ಹಸಿ ಕರಗ ಮುಗೀತು, ಇಂದು ವೈಭವದ ಕರಗ ಉತ್ಸವ


Team Udayavani, May 18, 2019, 3:00 AM IST

hasi-karaga

ದೊಡ್ಡಬಳ್ಳಾಪುರ: ನಗರದ ವನ್ನಿಗರ ಪೇಟೆಯ ಇತಿಹಾಸ ಪ್ರಸಿದ್ಧ ಶ್ರೀ ಸಪ್ತಮಾತೃಕ ಮಾರಿಯಮ್ಮ ದೇವಾಲಯದಲ್ಲಿ ನಡೆಯಲಿರುವ ಕರಗ ಮಹೋತ್ಸವದ ಅಂಗವಾಗಿ ಹಸಿ ಕರಗ ಉತ್ಸವ ಸಂಭ್ರಮದಿಂದ ನೆರವೇರಿತು. ಹಸಿ ಕರಗ ಉತ್ಸವವನ್ನು ಸಹಸ್ರಾರು
ಜನ ವೀಕ್ಷಿಸಿದರು.

ಕುಪ್ಪಂನ ಪೂಜಾರಿ ಮುನಿರತ್ನಂ ಬಾಲಾಜಿ ಹಸಿ ಕರಗವನ್ನು ಹೊತ್ತು ಕರಗದ ಧಾರ್ಮಿಕ ವಿಧಿಗಳನ್ನು ನೆರವೇರಿಸಿದರು. ನಗರದ ಗಗನಾರ್ಯಸ್ವಾಮಿ ಮಠದಿಂದ ಹೊರಟ ಉತ್ಸವ ಹಳೇ ಬಸ್‌ ನಿಲ್ದಾಣ, ಶ್ರೀ ನೆಲದಾಂಜನೇಯಸ್ವಾಮಿ ದೇವಾಲಯ, 7 ಸುತ್ತಿನ ಕೋಟೆ, ತೂಬಗೆರೆ ಪೇಟೆ, ವನ್ನಿಗರಪೇಟೆ ಮೊದಲಾದೆಡೆ ಸಂಚರಿಸಿ ದೇವಾಲಯದ ಬಳಿ ಆಗಮಿಸಿತು.

ಶನಿವಾರ ನಡೆಯಲಿರುವ ಶ್ರೀ ಸಪ್ತಮಾತೃಕ ಮಾರಿಯಮ್ಮ ಕರಗ ಮಹೋತ್ಸವಕ್ಕೆ ಸಿದ್ಧತೆಗಳು ನಡೆದಿವೆ. ದೇವಾಲಯವನ್ನು ವಿದ್ಯುತ್‌ ದೀಪಾಲಂಕಾರಗಳಿಂದ ಅಲಂಕರಿಸಲಾಗಿದೆ. ನಗರದ ವಿವಿಧ ವೃತ್ತಗಳಲ್ಲಿ ತಮಿಳುನಾಡು ಕಲಾವಿದರಿಂದ ತಯಾರಿಸಲಾದ ವಿವಿಧ ದೇವತೆಗಳ ವಿದ್ಯುತ್‌ ದೀಪಾಲಂಕಾರ, ಬೃಹತ್‌ ಕಟೌಟು ಮೆರುಗು ನೀಡಿವೆ.

ಕರಗದ ಅಂಗವಾಗಿ ದೇವಾಲಯದಲ್ಲಿ ವಿಶೇಷ ಗಣ ಹೋಮ, ನವಗ್ರಹ ಹೋಮ, ಚಂಡಿಕಾ ಹೋಮ ನಡೆಯಿತು. ಕರಗ ಉತ್ಸವದ ದಿನದ‌ವರೆಗೆ ನಿತ್ಯ ಅಭಿಷೇಕ, ಪೊಂಗಲ್‌ ಸೇವೆ ನಡೆದವು.
ವಸಂತ ಮಾಸದ ಮಲ್ಲಿಗೆ ಪರಿಮಳದೊಂದಿಗೆ ಅಬಾಲವೃದ್ಧಿಯಾಗಿ ಜಾತಿ ಮತ ಧರ್ಮಗಳ ಭೇದವಿಲ್ಲದೆ ಆಚರಿಸುವ ವಿಶಿಷ್ಟ ಉತ್ಸವ ಕರಗ ಮಹೋತ್ಸವ. ಕರಗ ಮಹೋತ್ಸವದ ಧಾರ್ಮಿಕ ವಿಧಿ ವಿಧಾನಗಳು ವೈಶಿಷ್ಟ ಪೂರ್ಣ. ಕೆಲವು ಆಚರಣೆಗಳು ಗೌಪ್ಯವಾಗಿ ಜರುಗುತ್ತವೆ. 9 ದಿನ ಉತ್ಸವದ ವಿಧಿ ವಿಧಾನಗಳು ನಡೆಯಲಿವೆ.

ಕರಗ ಸ್ತ್ರೀ ದೇವತಾರಾಧನೆಯಾದರೂ ಕರಗ ಹೊರುವುದು ಮಾತ್ರ ಗಂಡಸರೇ. ವಹಿ°ಕುಲ ಕ್ಷತ್ರಿಯರು (ತಿಗಳರು) ಈ ಕರಗ ಉತ್ಸವ ಆಚರಿಸುತ್ತಾರೆ. ಮೂಲತಃ ತಮಿಳುನಾಡಿನವರಾದ ಇವರು ತೋಟಗಾರಿಕೆ ನಡೆಸಲು ಕರ್ನಾಟಕವನ್ನು ಪ್ರವೇಶಿಸಿದ ಸಂದರ್ಭದಲ್ಲಿ ಕರಗ ಉತ್ಸವವೂ ಬಂದಿದೆ ಎನ್ನಲಾಗಿದೆ.

ಕರಗ ಉತ್ಸವಕ್ಕೆ ಪೌರಾಣಿಕ ಹಿನ್ನೆಲೆಯಿದ್ದು ಕರಗ ಹೊರಲು ಪ್ರೇರಕವಾಗುವುದನ್ನು ಬಣ್ಣಿಸಲು ವಿವಿಧ ಕಥೆಗಳಿವೆ. ಅಜ್ಞಾತವಾಸದಲ್ಲಿದ್ದ ಪಾಂಡವರು ದ್ರೌಪದಿಯನ್ನು ಗೆದ್ದಾಗ ಆಕೆ ತಲೆ ಮೇಲೆ ಕಳಸ ಧರಿಸಿದ್ದಳು. ಕರಗ ಉತ್ಸವ ದ್ರೌಪದಮ್ಮನ ಕರಗ ಎಂದು ಆಚರಿಸುತ್ತಾ ಬಂದಿದೆಯಾದರೂ ಇದರೊಂದಿಗೆ, ಗ್ರಾಮ ದೇವತೆಗಳಾದ ಸಪ್ತಮಾತೃಕಾ ಮಾರಿಯಮ್ಮ, ಮುತ್ಯಾಲಮ್ಮ, ಕಾವೇರಮ್ಮ, ರೇಣುಕಾಯಲ್ಲಮ್ಮ ಮೊದಲಾಗಿ ಶಕ್ತಿ ದೇವತೆಗಳ ಪ್ರತೀಕವಾಗಿ ಕರಗ ಉತ್ಸವಗಳು ನಡೆಯತ್ತವೆ. ದೊಡ್ಡಬಳ್ಳಾಪುರ ನಗರದಲ್ಲಿ ಶ್ರೀ ಆದಿಶಕಾತ್ಮಕ ದ್ರೌಪದಾದೇವಿ ಕರಗ ಹಾಗೂ ಶ್ರೀ ಸಪ್ತಮಾತೃಕಾ ಮಾರಿಯಮ್ಮ ಕರಗಗಳು ವರ್ಷಕ್ಕೊಮ್ಮೆ ಬದಲಾಗುತ್ತಾ ನಡೆಯುತ್ತಿವೆ.

ಕುರುಕ್ಷೇತ್ರ ಪೌರಾಣಿಕ ನಾಟಕ: ನಗರದ ತೇರಿನ ಬೀದಿ ವಿಶ್ವೇಶ್ವರಯ್ಯ ವೃತ್ತದ ಶ್ರೀ ಆಂಜನೇಯ ಕೃಪಾಪೋಷಿತ ನಾಟಕ ಮಂಡಲಿ ವತಿಯಿಂದ ಮೇ 18ರ ಶ ನಿವಾರ ರಾತ್ರಿ 8.30ಕ್ಕೆ ಅರಳು ಮಲ್ಲಿಗೆ ಬಾಗಿಲು ವಿಶ್ವೇಶ್ವರಯ್ಯ ಆಟದ ಮೈದಾನದಲ್ಲಿ ಕುರುಕ್ಷೇತ್ರ ಪೌರಾಣಿಕ ನಾಟಕ ಪ್ರದರ್ಶನ ನಡೆಯಲಿದೆ. ಕಲಾಭಿಮಾನಿಗಳು ನಾಟಕಕ್ಕೆ ಪ್ರೋತ್ಸಾಹಿಸಬೇಕೆಂದು ಮಂಡಳಿ ಪ್ರಕಟಣೆ ತಿಳಿಸಿದೆ.

ಇಂದು ಕರಗ ಮಹೋತ್ಸವ: ಶ್ರೀ ಸಪ್ತಮಾತೃಕಾ ಮಾರಿಯಮ್ಮದೇವಿ ಕರಗ ಮಹೋತ್ಸವ ಮೇ 18ರ ರಾತ್ರಿ 11 ರಿಂದ ನಡೆಯಲಿದೆ. 9 ವರ್ಷಗಳಿಂದ ಚಿಕ್ಕಬಳ್ಳಾಪುರ, ಬಾಗೇಪಲ್ಲಿ ಸೇರಿ ಆಂಧ್ರ, ತಮಿಳುನಾಡುಗಳಲ್ಲಿಯೂ ಕರಗ ಹೊತ್ತಿರುವ ಆಂಧ್ರದ ಕುಪ್ಪಂ ಪೂಜಾರಿ ಮುನಿರತ್ನಂ ಬಾಲಾಜಿ ಇದೇ 2ನೇ ಬಾರಿಗೆ ದೊಡ್ಡಬಳ್ಳಾಪುರದಲ್ಲಿ ಕರಗ ಹೊರಲಿದ್ದಾರೆ. ಮೇ 20 ರ ಸಂಜೆ 4ಕ್ಕೆ ಒನಕೆ ನಾಟ್ಯ ಮತ್ತು ವಸಂತೋತ್ಸವವಿದೆ.

ಕರಗ ಮಹೋತ್ಸವದ ಅಂಗವಾಗಿ ನೆಲದಾಂಜನೇಯಸ್ವಾಮಿ, ಚೌಡೇಶ್ವರೀದೇವಿ, ಜನಾರ್ಧನಸ್ವಾಮಿ, ಧರ್ಮರಾಯಸ್ವಾಮಿ ಮೊದಲಾದ ದೇವರ ಉತ್ಸವಗಳು ನಡೆಯಲಿವೆ. ನಗರದ ಬೆಸ್ತರಪೇಟೆಯ ವಿವೇಕಾನಂದ ಪ್ರತಿಮೆ ಬಳಿ ಶ್ರೀ ವಿವೇಕಾನಂದ ಗೆಳೆಯರ ಬಳಗದ ವತಿಯಿಂದ ಗೊರವನಹಳ್ಳಿ ಮಹಾಲಕ್ಷ್ಮೀ ದೇವಿಯನ್ನು ಕರೆತಂದು ವಿಶೇಷ ಪೂಜೆ ಸಲ್ಲಿಸಲಿದ್ದಾರೆ.

Ad

ಟಾಪ್ ನ್ಯೂಸ್

rape

ಜ್ವರವೆಂದು ಚಿಕಿತ್ಸೆಗೆ ಬಂದ ಬಾಲಕಿಗೆ ಗರ್ಭಿಣಿ ಎಂದು ವರದಿ ನೀಡಿದ ಆರೋಪ : ಡಿಎಚ್‌ಒಗೆ ದೂರು

1-aa-RC

RCB ವಿಜಯೋತ್ಸವ ಕಾಲ್ತುಳಿತಕ್ಕೆ 3 ಸಂಸ್ಥೆ , 5 ಅಧಿಕಾರಿಗಳು ಕಾರಣ!

1-aa-aa-aa-RR-sss

KEA ಆಯ್ಕೆ ಪ್ರವೇಶ ಪೋರ್ಟಲ್‌ಗೆ ‘ಸರ್ವರ್‌’ ಕಾಟ!

ಭಾರತದಲ್ಲಿ ದಾಳಿಗೆ ಪಾಕ್‌ ಉಗ್ರರಿಗೆ “ನೇಪಾಲ ದಾರಿ’!

ಭಾರತದಲ್ಲಿ ದಾಳಿಗೆ ಪಾಕ್‌ ಉಗ್ರರಿಗೆ “ನೇಪಾಲ ದಾರಿ’!

hospital

ಆಸ್ಪತ್ರೆ ದುಬಾರಿ ಬಿಲ್‌ಗೆ ತಡೆ? : ಕೇಂದ್ರ ಸರಕಾರ ಚಿಂತನೆ

ರವಿಶಂಕರ್‌ ಗುರೂಜಿ ಪಾತ್ರ ಅಭಿನಯಿಸಲು ತಳಮಳ: ನಟ ಮಾಸ್ಸಿ

ರವಿಶಂಕರ್‌ ಗುರೂಜಿ ಪಾತ್ರ ಅಭಿನಯಿಸಲು ತಳಮಳ: ನಟ ಮಾಸ್ಸಿ

ನಿಗಮ-ಮಂಡಳಿ ಪಟ್ಟಿ ಜು. 16ರಂದು ಅಂತಿಮ? ಸಭೆ ನಡೆಸಿ ನೇಮಕ ಪಟ್ಟಿ ಅಂತಿಮ: ಸಿಎಂ ಸುಳಿವು

ನಿಗಮ-ಮಂಡಳಿ ಪಟ್ಟಿ ಜು. 16ರಂದು ಅಂತಿಮ? ಸಭೆ ನಡೆಸಿ ನೇಮಕ ಪಟ್ಟಿ ಅಂತಿಮ: ಸಿಎಂ ಸುಳಿವು


ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು

11-nelamangala

Nelamangala: ಬಸ್ ಕಲ್ಪಿಸಿಕೊಟ್ಟ ಶಾಸಕ ಎನ್. ಶ್ರೀನಿವಾಸ್ ಗೆ ಗ್ರಾಮಸ್ಥರಿಂದ ಅಭಿನಂದನೆ

3-nelamangala

Nelamangala: ಪ್ಲೈವುಡ್ ಗೋದಾಮಿನಲ್ಲಿ ಬೆಂಕಿ; ಲಕ್ಷಾಂತರ ಮೌಲ್ಯದ ವಸ್ತುಗಳು ಬೆಂಕಿಗಾಹುತಿ

2

ಅಶ್ಲೀ*ಲ ಮೆಸೇಜ್‌ ಮಾಡಿದ್ದಕ್ಕೆ ಯುವಕನ ಕಿಡ್ನಾಪ್:‌ ರೇಣುಕಾಸ್ವಾಮಿ ಹೆಸರು ಹೇಳಿ ಹಲ್ಲೆ

6

ಗ್ರಾಮಾಂತರ ಇನ್ಮುಂದೆ ಬೆಂಗಳೂರು ಉತ್ತರ ಜಿಲ್ಲೆ

Road Mishap: ಲಾರಿ ಓವರ್‌ಟೇಕ್‌ ಭರದಲ್ಲಿ ಕಾರು ಪಲ್ಟಿ; ನಾಲ್ವರು ಸ್ಥಳದಲ್ಲೇ ದುರ್ಮರಣ

Road Mishap: ಲಾರಿ ಓವರ್‌ ಟೇಕ್‌ ಭರದಲ್ಲಿ ಕಾರು ಪಲ್ಟಿ; ನಾಲ್ವರು ಸ್ಥಳದಲ್ಲೇ ದುರ್ಮರಣ

MUST WATCH

udayavani youtube

ಕೃಷಿಯಲ್ಲಿ ತಂತ್ರಜ್ಞಾನದ ಕುರಿತು ರೈತರಿಗೆ ಅಗತ್ಯ ಮಾಹಿತಿ

udayavani youtube

ಬೇಲೂರು ಇತಿಹಾಸ | 900 ವರ್ಷಗಳ ಹಿಂದೆ ದಾಸಿಯರು Bermuda ಧರಿಸುತ್ತಿದ್ದರು

udayavani youtube

ಸಾವಿರ ವರ್ಷಗಳ ಹಳೆಯದಾದ ರಂಗನಾಥ ಸ್ವಾಮಿ ದೇವಸ್ಥಾನ

udayavani youtube

ಲೇಡಿಗೋಷನ್ ಎದೆಹಾಲು ಘಟಕ: ಅವಧಿ ಪೂರ್ವ ಶಿಶುಗಳಿಗೆ ಜೀವದಾನ

udayavani youtube

ಗ್ರಾಹಕರು ಅಡವಿಟ್ಟ ಚಿನ್ನಕ್ಕೇ ಕನ್ನ ಹಾಕಿದ ಕ್ಯಾಷಿಯರ್

ಹೊಸ ಸೇರ್ಪಡೆ

rape

ಜ್ವರವೆಂದು ಚಿಕಿತ್ಸೆಗೆ ಬಂದ ಬಾಲಕಿಗೆ ಗರ್ಭಿಣಿ ಎಂದು ವರದಿ ನೀಡಿದ ಆರೋಪ : ಡಿಎಚ್‌ಒಗೆ ದೂರು

1-aa-RC

RCB ವಿಜಯೋತ್ಸವ ಕಾಲ್ತುಳಿತಕ್ಕೆ 3 ಸಂಸ್ಥೆ , 5 ಅಧಿಕಾರಿಗಳು ಕಾರಣ!

1-aa-aa-aa-RR-sss

KEA ಆಯ್ಕೆ ಪ್ರವೇಶ ಪೋರ್ಟಲ್‌ಗೆ ‘ಸರ್ವರ್‌’ ಕಾಟ!

ಭಾರತದಲ್ಲಿ ದಾಳಿಗೆ ಪಾಕ್‌ ಉಗ್ರರಿಗೆ “ನೇಪಾಲ ದಾರಿ’!

ಭಾರತದಲ್ಲಿ ದಾಳಿಗೆ ಪಾಕ್‌ ಉಗ್ರರಿಗೆ “ನೇಪಾಲ ದಾರಿ’!

hospital

ಆಸ್ಪತ್ರೆ ದುಬಾರಿ ಬಿಲ್‌ಗೆ ತಡೆ? : ಕೇಂದ್ರ ಸರಕಾರ ಚಿಂತನೆ

Thanks for visiting Udayavani

You seem to have an Ad Blocker on.
To continue reading, please turn it off or whitelist Udayavani.