ಭೂಮಿ ನೀಡಿದ ರೈತರಿಗೆ ಸೂಕ್ತ ಪರಿಹಾರ ನೀಡಿ


Team Udayavani, Feb 15, 2019, 7:33 AM IST

bhomi.jpg

ದೇವನಹಳ್ಳಿ: ವಿಮಾನ ನಿಲ್ದಾಣಕ್ಕೆ ಭೂಮಿ ಕಳೆದುಕೊಂಡ ಎಲ್ಲಾ ಸಾಗುವಳಿದಾರರಿಗೆ ಶಿವಮೊಗ್ಗ ಮಾದರಿಯಲ್ಲಿ ಸೂಕ್ತ ಪರಿಹಾರ ನೀಡಬೇಕೆಂದು ಆಗ್ರಹಿಸಿ ಜಿಲ್ಲಾ ಮತ್ತು ತಾಲೂಕು ಪ್ರಾಂತ ರೈತಸಂಘದ ಕಾರ್ಯಕರ್ತರು ತಾಲೂಕಿನ ಚಪ್ಪರದ ಕಲ್ಲು ಬಳಿಯ ಜಿಲ್ಲಾ ಸಂಕೀರ್ಣದ ಆವರಣದಲ್ಲಿ ಪ್ರತಿಭಟನೆ ನಡೆಸಿದರು.

ಈ ವೇಳೆ ಮಾತನಾಡಿದ ಮುಖಂಡರು, ಬಗುರ್‌ಹುಕುಂ ಸಾಗುವಳಿ ಚೀಟಿ ಹಕ್ಕುಪತ್ರ, ಸಾಲ ವಿತರಣೆ ಹಾಗೂ ಬಡ ಕುಟುಂಬಗಳಿಗೆ ನಿವೇಶನ, ಸಮರ್ಪಕ ವಿದ್ಯುತ್‌ ಪೂರೈಕೆ, ಬರಗಾಲ ಪರಿಹಾರ, ಮೇವು ಮತ್ತು ಕುಡಿಯುವ ನೀರು ಪೂರೈಕೆ ಮಾಡಬೇಕೆಂದು ಒತ್ತಾಯಿಸಿದರು.

ಸೂಕ್ತ ಪರಿಹಾರ ನೀಡಿ: ಸರ್ಕಾರದ ಅಂತಾರಾಷ್ಟ್ರೀಯ ವಿಮಾನ ನಿಲ್ದಾಣಕ್ಕೆ ಭೂಮಿ ವಶಪಡಿಸಿಕೊಂಡಿದ್ದು, ಇದರಲ್ಲಿ ಬಗುರ್‌ಹುಕುಂ ಸಾಗುವಳಿ ಮಾಡುತ್ತಿರುವ ಸುಮಾರು 1,600 ಬಡ ರೈತರಿದ್ದಾರೆ. ಸರ್ಕಾರ ಸಾಗುವಳಿದಾರರಿಗೆ ಯಾವುದೇ ಪರಿಹಾರ ಕೊಟ್ಟಿಲ್ಲ.

ಬದಲಿ ಜಮೀನು ಸಹ ನೀಡಿಲ್ಲ. ಶಿವಮೊಗ್ಗದಲ್ಲಿ ವಿಮಾನ ನಿಲ್ದಾಣಕ್ಕೆ ಸಾಗುವಳಿದಾರರ ಜಮೀನು ವಶಪಡಿಸಿಕೊಂಡು ಪರಿಹಾರ ನೀಡಿದ್ದು, ಅದೇ ಮಾದರಿಯಲ್ಲಿ ನಮಗೂ ಪರಿಹಾರ ನೀಡಬೇಕು. ಈ ಬಗ್ಗೆ ಕರ್ನಾಟಕ ಉತ್ಛ ನ್ಯಾಯಾಲಯದಲ್ಲಿ ಆದೇಶವಾಗಿದ್ದು, ರೈತರಿಗೆ ಪರಿಹಾರ ನೀಡದೇ ಅಧಿಕಾರಿಗಳು ನಿರ್ಲಕ್ಷ  ಮಾಡುತ್ತಿದ್ದಾರೆ. ಆದ್ದರಿಂದ, ಕೂಡಲೇ ಕ್ರಮ ಕೈಗೊಳ್ಳಬೇಕೆಂದು ಆಗ್ರಹಿಸಿದರು.

ಮಾಜಿ ಶಾಸಕ ಜಿ.ವಿ.ಶ್ರೀರಾಮರೆಡ್ಡಿ ಮಾತನಾಡಿ, ರಾಜ್ಯದಲ್ಲಿ ಹಲವು ದಶಕಗಳಿಂದ ವಿವಿಧ ಗೋಮಾಳ ಹಾಗೂ ಸ‌ರ್ಕಾರಿ ಜಮೀನಿನಲ್ಲಿ ಸಾಗುವಳಿ ಮಾಡುತ್ತಿರುವ ಲಕ್ಷಾಂತರ ಬಡ ಕುಟುಂಬಗಳಿಗೆ ಇದುವರೆಗೂ ಸಾಗುವಳಿ ಚೀಟಿ ನೀಡಿಲ್ಲ. ಮುಖ್ಯಮಂತ್ರಿ ಕುಮಾರಸ್ವಾಮಿ ಅವರಿಗೆ ಭೂಮಿ ವಿಚಾರವಾಗಿ ಹೆಚ್ಚು ತಿಳಿವಳಿಕೆ ಇಲ್ಲ. ಅಧಿಕಾರಿಗಳು ತಿಳಿಸಿಕೊಡಬೇಕು.

ಸಾಲಮನ್ನಾ ಒಂದೇ ಅವರಿಗೆ ಗೊತ್ತಿರುವುದು. ಈ ಮಧ್ಯದಲ್ಲಿ ದಲ್ಲಾಳಿಗಳು ಮತ್ತು ಭೂ ಮಾಫಿಯಾಗಳು ಅಧಿಕಾರಿಗಳಿಗೆ ಇಲ್ಲಸಲ್ಲದ್ದನ್ನು ಹೇಳಿ ಪ್ರಕರಣಗಳನ್ನು ಹಾಕಿಸಿ, ರೈತರನ್ನು ಒಕ್ಕಲೆಬ್ಬಿಸುತ್ತಿದ್ದಾರೆ. ಕೂಡಲೇ ಫಾರಂ 57 ಹಾಕಲು ಅವಕಾಶ ಮಾಡಿಕೊಟ್ಟು, ಅದನ್ನು ಮಂಜೂರು ಮಾಡಿ ಸಾಗುವಳಿ ಚೀಟಿ ನೀಡಬೇಕೆಂದು ಒತ್ತಾಯಿಸಿದರು.  

ತಾಲೂಕು ಬಹುರ್‌ಹುಕುಂ ಸಾಗುವಳಿ ಹೋರಾಟಗಾರ ಧನಂಜಯ್‌ ಮಾತನಾಡಿ, ಸುಮಾರು 800 ಎಕರೆಯಲ್ಲಿ ವಿವಿಧ ಹಳ್ಳಿಗಳ ರೈತರು ಉಳುಮೆ ಮಾಡುತ್ತಿದ್ದಾರೆ. ಅವರ ಸಾಗುವಳಿ ಚೀಟಿಯನ್ನು ರದ್ದುಗೊಳಿಸಿದ್ದಾರೆ. ಸಾವಿರಾರು ಜನ ನಿರಾಶ್ರಿತರಿದ್ದಾರೆ.ಅವರಿಗೆ ಸರ್ಕಾರ ನಿವೇಶನ ಮಂಜೂರು ಮಾಡಬೇಕು. ತಾಲೂಕಿನ ರೈತರು ಅನೇಕ ಸಮಸ್ಯೆಗಳನ್ನು ಎದುರಿಸುತ್ತಿದ್ದು, ಅವರಿಗೆ ಸಾಗುವಳಿ ಚೀಟಿ ನೀಡಿಲ್ಲ ಎಂದರು.

ಜಿಲ್ಲಾ ಪ್ರಾಂತ ರೈತಸಂಘದ ಅಧ್ಯಕ್ಷ ಎನ್‌.ವೀರಣ್ಣ ಮಾತನಾಡಿ, ಸರ್ಕಾರ ಇದುವರೆಗೂ ಬಡ ಕುಟುಂಬದವರಿಗೆ ವಾಸ ಮಾಡಲು ಮನೆ ಮತ್ತು ನಿವೇಶನ ಕೊಡದೆ ವಂಚಿಸಿದೆ. ಕೇರಳ ಮಾದರಿಯಲ್ಲಿ ಹಿತ್ತಲು ಸಹಿತ ಮನೆ ನೀಡಬೇಕೆಂದು ಆಗ್ರಹಿಸಿದರು.

ನಂತರ ಜಿಲ್ಲಾಧಿಕಾರಿ ಕರೀಗೌಡರಿಗೆ ಮನವಿ ಪತ್ರ ಸಲ್ಲಿಸಿದರು. ಈ ವೇಳೆ ರಾಜ್ಯ ಉಪಾಧ್ಯಕ್ಷ ವೆಂಕಟಾಚಲಯ್ಯ, ತಾಲೂಕು ಗೌರವಾಧ್ಯಕ್ಷ ವಿ.ನಾರಾಯಣಸ್ವಾಮಿ, ತಾಲೂಕು ಅಧ್ಯಕ್ಷ ವೆಂಕಟೇಗೌಡ, ರೈತ ಮಹಿಳಾ ಹೋರಾಟ ಸಮಿತಿಯ ಸುಮಿತ್ರಮ್ಮ, ತಾಲೂಕು ಉಪಾಧ್ಯಕ್ಷ ಗೋವಿಂದಪ್ಪ, ನಾರಾಯಣಸ್ವಾಮಿ, ಪ್ರಧಾನ ಕಾರ್ಯದರ್ಶಿ ಕೆ.ಸಿ.ನಂಜೇಗೌಡ ಮತ್ತಿತರರು ಭಾಗವಹಿಸಿದ್ದರು. 

ಟಾಪ್ ನ್ಯೂಸ್

1-ckm-rsrt-close

Tourists ಗಮನಕ್ಕೆ: ಈ 2 ದಿನಗಳ ಕಾಲ ಚಿಕ್ಕಮಗಳೂರಿನ‌ ಎಲ್ಲ ಹೋಂ ಸ್ಟೇ, ರೆಸಾರ್ಟ್‌ ಬಂದ್!

ಸಿ.ಟಿ.ರವಿ

Vijayapura; ವಿಕಸಿತ ಭಾರತಕ್ಕೆ ವಿಶ್ವನಾಯಕ ಮೋದಿ ನಾಯಕತ್ವ ಅನಿವಾರ್ಯ: ಸಿ.ಟಿ.ರವಿ

ಶಿಕಾರಿಪುರದಲ್ಲೇ ಅಪ್ಪ ಮಕ್ಕಳ ಶಿಕಾರಿ ಮಾಡುತ್ತೇನೆ… ವಿಜಯೇಂದ್ರ ವಿರುದ್ಧ ಈಶ್ವರಪ್ಪ ಕಿಡಿ

ಶಿಕಾರಿಪುರದಲ್ಲೇ ಅಪ್ಪ ಮಕ್ಕಳ ಶಿಕಾರಿ ಮಾಡುತ್ತೇನೆ… ವಿಜಯೇಂದ್ರ ವಿರುದ್ಧ ಈಶ್ವರಪ್ಪ ಕಿಡಿ

Bengaluru: ಸೆ*ಕ್ಸ್‌ ವಿಡಿಯೋ ಮಾದರಿ ಲೈಂಗಿಕ ಕ್ರಿಯೆಗೆ ಒತ್ತಾಯ

Bengaluru: ಸೆ*ಕ್ಸ್‌ ವಿಡಿಯೋ ಮಾದರಿ ಲೈಂಗಿಕ ಕ್ರಿಯೆಗೆ ಒತ್ತಾಯ

ಯತ್ನಾಳ್

Loksabha Election; ಈಶ್ವರಪ್ಪ ಬಂಡಾಯವನ್ನು ರಾಜಾಹುಲಿ ಶಮನ ಮಾಡಲಿ: ಯತ್ನಾಳ್

ಲೋಕಸಭೆ ಚುನಾವಣೆ ಫಲಿತಾಂಶ ರಾಜ್ಯ ರಾಜಕಾರಣದ ಮೇಲೆ ದೊಡ್ಡ ಪರಿಣಾಮ ಬೀರಲಿದೆ: ಬೊಮ್ಮಾಯಿ

ಲೋಕಸಭೆ ಚುನಾವಣೆ ಫಲಿತಾಂಶ ರಾಜ್ಯ ರಾಜಕಾರಣದ ಮೇಲೆ ದೊಡ್ಡ ಪರಿಣಾಮ ಬೀರಲಿದೆ: ಬೊಮ್ಮಾಯಿ

LS polls: ನಾಳೆ ಸಿಎಂ, ಡಿಸಿಎಂ ಭೇಟಿಯಾಗಿ ಕಾಂಗ್ರೆಸ್ ಸೇರ್ಪಡೆ ಬಗ್ಗೆ ತೀರ್ಮಾನ; ಸಂಗಣ್ಣ

LS polls: ನಾಳೆ ಸಿಎಂ, ಡಿಸಿಎಂ ಭೇಟಿಯಾಗಿ ಕಾಂಗ್ರೆಸ್ ಸೇರ್ಪಡೆ ಬಗ್ಗೆ ತೀರ್ಮಾನ; ಸಂಗಣ್ಣ


ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು

ಬೇಸಿಗೆ ಬಿಸಿಯೂಟ: 32,173 ಮಕ್ಕಳ ನೋಂದಣಿ

ಬೇಸಿಗೆ ಬಿಸಿಯೂಟ: 32,173 ಮಕ್ಕಳ ನೋಂದಣಿ

Devanahalli: ಬೇಸಿಗೆ ತಾಪಮಾನ ಹೆಚ್ಚಳ, ಇರಲಿ ಎಚ್ಚರ

Devanahalli: ಬೇಸಿಗೆ ತಾಪಮಾನ ಹೆಚ್ಚಳ, ಇರಲಿ ಎಚ್ಚರ

Doddaballapur: ಜಾತೀಯತೆಗೆ ಮಣೆ ಹಾಕದ ಕ್ಷೇತ್ರದ ‌ಮತದಾರರು

Doddaballapur: ಜಾತೀಯತೆಗೆ ಮಣೆ ಹಾಕದ ಕ್ಷೇತ್ರದ ‌ಮತದಾರರು

Lok Sabha polls: ಲೋಕಸಭೆ ಚುನಾವಣೆಯಲ್ಲಿ ಇಂದಿರಾಗಾಂಧಿ ನೆನಪು

Lok Sabha polls: ಲೋಕಸಭೆ ಚುನಾವಣೆಯಲ್ಲಿ ಇಂದಿರಾಗಾಂಧಿ ನೆನಪು

10

Electricity problem: ಬೇಸಿಗೆ ಬೆನ್ನಲ್ಲೇ ಕಾಡುತ್ತಿದೆ ವಿದ್ಯುತ್‌ ಸಮಸ್ಯೆ

MUST WATCH

udayavani youtube

ದ್ವಾರಕೀಶ್ ನಿಧನಕ್ಕೆ ನಟ ಶಿವರಾಜ್ ಕುಮಾರ್ ಸಂತಾಪ

udayavani youtube

ದೇವೇಗೌಡರಿದ್ದ ವೇದಿಕೆಗೆ ನುಗ್ಗಿದ ಕಾಂಗ್ರೆಸ್‌ ಕಾರ್ಯಕರ್ತೆಯರು

udayavani youtube

ಮಂಗಳೂರಿನಲ್ಲಿ ಪ್ರಧಾನಿ ಶ್ರೀ Narendra Modi ಅವರ ಬೃಹತ್‌ ರೋಡ್‌ ಶೋ

udayavani youtube

ಕೇಕ್ ಪ್ರಿಯರಿಗೆ ಹೇಳಿ ಮಾಡಿಸಿದ ಜಾಗ ಔರಾ .

udayavani youtube

ಶ್ರೀ ವೈಷ್ಣವಿ ದುರ್ಗಾ ದೇವಾಲಯ

ಹೊಸ ಸೇರ್ಪಡೆ

aditya;s kangaroo movie

Aditya; ಟ್ರೇಲರ್ ನಲ್ಲಿ ‘ಕಾಂಗರೂ’ ದರ್ಶನ; ಮೇ.3ರಂದು ತೆರೆಗೆ

1-ckm-rsrt-close

Tourists ಗಮನಕ್ಕೆ: ಈ 2 ದಿನಗಳ ಕಾಲ ಚಿಕ್ಕಮಗಳೂರಿನ‌ ಎಲ್ಲ ಹೋಂ ಸ್ಟೇ, ರೆಸಾರ್ಟ್‌ ಬಂದ್!

Fraud: ಮದುವೆ ಆಗದೇ ದೈಹಿಕ ಸಂಪರ್ಕ ಬೆಳೆಸಿ ಮಹಿಳಾ ಟೆಕಿಗೆ ವಂಚನೆ

Fraud: ಮದುವೆ ಆಗದೇ ದೈಹಿಕ ಸಂಪರ್ಕ ಬೆಳೆಸಿ ಮಹಿಳಾ ಟೆಕಿಗೆ ವಂಚನೆ

ಸಿ.ಟಿ.ರವಿ

Vijayapura; ವಿಕಸಿತ ಭಾರತಕ್ಕೆ ವಿಶ್ವನಾಯಕ ಮೋದಿ ನಾಯಕತ್ವ ಅನಿವಾರ್ಯ: ಸಿ.ಟಿ.ರವಿ

ಶಿಕಾರಿಪುರದಲ್ಲೇ ಅಪ್ಪ ಮಕ್ಕಳ ಶಿಕಾರಿ ಮಾಡುತ್ತೇನೆ… ವಿಜಯೇಂದ್ರ ವಿರುದ್ಧ ಈಶ್ವರಪ್ಪ ಕಿಡಿ

ಶಿಕಾರಿಪುರದಲ್ಲೇ ಅಪ್ಪ ಮಕ್ಕಳ ಶಿಕಾರಿ ಮಾಡುತ್ತೇನೆ… ವಿಜಯೇಂದ್ರ ವಿರುದ್ಧ ಈಶ್ವರಪ್ಪ ಕಿಡಿ

Thanks for visiting Udayavani

You seem to have an Ad Blocker on.
To continue reading, please turn it off or whitelist Udayavani.