲ್ಲಿ ಪ್ರತಿ ಮನುಷ್ಯನಿಗೂ ಉತ್ತಮ ಜಾಗೃತಿ ಕಾರ್ಯಕ್ರಮವಾಗಿ ವಿಶ್ವ ಯೋಗ ದಿನದಲ್ಲಿ ಯೋಗಾಬ್ಯಾಸ ನಡೆಸಲಾಗುತ್ತದೆ. ಕಾರ್ಯಕ್ರಮಕ್ಕೆ ಬರುವ ಯೋಗಪಟುಗಳು ಬೆಡ್‌ಶೀಟ್‌ ಮತ್ತು ಜಮಖಾನ ತರುವುದು ಕಡ್ಡಾಯವಾಗಿದೆ.

ಉಳಿದಂತೆ ಯೋಗ ಪಟುಗಳು ಬಿಳಿ ವಸ್ತ್ರಗಳನ್ನು ಧ‌ರಿಸಿ ಬಂದಲ್ಲಿ ಶಿಸ್ತು ಪರಿಪಾಲನೆ ಮಾಡಿದಂತಾಗುತ್ತದೆ. ಬೆಳಗ್ಗೆ 6.15 ಗಂಟೆಗೆ ಯೋಗಾಬ್ಯಾಸ ಆರಂಭವಾಗಲಿದ್ದು, ಸುಮಾರು 45 ನಿಮಿಷ ಗಂಟೆಗಳ ಕಾಲ ಯೋಗಾಬ್ಯಾಸ ಇರುತ್ತದೆ. ನುರಿತ ಯೋಗ ಪಟುಗಳಿಂದ ಯೋಗ ಪ್ರದರ್ಶನ ನಡೆಯಲಿದೆ.

ಸನ್ಮಾನ: ರಾಜ್ಯ ಸೇರಿದಂತೆ ರಾಷ್ಟ್ರೀಯ, ಅಂತಾರಾಷ್ಟ್ರೀಯ ಮಟ್ಟದಲ್ಲಿ ಯೋಗ ಸಾಧನೆ ಮಾಡಿರುವ ಯುವಕರಿಗೆ ಮತ್ತು ಮಕ್ಕಳಿಗೆ ವಿಶೇಷ ಸನ್ಮಾನ ಇರುತ್ತದೆ. ಶ್ರೀ ಜ್ಞಾನಾನಂದ ಸ್ವಾಮೀಜಿ ಯೋಗ ಮಾರ್ಗದರ್ಶಕರಾಗಿ ಕಾರ್ಯಕ್ರಮದಲ್ಲಿ ಯೋಗಾಬ್ಯಾಸ ಮಾಡಿಸಲಿದ್ದಾರೆ ಎಂದರು.

ವಿಶ್ವ ಯೋಗ ದಿನಾಚರಣೆ ಸಮಿತಿ ಅಧ್ಯಕ್ಷ ಕೆ.ಎಂ.ಹನುಮಂತರಾಯಪ್ಪ, ಉಪಾಧ್ಯಕ್ಷ ತ.ನ. ಪ್ರಭುದೇವ್‌, ಡಾ.ಎಚ್‌.ಜಿ. ವಿಜಯಕುಮಾರ್‌, ಕಾರ್ಯದರ್ಶಿ ವಿ.ಲೋಕೇಶ್‌ಕುಮಾರ್‌, ಸಹ ಕಾರ್ಯದರ್ಶಿ ಎಂ.ಕೆ.ವತ್ಸಲಾ, ಖಜಾಂಚಿ ಪಿ.ಕೆ. ಶ್ರೀನಿವಾಸ್‌, ಮುಖಂಡರಾದ ಬಿ.ಜಿ.ಅಮರನಾಥ್‌, ಯಶೋಧಾ, ಗಿರಿಜಾ, ಮುಖಂಡರು ಪಾಲ್ಗೊಂಡಿದ್ದರು.

ಟಾಪ್ ನ್ಯೂಸ್

Vijayendra (2)

PM ಮೋದಿಯವರಿಂದ ಏ.28 ಮತ್ತು 29 ರಂದು 5 ಕಡೆ ಪ್ರಚಾರ: ವಿಜಯೇಂದ್ರ ಮಾಹಿತಿ

Lokayukta

Bellary; ಲೋಕಾಯುಕ್ತ ಬಲೆಗೆ ಬಿದ್ದ 6 ಮಂದಿ ಭ್ರಷ್ಟ ಅಧಿಕಾರಿಗಳು: ಲಕ್ಷ ಲಕ್ಷ ರೂ. ಲಂಚ!

Lok Sabha Election: ಮೋದಿಗೆ ಮತ ಕೇಳುವ ಹಕ್ಕಿಲ್ಲ: ಸಿದ್ದರಾಮಯ್ಯ

Lok Sabha Election: ಮೋದಿಗೆ ಮತ ಕೇಳುವ ಹಕ್ಕಿಲ್ಲ: ಸಿದ್ದರಾಮಯ್ಯ

1-asaa

Heart beats; ಭಾರತದ ಹೃದಯ ಪಾಕಿಸ್ಥಾನದ ಯುವತಿಗೆ ಹೊಸ ಜೀವನ ನೀಡಿತು..

who will be the Indian fast bowlers for t20 world cup

T20 World Cup; ಯಾರಿಲ್ಲ.. ಯಾರಿಲ್ಲ.. ವಿಶ್ವಕಪ್ ಗೆ ವೇಗದ ಬೌಲರ್ ಗಳು ಯಾರೆಲ್ಲಾ?

ಸಿನಿಮಾದಲ್ಲಿ ಖ್ಯಾತಿ, ಭಾರತೀಯರ ಪ್ರೀತಿಗಳಿಸಿದರೂ ಈ ಸೆಲೆಬ್ರಿಟಿಗಳು ಮತದಾನ ಮಾಡುವ ಹಾಗಿಲ್ಲ

ಸಿನಿಮಾದಲ್ಲಿ ಖ್ಯಾತಿ, ಭಾರತೀಯರ ಪ್ರೀತಿಗಳಿಸಿದರೂ ಈ ಸೆಲೆಬ್ರಿಟಿಗಳು ಮತದಾನ ಹಕ್ಕು ಹೊಂದಿಲ್ಲ

1-qwqwewqe

IPL ಅಕ್ರಮ ಪ್ರಸಾರ ಕೇಸ್; ನಟಿ ತಮನ್ನಾಗೆ ಸಂಕಷ್ಟ: ಸೈಬರ್ ಸೆಲ್ ನೋಟಿಸ್


ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು

ಬೇಸಿಗೆ ಬಿಸಿಯೂಟ: 32,173 ಮಕ್ಕಳ ನೋಂದಣಿ

ಬೇಸಿಗೆ ಬಿಸಿಯೂಟ: 32,173 ಮಕ್ಕಳ ನೋಂದಣಿ

Devanahalli: ಬೇಸಿಗೆ ತಾಪಮಾನ ಹೆಚ್ಚಳ, ಇರಲಿ ಎಚ್ಚರ

Devanahalli: ಬೇಸಿಗೆ ತಾಪಮಾನ ಹೆಚ್ಚಳ, ಇರಲಿ ಎಚ್ಚರ

Doddaballapur: ಜಾತೀಯತೆಗೆ ಮಣೆ ಹಾಕದ ಕ್ಷೇತ್ರದ ‌ಮತದಾರರು

Doddaballapur: ಜಾತೀಯತೆಗೆ ಮಣೆ ಹಾಕದ ಕ್ಷೇತ್ರದ ‌ಮತದಾರರು

Lok Sabha polls: ಲೋಕಸಭೆ ಚುನಾವಣೆಯಲ್ಲಿ ಇಂದಿರಾಗಾಂಧಿ ನೆನಪು

Lok Sabha polls: ಲೋಕಸಭೆ ಚುನಾವಣೆಯಲ್ಲಿ ಇಂದಿರಾಗಾಂಧಿ ನೆನಪು

10

Electricity problem: ಬೇಸಿಗೆ ಬೆನ್ನಲ್ಲೇ ಕಾಡುತ್ತಿದೆ ವಿದ್ಯುತ್‌ ಸಮಸ್ಯೆ

MUST WATCH

udayavani youtube

ವೈಭವದ ಹಿರಿಯಡ್ಕ ಸಿರಿಜಾತ್ರೆ ಸಂಪನ್ನ

udayavani youtube

ಯಾವೆಲ್ಲಾ ಚರ್ಮದ ಕಾಯಿಲೆಗಳಿವೆ ಹಾಗೂ ಪರಿಹಾರಗಳೇನು?

udayavani youtube

Mangaluru ಹೆಬ್ಬಾವಿನ ದೇಹದಲ್ಲಿ ಬರೋಬ್ಬರಿ 11 ಬುಲೆಟ್‌ ಪತ್ತೆ!

udayavani youtube

ನನ್ನ ಕಥೆ ನಿಮ್ಮ ಜೊತೆ

udayavani youtube

‘ಕಸಿ’ ಕಟ್ಟುವ ಸುಲಭ ವಿಧಾನ

ಹೊಸ ಸೇರ್ಪಡೆ

Kundapur: ಕುಸಿದು ಬಿದ್ದು ಸಾವು

Kundapur: ಕುಸಿದು ಬಿದ್ದು ಸಾವು

Electric shock: ಯುವಕನ ಸಾವು

Electric shock: ಯುವಕನ ಸಾವು

Vijayendra (2)

PM ಮೋದಿಯವರಿಂದ ಏ.28 ಮತ್ತು 29 ರಂದು 5 ಕಡೆ ಪ್ರಚಾರ: ವಿಜಯೇಂದ್ರ ಮಾಹಿತಿ

Lokayukta

Bellary; ಲೋಕಾಯುಕ್ತ ಬಲೆಗೆ ಬಿದ್ದ 6 ಮಂದಿ ಭ್ರಷ್ಟ ಅಧಿಕಾರಿಗಳು: ಲಕ್ಷ ಲಕ್ಷ ರೂ. ಲಂಚ!

Lok Sabha Election: ಮೋದಿಗೆ ಮತ ಕೇಳುವ ಹಕ್ಕಿಲ್ಲ: ಸಿದ್ದರಾಮಯ್ಯ

Lok Sabha Election: ಮೋದಿಗೆ ಮತ ಕೇಳುವ ಹಕ್ಕಿಲ್ಲ: ಸಿದ್ದರಾಮಯ್ಯ

Thanks for visiting Udayavani

You seem to have an Ad Blocker on.
To continue reading, please turn it off or whitelist Udayavani.