ಗ್ರಾಮೀಣ ಪ್ರದೇಶದಲ್ಲಿ ಕ್ರೀಡೆಗಳಿಗೆ ಹೆಚ್ಚು ಆದ್ಯತೆ ನೀಡಿ


Team Udayavani, Oct 23, 2022, 2:53 PM IST

tdy-8

ನೆಲಮಂಗಲ: ಗ್ರಾಮೀಣ ಭಾಗದಲ್ಲಿನ ಯುವ ಸಮುದಾಯ ಇತ್ತಿಚೀನ ದಿನಗಳಲ್ಲಿ ಗ್ರಾಮೀಣ ಕ್ರೀಡಾ ಚಟುವಟಿಕೆಗಳಿಗೆ ಹೆಚ್ಚಿನ ಆದ್ಯತೆಯನ್ನು ನೀಡುವ ಮೂಲಕ ಉತ್ತಮ ಕ್ರೀಡಾಪಟುಗಳನ್ನು ಪರಿಚಯಿಸುತ್ತಿದ್ದಾರೆ ಎಂದು ವಿಧಾನ ಪರಿಷತ್ತಿನ ಮಾಜಿ ಸದಸ್ಯ ಇ.ಕೃಷ್ಣಪ್ಪ ಅಭಿಪ್ರಾಪಟ್ಟರು.

ತಾಲೂಕಿನ ತ್ಯಾಮಗೊಂಡ್ಲು ಹೋಬಳಿ ಗೋವೇನಹಳ್ಳಿ ಗ್ರಾಮದಲ್ಲಿ ಶಾಸಕರ ಅನುದಾನದಲ್ಲಿ ನೂತನವಾಗಿ ನಿರ್ಮಿಸಲಾಗಿದ್ದ ವಾಲಿಬಾಲ್‌ ಕ್ರೀಡಾಂಗಣಕ್ಕೆ ಹಾಗೂ ಸಮಾಜ ಸೇವಕ ದಿವಗಂತ ಶಿವಕುಮಾರ್‌ ಅವರ ಸವಿ ನೆನಪಿನಲ್ಲಿ ಆಯೋಜಿಸಿದ್ದ ತಾಲೂಕುಮಟ್ಟದ ಜೈ ಶ್ರೀರಾಮ್‌ ವಾಲಿಬಾಲ್‌ ಕಪ್‌ ಪಂದ್ಯಾವಳಿಗೆ ಚಾಲನೆ ನೀಡಿ ಮಾತನಾಡಿದ ಅವರು, ನಗರೀಕರಣದ ಪ್ರಭಾವದಿಂದ ಯುವ ಸಮುದಾಯ ಗ್ರಾಮೀಣ ಕ್ರೀಡಾ ಚಟುವಟಿಕೆಗಳಿಂದ ದೂರ ಸರಿದಿದ್ದರು. ಆದರೆ, ಕಳೆದ ಐದಾರು ವರ್ಷಗಳಿಂದ ದೇಸಿಯ ಆಟಗಳಿಗೆ ಆದ್ಯತೆ ನೀಡುವ ಮೂಲಕ ಆಟಗಾರರನ್ನು ತಯಾರು ಮಾಡಿ, ಜಿಲ್ಲೆ, ತಾಲೂಕು ಮತ್ತು ಹೋಬಳಿ ಮಟ್ಟದಲ್ಲಿ ಕ್ರೀಡಾ ಕೂಟಗಳ ಆಯೋಜನೆಯಿಂದ ದೇಸಿಯ ಸಂಸ್ಕೃತಿಯನ್ನು ಉಳಿಸುತ್ತಿದ್ದಾರೆ ಎಂದರು.

ಉತ್ತಮ ಕ್ರೀಡಾಂಗಣ ನಿರ್ಮಾಣ: ಕ್ರೀಡಾಕೂಟದ ಆಯೋಜಕ ಡಾ. ಮಂಜುನಾಥ್‌ ಮಾತನಾಡಿ, ನಮ್ಮ ಗ್ರಾಮದಲ್ಲಿ ಕಳೆದ 30 ವರ್ಷದಿಂದ ವಾಲಿಬಾಲ್‌ ಪಂದ್ಯ ಆಡುತ್ತಿದ್ದಾರೆ. ಆದರೆ, ಸುಸಜ್ಜಿತವಾದ ಕ್ರೀಡಾಂಗಣ ಅಭಾವ ಹೆಚ್ಚಾಗಿತ್ತು. ಮಳೆ ಬಂದರೆ ಆಡಲು ಸಾಧ್ಯವಾಗುತ್ತಿರಲಿಲ್ಲ, ನಮ್ಮ ಶಾಸಕರ ಅನುದಾನ ಹಾಗೂ ಗ್ರಾಮಸ್ಥರ ಸಹಕಾರದಿಂದ ಉತ್ತಮ ಕ್ರೀಡಾಂಗಣ ನಿರ್ಮಿಸಿದ್ದೇವೆ. ನಮ್ಮ ತಂದೆ ಶಿವಕುಮಾರ್‌ ಅವರ ಸವಿನೆನಪಿನಲ್ಲಿ ಪ್ರತಿ ವರ್ಷವೂ ವಾಲಿಬಾಲ್‌ ಪಂದ್ಯಾವಳಿಗಳನ್ನು ನಡೆಸಿಕೊಂಡು ಹೋಗುತ್ತೇವೆ ಎಂದರು.

ಕ್ರೀಡಾಪಟುಗಳಿಗೆ ಉತ್ತಮ ವೇದಿಕೆ: ಮೊದಲ ವರ್ಷದ ತಾಲೂಕುಮಟ್ಟದ ವಾಲಿಬಾಲ್‌ ಕ್ರೀಡಾಕೂಟದಲ್ಲಿ 24 ತಂಡಗಳು ಭಾಗವಹಿಸಿವೆ. ಶನಿವಾರ ಮೊದಲ ಹಂತದ ಪಂದ್ಯಗಳು ನಡೆದಿವೆ. ಭಾನುವಾರ ಫೈನಲ್‌ ಪಂದ್ಯಾವಳಿ ನಡೆಯುತ್ತದೆ. ನಮ್ಮ ತಾಲೂಕಿನ ಕ್ರೀಡಾಪಟುಗಳಿಗೆ ಉತ್ತಮ ವೇದಿಕೆಯನ್ನು ಕಲ್ಪಿಸಲಾಗಿದೆ. ಮೊದಲ ಬಹುಮಾನ 50 ಸಾವಿರ, ದ್ವಿತೀಯ ಬಹುಮಾನ 30 ಸಾವಿರ, ತೃತೀಯ 20ಸಾವಿರ, ಚತುರ್ಥ ಸ್ಥಾನಕ್ಕೆ 10 ಸಾವಿರ ರೂ. ಮತ್ತು ಆಕರ್ಷಕ ಟ್ರೋಫಿ ವಿತರಿಸಲಾಗುತ್ತದೆ ಎಂದು ಕ್ರೀಡಾಕೂಟದ ಆಯೋಜಕ ಮೋಹನ್‌ ತಿಳಿಸಿದರು.

ಮುಖಂಡ ಶಿವಕುಮಾರ್‌, ಡಿ.ಸಿ.ಗೌಡ್ರು, ಜಿ.ಎಚ್‌.ಪ್ರಕಾಶ್‌, ಕೃಷ್ಣಮೂರ್ತಿ, ಎಪಿಎಂಸಿ ಮಾಜಿ ನಿರ್ದೇಶಕ ನಾರಾಯಣಸ್ವಾಮಿ, ಹನುಮೇಗೌಡ, ಹನುಮಂತರಾಯಪ್ಪ, ಮಲ್ಲಿಕಾರ್ಜುನ್‌, ನಾರಾಯಣ್‌, ಮೋಹನ್‌, ಬೆಟ್ಟಪ್ಪ, ಮಂಜುನಾಥ್‌, ರಾಜೇಶ್‌ ಹಾಗೂ ಗ್ರಾಮದ ಯುವಕರು ಇದ್ದರು.

ಟಾಪ್ ನ್ಯೂಸ್

Yadagiri: ದೇಶದಲ್ಲಿ ಕಾಂಗ್ರೆಸ್ ನೆಲ ಕಚ್ಚಿದೆ: ಯತ್ನಾಳ ಟೀಕೆ

Yadagiri: ದೇಶದಲ್ಲಿ ಕಾಂಗ್ರೆಸ್ ನೆಲ ಕಚ್ಚಿದೆ: ಯತ್ನಾಳ ಟೀಕೆ

ಭಾರತದ ಹಿರಿಮೆ ಹೆಚ್ಚಿಸಿದ ಮೋದಿ ಅವರು ಮತ್ತೊಮ್ಮೆ ಪ್ರಧಾನಿಯಾಗಲಿ: ಶಾಸಕ ಜನಾರ್ದನ ರೆಡ್ಡಿ

ಭಾರತದ ಹಿರಿಮೆ ಹೆಚ್ಚಿಸಿದ ಮೋದಿ ಅವರು ಮತ್ತೊಮ್ಮೆ ಪ್ರಧಾನಿಯಾಗಲಿ: ಶಾಸಕ ಜನಾರ್ದನ ರೆಡ್ಡಿ

Central Govt ನಾಲ್ಕಾನೆಯಷ್ಟೂ ಬರ ಪರಿಹಾರ ನೀಡಿಲ್ಲ: ಸಿಎಂ ಸಿದ್ದರಾಮಯ್ಯ

Central Govt ನಾಲ್ಕಾನೆಯಷ್ಟೂ ಬರ ಪರಿಹಾರ ನೀಡಿಲ್ಲ: ಸಿಎಂ ಸಿದ್ದರಾಮಯ್ಯ

14

Tollywood: ಅಧಿಕೃತವಾಗಿ ರಿವೀಲ್‌ ಆಯಿತು ‘ಕಲ್ಕಿ 2898 ಎಡಿʼ ಸಿನಿಮಾದ ರಿಲೀಸ್‌ ಡೇಟ್

Mumbai 26/11 ದಾಳಿಯ ವಕೀಲ ಉಜ್ವಲ್‌ ನಿಕಮ್‌ ಗೆ ಬಿಜೆಪಿ ಟಿಕೆಟ್‌, ಪೂನಮ್‌ ಗೆ ಕೊಕ್?

Mumbai 26/11 ದಾಳಿಯ ವಕೀಲ ಉಜ್ವಲ್‌ ನಿಕಮ್‌ ಗೆ ಬಿಜೆಪಿ ಟಿಕೆಟ್‌, ಪೂನಮ್‌ ಗೆ ಕೊಕ್?

s suresh kumar

Bellary; ಕಾಂಗ್ರೆಸ್ ಪಕ್ಷದ ಚಿಹ್ನೆ ಚೊಂಬಿಗೆ ಬದಲಾಗಿದೆ: ಸುರೇಶ್ ಕುಮಾರ್ ವ್ಯಂಗ್ಯ

13

Sandalwood: ಜಪಾನ್‌ನಲ್ಲಿ ಈ ದಿನ ರಿಲೀಸ್‌ ಆಗಲಿದೆ ‘777 ಚಾರ್ಲಿʼ?


ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು

ಬೇಸಿಗೆ ಬಿಸಿಯೂಟ: 32,173 ಮಕ್ಕಳ ನೋಂದಣಿ

ಬೇಸಿಗೆ ಬಿಸಿಯೂಟ: 32,173 ಮಕ್ಕಳ ನೋಂದಣಿ

Devanahalli: ಬೇಸಿಗೆ ತಾಪಮಾನ ಹೆಚ್ಚಳ, ಇರಲಿ ಎಚ್ಚರ

Devanahalli: ಬೇಸಿಗೆ ತಾಪಮಾನ ಹೆಚ್ಚಳ, ಇರಲಿ ಎಚ್ಚರ

Doddaballapur: ಜಾತೀಯತೆಗೆ ಮಣೆ ಹಾಕದ ಕ್ಷೇತ್ರದ ‌ಮತದಾರರು

Doddaballapur: ಜಾತೀಯತೆಗೆ ಮಣೆ ಹಾಕದ ಕ್ಷೇತ್ರದ ‌ಮತದಾರರು

Lok Sabha polls: ಲೋಕಸಭೆ ಚುನಾವಣೆಯಲ್ಲಿ ಇಂದಿರಾಗಾಂಧಿ ನೆನಪು

Lok Sabha polls: ಲೋಕಸಭೆ ಚುನಾವಣೆಯಲ್ಲಿ ಇಂದಿರಾಗಾಂಧಿ ನೆನಪು

10

Electricity problem: ಬೇಸಿಗೆ ಬೆನ್ನಲ್ಲೇ ಕಾಡುತ್ತಿದೆ ವಿದ್ಯುತ್‌ ಸಮಸ್ಯೆ

MUST WATCH

udayavani youtube

ವೈಭವದ ಹಿರಿಯಡ್ಕ ಸಿರಿಜಾತ್ರೆ ಸಂಪನ್ನ

udayavani youtube

ಯಾವೆಲ್ಲಾ ಚರ್ಮದ ಕಾಯಿಲೆಗಳಿವೆ ಹಾಗೂ ಪರಿಹಾರಗಳೇನು?

udayavani youtube

Mangaluru ಹೆಬ್ಬಾವಿನ ದೇಹದಲ್ಲಿ ಬರೋಬ್ಬರಿ 11 ಬುಲೆಟ್‌ ಪತ್ತೆ!

udayavani youtube

ನನ್ನ ಕಥೆ ನಿಮ್ಮ ಜೊತೆ

udayavani youtube

‘ಕಸಿ’ ಕಟ್ಟುವ ಸುಲಭ ವಿಧಾನ

ಹೊಸ ಸೇರ್ಪಡೆ

Yadagiri: ದೇಶದಲ್ಲಿ ಕಾಂಗ್ರೆಸ್ ನೆಲ ಕಚ್ಚಿದೆ: ಯತ್ನಾಳ ಟೀಕೆ

Yadagiri: ದೇಶದಲ್ಲಿ ಕಾಂಗ್ರೆಸ್ ನೆಲ ಕಚ್ಚಿದೆ: ಯತ್ನಾಳ ಟೀಕೆ

ಭಾರತದ ಹಿರಿಮೆ ಹೆಚ್ಚಿಸಿದ ಮೋದಿ ಅವರು ಮತ್ತೊಮ್ಮೆ ಪ್ರಧಾನಿಯಾಗಲಿ: ಶಾಸಕ ಜನಾರ್ದನ ರೆಡ್ಡಿ

ಭಾರತದ ಹಿರಿಮೆ ಹೆಚ್ಚಿಸಿದ ಮೋದಿ ಅವರು ಮತ್ತೊಮ್ಮೆ ಪ್ರಧಾನಿಯಾಗಲಿ: ಶಾಸಕ ಜನಾರ್ದನ ರೆಡ್ಡಿ

Central Govt ನಾಲ್ಕಾನೆಯಷ್ಟೂ ಬರ ಪರಿಹಾರ ನೀಡಿಲ್ಲ: ಸಿಎಂ ಸಿದ್ದರಾಮಯ್ಯ

Central Govt ನಾಲ್ಕಾನೆಯಷ್ಟೂ ಬರ ಪರಿಹಾರ ನೀಡಿಲ್ಲ: ಸಿಎಂ ಸಿದ್ದರಾಮಯ್ಯ

14

Tollywood: ಅಧಿಕೃತವಾಗಿ ರಿವೀಲ್‌ ಆಯಿತು ‘ಕಲ್ಕಿ 2898 ಎಡಿʼ ಸಿನಿಮಾದ ರಿಲೀಸ್‌ ಡೇಟ್

Mumbai 26/11 ದಾಳಿಯ ವಕೀಲ ಉಜ್ವಲ್‌ ನಿಕಮ್‌ ಗೆ ಬಿಜೆಪಿ ಟಿಕೆಟ್‌, ಪೂನಮ್‌ ಗೆ ಕೊಕ್?

Mumbai 26/11 ದಾಳಿಯ ವಕೀಲ ಉಜ್ವಲ್‌ ನಿಕಮ್‌ ಗೆ ಬಿಜೆಪಿ ಟಿಕೆಟ್‌, ಪೂನಮ್‌ ಗೆ ಕೊಕ್?

Thanks for visiting Udayavani

You seem to have an Ad Blocker on.
To continue reading, please turn it off or whitelist Udayavani.