ಪೌಷ್ಟಿಕ ಆಹಾರದಿಂದ ಆರೋಗ್ಯಕರ ಸಮಾಜ ಸೃಷ್ಟಿ: ಕೃಷ್ಣಮೂರ್ತಿ


Team Udayavani, Oct 22, 2019, 3:00 AM IST

poushtika

ದೇವನಹಳ್ಳಿ: ಪ್ರತಿಯೊಬ್ಬರಿಗೂ ಸಮತೋಲನ ಹಾಗೂ ಪೌಷ್ಟಿಕಾಂಶಯುತ ಆಹಾರ ದೊರೆಯುವಂತೆ ಮಾಡಿದಲ್ಲಿ, ಆರೋಗ್ಯಕರ ಸಮಾಜದ ಸೃಷ್ಟಿ ಸಾಧ್ಯ ಎಂದು ಕರ್ನಾಟ ಆಹಾರ ಆಯೋಗದ ಅಧ್ಯಕ್ಷ ಡಾ.ಎನ್‌.ಕೃಷ್ಣಮೂರ್ತಿ ಹೇಳಿದರು. ಚಿಕ್ಕಬಳ್ಳಾಪುರಕ್ಕೆ ತೆರಳುವ ಮುನ್ನ ನಗರದ ಪ್ರವಾಸಿ ಮಂದಿರದಲ್ಲಿ ಸುದ್ದಿಗಾರರೊಂದಿಗೆ ಮಾತನಾಡಿದ ಅವರು, ಕೇಂದ್ರ ಸರ್ಕಾರ 2013 ರಲ್ಲಿ ಎಲ್ಲಾ ರಾಜ್ಯಗಳಲ್ಲಿ ಆಹಾರ ಭದ್ರತಾ ಕಾಯ್ದೆ ಜಾರಿಗೊಳಿಸಿ, ಎಲ್ಲಾ ರಾಜ್ಯಗಳಲ್ಲೂ ಆಹಾರ ಆಯೋಗ ರಚನೆ ಮಾಡಲು ಸೂಚಿಸಿತ್ತು.

ಅದರಂತೆ 2016 ರಲ್ಲಿ ರಾಜ್ಯ ಸರ್ಕಾರವು ರಾಜ್ಯಾ ಆಹಾರ ಆಯೋಗ ರಚನೆ ಮಾಡಿದೆ. ಪ್ರತಿಯೊಬ್ಬರಿಗೂ ಉತ್ತಮ ಮತ್ತು ಗುಣ ಮಟ್ಟದ ಪೌಷ್ಠಿಕಾಂಶಯುಕ್ತ ಆಹಾರ ನೀಡುವ ಜವಾಬ್ದಾರಿ ಸರ್ಕಾರದ ಮೇಲಿದೆ. ಯಾರೂ ಸಹ ಹಸಿವಿನಿಂದ ಅನಾರೋಗ್ಯ ಕ್ಕೆ ತುತ್ತಾಗಬಾರದು ಎನ್ನುವುದು ಆಹಾರ ಆಯೋಗದ ಧ್ಯೇಯೋದ್ದಶವಾಗಿದೆ ಎಂದು ತಿಳಿಸಿದರು. ಬೆಂಗಳೂರು ಗ್ರಾಮಾಂತ ಜಿಲ್ಲೆಯಲ್ಲಿ ಆಹಾರ ಪೂರೈಕೆ ಯಾವುದೇ ಲೋಪವಿಲ್ಲದೆ ನಿರ್ವಹಿಸಲಾಗುತ್ತಿದೆ.

ಪಡಿತರ ಚೀಟಿಯಲ್ಲಿ ಉಚಿತವಾಗಿ ಅಕ್ಕಿಯನ್ನು ನೀಡಲಾಗುತ್ತಿದೆ ಅದರ ಜೊತೆ ತೊಗರಿ ಬೇಳೆಯನ್ನು 38 ರೂ ಗೆ ನೀಡಲಾಗುತ್ತಿದೆ. ಕೆಲವು ಕಡೆ 40 ರೂ, 50 ರೂ , 100 ರೂ ಗೆ ಪಡೆಯುತ್ತಿದ್ದಾರೆ ಎಂಬುವ ದೂರುಗಳು ಕೇಳಿ ಬರುತ್ತಿವೆ. ಬೆಂಗಳೂರು ಗ್ರಾಮಾಂತ ಜಿಲ್ಲೆಯಲ್ಲಿ ಇಂತಹ ದೂರುಗಳು ಈ ವರೆಗೆ ಬಂದಿಲ್ಲ. ಈ ಭಾಗಗಳಲ್ಲಿ ಅಕ್ಕಿಯ ಜೊತೆಗೆ 2 ಕೆಜಿ ರಾಗಿ ನೀಡಬೇಕು ಹಾಗೂ ಉತ್ತರ ಕರ್ನಾಟಕ ಭಾಗಗಳಲ್ಲಿ ಅಕ್ಕಿಯ ಜೊತೆ 2 ಕೆಜಿ ಜೋಳ ಹಾಗೂ ಕರಾವಳಿ ಪ್ರದೇಶಗಳಲ್ಲಿ ಅಕ್ಕಿಯ ಜೊತೆ 2 ಕೆಜಿ ಗೋಧಿ ನೀಡಬೇಕೆಂದು ಶಿಫಾರಸ್ಸು ಮಾಡಲಾಗಿದೆ.

ಸರ್ಕಾರ ನಿಗದಿಪಡಿಸಿದ ಪ್ರಮಾಣಕ್ಕನುಗುಣವಾಗಿ ಆಹಾರ ಪದಾರ್ಥಗಳನ್ನು ಬಳಸದೆ ಸುಳ್ಳು ದಾಖಲೆಗಳನ್ನು ತೋರಿಸಿ ಹೆಚ್ಚುವರಿ ಆಹಾರ ಪದಾರ್ಥಗಳನ್ನು ಸಂಗ್ರಹಿಸಲಾಗುತ್ತದೆ. ಆದರೆ ವಿದ್ಯಾರ್ಥಿಗಳಿಗೆ ಅಗತ್ಯವಿರುವ ಆಹಾರ ಒದಗಿಸುತ್ತಿಲ್ಲ ಎಂಬುದು ಗಮನಕ್ಕೆ ಬಂದಿದ್ದು, ಇದರಿಂದಾಗಿ ಹಾಸ್ಟೆಲ್‌ನಲ್ಲಿನ ವಿದ್ಯಾರ್ಥಿಗಳಿಗೆ ಸಮಸ್ಯೆಯಾಗುತ್ತಿದೆ. ಪ್ರತಿ ಯೊಬ್ಬರಿಗೂ ಆಹಾರ ದೊರೆಯಬೇಕು ಈಗಾಗಲೇ ಕೆಲವು ಜಿಲ್ಲೆಗಳಿಗೆ ಬೇಟಿ ನೀಡಿ ಆಹಾರ ಪದಾರ್ಥಗಳ ಗುಣಮಟ್ಟ ತೂಕ, ಅಳತೆ ಸೇರಿದಂತೆ ವಿವಿಧ ಹಾಸ್ಟಲ್‌ ಗಳಿಗೆ ಭೇಟಿ ನೀಡಿ ಪರಿಶೀಲಿಸಲಾಗುವುದು ಎಂದರು.

ವೈದ್ಯರಿಗೆ ಸರ್ಕಾರದಿಂದ ನೀಡಿರುವ ವಾಹನಕ್ಕೆ ಜಿ.ಪಿ.ಎಸ್‌. ಅಳವಡಿಸುವಂತೆ ಸೂಚಿಸಲಾಗಿದೆ ಎಂದರು. ಇದೇ ಸಂದರ್ಭದಲ್ಲಿ ರಾಜ್ಯ ಆಹಾರ ಆಯೋಗದ ಸದಸ್ಯ ಡಿ.ಜಿ ಹಸಿಬಿ ಮಾತನಾಡಿ, ಜಿಲ್ಲೆಯಲ್ಲಿ ಸರಬರಾಜು ಆಗುತ್ತಿರುವ ತೊಗರಿ ಬೇಳೆಯ ಗುಣಮಟ್ಟವು ಕಳಪೆಯಾಗಿದ್ದು, ಸಂಬಂಧಪಟ್ಟ ಅಧಿಕಾರಿಗಳು ಈ ಕೂಡಲೇ ಗಮನಹರಿಸಬೇಕು.

ಜಾಗೃತಿ ಸಮಿತಿಯ ಮಾಹಿತಿಯನ್ನು ದೂರವಾಣಿಯೊಂದಿಗೆ ನಮೂದಿಸಿ ಪ್ರದರ್ಶಿಸುವುದು ಕಡ್ಡಾಯ ಎಂದರು. ಕಳಪೆ ತೊಗರಿ ಬೇಳೆ ಸರಬರಾಜು ಮಾಡದಂತೆ ಅಧಿಕಾರಿಗಳು ಎಚ್ಚರ ವಹಿಸಬೇಕು. ವೈಜ್ಞಾನಿಕ ಆಹಾರ ಪದಾರ್ಥಗಳ ಸಂಗ್ರಹಣೆಗೆ ಆದ್ಯತೆ ನೀಡುವಂತೆ ಸೂಚಿಸಿದರು. ಈ ವೇಳೆ ಆಹಾರ ಆಯೋಗದ ರಾಜ್ಯ ನಿರ್ದೇಶಕರಾದ ಶಿವ ಶಂಕರ್‌, ಮಂಜುಳಾ ಬಾಯಿ ಸೇರಿದಂತೆ ವಿವಿಧ ಸದಸ್ಯರು ಹಾಜರಿದ್ದರು.

ಟಾಪ್ ನ್ಯೂಸ್

Mangaluru: ಸಂಪರ್ಕ ಸೇತುವೆ ಇಲ್ಲದೆ ಬೋಟ್ ಮೂಲಕ ಬಂದು ಮತ ಚಲಾಯಿಸಿದ ಜನ

Mangaluru: ಸಂಪರ್ಕ ಸೇತುವೆ ಇಲ್ಲದೆ ಬೋಟ್ ಮೂಲಕ ಬಂದು ಮತ ಚಲಾಯಿಸಿದ ಜನ

INDIA ಒಕ್ಕೂಟ ಅಧಿಕಾರಕ್ಕೆ ಬಂದರೆ ರೈತರ ಸಾಲಮನ್ನಾ, ನಿರುದ್ಯೋಗ ನಿವಾರಣೆಗೆ ಆದ್ಯತೆ: ರಾಹುಲ್

INDIA ಒಕ್ಕೂಟ ಅಧಿಕಾರಕ್ಕೆ ಬಂದರೆ ರೈತರ ಸಾಲಮನ್ನಾ, ನಿರುದ್ಯೋಗ ನಿವಾರಣೆಗೆ ಆದ್ಯತೆ: ರಾಹುಲ್

Lok Sabha Polls: ಧರ್ಮಸ್ಥಳದಲ್ಲಿ ಧರ್ಮಾಧಿಕಾರಿ ಡಾ.ಡಿ.ವೀರೇಂದ್ರ ಹೆಗ್ಗಡೆ ಮತದಾನ

Lok Sabha Polls: ಧರ್ಮಸ್ಥಳದಲ್ಲಿ ಧರ್ಮಾಧಿಕಾರಿ ಡಾ.ಡಿ.ವೀರೇಂದ್ರ ಹೆಗ್ಗಡೆ ಮತದಾನ

WhatsApp ಭಾರತದಲ್ಲಿ ಸ್ಥಗಿತಗೊಳಿಸ್ತೇವೆ; ಹೈಕೋರ್ಟ್‌ ಮೆಟ್ಟಿಲೇರಿದ ಪ್ರಕರಣ, ಏನಿದು?

WhatsApp ಭಾರತದಲ್ಲಿ ಸ್ಥಗಿತಗೊಳಿಸ್ತೇವೆ; ಹೈಕೋರ್ಟ್‌ ಮೆಟ್ಟಿಲೇರಿದ ಪ್ರಕರಣ, ಏನಿದು?

Eletion: ತೀರ್ಥಹಳ್ಳಿಯಲ್ಲಿ ಪ್ರಚಾರದ ವೇಳೆ ತಮಿಳಿನಲ್ಲೆ ಮಾತನಾಡಿದ ನಟ ಶಿವರಾಜ್ ಕುಮಾರ್

Eletion: ತೀರ್ಥಹಳ್ಳಿಯಲ್ಲಿ ಪ್ರಚಾರದ ವೇಳೆ ತಮಿಳಿನಲ್ಲೆ ಮಾತನಾಡಿದ ನಟ ಶಿವರಾಜ್ ಕುಮಾರ್

Chitradurga: ಹೃದಯಾಘಾತದಿಂದ ಚುನಾವಣಾ ಕರ್ತವ್ಯದಲ್ಲಿದ್ದ ಶಿಕ್ಷಕಿ ಮೃತ್ಯು…

Chitradurga: ಚುನಾವಣಾ ಕರ್ತವ್ಯದಲ್ಲಿದ್ದಾಗಲೇ ಹೃದಯಾಘಾತಗೊಂಡು ಶಿಕ್ಷಕಿ ಮೃತ್ಯು…

Lok Sabha Polls: ಉಡುಪಿ: ಕುಟುಂಬ ಸಮೇತರಾಗಿ ಬಂದು ಮತದಾನ ಮಾಡಿದ ನಟ ರಕ್ಷಿತ್ ಶೆಟ್ಟಿ

Lok Sabha Polls: ಉಡುಪಿ: ಕುಟುಂಬ ಸಮೇತರಾಗಿ ಬಂದು ಮತದಾನ ಮಾಡಿದ ನಟ ರಕ್ಷಿತ್ ಶೆಟ್ಟಿ


ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು

ಬೇಸಿಗೆ ಬಿಸಿಯೂಟ: 32,173 ಮಕ್ಕಳ ನೋಂದಣಿ

ಬೇಸಿಗೆ ಬಿಸಿಯೂಟ: 32,173 ಮಕ್ಕಳ ನೋಂದಣಿ

Devanahalli: ಬೇಸಿಗೆ ತಾಪಮಾನ ಹೆಚ್ಚಳ, ಇರಲಿ ಎಚ್ಚರ

Devanahalli: ಬೇಸಿಗೆ ತಾಪಮಾನ ಹೆಚ್ಚಳ, ಇರಲಿ ಎಚ್ಚರ

Doddaballapur: ಜಾತೀಯತೆಗೆ ಮಣೆ ಹಾಕದ ಕ್ಷೇತ್ರದ ‌ಮತದಾರರು

Doddaballapur: ಜಾತೀಯತೆಗೆ ಮಣೆ ಹಾಕದ ಕ್ಷೇತ್ರದ ‌ಮತದಾರರು

Lok Sabha polls: ಲೋಕಸಭೆ ಚುನಾವಣೆಯಲ್ಲಿ ಇಂದಿರಾಗಾಂಧಿ ನೆನಪು

Lok Sabha polls: ಲೋಕಸಭೆ ಚುನಾವಣೆಯಲ್ಲಿ ಇಂದಿರಾಗಾಂಧಿ ನೆನಪು

10

Electricity problem: ಬೇಸಿಗೆ ಬೆನ್ನಲ್ಲೇ ಕಾಡುತ್ತಿದೆ ವಿದ್ಯುತ್‌ ಸಮಸ್ಯೆ

MUST WATCH

udayavani youtube

ವೈಭವದ ಹಿರಿಯಡ್ಕ ಸಿರಿಜಾತ್ರೆ ಸಂಪನ್ನ

udayavani youtube

ಯಾವೆಲ್ಲಾ ಚರ್ಮದ ಕಾಯಿಲೆಗಳಿವೆ ಹಾಗೂ ಪರಿಹಾರಗಳೇನು?

udayavani youtube

Mangaluru ಹೆಬ್ಬಾವಿನ ದೇಹದಲ್ಲಿ ಬರೋಬ್ಬರಿ 11 ಬುಲೆಟ್‌ ಪತ್ತೆ!

udayavani youtube

ನನ್ನ ಕಥೆ ನಿಮ್ಮ ಜೊತೆ

udayavani youtube

‘ಕಸಿ’ ಕಟ್ಟುವ ಸುಲಭ ವಿಧಾನ

ಹೊಸ ಸೇರ್ಪಡೆ

ಬಿಸಿಲ ಝಳದಿಂದ ಮೈದಾನಗಳು ಖಾಲಿ; ಮಕ್ಕಳ ಆಟಕ್ಕೂ ಉರಿ ಬಿಸಿಲು ಅಡ್ಡಿ!

ಬಿಸಿಲ ಝಳದಿಂದ ಮೈದಾನಗಳು ಖಾಲಿ; ಮಕ್ಕಳ ಆಟಕ್ಕೂ ಉರಿ ಬಿಸಿಲು ಅಡ್ಡಿ!

Mangaluru: ಸಂಪರ್ಕ ಸೇತುವೆ ಇಲ್ಲದೆ ಬೋಟ್ ಮೂಲಕ ಬಂದು ಮತ ಚಲಾಯಿಸಿದ ಜನ

Mangaluru: ಸಂಪರ್ಕ ಸೇತುವೆ ಇಲ್ಲದೆ ಬೋಟ್ ಮೂಲಕ ಬಂದು ಮತ ಚಲಾಯಿಸಿದ ಜನ

INDIA ಒಕ್ಕೂಟ ಅಧಿಕಾರಕ್ಕೆ ಬಂದರೆ ರೈತರ ಸಾಲಮನ್ನಾ, ನಿರುದ್ಯೋಗ ನಿವಾರಣೆಗೆ ಆದ್ಯತೆ: ರಾಹುಲ್

INDIA ಒಕ್ಕೂಟ ಅಧಿಕಾರಕ್ಕೆ ಬಂದರೆ ರೈತರ ಸಾಲಮನ್ನಾ, ನಿರುದ್ಯೋಗ ನಿವಾರಣೆಗೆ ಆದ್ಯತೆ: ರಾಹುಲ್

ಹೆಸ್ಕತ್ತೂರು ಕಟ್ಟಿನಬುಡ: ಕೃಷಿಗೆ ಆಸರೆಯಾಗದ ವಾರಾಹಿ ಕಾಲುವೆ ನೀರು!

ಹೆಸ್ಕತ್ತೂರು ಕಟ್ಟಿನಬುಡ: ಕೃಷಿಗೆ ಆಸರೆಯಾಗದ ವಾರಾಹಿ ಕಾಲುವೆ ನೀರು!

Lok Sabha Polls: ಧರ್ಮಸ್ಥಳದಲ್ಲಿ ಧರ್ಮಾಧಿಕಾರಿ ಡಾ.ಡಿ.ವೀರೇಂದ್ರ ಹೆಗ್ಗಡೆ ಮತದಾನ

Lok Sabha Polls: ಧರ್ಮಸ್ಥಳದಲ್ಲಿ ಧರ್ಮಾಧಿಕಾರಿ ಡಾ.ಡಿ.ವೀರೇಂದ್ರ ಹೆಗ್ಗಡೆ ಮತದಾನ

Thanks for visiting Udayavani

You seem to have an Ad Blocker on.
To continue reading, please turn it off or whitelist Udayavani.