ಪತಿ ವಿರುದ್ದ ಡೆತ್ನೋಟ್ ಬರೆದು ಪತ್ನಿ ಆತ್ಮಹತ್ಯೆ
Team Udayavani, Feb 26, 2022, 10:19 AM IST
ಎಚ್.ಡಿ.ಕೋಟೆ: ಕೌಟುಂಬಿಕ ಕಲಹದ ಹಿನ್ನೆಲೆಯಲ್ಲಿ ಗೃಹಿಣಿ ಡೆತ್ನೋಟ್ ಬರೆದು ಮನೆಯಲ್ಲಿ ನೇಣುಬಿಗಿದುಕೊಂಡು ಸಾವನ್ನಪ್ಪಿರುವ ಘಟನೆ ತಾಲೂಕಿನ ತೆರಣಿಮುಂಟಿ ಗ್ರಾಮದಲ್ಲಿ ಜರುಗಿದೆ.
ತೆರಣಿಮುಂಟಿ ಗ್ರಾಮದ ಶಂಕರ್ ಪತ್ನಿ ಪವಿತ್ರ ಆತ್ಮಹತ್ಯೆಗೆ ಶರಣಾದ ಗೃಹಿಣಿ.
ಈಕೆ 2ವರ್ಷಗಳ ಹಿಂದಷ್ಟೇ ಶಂಕರ್ ಜೊತೆಗೆ ವಿವಾಹವಾಗಿದ್ದರು. ಮದ್ಯ ವ್ಯಸನಿಯಾಗಿದ್ದ ಪತಿ ಪ್ರತಿದಿನ ಕುಡಿದು ಬಂದು ಮನೆಯಲ್ಲಿ ಗಲಾಟೆ ಮಾಡುತ್ತಿದ್ದನು. ಈ ಕುರಿತು ಹಲವಾರು ಬಾರಿ ಬುದ್ಧಿ ಹೇಳಿದ್ದರೂ ಯಾವುದೇ ಪ್ರಯೋಜನವಾಗಿರಲಿಲ್ಲ. ಘಟನೆಯಿಂದ ಬೇಸತ್ತ ಪವಿತ್ರ ಗುರುವಾರ ಮನೆಯಲ್ಲಿ ಯಾರೂ ಇಲ್ಲದ ವೇಳೆಯಲ್ಲಿ “ನನ್ನ ಸಾವಿಗೆ ನನ್ನ ಪತಿಯೇ ಕಾರಣ’ ಎಂದು ಡೆತ್ ನೋಟ್ ಬರೆದಿಟ್ಟು, ನೇಣು ಬಿಗಿದುಕೊಂಡು ಆತ್ಮಹತ್ಯೆ ಮಾಡಿಕೊಂಡಿದ್ದಾರೆ.
ಸರಗೂರು ಠಾಣೆ ಪೊಲೀಸರು ಘಟನಾ ಸ್ಥಳಕ್ಕೆ ಹೋಗಿ ಪರಿಶೀಲನೆ ನಡೆಸಿದಾಗ ಡೆತ್ ನೋಟ್ ಸಿಕ್ಕಿದೆ. ಡೆತ್ನೋಟ್ ಆಧಾರದ ಮೇಲೆ ಪತಿ ಶಂಕರನನ್ನು ಬಂಧಿಸಿ ಪ್ರಕರಣ ದಾಖಲಿಸಿದ್ದಾರೆ
ಟಾಪ್ ನ್ಯೂಸ್
ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು
MUST WATCH
ಹೊಸ ಸೇರ್ಪಡೆ
Andhra Pradesh; ಸಿಎಂ ಜಗನ್ ಪಕ್ಷಕ್ಕೆ ರೈತರು,ಟೆೃಲರ್, ಗೃಹಿಣಿಯರೇ ಸ್ಟಾರ್ ಪ್ರಚಾರಕರು!
BJP ಅಧಿಕಾರದ ರಾಜ್ಯಗಳಲ್ಲಿ ಎಸ್ಸಿಪಿ, ಟಿಎಸ್ಪಿ ಕಾಯ್ದೆ ಜಾರಿ ಮಾಡಿಲ್ಲ: ಸಿಎಂ
Loksabha; ಮುಸ್ಲಿಮರಿಗೆ ಅಷ್ಟೇ ಅಲ್ಲ, ನನಗೂ 5 ಮಕ್ಕಳಿದ್ದಾರೆ: ಮೋದಿಗೆ ಖರ್ಗೆ ಟಕ್ಕರ್
ಉಗ್ರರಿದ್ದಲ್ಲೇ ನುಗ್ಗಿ ವಿನಾಶ; ಇದು ನವಭಾರತದ ಹೆಗ್ಗಳಿಕೆ: ಪ್ರಧಾನಿ ಮೋದಿ
Lok Sabha; ರಾಯ್ಬರೇಲಿ, ಅಮೇಠಿ ಕಾಂಗ್ರೆಸ್ ಅಭ್ಯರ್ಥಿಗಳ ಬಗ್ಗೆ ಇನ್ನೂ ಸಸ್ಪೆನ್ಸ್!