ಕೈ ಹಿಡಿದ ರಾಗಿ ಬೆಳೆ: ರೈತರಲ್ಲಿ ಹರ್ಷ


Team Udayavani, Jan 25, 2018, 1:41 PM IST

blore-G-1.jpg

ದೊಡ್ಡಬಳ್ಳಾಪುರ: ತಾಲೂಕಿನಲ್ಲಿ ಮುಂಗಾರು ಹಂಗಾಮು ಮುಗಿದಿದ್ದು, ಹಿಂಗಾರು ಹಂಗಾಮಿನ ಬಿತ್ತನೆ ಕಾರ್ಯ ಪ್ರಗತಿಯಲ್ಲಿದೆ. ಈ ಬಾರಿ ವಾಡಿಕೆಗಿಂತ ಹೆಚ್ಚು ಮಳೆಯಾಗಿದ್ದು, ಕಳೆದ ನಾಲ್ಕೈದು ವರ್ಷಗಳಿಗೆ ಹೋಲಿಸಿದರೆ ರೈತರಿಗೆ ಸಮಾಧಾನ ತಂದಿದೆ. ರಾಗಿ, ಜೋಳಗಳ ಬೆಳೆ ಕಟಾವಿಗೆ ಬಂದಿದ್ದು, ರೈತರು ಕಣ ಮಾಡುವುದರಲ್ಲಿ ನಿರತರಾಗಿದ್ದಾರೆ.

ಕೃಷಿ ಇಲಾಖೆ ಅಂಕಿ ಅಂಶಗಳ ಪ್ರಕಾರ ತಾಲೂಕಿನಲ್ಲಿ ಒಟ್ಟಾರೆ ಡಿಸೆಂಬರ್‌ ಅಂತ್ಯದ ವೇಳೆಗೆ 757 ಮಿಮೀ ಮಳೆ ಆಗಬೇಕಿದ್ದು, 1091ಮಿಮೀ ಮಳೆಯಾಗಿದೆ. ತಾಲೂಕಿನಲ್ಲಿ ಕಸಬಾ ಹೋಬಳಿಯಲ್ಲಿ 1026 ಮಿಮೀ, ದೊಡ್ಡಬೆಳವಂಗಲ ಹೋಬಳಿಯಲ್ಲಿ 1139 ಮಿಮೀ, ಸಾಸಲು ಹೋಬಳಿಯಲ್ಲಿ 12095 ಮಿಮೀ, ತೂಬಗೆರೆ ಹೋಬಳಿಯಲ್ಲಿ 1119 ಮಿಮೀ, ಮಧುರೆ ಹೋಬಳಿಯಲ್ಲಿ 1063 ಮಿಮೀ ಸೇರಿ ತಾಲೂಕಿನಲ್ಲಿ ಸರಾಸರಿ 1085.8 ಮಿಮೀ ಮಳೆಯಾಗಿದ್ದು, ವಾಡಿಕೆ ಮಳೆಗಿಂತ 328 ಮಿಮೀ ಹೆಚ್ಚಾಗಿದೆ. ಕಳೆದ ಸಾಲಿನಲ್ಲಿ 651.8 ಮಿಮೀ ಮಳೆಯಾಗಿತ್ತು.

ರಾಗಿ ಹೆಚ್ಚು, ಜೋಳ ಕಡಿಮೆ: ತಾಲೂಕಿನ ಹೋಬಳಿಗಳಲ್ಲಿ 2017-18ನೇ ಸಾಲಿನ ಮುಂಗಾರು ಹಂಗಾಮಿನಲ್ಲಿ ಕೃಷಿ ಇಲಾಖೆ ಬೆಳೆ ಪ್ರಗತಿಯನ್ವಯ ಅಂತಿಮ ಬಿತ್ತನೆಯಲ್ಲಿ ಗುರಿ ಮುಟ್ಟಿ ಶೇ.97.9 ಪ್ರಗತಿ ಸಾಧಿಸಿದೆ. ಈ ಹಿಂದೆ ತಾಲೂಕಿನಲ್ಲಿ ಜೋಳ ಹೆಚ್ಚು ಬೆಳೆಯಲಾಗುತ್ತಿತ್ತು. ಆದರೆ, ಈ ಬಾರಿ ರಾಗಿ ಬೆಳೆ ಹೆಚ್ಚಾಗಿರುವುದು. ರೈತರಿಗೆ ಮೇವಿನ
ಬವಣೆ ನೀಗಿಸುವ ವಿಶ್ವಾಸವಿದೆ. 

ತಾಲೂಕಿನಲ್ಲಿ ರಾಗಿ 9,140 ಹೆಕ್ಟೇರ್‌ ಪ್ರದೇಶದ ಗುರಿ ಹೊಂದಲಾಗಿದ್ದು, 12,250 ಹೆಕ್ಟೇರ್‌ ಗುರಿ ತಲುಪಿದೆ. ಮುಸುಕಿನ ಜೋಳ 10,200 ಹೆಕ್ಟೇರ್‌ ಪ್ರದೇಶದ ಗುರಿ ಹೊಂದಲಾಗಿದ್ದು, 7,211 ಹೆಕ್ಟೇರ್‌ ಗುರಿ ತಲುಪಿದೆ.
ಭತ್ತ, ರಾಗಿ, ಮುಸುಕಿನ ಜೋಳ, ತೃಣಧಾನ್ಯ, ಏಕದಳ ತೊಗರಿ, ಆಲಸಂದೆ, ಅವರೆ, ಉದ್ದು, ಹೆಸರು, ಹುರುಳಿ (ದ್ವಿದಳ), ನೆಲೆಗಡಲೆ, ಹರಳು, ಸಾಸುವೆ, ಹುಚ್ಚೆಳ್ಳು (ಎಣ್ಣೆಕಾಳು), ಮೇವಿನ ಜೋಳ, ಪಾಪ್‌ ಕಾರ್ನ್ ಸೇರಿದಂತೆ ಎಲ್ಲಾ ಬೆಳೆಗಳ ಗುರಿ 21,830 ಹೆಕ್ಟೇರ್‌ಗಳಾಗಿದ್ದು, 21,373 ಹೆಕ್ಟೇರ್‌ ಗುರಿ ತಲುಪಿದೆ. 

ಹಿಂಗಾರು ಹಂಗಾಮು: ತಾಲೂಕಿನ ಐದು ಹೋಬಳಿಗಳಲ್ಲಿ 2017-18ನೇ ಸಾಲಿನ ಹಿಂಗಾರು ಹಂಗಾಮಿನ ಕೃಷಿ ಇಲಾಖೆ ಬೆಳೆ ಪ್ರಗತಿಯನ್ವಯ ರಾಗಿ, ಮುಸುಕಿನ ಜೋಳ, ಗೋಧಿ, ಹುರುಳಿ, ಕಡಲೆ, ಸೂರ್ಯಕಾಂತಿ ಸೇರಿದಂತೆ ಎಲ್ಲಾ ಬೆಳೆಗಳ ಗುರಿ 700 ಹೆಕ್ಟೇರ್‌ ಗಳಾಗಿದ್ದು, 341ಹೆಕ್ಟರ್‌ಗಳ ಗುರಿ ಮುಟ್ಟಿದೆ.

ಜೋಳಕ್ಕಿಲ್ಲ ಬೆಲೆ: ರೈತರು, ರಾಗಿ ಹುಲ್ಲಿಗಿಂತ ಜೋಳದ ತೆನೆಗಳನ್ನೇ ಹೆಚ್ಚಾಗಿ ಪಶುಗಳಿಗೆ ನೀಡುತ್ತಿದ್ದಾರೆ. ರಾಗಿಗೆ ಹೋಲಿಸಿದರೆ ಮುಸುಕಿನ ಜೋಳ ಬೆಳೆಯುವುದು ಸುಲಭ. ಇದಲ್ಲದೇ ಕಳೆದ ಬಾರಿ ಜೋಳಕ್ಕೆ ಉತ್ತಮ ಬೆಲೆ ದೊರಕಿತ್ತು. ಆದರೆ, ಈ ಬಾರಿ ಜೋಳದ ಬೆಲೆ ಕಡಿಮೆಯಾಗಿದೆ.

ಡಾ.ಸ್ವಾಮಿನಾಥನ್‌ ವರದಿಯಂತೆ ರಾಗಿಗೆ ವೈಜ್ಞಾನಿಕ ಬೆಲೆ ನಿಗದಿಯಾಗಬೇಕು. ಕೆಎಂಎಫ್ ತಯಾರಿಸುವ ಪಶು ಆಹಾರಕ್ಕೆ ಬಳಕೆ ಮಾಡಲು ಮೆಕ್ಕೆಜೋಳವನ್ನು ಬೇರೆ ದೇಶಗಳಿಂದ ತರಿಸಲಾಗುತ್ತಿದೆ. ಇದಕ್ಕೆ ಬದಲಾಗಿ ರಾಜ್ಯ ಸರ್ಕಾರ ಬೆಂಬಲ ಬೆಲೆಯಲ್ಲಿ ಜೋಳ ಖರೀದಿ ಮಾಡಿ ಆಶು ಆಹಾರ ತಯಾರಿಕೆಗೆ ನೀಡಬೇಕು.
●ಸತೀಶ್‌, ರೈತ ಮುಖಂಡ

ಟಾಪ್ ನ್ಯೂಸ್

ಹಳದಿ ಶಾಸ್ತ್ರದ ವೇಳೆ ವರನಿಗೆ ವಿದ್ಯುತ್ ಸ್ಪರ್ಶ… ಆಸ್ಪತ್ರೆ ದಾರಿಯಲ್ಲಿ ಕೊನೆಯುಸಿರು

ಹಳದಿ ಶಾಸ್ತ್ರದ ವೇಳೆ ವಿದ್ಯುತ್ ಸ್ಪರ್ಶ… ಆಸ್ಪತ್ರೆ ದಾರಿ ಮಧ್ಯೆ ಕೊನೆಯುಸಿರೆಳೆದ ವರ

Inheritance Tax:  ಸ್ಯಾಮ್‌ ಪಿತ್ರೋಡಾ ಹೇಳಿದ್ದೇನು-ಏನಿದು ಪಿತ್ರಾರ್ಜಿತ ತೆರಿಗೆ ಜಟಾಪಟಿ!

Inheritance Tax:  ಸ್ಯಾಮ್‌ ಪಿತ್ರೋಡಾ ಹೇಳಿದ್ದೇನು-ಏನಿದು ಪಿತ್ರಾರ್ಜಿತ ತೆರಿಗೆ ಜಟಾಪಟಿ!

Rahul Gandhi 3

U-turn ಹೊಡೆದ ರಾಹುಲ್: ಸಂಪತ್ತು ಹಂಚಿಕೆ ಬಗ್ಗೆ ಹೇಳಿಲ್ಲ,ಅನ್ಯಾಯ…

ತಂಗಿ ಮದುವೆಗೆ ಟಿವಿ ಗಿಫ್ಟ್‌ ಕೊಟ್ಟದ್ದಕ್ಕೆ ಅಸಮಾಧಾನ: ಪತಿಯನ್ನು ಥಳಿಸಿ ಕೊಲ್ಲಿಸಿದ ಪತ್ನಿ

ತಂಗಿ ಮದುವೆಗೆ ಟಿವಿ ಗಿಫ್ಟ್‌ ಕೊಟ್ಟದ್ದಕ್ಕೆ ಅಸಮಾಧಾನ: ಪತಿಯನ್ನು ಥಳಿಸಿ ಕೊಲ್ಲಿಸಿದ ಪತ್ನಿ

15

ರಾಹುಲ್ ಗಾಂಧಿ ಹೋದಲ್ಲೆಲ್ಲಾ ನಾವು ಗೆದ್ದಿದೀವಿ: ಬಳ್ಳಾರಿಯಲ್ಲಿ ನಮ್ಮ ಗೆಲುವು ನಿಶ್ಚಿತ

Bommai BJP

Congress ತುಷ್ಟೀಕರಣ ರಾಜಕೀಯಕ್ಕೆ ಮುಸ್ಲಿಂ ಮೀಸಲಾತಿಗೆ ಬೆಂಬಲಿಸುತ್ತದೆ: ಬೊಮ್ಮಾಯಿ

ಭಾರತದಲ್ಲಿ ರಿಲೀಸ್‌ಗೂ ಮುನ್ನ ʼಮಂಕಿ ಮ್ಯಾನ್‌ʼ ಹೆಚ್‌ ಡಿ ಕಾಪಿ ಲೀಕ್: ವಿಳಂಬ ಯಾಕೆ?

ಭಾರತದಲ್ಲಿ ರಿಲೀಸ್‌ಗೂ ಮುನ್ನ ʼಮಂಕಿ ಮ್ಯಾನ್‌ʼ ಹೆಚ್‌ ಡಿ ಕಾಪಿ ಲೀಕ್: ವಿಳಂಬ ಯಾಕೆ?


ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು

ಬೇಸಿಗೆ ಬಿಸಿಯೂಟ: 32,173 ಮಕ್ಕಳ ನೋಂದಣಿ

ಬೇಸಿಗೆ ಬಿಸಿಯೂಟ: 32,173 ಮಕ್ಕಳ ನೋಂದಣಿ

Devanahalli: ಬೇಸಿಗೆ ತಾಪಮಾನ ಹೆಚ್ಚಳ, ಇರಲಿ ಎಚ್ಚರ

Devanahalli: ಬೇಸಿಗೆ ತಾಪಮಾನ ಹೆಚ್ಚಳ, ಇರಲಿ ಎಚ್ಚರ

Doddaballapur: ಜಾತೀಯತೆಗೆ ಮಣೆ ಹಾಕದ ಕ್ಷೇತ್ರದ ‌ಮತದಾರರು

Doddaballapur: ಜಾತೀಯತೆಗೆ ಮಣೆ ಹಾಕದ ಕ್ಷೇತ್ರದ ‌ಮತದಾರರು

Lok Sabha polls: ಲೋಕಸಭೆ ಚುನಾವಣೆಯಲ್ಲಿ ಇಂದಿರಾಗಾಂಧಿ ನೆನಪು

Lok Sabha polls: ಲೋಕಸಭೆ ಚುನಾವಣೆಯಲ್ಲಿ ಇಂದಿರಾಗಾಂಧಿ ನೆನಪು

10

Electricity problem: ಬೇಸಿಗೆ ಬೆನ್ನಲ್ಲೇ ಕಾಡುತ್ತಿದೆ ವಿದ್ಯುತ್‌ ಸಮಸ್ಯೆ

MUST WATCH

udayavani youtube

ವೈಭವದ ಹಿರಿಯಡ್ಕ ಸಿರಿಜಾತ್ರೆ ಸಂಪನ್ನ

udayavani youtube

ಯಾವೆಲ್ಲಾ ಚರ್ಮದ ಕಾಯಿಲೆಗಳಿವೆ ಹಾಗೂ ಪರಿಹಾರಗಳೇನು?

udayavani youtube

Mangaluru ಹೆಬ್ಬಾವಿನ ದೇಹದಲ್ಲಿ ಬರೋಬ್ಬರಿ 11 ಬುಲೆಟ್‌ ಪತ್ತೆ!

udayavani youtube

ನನ್ನ ಕಥೆ ನಿಮ್ಮ ಜೊತೆ

udayavani youtube

‘ಕಸಿ’ ಕಟ್ಟುವ ಸುಲಭ ವಿಧಾನ

ಹೊಸ ಸೇರ್ಪಡೆ

8-uv-fusion

Smell of First Rain: ಹೊಸಮಳೆಯ ಮೃಣ್ಮಯ ಗಂಧ

7-uv-fsuion

Yugadi: ಯುಗ ಯುಗಾದಿ ಕಳೆದರೂ ಯುಗಾದಿ ಮರಳಿ ಬರುತಿದೆ

6-uv-fusion

UV Fusion: ಯುಗಾದಿ ಸಂಭ್ರಮೋತ್ಸವ

ಹಳದಿ ಶಾಸ್ತ್ರದ ವೇಳೆ ವರನಿಗೆ ವಿದ್ಯುತ್ ಸ್ಪರ್ಶ… ಆಸ್ಪತ್ರೆ ದಾರಿಯಲ್ಲಿ ಕೊನೆಯುಸಿರು

ಹಳದಿ ಶಾಸ್ತ್ರದ ವೇಳೆ ವಿದ್ಯುತ್ ಸ್ಪರ್ಶ… ಆಸ್ಪತ್ರೆ ದಾರಿ ಮಧ್ಯೆ ಕೊನೆಯುಸಿರೆಳೆದ ವರ

Inheritance Tax:  ಸ್ಯಾಮ್‌ ಪಿತ್ರೋಡಾ ಹೇಳಿದ್ದೇನು-ಏನಿದು ಪಿತ್ರಾರ್ಜಿತ ತೆರಿಗೆ ಜಟಾಪಟಿ!

Inheritance Tax:  ಸ್ಯಾಮ್‌ ಪಿತ್ರೋಡಾ ಹೇಳಿದ್ದೇನು-ಏನಿದು ಪಿತ್ರಾರ್ಜಿತ ತೆರಿಗೆ ಜಟಾಪಟಿ!

Thanks for visiting Udayavani

You seem to have an Ad Blocker on.
To continue reading, please turn it off or whitelist Udayavani.