ಜಿಎಸ್‌ಟಿ ಎಫೆಕ್ಟ್: ಸರಕು ಸಾಗಣೆಯಲ್ಲಿ ಸುಧಾರಣೆ


Team Udayavani, Aug 12, 2017, 12:03 PM IST

gst copy.jpg

ಹೊಸಕೋಟೆ: ರಾಷ್ಟ್ರಾದ್ಯಂತ ಜಾರಿಗೊಂಡ ಸರಕು ಸೇವಾ ತೆರಿಗೆ (ಜಿಎಸ್‌ಟಿ) ಪದ್ಧತಿ ಯಿಂದಾಗಿ ಜು.1ರಿಂದ ಸರಕು ಸಾಗಣೆಯಲ್ಲಿ ಕುಂಠಿತಗೊಂಡಿದ್ದು, ಒಂದು ತಿಂಗಳ ನಂತರ ಸಹಜ ಸ್ಥಿತಿಗೆ ಮರಳುತ್ತಿದೆ. ಬೆಂಗಳೂರು ನಗರದಿಂದಲೇ ಪಟ್ಟಣದ ವ್ಯಾಪಾರಿಗಳು ಸಾಮಗ್ರಿಗಳನ್ನು ಖರೀದಿಸುತ್ತಿದ್ದು, ಖಾಸಗಿ ಸರಕು ಸಾಗಣೆ ಸಂಸ್ಥೆಗಳ ಮೂಲಕ ಪೂರೈಕೆಯಾಗುತ್ತಿದೆ. ಪ್ರತಿದಿನ 3-4 ವಾಹನಗಳಲ್ಲಿ ಬರುತ್ತಿದ್ದುದು ಜು.1 ರಿಂದ ಸಾಮಗ್ರಿಗಳಿಗೆ ನಿಗದಿತ ಬಿಲ್‌ಗ‌ಳಿಲ್ಲದೆ ಸರಕುಗಳನ್ನು ಪಡೆಯುವುದನ್ನು ಸಾಗಣೆ ಸಂಸ್ಥೆಗಳು ನಿಲುಗಡೆ ಮಾಡಿದ್ದ ಕಾರಣ ದಿಂದಾಗಿ ಕೇವಲ 1-2 ವಾಹನಗಳಲ್ಲಿ 60-70 ಬಂಡಲ್‌ಗ‌ಳಷ್ಟೇ ಸಾಗಣೆಯಾಗುತಿತ್ತು. ಇದೀಗ ಆ.1ರಿಂದ ಪರಿಸ್ಥಿತಿಯಲ್ಲಿ ಗಣನೀಯ ಸುಧಾರಣೆ ಕಂಡುಬರುತ್ತಿದೆ. ಪ್ರತಿದಿನ 3 ವಾಹನಗಳಲ್ಲಿ 300-320 ಬಂಡಲ್‌ಗ‌ಳು ಮಾರಾಟಗಾರರು ನೀಡುವ ಅನ್ವಯಿಸುವ ತೆರಿಗೆ ಒಳಗೊಂಡ ನಿಗದಿತ ಬಿಲ್‌ಗ‌ಳೊಂದಿಗೆ ಸಾಗಣೆಯಾಗುತ್ತಿದ್ದು, ವ್ಯಾಪಾರ ವಹಿವಾಟು ಸಹ ಯಥಾಸ್ಥಿತಿಗೆ ಮರಳುತ್ತಿದೆ. ಜು.1ರಿಂದ ಸೆ.30ರವರೆಗೂ ವಾಣಿಜ್ಯ ತೆರಿಗೆ ಅಧಿಕಾರಿಗಳು ಸಹ ಸರಕು ಸಾಗಣೆಯ ಬಗ್ಗೆ ಯಾವುದೇ ತಪಾಸಣೆ ನಡೆಸುತ್ತಿಲ್ಲ. ವಾಣಿಜ್ಯ ತೆರಿಗೆ ತಪಾಸಣಾ ಕೇಂದ್ರಗಳ ಕಾರ್ಯ ಸಹ ಸ್ಥಗಿತಗೊಂಡಿದ್ದು, ಅ.1ರಿಂದ ಮೊಬೈಲ್‌ ತಂಡಗಳು
ವಾಹನಗಳನ್ನು ನಿಲುಗಡೆ ಮಾಡಿ ತಪಾಸಣೆ ನಡೆಸುವ ಪದ್ಧತಿ ಜಾರಿಗೊಳ್ಳಲಿದೆ. ಯಾವುದೇ ತರಹವಾದ ನ್ಯೂನತೆ ಕಂಡುಬಂದಲ್ಲಿ ಸ್ಥಳದಲ್ಲಿಯೇ ದಂಡ ವಿಧಿಸಲಾಗುತ್ತಿದೆ. ಜಿಎಸ್‌ಟಿ ಜಾರಿಯಾದ ಜು.1ರಿಂದ ಕೆಲವು ದಿನ ಸರಕುಗಳಿಗೆ ವಿಧಿಸಬಹುದಾದ ತೆರಿಗೆ ಪ್ರಮಾಣ, ಜಿಎಸ್‌ಟಿ ನೋಂದಣಿ ಸಂಖ್ಯೆ ಕಡ್ಡಾಯದ ಬಗ್ಗೆ ಉಂಟಾಗಿದ್ದ ಗೊಂದಲದಿಂದಾಗಿ ವ್ಯಾಪಾರ ವಹಿವಾಟಿನ ಮೇಲೆ ಪರಿಣಾಮ ಬೀರಿತ್ತು. ಇದೀಗ ನ್ಯೂನತೆಗಳನ್ನು ಸರಿಪಡಿಸಿದ್ದು, ಜಿಎಸ್‌ಟಿ ನೋಂದಣಿಯಿಲ್ಲದೆ ವ್ಯಾಪಾರಿಗಳ ಪಾನ್‌, ಆಧಾರ್‌ ಸಂಖ್ಯೆಯನ್ನು ಆಧರಿಸಿ ಬಿಲ್‌ ಪಡೆಯಬಹುದಾಗಿದೆ. ಉತ್ತಮ ಸೇವೆ ಸಲ್ಲಿಸಲು ಸಹಕಾರಿ: ಜಿಎಸ್‌ಟಿ ಜಾರಿಯಿಂದಾಗಿ ಯಾವುದೇ ಸರಕನ್ನು ಸಾಗಣೆ ಮಾಡಲು ಮಾರಾಟ ಮಾಡುವವರು ಬಿಲ್‌ ನೀಡಲು ಒತ್ತಾಯಿಸುವುದು ಅನಿವಾರ್ಯವಾಗಿದೆ. ವ್ಯವಸ್ಥೆ ಸರಳವಾಗಿದ್ದು, ವಾಣಿಜ್ಯತೆರಿಗೆ ಅಧಿಕಾರಿಗಳಿಂದ ಅನಾವಶ್ಯಕವಾಗಿ ಶೋಷಣೆಗೆ ಒಳಗಾಗುವುದು ನಿವಾರಣೆ ಗೊಂಡು ಗ್ರಾಹಕರಿಗೆ ಉತ್ತಮ ಸೇವೆ ಸಲ್ಲಿಸಲು ಸಾಧ್ಯವಾಗಿದೆ ಎಂದು ಸರಕು ಸಾಗಣೆ ಸಂಸ್ಥೆಯ ಮೇಲ್ವಿಚಾರಕ ಕಪೂರ್‌ ಅಭಿಪ್ರಾಯ ವ್ಯಕ್ತಪಡಿಸಿದ್ದಾರೆ.

ಟಾಪ್ ನ್ಯೂಸ್

Exam; ದ್ವಿತೀಯ ಪಿಯು ವಾರ್ಷಿಕ ಪರೀಕ್ಷೆ-2ಕ್ಕೆ 1.49 ಲಕ್ಷ ವಿದ್ಯಾರ್ಥಿಗಳ ನೋಂದಣಿ

Exam; ದ್ವಿತೀಯ ಪಿಯು ವಾರ್ಷಿಕ ಪರೀಕ್ಷೆ-2ಕ್ಕೆ 1.49 ಲಕ್ಷ ವಿದ್ಯಾರ್ಥಿಗಳ ನೋಂದಣಿ

ಹಿಂದುತ್ವಕ್ಕೆ ಬದ್ಧತೆ, ಸಮಗ್ರ ಅಭಿವೃದ್ಧಿಗೆ ಆದ್ಯತೆ: ಕ್ಯಾಪ್ಟನ್‌ ಬ್ರಿಜೇಶ್‌ ಚೌಟ

ಹಿಂದುತ್ವಕ್ಕೆ ಬದ್ಧತೆ, ಸಮಗ್ರ ಅಭಿವೃದ್ಧಿಗೆ ಆದ್ಯತೆ: ಕ್ಯಾಪ್ಟನ್‌ ಬ್ರಿಜೇಶ್‌ ಚೌಟ

ಕೋಮುಸೂಕ್ಷ್ಮ ಹಣೆಪಟ್ಟಿ ಕಳಚಿ, ಅಭಿವೃದ್ಧಿಗಾಗಿ ಕಾಂಗ್ರೆಸ್‌ ಬೆಂಬಲಿಸಿ: ಪದ್ಮರಾಜ್‌ ಪೂಜಾರಿ

ಕೋಮುಸೂಕ್ಷ್ಮ ಹಣೆಪಟ್ಟಿ ಕಳಚಿ, ಅಭಿವೃದ್ಧಿಗಾಗಿ ಕಾಂಗ್ರೆಸ್‌ ಬೆಂಬಲಿಸಿ: ಪದ್ಮರಾಜ್‌ ಪೂಜಾರಿ

ಕೆಂಪಡಿಕೆ ಧಾರಣೆ ಏರಿಕೆ; ಚಾಲಿ ಅಡಿಕೆಗೂ ಬೇಡಿಕೆ: ಚುನಾವಣೆ ಬಳಿಕ ಮತ್ತಷ್ಟು ಹೆಚ್ಚಳ ಸಾಧ್ಯತೆ

ಕೆಂಪಡಿಕೆ ಧಾರಣೆ ಏರಿಕೆ; ಚಾಲಿ ಅಡಿಕೆಗೂ ಬೇಡಿಕೆ: ಚುನಾವಣೆ ಬಳಿಕ ಮತ್ತಷ್ಟು ಹೆಚ್ಚಳ ಸಾಧ್ಯತೆ

ದಕ್ಷಿಣ ಕನ್ನಡ, ಉಡುಪಿ ಚಿಕ್ಕಮಗಳೂರು ಕ್ಷೇತ್ರಗಳು ; ಬಹಿರಂಗ ಪ್ರಚಾರ ಅಂತ್ಯ

ದಕ್ಷಿಣ ಕನ್ನಡ, ಉಡುಪಿ ಚಿಕ್ಕಮಗಳೂರು ಕ್ಷೇತ್ರಗಳು ; ಬಹಿರಂಗ ಪ್ರಚಾರ ಅಂತ್ಯ

Kodagu: ಕಾನೂನು ಸುವ್ಯವಸ್ಥೆಗೆ 1,600 ಪೊಲೀಸರ ನಿಯೋಜನೆ

Kodagu: ಕಾನೂನು ಸುವ್ಯವಸ್ಥೆಗೆ 1,600 ಪೊಲೀಸರ ನಿಯೋಜನೆ

Veerappa Moily ಬಿಜೆಪಿ ವಿರುದ್ಧ ಅಸಮಾಧಾನ ಜ್ವಾಲಾಮುಖಿ ಸ್ಫೋಟ

Veerappa Moily ಬಿಜೆಪಿ ವಿರುದ್ಧ ಅಸಮಾಧಾನ ಜ್ವಾಲಾಮುಖಿ ಸ್ಫೋಟ


ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು

ಬೇಸಿಗೆ ಬಿಸಿಯೂಟ: 32,173 ಮಕ್ಕಳ ನೋಂದಣಿ

ಬೇಸಿಗೆ ಬಿಸಿಯೂಟ: 32,173 ಮಕ್ಕಳ ನೋಂದಣಿ

Devanahalli: ಬೇಸಿಗೆ ತಾಪಮಾನ ಹೆಚ್ಚಳ, ಇರಲಿ ಎಚ್ಚರ

Devanahalli: ಬೇಸಿಗೆ ತಾಪಮಾನ ಹೆಚ್ಚಳ, ಇರಲಿ ಎಚ್ಚರ

Doddaballapur: ಜಾತೀಯತೆಗೆ ಮಣೆ ಹಾಕದ ಕ್ಷೇತ್ರದ ‌ಮತದಾರರು

Doddaballapur: ಜಾತೀಯತೆಗೆ ಮಣೆ ಹಾಕದ ಕ್ಷೇತ್ರದ ‌ಮತದಾರರು

Lok Sabha polls: ಲೋಕಸಭೆ ಚುನಾವಣೆಯಲ್ಲಿ ಇಂದಿರಾಗಾಂಧಿ ನೆನಪು

Lok Sabha polls: ಲೋಕಸಭೆ ಚುನಾವಣೆಯಲ್ಲಿ ಇಂದಿರಾಗಾಂಧಿ ನೆನಪು

10

Electricity problem: ಬೇಸಿಗೆ ಬೆನ್ನಲ್ಲೇ ಕಾಡುತ್ತಿದೆ ವಿದ್ಯುತ್‌ ಸಮಸ್ಯೆ

MUST WATCH

udayavani youtube

ವೈಭವದ ಹಿರಿಯಡ್ಕ ಸಿರಿಜಾತ್ರೆ ಸಂಪನ್ನ

udayavani youtube

ಯಾವೆಲ್ಲಾ ಚರ್ಮದ ಕಾಯಿಲೆಗಳಿವೆ ಹಾಗೂ ಪರಿಹಾರಗಳೇನು?

udayavani youtube

Mangaluru ಹೆಬ್ಬಾವಿನ ದೇಹದಲ್ಲಿ ಬರೋಬ್ಬರಿ 11 ಬುಲೆಟ್‌ ಪತ್ತೆ!

udayavani youtube

ನನ್ನ ಕಥೆ ನಿಮ್ಮ ಜೊತೆ

udayavani youtube

‘ಕಸಿ’ ಕಟ್ಟುವ ಸುಲಭ ವಿಧಾನ

ಹೊಸ ಸೇರ್ಪಡೆ

Exam; ದ್ವಿತೀಯ ಪಿಯು ವಾರ್ಷಿಕ ಪರೀಕ್ಷೆ-2ಕ್ಕೆ 1.49 ಲಕ್ಷ ವಿದ್ಯಾರ್ಥಿಗಳ ನೋಂದಣಿ

Exam; ದ್ವಿತೀಯ ಪಿಯು ವಾರ್ಷಿಕ ಪರೀಕ್ಷೆ-2ಕ್ಕೆ 1.49 ಲಕ್ಷ ವಿದ್ಯಾರ್ಥಿಗಳ ನೋಂದಣಿ

ಹಿಂದುತ್ವಕ್ಕೆ ಬದ್ಧತೆ, ಸಮಗ್ರ ಅಭಿವೃದ್ಧಿಗೆ ಆದ್ಯತೆ: ಕ್ಯಾಪ್ಟನ್‌ ಬ್ರಿಜೇಶ್‌ ಚೌಟ

ಹಿಂದುತ್ವಕ್ಕೆ ಬದ್ಧತೆ, ಸಮಗ್ರ ಅಭಿವೃದ್ಧಿಗೆ ಆದ್ಯತೆ: ಕ್ಯಾಪ್ಟನ್‌ ಬ್ರಿಜೇಶ್‌ ಚೌಟ

ಕೋಮುಸೂಕ್ಷ್ಮ ಹಣೆಪಟ್ಟಿ ಕಳಚಿ, ಅಭಿವೃದ್ಧಿಗಾಗಿ ಕಾಂಗ್ರೆಸ್‌ ಬೆಂಬಲಿಸಿ: ಪದ್ಮರಾಜ್‌ ಪೂಜಾರಿ

ಕೋಮುಸೂಕ್ಷ್ಮ ಹಣೆಪಟ್ಟಿ ಕಳಚಿ, ಅಭಿವೃದ್ಧಿಗಾಗಿ ಕಾಂಗ್ರೆಸ್‌ ಬೆಂಬಲಿಸಿ: ಪದ್ಮರಾಜ್‌ ಪೂಜಾರಿ

ಕೆಂಪಡಿಕೆ ಧಾರಣೆ ಏರಿಕೆ; ಚಾಲಿ ಅಡಿಕೆಗೂ ಬೇಡಿಕೆ: ಚುನಾವಣೆ ಬಳಿಕ ಮತ್ತಷ್ಟು ಹೆಚ್ಚಳ ಸಾಧ್ಯತೆ

ಕೆಂಪಡಿಕೆ ಧಾರಣೆ ಏರಿಕೆ; ಚಾಲಿ ಅಡಿಕೆಗೂ ಬೇಡಿಕೆ: ಚುನಾವಣೆ ಬಳಿಕ ಮತ್ತಷ್ಟು ಹೆಚ್ಚಳ ಸಾಧ್ಯತೆ

ದಕ್ಷಿಣ ಕನ್ನಡ, ಉಡುಪಿ ಚಿಕ್ಕಮಗಳೂರು ಕ್ಷೇತ್ರಗಳು ; ಬಹಿರಂಗ ಪ್ರಚಾರ ಅಂತ್ಯ

ದಕ್ಷಿಣ ಕನ್ನಡ, ಉಡುಪಿ ಚಿಕ್ಕಮಗಳೂರು ಕ್ಷೇತ್ರಗಳು ; ಬಹಿರಂಗ ಪ್ರಚಾರ ಅಂತ್ಯ

Thanks for visiting Udayavani

You seem to have an Ad Blocker on.
To continue reading, please turn it off or whitelist Udayavani.