“ಸಾಮರಸ್ಯ ಕದಡುತ್ತಿರುವ ಸಚಿವ’
Team Udayavani, Dec 28, 2017, 1:18 PM IST
ದೇವನಹಳ್ಳಿ: ಅಸಂವಿಧಾನಿಕ ಪದಗಳನ್ನು ಬಳಸಿ ಸಂವಿಧಾನ ವಿರೋಧಿಸಿ ಸಮಾಜದ ಸಾಮರಸ್ಯ ಕದಡುತ್ತಿರುವ ಬೇಜವಾಬ್ದಾರಿ ಕೇಂದ್ರ ಸಚಿವ ಅನಂತಕುಮಾರ್ ಹೆಗಡೆ ಅವರನ್ನು ಕೇಂದ್ರ ಸಚಿವ ಸ್ಥಾನದಿಂದ ವಜಾಗೊಳಿಸಬೇಕೆಂದು ಬೆಂಗಳೂರು ಗ್ರಾಮಾಂತರ ಜಿಲ್ಲಾ ಯುವಕಾಂಗ್ರೆಸ್ ಅಧ್ಯಕ್ಷ ಕೆ. ಆರ್.ನಾಗೇಶ್ ಒತ್ತಾಯಿಸಿದ್ದಾರೆ.
ನಗರದ ಪ್ರವಾಸಿ ಮಂದಿರದಲ್ಲಿ ಜಿಲ್ಲಾ ಮತ್ತು ತಾಲೂಕು ಯುವ ಕಾಂಗ್ರೆಸ್ ವತಿಯಿಂದ ಕರೆದಿದ್ದ ಪತ್ರಿಕಾಗೋಷ್ಠಿಯಲ್ಲಿ
ಮಾತನಾಡಿದ ಅವರು, ಕೇಂದ್ರ ಸಚಿವ ಅನಂತಕುಮಾರ್ ಹೆಗಡೆ “ನಾವು ಬಂದಿರುವುದೇ ಸಂವಿಧಾನ ಬದಲಾಯಿಸಲು’ ಎಂಬ ಹೇಳಿಕೆ ನೀಡಿ ಡಾ.ಅಂಬೇಡ್ಕರ್ ಅವರನ್ನು ಅವಮಾನಿಸಿದ್ದಾರೆ. ಸಚಿವರಾಗಿ ಸಂವಿಧಾನದ ಮೇಲೆ ಪ್ರಮಾಣ ವಚನ ಸ್ವೀಕರಿಸಿರುವ ಇವರು ಸಂವಿಧಾನದ ಮಹತ್ವ ಮರೆತ್ತಿದ್ದಾರೆ. ಸಂವಿಧಾನದ ಆಶಯಗಳನ್ನು ಎತ್ತಿ ಹಿಡಿಯಬೇಕಾಗಿದ್ದ ಕೇಂದ್ರ ಸರ್ಕಾರದ ಸಚಿವರು ಇಂಥ ಬೇಜವಾಬ್ದಾರಿ ಮಾತು ನಡವಳಿಕೆಗಳ ಮೂಲಕ ಅಪಪ್ರಚಾರವೆಸಗಿದ್ದಾರೆ. ದೇಶದ ಜನರಲ್ಲಿ ಕ್ಷಮೆಯಾಚಿಸಬೇಕು. ಕೂಡಲೇ ಪ್ರಧಾನಿ ನರೇಂದ್ರ ಮೋದಿ ತಮ್ಮ ಸಂಪುಟ ದಿಂದ ಹೊರಹಾಕಬೇಕು ಎಂದು ಆಗ್ರಹಿಸಿದರು.
ತಾಲೂಕು ಯುವ ಕಾಂಗ್ರೆಸ್ ಅಧ್ಯಕ್ಷ ಆರ್.ಸುಮಂತ್ ಮಾತನಾಡಿ, ಕೇಂದ್ರ ಸಚಿವ ಸಂಸದರಾಗಿ ಚುನಾಯಿತರಾಗ
ಬೇಕಾದರೆ ಈ ದೇಶದ ಸಂವಿಧಾನವೇ ಆಧಾರ. ವಿಧಾನಕ್ಕೆ ದ್ರೋಹ ಬಗೆದು ನಡೆದುಕೊಳ್ಳುತ್ತಿರುವ ಇವರ ನಡೆ ಈ ದೇಶದ ಜನತೆ ತಲೆ ತಗ್ಗಿಸುವಂತಹ ಕೆಲಸಮಾಡುತ್ತಿರುವುದು ಶೋಚನೀಯ ಎಂದು ಹಾರಿಹಾಯ್ದರು.
ಐಎನ್ಟಿಯು ಕಾಂಗ್ರೆಸ್ ತಾಲೂಕು ಅಧ್ಯಕ್ಷ ಯು. ಎಂ.ಮಿಥುನ್, ಕಾರ್ಯಾಧ್ಯಕ್ಷ ರಾಜೇಶ್, ಮುಖಂಡ ಹರೀಶ್,
ರಮೇಶ್, ಮುನಿರಾಜು ಮತ್ತಿತರರಿದ್ದರು.
ಟಾಪ್ ನ್ಯೂಸ್
ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು
MUST WATCH
ಹೊಸ ಸೇರ್ಪಡೆ
ಹಿಂದುತ್ವಕ್ಕೆ ಬದ್ಧತೆ, ಸಮಗ್ರ ಅಭಿವೃದ್ಧಿಗೆ ಆದ್ಯತೆ: ಕ್ಯಾಪ್ಟನ್ ಬ್ರಿಜೇಶ್ ಚೌಟ
ಕೋಮುಸೂಕ್ಷ್ಮ ಹಣೆಪಟ್ಟಿ ಕಳಚಿ, ಅಭಿವೃದ್ಧಿಗಾಗಿ ಕಾಂಗ್ರೆಸ್ ಬೆಂಬಲಿಸಿ: ಪದ್ಮರಾಜ್ ಪೂಜಾರಿ
ಕೆಂಪಡಿಕೆ ಧಾರಣೆ ಏರಿಕೆ; ಚಾಲಿ ಅಡಿಕೆಗೂ ಬೇಡಿಕೆ: ಚುನಾವಣೆ ಬಳಿಕ ಮತ್ತಷ್ಟು ಹೆಚ್ಚಳ ಸಾಧ್ಯತೆ
ದಕ್ಷಿಣ ಕನ್ನಡ, ಉಡುಪಿ ಚಿಕ್ಕಮಗಳೂರು ಕ್ಷೇತ್ರಗಳು ; ಬಹಿರಂಗ ಪ್ರಚಾರ ಅಂತ್ಯ
Kodagu: ಕಾನೂನು ಸುವ್ಯವಸ್ಥೆಗೆ 1,600 ಪೊಲೀಸರ ನಿಯೋಜನೆ