ಎಎಪಿ ಅಧಿಕಾರಕ್ಕೆ ಬಂದರೆ ರಾಜ್ಯದ ಅಭಿವೃದ್ಧಿ ಸಾಧ್ಯ


Team Udayavani, Jul 3, 2022, 2:44 PM IST

tdy-9

ದೇವನಹಳ್ಳಿ: ಆಮ್‌ ಆದ್ಮಿ ಪಕ್ಷ ಅಧಿಕಾರಕ್ಕೆ ಬಂದರೆ ಮಾತ್ರ ದೇಶ ಹಾಗೂ ರಾಜ್ಯದ ಜನಸಾಮಾನ್ಯರ ಅಭಿವೃದ್ಧಿ ಸಾಧ್ಯ ಎಂದು ಆಮ್‌ ಆದ್ಮಿ ಪಕ್ಷದ ವಲಯ ಸಂಯೋಜಕ ಹಾಗೂ ನಿವೃತ್ತ ಕೆಎಎಸ್‌ ಅಧಿಕಾರಿ ಎಂ. ರವಿಶಂಕರ್‌ ತಿಳಿಸಿದರು.

ಪಟ್ಟಣದ ಪ್ರವಾಸಿ ಮಂದಿರದ ಸಭಾಂಗಣದಲ್ಲಿ ಆಮ್‌ ಆದ್ಮಿ ಪಕ್ಷದ ಬೆಂಗಳೂರು ಗ್ರಾಮಾಂತರ ಜಿಲ್ಲಾ ಘಟಕದ ವತಿಯಿಂದ ಜಿಲ್ಲಾ ಉಸ್ತುವಾರಿ ಬಿ.ಕೆ.ಶಿವಪ್ಪ ರವರ ನೇತೃತ್ವದಲ್ಲಿ ಏರ್ಪಡಿಸಿದ್ದ ಬೆಂಗಳೂರು ಗ್ರಾಮಾಂತರ ಜಿಲ್ಲಾ ಪದಾಧಿಕಾರಿಗಳ ಸಭೆ ಮತ್ತು ಪಕ್ಷ ಸೇರ್ಪಡೆ ಕಾರ್ಯಕ್ರಮದಲ್ಲಿ ಮಾತನಾಡಿದ ಅವರು, ರಾಜ್ಯದಲ್ಲಿ ಕಾಂಗ್ರೆಸ್‌, ಜೆಡಿಎಸ್‌, ಬಿಜೆಪಿ ಪಕ್ಷಗಳ ದುರಾಡಳಿತವನ್ನು, ಅದರಲ್ಲೂ ಬಿಜೆಪಿ ಪಕ್ಷದ 40 ಪರ್ಸೆಂಟ್‌ ಸರ್ಕಾರದ ಆಡಳಿತವನ್ನು ನೋಡಿ ಜನ ಬೇಸತ್ತಿದ್ದಾರೆ. ದೆಹಲಿ ಮುಖ್ಯಮಂತ್ರಿ ಅರವಿಂದ್‌ ಕೇಜ್ರಿವಾಲ್‌ರವರ ನೇತೃತ್ವದ ಆಡಳಿತ ಮೆಚ್ಚಿ ಈಗಾಗಲೇ ಪಂಜಾಬ್‌ ರಾಜ್ಯದಲ್ಲಿ ಆಮ್‌ ಆದ್ಮಿ ಪಕ್ಷದ ಸರ್ಕಾರ ರಚಿಸಿದ್ದು, ಈ ಎರಡೂ ರಾಜ್ಯಗಳಲ್ಲಿ ಆಗುತ್ತಿರುವ ಜನಪರವಾದ ಅಭಿವೃದ್ಧಿ ಕೆಲಸಗಳನ್ನು ಮೆಚ್ಚಿ ಕರ್ನಾಟಕದಲ್ಲಿ ಹೊಸ ಬದಲಾವಣೆಗಾಗಿ ಎಎಪಿಗೆ ಹೆಚ್ಚು ಜನ ಸೇರ್ಪಡೆಯಾಗುತ್ತಿರುವುದು ಸಂತಸದ ವಿಷಯ ಎಂದರು.

ಪ್ರಧಾನಿ ಶೋಕಿಗೇನು ಕಡಿಮೆಯಿಲ್ಲ: ಆಮ್‌ ಆದ್ಮಿ ಪಕ್ಷದ ರಾಜ್ಯ ಕಾರ್ಯದರ್ಶಿ ಡಾ. ವೆಂಕಟೇಶ್‌ ಮಾತನಾಡಿ, ದೇಶದಲ್ಲಿ ಒಂದು ರೀತಿಯ ಅಘೋಷಿತ ತುರ್ತು ಪರಿಸ್ಥಿತಿ ನಿರ್ಮಾಣವಾಗಿದೆ. ನಿರುದ್ಯೋಗ, ಬಡತನ, ಭ್ರಷ್ಟಾಚಾರ ತಾಂಡವವಾಡುತ್ತಿದೆ. ಆದರೂ ಪ್ರಧಾನಿ ಶೋಕಿಗೇನು ಕಡಿಮೆಯಿಲ್ಲ. ದೇಶದಲ್ಲಿ ಆರೋಗ್ಯ ಮತ್ತು ಶಿಕ್ಷಣ ಎರಡೂ ದುಬಾರಿಯಾಗಿದ್ದು, ಇವುಗಳನ್ನು ಪಡೆಯಲು ಜನ ದುಡಿದಿದ್ದೆಲ್ಲಾ ಚೆಲ್ಲಿದರೂ ಸಾಕಾಗುತ್ತಿಲ್ಲ ಎಂದರು.

ಆಮ್‌ ಆದ್ಮಿ ಪಕ್ಷದ ತತ್ವ ಸಿದ್ಧಾಂತ ಒಪ್ಪಿ ಪಕ್ಷಕ್ಕೆ ಸೇರ್ಪಡೆಗೊಂಡರು. ಆಮ್‌ ಆದ್ಮಿ ಪಕ್ಷದ ಜಿಲ್ಲಾ ಉಸ್ತುವಾರಿ ಬಿ.ಕೆ. ಶಿವಪ್ಪ, ದೊಡ್ಡಬಳ್ಳಾಪುರ ಉಸ್ತುವಾರಿ ಪುರುಶೋತ್ತಮ್‌, ನೆಲಮಂಗಲ ಉಸ್ತುವಾರಿ ಗಂಗಬೈಲಪ್ಪ, ಮಹಿಳಾ ಘಟಕದ ಅಧ್ಯಕ್ಷೆ ರತ್ನಮ್ಮ, ತಾಲೂಕು ಅಲ್ಪ ಸಂಖ್ಯಾತರ ಮಹಿಳಾ ಘಟಕದ ಅಧ್ಯಕ್ಷೆ ನಸ್ರತ್‌, ದೇವನಹಳ್ಳಿ ಟೌನ್‌ ಅಧ್ಯಕ್ಷ ಬಿ.ಕೆ. ಲೋಕೇಶ್‌ ಕುಮಾರ್‌, ವಿಜಯಪುರ ಹೋಬಳಿ ಅಧ್ಯಕ್ಷ ದೇವರಾಜ್‌, ವಿಜಯಪುರ ಟೌನ್‌ ಅಧ್ಯಕ್ಷ ಮಂಜುನಾಥ್‌, ಚನ್ನರಾಯಪಟ್ಟಣ ಹೋಬಳಿ ಅಧ್ಯಕ್ಷ ಬಿ.ಕೆ.ದೇವರಾಜ್‌, ವಿಜಯಪುರ ಟೌನ್‌ ಮಹಿಳಾ ಘಟಕದ ಅಧ್ಯಕ್ಷೆ ಮಂಜುಳಾ, ದೇವನಹಳ್ಳಿ ಟೌನ್‌ ಅಲ್ಪ ಸಂಖ್ಯಾತರ ಘಟಕದ ಅಧ್ಯಕ್ಷ ಆದಿಲ್‌, ಸಾಮಾಜಿಕ ಜಾಲತಾಣ ಘಟಕದ ಅಧ್ಯಕ್ಷೆ ರೂಪ, ವಿಜಯಪುರ ಟೌನ್‌ ಅಲ್ಪ ಸಂಖ್ಯಾತರ ಮಹಿಳಾ ಘಟಕದ ಅಧ್ಯಕ್ಷೆ ನಗೀನ, ಕ್ರೀಡಾ ವಿಭಾಗದ ಅಧ್ಯಕ್ಷ ಇಮ್ರಾನ್‌ ಹಾಗೂ ಮತ್ತಿತರರು ಇದ್ದರು.

ಟಾಪ್ ನ್ಯೂಸ್

Lok Sabha Election ಮುಗಿದ ಮತದಾನ, ಈಗ ಸೋಲು-ಗೆಲುವಿನ ಲೆಕ್ಕಾಚಾರ

Lok Sabha Election ಮುಗಿದ ಮತದಾನ, ಈಗ ಸೋಲು-ಗೆಲುವಿನ ಲೆಕ್ಕಾಚಾರ

Siddaramaiah ಮುಸ್ಲಿಂ ಮೀಸಲಾತಿ ಬಗ್ಗೆ ಬಿಜೆಪಿಯಿಂದ ಸುಳ್ಳು

Siddaramaiah ಮುಸ್ಲಿಂ ಮೀಸಲಾತಿ ಬಗ್ಗೆ ಬಿಜೆಪಿಯಿಂದ ಸುಳ್ಳು

1-wewqewq

T20 World Cup; ಯುವರಾಜ್‌ ಸಿಂಗ್‌ ರಾಯಭಾರಿ: ಐಸಿಸಿ ಘೋಷಣೆ 

Neha Hiremath Case ಮೊದಲ ದಿನವೇ ತನಿಖೆ ದಾರಿ ತಪ್ಪಿದೆ: ಬೊಮ್ಮಾಯಿ

Neha Hiremath Case ಮೊದಲ ದಿನವೇ ತನಿಖೆ ದಾರಿ ತಪ್ಪಿದೆ: ಬೊಮ್ಮಾಯಿ

Basavaraj Bommai; ನನ್ನ ಅವಧಿಯಲ್ಲಿ ಮುಸ್ಲಿಂ ಮೀಸಲು ಅಫಿದವಿತ್‌ ಸಲ್ಲಿಸಿಲ್ಲ

Basavaraj Bommai; ನನ್ನ ಅವಧಿಯಲ್ಲಿ ಮುಸ್ಲಿಂ ಮೀಸಲು ಅಫಿದವಿತ್‌ ಸಲ್ಲಿಸಿಲ್ಲ

1-ewewqe

IPL; ಕೆಕೆಆರ್‌ ನೀಡಿದ 262 ರನ್ ಗುರಿ ತಲುಪಿ ದಾಖಲೆ ಬರೆದ ಪಂಜಾಬ್

Tumkur ಮತದಾನದ ಬಳಿಕ ಹೃದಯ ಶಸ್ತ್ರಚಿಕಿತ್ಸೆ

Tumkur ಮತದಾನದ ಬಳಿಕ ಹೃದಯ ಶಸ್ತ್ರಚಿಕಿತ್ಸೆ


ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು

ಬೇಸಿಗೆ ಬಿಸಿಯೂಟ: 32,173 ಮಕ್ಕಳ ನೋಂದಣಿ

ಬೇಸಿಗೆ ಬಿಸಿಯೂಟ: 32,173 ಮಕ್ಕಳ ನೋಂದಣಿ

Devanahalli: ಬೇಸಿಗೆ ತಾಪಮಾನ ಹೆಚ್ಚಳ, ಇರಲಿ ಎಚ್ಚರ

Devanahalli: ಬೇಸಿಗೆ ತಾಪಮಾನ ಹೆಚ್ಚಳ, ಇರಲಿ ಎಚ್ಚರ

Doddaballapur: ಜಾತೀಯತೆಗೆ ಮಣೆ ಹಾಕದ ಕ್ಷೇತ್ರದ ‌ಮತದಾರರು

Doddaballapur: ಜಾತೀಯತೆಗೆ ಮಣೆ ಹಾಕದ ಕ್ಷೇತ್ರದ ‌ಮತದಾರರು

Lok Sabha polls: ಲೋಕಸಭೆ ಚುನಾವಣೆಯಲ್ಲಿ ಇಂದಿರಾಗಾಂಧಿ ನೆನಪು

Lok Sabha polls: ಲೋಕಸಭೆ ಚುನಾವಣೆಯಲ್ಲಿ ಇಂದಿರಾಗಾಂಧಿ ನೆನಪು

10

Electricity problem: ಬೇಸಿಗೆ ಬೆನ್ನಲ್ಲೇ ಕಾಡುತ್ತಿದೆ ವಿದ್ಯುತ್‌ ಸಮಸ್ಯೆ

MUST WATCH

udayavani youtube

ವೈಭವದ ಹಿರಿಯಡ್ಕ ಸಿರಿಜಾತ್ರೆ ಸಂಪನ್ನ

udayavani youtube

ಯಾವೆಲ್ಲಾ ಚರ್ಮದ ಕಾಯಿಲೆಗಳಿವೆ ಹಾಗೂ ಪರಿಹಾರಗಳೇನು?

udayavani youtube

Mangaluru ಹೆಬ್ಬಾವಿನ ದೇಹದಲ್ಲಿ ಬರೋಬ್ಬರಿ 11 ಬುಲೆಟ್‌ ಪತ್ತೆ!

udayavani youtube

ನನ್ನ ಕಥೆ ನಿಮ್ಮ ಜೊತೆ

udayavani youtube

‘ಕಸಿ’ ಕಟ್ಟುವ ಸುಲಭ ವಿಧಾನ

ಹೊಸ ಸೇರ್ಪಡೆ

Lok Sabha Election ಮುಗಿದ ಮತದಾನ, ಈಗ ಸೋಲು-ಗೆಲುವಿನ ಲೆಕ್ಕಾಚಾರ

Lok Sabha Election ಮುಗಿದ ಮತದಾನ, ಈಗ ಸೋಲು-ಗೆಲುವಿನ ಲೆಕ್ಕಾಚಾರ

Siddaramaiah ಮುಸ್ಲಿಂ ಮೀಸಲಾತಿ ಬಗ್ಗೆ ಬಿಜೆಪಿಯಿಂದ ಸುಳ್ಳು

Siddaramaiah ಮುಸ್ಲಿಂ ಮೀಸಲಾತಿ ಬಗ್ಗೆ ಬಿಜೆಪಿಯಿಂದ ಸುಳ್ಳು

1-wewqewq

T20 World Cup; ಯುವರಾಜ್‌ ಸಿಂಗ್‌ ರಾಯಭಾರಿ: ಐಸಿಸಿ ಘೋಷಣೆ 

Neha Hiremath Case ಮೊದಲ ದಿನವೇ ತನಿಖೆ ದಾರಿ ತಪ್ಪಿದೆ: ಬೊಮ್ಮಾಯಿ

Neha Hiremath Case ಮೊದಲ ದಿನವೇ ತನಿಖೆ ದಾರಿ ತಪ್ಪಿದೆ: ಬೊಮ್ಮಾಯಿ

Basavaraj Bommai; ನನ್ನ ಅವಧಿಯಲ್ಲಿ ಮುಸ್ಲಿಂ ಮೀಸಲು ಅಫಿದವಿತ್‌ ಸಲ್ಲಿಸಿಲ್ಲ

Basavaraj Bommai; ನನ್ನ ಅವಧಿಯಲ್ಲಿ ಮುಸ್ಲಿಂ ಮೀಸಲು ಅಫಿದವಿತ್‌ ಸಲ್ಲಿಸಿಲ್ಲ

Thanks for visiting Udayavani

You seem to have an Ad Blocker on.
To continue reading, please turn it off or whitelist Udayavani.