ಹಗಲಿನಲ್ಲಿ ಬಿಸಿಲಿನ ತಾಪ ಸಂಜೆಯಾದರೆ ಮೈ ನಡುಗಿಸೋ ಚಳಿ


Team Udayavani, Nov 23, 2019, 3:00 AM IST

hagalinalli

ದೇವನಹಳ್ಳಿ: ಮುಂಜಾನೆಯಲ್ಲಿ ಧಾರಾಕಾರವಾಗಿ ಸುರಿಯುತ್ತಿರುವ ಮಂಜಿನಿಂದಾಗಿ ಜನತೆ ಚಳಿಯಿಂದಾಗಿ ನಡುಗುತ್ತಿರುವಂತೆಯೇ ರಾಷ್ಟ್ರೀಯ ಹೆದ್ದಾರಿ 7 ಮತ್ತು 207 ರಲ್ಲಿ ಬರುವ ವಾಹನ ಚಾಲಕರು ಪರದಾಡುವ ಸ್ಥಿತಿ ನಿರ್ಮಾಣವಾಗುತ್ತಿದೆ.

ಮುಂದೆ ನಿಂತವರು ಸ್ಪಷ್ಟವಾಗಿ ಕಾಣದಷ್ಟು ಮಂಜು ಸುರಿಯುತ್ತಿದೆ. ಇದರಿಂದಾಗಿ ರಸ್ತೆಯಲ್ಲಿ ಸಂಚರಿಸುವ ವಾಹನ ಸವಾರರಿಗೆ ಮುಂದೆ ಆಗಮಿಸುವ ವಾಹನಗಳು ಅಸ್ಪಷ್ಟವಾಗಿ ಕಾಣುತ್ತಿವೆ. ಇದರಿಂದಾಗಿ ಅಪಘಾತಗಳ ಸಂಖ್ಯೆ ಹೆಚ್ಚಳವಾಗುವ ಸಾಧ್ಯತೆ ಬಹಳಷ್ಟಿದೆ.

ವಾಯು ವಿಹಾರ ಮಾಡುವವರು. ಪತ್ರಿಕಾ ವಿತರಕರೂ ಚಳಿಯಲ್ಲಿ ನಡುಗುವಂತಾಗುತ್ತಿದೆ. ಚಳಿಯಲ್ಲಿ ಬೆಳಗ್ಗೆ ತೆರೆದಿದ್ದು ಹೋಟಲ್‌ಗ‌ಳ ಮುಂದೆ ಹೆಚ್ಚಿನ ಸಂಖ್ಯೆಯಲ್ಲಿ ಜನರು ಜಮಾಯಿಸಿ ಟೀ, ಕಾಫೀ ಕುಡಿಯುವುದರ ಮೂಲಕ ಚಳಿಯನ್ನು ತಡೆಯುವ ಪ್ರಯತ್ನ ಮಾಡುತ್ತಿದ್ದಾರೆ.

ಇತ್ತೀಚಿಗೆ 02-03 ಬಾರಿ ಮಳೆ ಬಂದು ಹೋಗಿದೆ. ಬೆಳಗ್ಗೆ ಮತ್ತು ಮಧ್ಯಾಹ್ನದ ಮೇಲೆ ಬಿಸಿಲು ಆವರಿಸುತ್ತದೆ. ಪ್ರಾಣಿ ಪಕ್ಷಿಗಳಾದಿಯಾಗಿ ಎಲ್ಲರಿಗೂ ಬಿಸಿಲಿನ ತಾಪ ಹೆಚ್ಚಾಗುತ್ತಿದ್ದು, ನೀರಿನ ಸೆಲೆಗಳು ಭಾಗಶಃ ಬತ್ತಿವೆ. ಇದರಿಂದಾಗಿ ಪ್ರಾಣಿ ಪಕ್ಷಿಗಳು ನೀರಿಗಾಗಿ ಪರಿತಪಿಸುವಂತಾಗಿದೆ. ಹಾಗೆಯೇ ಚಳಿಯಿಂದಾಗಿ ಹಿಂದಿಗಿಂತಲೂ ಈ ಬಾರಿ ಉರಿಬಿಸಿಲು ಜನರನ್ನು ಗಾಬರಿಗೊಳ್ಳುವಂತೆ ಮಾಡಿದೆ. ಕೆಲವರು ಮನೆಯಲ್ಲಿ ಇಟ್ಟಿದ್ದ ಸ್ವೆಟರ್‌ ಮತ್ತು ಟೋಪಿಯನ್ನು ಹೊರ ತೆಗೆದು ದಿನನಿತ್ಯ ಧರಿಸುವಂತಾಗಿದೆ.

ಸಂಜೆಯಾಗುತ್ತಲೆ ಮೈ ನಡುಗಿಸುವ ಚಳಿ ಜನರನ್ನು ತತ್ತರಿಸುತ್ತಿದೆ. ಹವಾಮಾನ ವೈಪರೀತ್ಯದಿಂದ ಜನ ವಿವಿಧ ಕಾಯಿಲೆಗಳಿಗೆ ತುತ್ತಾಗಿ ಜನರು ಆಸ್ಪತ್ರೆಗಳತ್ತ ಮುಖ ಮಾಡುವಂತಾಗಿದೆ. ಆಸ್ಪತ್ರೆಗಳ ಮುಂದೆ ಸಾಲುಗಟ್ಟಿ ನಿಲ್ಲುವ ರೋಗಿಗಳ ಸಂಖ್ಯೆ ದಿನನಿತ್ಯ ಹೆಚ್ಚಾಗುತ್ತಿದೆ.

ಸಂಜೆಯಾಗುತ್ತಲೇ ಜನರು ಚಳಿಗೆ ತತ್ತರಿಸುವಂತಾಗುತ್ತಿದೆ. ಎರಡು ವಾರಗಳಿಂದ ಬಿಸಿಲಿನ ಪ್ರಮಾಣ ಹೆಚ್ಚಾಗಿದೆ. ಈ ನಡುವೆಯೇ ಸಂಜೆಯಾದರೆ ಸಾಕು ಮೈ ಕೊರೆಯುವ ಚಳಿ ಪ್ರಾರಂಭವಾಗುತ್ತದೆ.
-ನಾಗೇಶ್‌, ನಾಗರಿಕ

ಚಳಿಗಾಲದಲ್ಲಿ ಕೆಲವು ಖಾಯಿಲೆ ಇರುವವರು ಇಂತಹ ಸಂದರ್ಭದಲ್ಲಿ ಜಾಗ್ರತೆಯಿಂದ ಇರಬೇಕು. ಚಳಿಯಿಂದ ಜನರಲ್ಲಿ ಕೆಮ್ಮು ನೆಗಡಿ, ಜ್ವರ ಉಲ್ಬಣವಾಗುವ ಸಾಧ್ಯತೆಯಿದೆ.
-ನರಸಾರೆಡ್ಡಿ, ವೈದ್ಯರು

ಟಾಪ್ ನ್ಯೂಸ್

1-weweew

Congress; ತಮ್ಮ ಆಸ್ತಿ ಉಳಿಕೆಗೆ ರಾಜೀವ್‌ರಿಂದ ಉತ್ತರಾಧಿಕಾರ ಕಾಯ್ದೆ ರದ್ದು: ಪಿಎಂ

yogi-3

Congress ಬಂದರೆ ತಾಲಿಬಾನ್‌ ಶೈಲಿ ಆಡಳಿತ: ಯೋಗಿ

supreem

WhatsApp ಮೂಲಕ ವಕೀಲರಿಗೆ ಎಲ್ಲ ಮಾಹಿತಿ: ಸುಪ್ರೀಂ ಕೋರ್ಟ್‌

jairam ramesh

Wealth redistribution ಬಗ್ಗೆ ಕೈ ಪ್ರಣಾಳಿಕೆಯಲ್ಲಿ ಎಲ್ಲಿದೆ?: ಜೈರಾಂ

1-wqewq-eqw

Modi ಕೈ ಬಲಪಡಿಸಲು, ದ.ಕ. ಸಮಗ್ರ ಸುಧಾರಣೆಗಾಗಿ ಬಿಜೆಪಿಗೆ ಮತ ನೀಡಿ: ಚೌಟ

1-asasas

Naxal ಬಾಧಿತ ಮತಗಟ್ಟೆಗಳ ಭದ್ರತೆಗೆ ಹೆಚ್ಚುವರಿ ಆದ್ಯತೆ: ಮುಲ್ಲೈ ಮುಗಿಲನ್‌

D. K. Shivakumar: ಡೆತ್‌, ಬರ್ತ್‌ ಯಾವ ಟ್ಯಾಕ್ಸೂ ಇಲ್ಲ; ಡಿಕೆಶಿ

D. K. Shivakumar: ಡೆತ್‌, ಬರ್ತ್‌ ಯಾವ ಟ್ಯಾಕ್ಸೂ ಇಲ್ಲ; ಡಿಕೆಶಿ


ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು

ಬೇಸಿಗೆ ಬಿಸಿಯೂಟ: 32,173 ಮಕ್ಕಳ ನೋಂದಣಿ

ಬೇಸಿಗೆ ಬಿಸಿಯೂಟ: 32,173 ಮಕ್ಕಳ ನೋಂದಣಿ

Devanahalli: ಬೇಸಿಗೆ ತಾಪಮಾನ ಹೆಚ್ಚಳ, ಇರಲಿ ಎಚ್ಚರ

Devanahalli: ಬೇಸಿಗೆ ತಾಪಮಾನ ಹೆಚ್ಚಳ, ಇರಲಿ ಎಚ್ಚರ

Doddaballapur: ಜಾತೀಯತೆಗೆ ಮಣೆ ಹಾಕದ ಕ್ಷೇತ್ರದ ‌ಮತದಾರರು

Doddaballapur: ಜಾತೀಯತೆಗೆ ಮಣೆ ಹಾಕದ ಕ್ಷೇತ್ರದ ‌ಮತದಾರರು

Lok Sabha polls: ಲೋಕಸಭೆ ಚುನಾವಣೆಯಲ್ಲಿ ಇಂದಿರಾಗಾಂಧಿ ನೆನಪು

Lok Sabha polls: ಲೋಕಸಭೆ ಚುನಾವಣೆಯಲ್ಲಿ ಇಂದಿರಾಗಾಂಧಿ ನೆನಪು

10

Electricity problem: ಬೇಸಿಗೆ ಬೆನ್ನಲ್ಲೇ ಕಾಡುತ್ತಿದೆ ವಿದ್ಯುತ್‌ ಸಮಸ್ಯೆ

MUST WATCH

udayavani youtube

ವೈಭವದ ಹಿರಿಯಡ್ಕ ಸಿರಿಜಾತ್ರೆ ಸಂಪನ್ನ

udayavani youtube

ಯಾವೆಲ್ಲಾ ಚರ್ಮದ ಕಾಯಿಲೆಗಳಿವೆ ಹಾಗೂ ಪರಿಹಾರಗಳೇನು?

udayavani youtube

Mangaluru ಹೆಬ್ಬಾವಿನ ದೇಹದಲ್ಲಿ ಬರೋಬ್ಬರಿ 11 ಬುಲೆಟ್‌ ಪತ್ತೆ!

udayavani youtube

ನನ್ನ ಕಥೆ ನಿಮ್ಮ ಜೊತೆ

udayavani youtube

‘ಕಸಿ’ ಕಟ್ಟುವ ಸುಲಭ ವಿಧಾನ

ಹೊಸ ಸೇರ್ಪಡೆ

1-weweew

Congress; ತಮ್ಮ ಆಸ್ತಿ ಉಳಿಕೆಗೆ ರಾಜೀವ್‌ರಿಂದ ಉತ್ತರಾಧಿಕಾರ ಕಾಯ್ದೆ ರದ್ದು: ಪಿಎಂ

yogi-3

Congress ಬಂದರೆ ತಾಲಿಬಾನ್‌ ಶೈಲಿ ಆಡಳಿತ: ಯೋಗಿ

supreem

WhatsApp ಮೂಲಕ ವಕೀಲರಿಗೆ ಎಲ್ಲ ಮಾಹಿತಿ: ಸುಪ್ರೀಂ ಕೋರ್ಟ್‌

jairam ramesh

Wealth redistribution ಬಗ್ಗೆ ಕೈ ಪ್ರಣಾಳಿಕೆಯಲ್ಲಿ ಎಲ್ಲಿದೆ?: ಜೈರಾಂ

1-wqewq-eqw

Modi ಕೈ ಬಲಪಡಿಸಲು, ದ.ಕ. ಸಮಗ್ರ ಸುಧಾರಣೆಗಾಗಿ ಬಿಜೆಪಿಗೆ ಮತ ನೀಡಿ: ಚೌಟ

Thanks for visiting Udayavani

You seem to have an Ad Blocker on.
To continue reading, please turn it off or whitelist Udayavani.