ನಿರ್ದಿಷ್ಟ ಗುರಿಯಿಂದ ಓದಿದರೆ ಐಎಎಸ್, ಕೆಎಎಸ್ ಸಾಧ್ಯ
Team Udayavani, Feb 20, 2019, 7:29 AM IST
ದೇವನಹಳ್ಳಿ: ವಿದ್ಯಾರ್ಥಿಗಳು ನಿರ್ದಿಷ್ಟ ಗುರಿಯೊಂದಿಗೆ ಓದಿದರೆ ಐಎಎಸ್ ಮತ್ತು ಕೆಎಎಸ್ ಮಾಡಬಹುದು ಎಂದು 5ನೇ ಅಪರ ಜಿಲ್ಲಾ ಮತ್ತು ಸತ್ರ ನ್ಯಾಯಾಧೀಶ ಎಂ.ಎನ್.ಸಂಶಿ ಹೇಳಿದರು.
ನಗರದ ತಾಲೂಕು ಪಂಚಾಯಿತಿ ಸಭಾಂಗಣದಲ್ಲಿ ತಾಲೂಕು ಕಾನೂನು ಸೇವೆಗಳ ಸಮಿತಿ, ವಕೀಲರ ಸಂಘ, ಹಿಂದುಳಿದ ವರ್ಗಗಳ ಕಲ್ಯಾಣ ಇಲಾಖೆ ವತಿಯಿಂದ ಐಎಎಸ್ ಮತ್ತು ಕೆಎಎಸ್ ಗೆ ತರಬೇತಿ ಪಡೆಯುತ್ತಿರುವ ವಿದ್ಯಾರ್ಥಿಗಳಿಗೆ ಕಾನೂನು ಸಾûಾರತಾ ರಥದ ಮೂಲಕ ಏರ್ಪಡಿಸಿದ್ದ ಕಾನೂನು ಅರಿವು ಕಾರ್ಯಕ್ರಮವನ್ನು ಉದ್ಘಾಟಿಸಿ ಮಾತನಾಡಿದರು.
ಸಾಧನೆಗೆ ಛಲವಿರಬೇಕು: ಐಎಎಸ್ ಮತ್ತು ಕೆಎಎಸ್ಗೆ ತರಬೇತಿ ಪಡೆಯುತ್ತಿರುವ ವಿದ್ಯಾರ್ಥಿಗಳಿಗೆ ಇಂತಹ ಕಾರ್ಯಾಗಾರಗಳು ಅನುಕೂಲವಾಗಲಿವೆ. ಪದವಿ ಪಾಸ್ ಆಗಿದ್ದರೆ ಇಂತಹ ಸ್ಪರ್ಧಾತ್ಮಕ ಪರೀಕ್ಷೆಗಳನ್ನು ಬರೆಯಬಹುದು. ವಿದ್ಯಾರ್ಥಿಗಳು ಒಂದು ಗುಂಪು ಮಾಡಿ ವಿಷಯವಾರು ಚರ್ಚಿಸಬೇಕು. ಪ್ರತಿ ವಿದ್ಯಾರ್ಥಿಯಲ್ಲೂ ವಿವಿಧ ರೀತಿಯ ಸಾಮರ್ಥ್ಯ ಹಾಗೂ ಪ್ರತಿಭೆಗಳು ಇರುತ್ತವೆ. ಸಾಧನೆ ಮಾಡಲು ಛಲವಿರಬೇಕು. ಆಗ ಮಾತ್ರ ಜೀವನದಲ್ಲಿ ಏನಾದರೂ ಸಾಧಿಸಲು ಸಾಧ್ಯ ಎಂದರು.
ಬಡವರಿಗೆ ಉಚಿತ ಕಾನೂನು ಸೇವೆ: ದೇಶದಲ್ಲಿ 10 ಸಾವಿರ ಕಾನೂನುಗಳಿವೆ. ಅವುಗಳನ್ನು ಓದಲು ಕಷ್ಟವಾಗುತ್ತಿದೆ. 1988 ರಲ್ಲಿ ಕಾನೂನು ಸಾಕ್ಷರತೆ ಪ್ರಾರಂಭವಾಗಿದ್ದು, 1995ರಲ್ಲಿ ಜಾರಿಗೆ ಬಂದಿದೆ. ಪ್ರತಿ ಜನರಿಗೆ ಕಾನೂನು ಅರಿವು ಮೂಡಿಸಲು ಸಾಕಷ್ಟು ಕಾರ್ಯಕ್ರಮಗಳನ್ನು ಏರ್ಪಡಿಸಲಾಗುತ್ತಿದೆ. ಕಾನೂನು ಸೇವೆಗಳ ಸಮಿತಿಗೆ ಬಡವರು ಅರ್ಜಿ ಸಲ್ಲಿಸಿದರೆ ಉಚಿತವಾಗಿ ಪ್ರಕರಣವನ್ನು ನಡೆಸಿಕೊಡಲಾಗುವುದು. ವಕೀಲರನ್ನು ಸಹ ನೇಮಿಸಲಾಗುತ್ತದೆ. ಇದರಿಂದ ಕಕ್ಷಿದಾರರಿಗೆ ಅನುಲಕೂಲವಾಗಲಿದೆ ಎಂದರು.
ಕಾನೂನು ಜ್ಞಾನ ಅಗತ್ಯ: ಎಲ್ಲರೂ ಕಾನೂನುಗಳನ್ನು ತಿಳಿಯಬೇಕು. ಸಾಮಾನ್ಯ ಕಾನೂನು ಜ್ಞಾನ ಪ್ರತಿಯೊಬ್ಬರಲ್ಲೂ ಇರಬೇಕು. ಮದುವೆ ಸಂದರ್ಭದಲ್ಲಿ ಹೆಣ್ಣಿಗೆ 18 ವರ್ಷ ಹಾಗೂ ಗಂಡಿಗೆ 21 ವರ್ಷ ತುಂಬಿರಬೇಕು. ಶಾಸನವಾಗಿ ಕಾನೂನುಗಳನ್ನು ರಚಿಸುತ್ತಾರೆ. ಸಂವಿಧಾನದಲ್ಲಿ ಕಾರ್ಯಾಂಗ, ಶಾಸಕಾಂಗ ಹಾಗೂ ನ್ಯಾಯಾಂಗವಿದ್ದು, ಅವುಗಳ ಬಗ್ಗೆ ತಿಳಿದುಕೊಳ್ಳಬೇಕೆಂದು ಹೇಳಿದರು.
ಸಂವಿಧಾನದ ಬಗ್ಗೆ ತಿಳಿದುಕೊಳ್ಳಿ: ನ್ಯಾಯಾಧೀಶ ಆದಿತ್ಯ ಮಾತನಾಡಿ, ಸಂವಿಧಾನದ ಬಗ್ಗೆ ಪ್ರತಿಯೊಬ್ಬರೂ ಮಾಹಿತಿ ಹಾಗೂ ಪ್ರಸ್ತುತ ವಿದ್ಯಮಾಮಗಳ ಬಗ್ಗೆ ತಿಳಿಯಬೇಕು. 198 ದೇಶಗಳ ಪೈಕಿ 194 ದೇಶಗಳಲ್ಲಿ ಸಂವಿಧಾನದವಿದ್ದು, ಅದರಲ್ಲಿ ಲಿಖೀತ ಸಂವಿಧಾನವನ್ನು ನಮ್ಮ ದೇಶ ಹೊಂದಿದೆ. ಜನರ ಮನೆ ಬಾಗಿಲಿಗೇ ತೆರಳಿ ಕಾನೂನು ಅರಿವು ಮೂಡಿಸಲಾಗುತ್ತಿದೆ. ಐಎಎಸ್ ಮತ್ತು ಕೆಎಎಸ್ ವಿದ್ಯಾರ್ಥಿಗಳು ಸಂವಿಧಾನದ ಬಗ್ಗೆ ಹೆಚ್ಚಿನ ವಿಷಯ ತಿಳಿದುಕೊಳ್ಳಬೇಕು ಎಂದು ಸಲಹೆ ನೀಡಿದರು.
ತಾಲೂಕು ಹಿಂದುಳಿದ ವರ್ಗಗಳ ಕಲ್ಯಾಣ ಇಲಾಖೆ ಸಹಾಯಕ ನಿರ್ದೇಶಕ ನಾಗರಾಜ್ ಅಧ್ಯಕ್ಷತೆ ವಹಿಸಿದ್ದರು. ಈ ವೇಳೆ ತಾಲೂಕು ಕಾನೂನು ಸೇವೆಗಳ ಸಮಿತಿ ಪ್ರಭಾರ ಅಧ್ಯಕ್ಷೆ ಡಿ.ಮಂಜುಳಾ, ಅಪರ ಸಿವಿಲ್ ನ್ಯಾಯಾಧೀಶ ಅಬ್ದುಲ್ ಸಲೀಂ, ತಾಲೂಕು ವಕೀಲರ ಸಂಘದ ಅಧ್ಯಕ್ಷ ಬೈರೇಗೌಡ, ಉಪಾಧ್ಯಕ್ಷ ಗೋವಿಂದಸ್ವಾಮಿ, ನಲ್ಲೂರು ಗ್ರಾಪಂ ಅಧ್ಯಕ್ಷೆ ಸಾವಿತ್ರಮ್ಮ ಹಾಗೂ ವಕೀಲರು ಭಾಗವಹಿಸಿದ್ದರು.
ಟಾಪ್ ನ್ಯೂಸ್
ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು
MUST WATCH
ಹೊಸ ಸೇರ್ಪಡೆ
Team India; ಹಾರ್ದಿಕ್ ಅಲ್ಲ; ಟೀಂ ಇಂಡಿಯಾದ ಮುಂದಿನ ಟಿ20 ನಾಯಕನ ಹೆಸರು ಸೂಚಿಸಿದ ಭಜ್ಜಿ
ಬಿಜೆಪಿ ದಲಿತರ ಪರ ಮೊಸಳೆ ಕಣ್ಣೀರು: ಬಿ.ಕೆ. ಹರಿಪ್ರಸಾದ
Haveri Lok Sabha constituency: “ಮೇ 7 ರಂದು ತಪ್ಪದೇ ಮತದಾನ ಮಾಡಿ’
Neha ಕೊಲೆ ಆರೋಪಿ ನಿರ್ದೋಷಿಯಾಗಿ ಹೊರಗೆ ಬಂದ್ರೆ ನಾವೇ ಶಿಕ್ಷೆ ಕೊಟ್ಟು ಜೈಲಿಗೆ ಹೋಗಲು ಸಿದ್ಧ
ನೇಹಾ ಪ್ರಕರಣವನ್ನು ರಾಜಕೀಯಕ್ಕೆ ಬಳಸುವಂತಹ ನೀಚತನಕ್ಕೆ ಬಿಜೆಪಿ ಇಳಿದಿದೆ-ಚನ್ನರಾಜ ಹಟ್ಟಿಹೊಳಿ