ಅವಸಾನದತ್ತ ಐತಿಹಾಸಿಕ ಹೆನ್ನಾಗರ ಕೆರೆ

ಕೈಗಾರಿಕೆಗಳ ಕಲುಷಿತ ನೀರಿನಿಂದ ಕೆರೆ ನೀರು ವಿಷ | ಹಲವು ಬಾರಿಸಿ ಸೂಚಿಸಿದರೂ ಕ್ಯಾರೆ ಎನ್ನದ ಮಾಲಿಕರು

Team Udayavani, Jul 12, 2019, 10:59 AM IST

br-tdy-2

ಆನೇಕಲ್‌: ಐತಿಹಾಸಿಕ ಹಿನ್ನೆಲೆ ಹೊಂದಿರುವ ತಾಲೂಕಿನ ಅತಿದೊಡ್ಡ ಹೆನ್ನಾಗರ ಕೆರೆ ಅವಸಾನದತ್ತ ಸಾಗಿದೆ. ಕೆರೆಗೆ ಸುತ್ತಲಿನ ಕೈಗಾರಿಕೆಗಳ ರಾಸಾಯನಿಕ ಮಿಶ್ರಿತ ಹಾಗೂ ಕೊಳಕು ನೀರು ಸೇರುತ್ತಿದ್ದು, ವಿಷ ಮಿಶ್ರಿತವಾಗಿ ಮಾರ್ಪಟ್ಟಿದೆ. ಹೀಗೆ ಮುಂದುವರಿದರೆ ಕೆರೆ ಸಂಪೂರ್ಣ ವಿಷಪೂರಿತ ಹಾಗೂ ಕೊಳಕು ನೀರಿನಿಂದ ತುಂಬಿಕೊಳ್ಳುತ್ತದೆ. ಇನ್ನಾದರೂ ಅಧಿಕಾರಿಗಳು ಅಥವಾ ಸಂಬಂಧಿಸಿದವರು ಎಚ್ಚೆತ್ತುಕೊಂಡು, ಕೆರೆ ಅಭಿವೃದ್ಧಿಗೆ ಕ್ರಮಕೈಗೊಳ್ಳಬೇಕು ಎಂದು ಸಾರ್ವಜನಿಕರು ಆಕ್ರೋಶ ವ್ಯಕ್ತಪಡಿಸಿದ್ದಾರೆ.

ಹಸಿರು ಬಣ್ಣಕ್ಕೆ ತಿರುಗುತ್ತಿರುವ ನೀರು: ಹೆನ್ನಾಗರ ಕೆರೆಯನ್ನು ತಾಲೂಕಿನ ಜನರು ವರ್ಷಕ್ಕೊಮ್ಮೆ ಪೂಜಿಸಿ, ಆರಾಧಿಸುತ್ತಿದ್ದರು. ಇದು ಈ ಭಾಗದ ಜನರ ಹಾಗೂ ಜಾನುವಾರುಗಳಿಗೆ ಆಸರೆ ಹಾಗೂ ಅಂತರ್ಜಲ ವೃದ್ಧಿಗೆ ಸಹಕಾರಿಯಾಗಿತ್ತು. ಆದರೆ ಕೆರೆಗೆ ಈಗ ಸುತ್ತಲಿನ ಕೈಗಾರಿಕೆಗಳ ಮಲೀನ ನೀರು ಸೇರಿ ಕಲುಷಿತವಾಗಿದೆ. ಹೀಗಾಗಿ ಜನರು-ಜಾನುವಾರುಗಳ ಬಳಕೆಗೆ ಯೋಗ್ಯವಿಲ್ಲದಂತಾಗಿದೆ. ಹೀಗೆ ಮುಂದುವರಿದರೆ ಬೆಳ್ಳಂದೂರು ಕೆರೆ ಪರಿಸ್ಥಿತಿಯೇ ಹೆನ್ನಾಗರ ಕೆರೆಗೂ ಬಂದೊದಗುತ್ತದೆ. ಸದ್ಯ ಕೆರೆ ನೀರು ಸಂಪೂರ್ಣ ಹಸಿರು ಬಣ್ಣಕ್ಕೆ ತಿರುಗಿದ್ದು, ಕೊಳಚೆ ನೀರಾಗಿ ಮಾರ್ಪಟ್ಟಿದೆ ಎಂದು ಸ್ಥಳೀಯರು ದೂರಿದ್ದಾರೆ.

ಕೆರೆಗೆ ಕೈಗಾರಿಕೆಗಳ ಮಾಲೀನ್ಯ ನೀರು: ಕೈಗಾರಿಕೆಗಳಿಂದ ಕಲುಷಿತ ನೀರನ್ನು ಟ್ಯಾಂಕರ್‌ಗಳಲ್ಲಿ ರಾತ್ರೋ ರಾತ್ರಿ ತಂದು ಬಿಡಲಾಗುತ್ತಿದೆ. ಇನ್ನೂ ಕೆಲವು ಕಾರ್ಖಾನೆಗಳಲ್ಲಿ ಕಲುಷಿತ ನೀರನ್ನು ಕೈಗಾರಿಕೆ ಒಳಗೆ ಟ್ಯಾಂಕ್‌ ನಿರ್ಮಿಸಿಕೊಂಡು ಸಂಗ್ರಹಿಸಲಾಗುತ್ತದೆ. ಸ್ವಲ್ಪ ಮಳೆ ಬಂದರೆ ಸಾಕು ಮಳೆಯ ನೀರನ್ನೇ ಬಂಡವಾಳ ಮಾಡಿಕೊಂಡು ಕಲುಷಿತ ನೀರನ್ನು ಶುದ್ಧಗೊಳಿಸದೇ ಮಾಡದೇ ಮಳೆ ನೀರಿನ ಜೊತೆ ಕೆರೆಗೆ ಹರಿ ಬಿಡುತ್ತಾರೆ. ಈ ಬಗ್ಗೆ ಹಲವು ಬಾರಿ ಪಂಚಾಯತಿ ಅಧಿಕಾರಿಗಳು ಕಾರ್ಖಾನೆಗಳ ಮಾಲಿಕರಿಗೆ ಸೂಚನೆ ನೀಡಿದರೂ ಪ್ರಯೋಜನವಾಗಿಲ್ಲ. ಹೀಗಾಗಿ ಕೆರೆ ಗಬ್ಬು ನಾತ ಬೀರುತ್ತಿದೆ. ಜತೆಗೆ ಕೆರೆಯಲ್ಲ ಸುತ್ತಲೂ ನೊರೆ ತುಂಬಿಕೊಂಡಿದೆ ಎಂದು ಸಾರ್ವಜನಿಕರು ಅಸಮಾಧನ ವ್ಯಕ್ತಪಡಿಸಿದ್ದಾರೆ.

ವಿಷಕಾರಿಯಾಗಿರುವ ಕೆರೆ: ಕೈಗಾರಿಕೆಗಳ ಮಲೀನ ನೀರಿನಿಂದಾಗಿ ಕೆರೆಯ ನೀರು ವಿಷಕಾರಿಯಾಗಿದೆ. ಇಲ್ಲಿ ಮೀನುಗಳನ್ನು ಹಿಡಿದು ವ್ಯಾಪಾರ ಮಾಡಿದರೆ, ಆರೋಗ್ಯದ ಮೇಲೆ ದುಷ್ಪರಿಣಾಮ ಬೀರುತ್ತಿದೆ. ಕೆರೆಯಲ್ಲಿ ವಿಷ ನೀರು ಹೆಚ್ಚಾಗಿದ್ದು, ಸುತ್ತಮುತ್ತಲ ಕೆಲವರು ತ್ಯಾಜ್ಯ ವಸ್ತುಗಳನ್ನು ತಂದು ಕೆರೆಗೆ ಎಸೆಯುತ್ತಿದ್ದಾರೆ. ಇವೆಲ್ಲ ಸೇರಿ ಕೆರೆಯಲ್ಲಿ ಗಿಡಗಂಟೆ ಬೆಳೆದು ನಿಂತಿದೆ. ಕುರುಚಲು ಗಿಡಗಳು ಬೆಳೆದಿದ್ದರಿಂದ ಕೆರೆಯ ಸುತ್ತ ಓಡಾಡಲು ಸಾಧ್ಯವಾಗದಂತಹ ಸ್ಥಿತಿ ನಿರ್ಮಾಣವಾಗಿದೆ ಎಂದು ಸ್ಥಳೀಯರು ದೂರಿದ್ದಾರೆ.

ಅಂತರ್ಜಲಕ್ಕೂ ವಿಷಕಾರಿ ನೀರು: ಈ ಭಾಗದ ಜಲಮೂಲಗಳಿಗೆ ಕೆರೆಯೇ ಅಂತರ್ಜಲದ ಮೂಲವಾಗಿದೆ. ಕೆರೆಯಲ್ಲಿನ ನೀರು ಕಲುಷಿತವಾಗಿದ್ದು, ಅಂತರ್ಜಲದಲ್ಲಿಯೂ ಇದೇ ನೀರು ಮಿಶ್ರಣವಾಗುತ್ತಿದೆ. ಕೊಳವೆ ಬಾವಿ ಕೊರೆಯಿಸಿದರೆ ಗಡುಸು ನೀರು ದೊರೆಯುತ್ತಿದೆ. ಕೆರೆಯನ್ನು ಅಭಿವೃದ್ಧಿಗೊಳಿಸಿ, ಕಾರ್ಖಾನೆಗಳ ಕಲುಷಿತ ನೀರು ಸೇರದಂತೆ ಕಟ್ಟೆಚ್ಚರ ವಹಿಸಬೇಕು ಎಂದು ಸ್ಥಳೀಯ ಎನ್‌.ಶಂಕರ್‌ ತಿಳಿಸಿದ್ದಾರೆ.

ಟಾಪ್ ನ್ಯೂಸ್

Lok Sabha Election ಕಾಂಗ್ರೆಸ್‌ಗೆ 20ಕ್ಕೂ ಅಧಿಕ ಸ್ಥಾನ: ದಿನೇಶ್‌

Lok Sabha Election ಕಾಂಗ್ರೆಸ್‌ಗೆ 20ಕ್ಕೂ ಅಧಿಕ ಸ್ಥಾನ: ದಿನೇಶ್‌

ಪ್ರಧಾನಮಂತ್ರಿ ಸ್ಥಾನಕ್ಕೆ “ಇಂಡಿಯ’ ರಾಹುಲ್‌ ಗಾಂಧಿಯನ್ನು ಪರಿಗಣಿಸಿಲ್ಲ: ಪಿಣರಾಯಿ

ಪ್ರಧಾನಮಂತ್ರಿ ಸ್ಥಾನಕ್ಕೆ “ಇಂಡಿಯ’ ರಾಹುಲ್‌ ಗಾಂಧಿಯನ್ನು ಪರಿಗಣಿಸಿಲ್ಲ: ಪಿಣರಾಯಿ

Kota: ಬೈಕ್‌ ಅಪಘಾತ; ಯುವಕ ಸಾವು

Kota: ಬೈಕ್‌ ಅಪಘಾತ; ಯುವಕ ಸಾವು

Uppinangady : ಗ್ರಾ.ಪಂ. ಸಿಬಂದಿ ಆತ್ಮಹತ್ಯೆ

Uppinangady : ಗ್ರಾ.ಪಂ. ಸಿಬಂದಿ ಆತ್ಮಹತ್ಯೆ

Subrahmanya: ಬಸ್ಸಿನಿಂದ ಬಿದ್ದು ಪ್ರಯಾಣಿಕ ಸಾವು

Subrahmanya: ಬಸ್ಸಿನಿಂದ ಬಿದ್ದು ಪ್ರಯಾಣಿಕ ಸಾವು

ಬರ ಪರಿಹಾರದಲ್ಲಿ ಸಿಎಂ, ಕಾಂಗ್ರೆಸ್‌ ರಾಜಕೀಯ: ಅಶೋಕ್‌

ಬರ ಪರಿಹಾರದಲ್ಲಿ ಸಿಎಂ, ಕಾಂಗ್ರೆಸ್‌ ರಾಜಕೀಯ: ಅಶೋಕ್‌

“ಬರ ಪರಿಹಾರ ಕೊಡಿ, ಇಲ್ಲವೇ ರಾಜ್ಯಕ್ಕೆ ಬರಲೇಬೇಡಿ’

“ಬರ ಪರಿಹಾರ ಕೊಡಿ, ಇಲ್ಲವೇ ರಾಜ್ಯಕ್ಕೆ ಬರಲೇಬೇಡಿ’


ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು

ಬೇಸಿಗೆ ಬಿಸಿಯೂಟ: 32,173 ಮಕ್ಕಳ ನೋಂದಣಿ

ಬೇಸಿಗೆ ಬಿಸಿಯೂಟ: 32,173 ಮಕ್ಕಳ ನೋಂದಣಿ

Devanahalli: ಬೇಸಿಗೆ ತಾಪಮಾನ ಹೆಚ್ಚಳ, ಇರಲಿ ಎಚ್ಚರ

Devanahalli: ಬೇಸಿಗೆ ತಾಪಮಾನ ಹೆಚ್ಚಳ, ಇರಲಿ ಎಚ್ಚರ

Doddaballapur: ಜಾತೀಯತೆಗೆ ಮಣೆ ಹಾಕದ ಕ್ಷೇತ್ರದ ‌ಮತದಾರರು

Doddaballapur: ಜಾತೀಯತೆಗೆ ಮಣೆ ಹಾಕದ ಕ್ಷೇತ್ರದ ‌ಮತದಾರರು

Lok Sabha polls: ಲೋಕಸಭೆ ಚುನಾವಣೆಯಲ್ಲಿ ಇಂದಿರಾಗಾಂಧಿ ನೆನಪು

Lok Sabha polls: ಲೋಕಸಭೆ ಚುನಾವಣೆಯಲ್ಲಿ ಇಂದಿರಾಗಾಂಧಿ ನೆನಪು

10

Electricity problem: ಬೇಸಿಗೆ ಬೆನ್ನಲ್ಲೇ ಕಾಡುತ್ತಿದೆ ವಿದ್ಯುತ್‌ ಸಮಸ್ಯೆ

MUST WATCH

udayavani youtube

ಯಾವೆಲ್ಲಾ ಚರ್ಮದ ಕಾಯಿಲೆಗಳಿವೆ ಹಾಗೂ ಪರಿಹಾರಗಳೇನು?

udayavani youtube

Mangaluru ಹೆಬ್ಬಾವಿನ ದೇಹದಲ್ಲಿ ಬರೋಬ್ಬರಿ 11 ಬುಲೆಟ್‌ ಪತ್ತೆ!

udayavani youtube

ನನ್ನ ಕಥೆ ನಿಮ್ಮ ಜೊತೆ

udayavani youtube

‘ಕಸಿ’ ಕಟ್ಟುವ ಸುಲಭ ವಿಧಾನ

udayavani youtube

ಬೇಸಿಗೆಯಲ್ಲಿ ನಮ್ಮನ್ನು ಕಾಡುವ Heat Illnessಏನಿದು ಸಮಸ್ಯೆ ? ಪರಿಹಾರವೇನು ?

ಹೊಸ ಸೇರ್ಪಡೆ

Lok Sabha Election ಕಾಂಗ್ರೆಸ್‌ಗೆ 20ಕ್ಕೂ ಅಧಿಕ ಸ್ಥಾನ: ದಿನೇಶ್‌

Lok Sabha Election ಕಾಂಗ್ರೆಸ್‌ಗೆ 20ಕ್ಕೂ ಅಧಿಕ ಸ್ಥಾನ: ದಿನೇಶ್‌

ಪ್ರಧಾನಮಂತ್ರಿ ಸ್ಥಾನಕ್ಕೆ “ಇಂಡಿಯ’ ರಾಹುಲ್‌ ಗಾಂಧಿಯನ್ನು ಪರಿಗಣಿಸಿಲ್ಲ: ಪಿಣರಾಯಿ

ಪ್ರಧಾನಮಂತ್ರಿ ಸ್ಥಾನಕ್ಕೆ “ಇಂಡಿಯ’ ರಾಹುಲ್‌ ಗಾಂಧಿಯನ್ನು ಪರಿಗಣಿಸಿಲ್ಲ: ಪಿಣರಾಯಿ

Kota: ಬೈಕ್‌ ಅಪಘಾತ; ಯುವಕ ಸಾವು

Kota: ಬೈಕ್‌ ಅಪಘಾತ; ಯುವಕ ಸಾವು

Uppinangady : ಗ್ರಾ.ಪಂ. ಸಿಬಂದಿ ಆತ್ಮಹತ್ಯೆ

Uppinangady : ಗ್ರಾ.ಪಂ. ಸಿಬಂದಿ ಆತ್ಮಹತ್ಯೆ

Subrahmanya: ಬಸ್ಸಿನಿಂದ ಬಿದ್ದು ಪ್ರಯಾಣಿಕ ಸಾವು

Subrahmanya: ಬಸ್ಸಿನಿಂದ ಬಿದ್ದು ಪ್ರಯಾಣಿಕ ಸಾವು

Thanks for visiting Udayavani

You seem to have an Ad Blocker on.
To continue reading, please turn it off or whitelist Udayavani.