ಬೆಳೆ ಸಮೀಕ್ಷೆ ಲೋಪಗಳಿದ್ದರೆ ಆಕ್ಷೇಪಣೆ ಸಲ್ಲಿಸಿ


Team Udayavani, Sep 24, 2020, 2:03 PM IST

ಬೆಳೆ ಸಮೀಕ್ಷೆ ಲೋಪಗಳಿದ್ದರೆ ಆಕ್ಷೇಪಣೆ ಸಲ್ಲಿಸಿ

ಸಾಂದರ್ಭಿಕ ಚಿತ್ರ

ದೇವನಹಳ್ಳಿ: ಜಿಲ್ಲೆಯಲ್ಲಿ2020ರ ಮುಂಗಾರು ಹಂಗಾಮಿನ ಬೆಳೆ ಸಮೀಕ್ಷೆಗೆ ಸಂಬಂಧಿಸಿದಂತೆ ಬೆಳೆಗಳ ಫೋಟೋ ಅಪ್‌ಲೋಡ್‌ ಮಾಡಿರುವುದರಲ್ಲಿ ಯಾವುದೇ ಲೋಪದೋಷ ಕಂಡು ಬಂದಲ್ಲಿ, ರೈತರು ಬೆಳೆ ದರ್ಶಕ್‌ 2020 ಆ್ಯಪ್‌ನಲ್ಲಿ ಆಕ್ಷೇಪಣೆ ಸಲ್ಲಿಸಬಹುದಾಗಿದೆ ಎಂದು ಕೃಷಿ ಇಲಾಖೆ ಬೆಂಗಳೂರು ಗ್ರಾಮಾಂತರ ಜಿಲ್ಲಾ ಜಂಟಿ ಕೃಷಿ ನಿರ್ದೇಶಕ ಜಯಸ್ವಾಮಿ ತಿಳಿಸಿದ್ದಾರೆ.

ಜಿಪಿಎಸ್‌ ಆಧಾರಿತ ಮೊಬೈಲ್‌ ಆ್ಯಪ್‌ ಬಳಸಿ ಬೆಳೆ ಸಮೀಕ್ಷೆ ನಡೆಸುತ್ತಿದ್ದು ಬೆಳೆ ಸಮೀಕ್ಷೆ ಮೂಲಕ ಸಂಗ್ರಹಿಸಿದ ಬೆಳೆ ಮಾಹಿತಿ, ಮೇಲ್ವಿಚಾರಕರ ಮೂಲಕ ಅನುಮೋದನೆ ನಂತರ, ಈ ಮಾಹಿತಿಯನ್ನು ಬೆಂಬಲ ಬೆಲೆಯಲ್ಲಿ ಕೃಷಿ ಉತ್ಪನ್ನಗಳ ಖರೀದಿಗಾಗಿ, ಬೆಳೆ ವಿಮೆ ಯೋಜನೆಗಾಗಿ, ಬೆಳೆ ನಷ್ಟ ಪರಿಹಾರ ನೀಡುವ ಸಮಯದಲ್ಲಿ ಉಪಯೋಗಿಸಲಾಗುತ್ತದೆ.

ಬೆಳೆ ದರ್ಶಕ್‌ ಆ್ಯಪ್‌ನ ವೈಶಿಷ್ಯತೆ: ಬೆಳೆ ದರ್ಶಕ್‌ ಆ್ಯಪ್‌ನಲ್ಲಿ ನಿಮ್ಮ ಜಮೀನಿನಲ್ಲಿ ಬೆಳೆ ಸಮೀಕ್ಷೆ ಪ್ರಕಾರ ದಾಖಲಾಗಿರುವ ಬೆಳೆ ವಿವರ, ವಿಸ್ತೀರ್ಣದ ಮಾಹಿತಿ ಪಡೆಯಬಹುದು, ಬೆಳೆ ಸಮೀಕ್ಷೆ ಸಮಯದಲ್ಲಿ ನಿಮ್ಮ ಜಮೀನಿನಲ್ಲಿ ತೆಗೆಯಲಾದ ಜಿಪಿಎಸ್‌ ಆಧಾರಿತ ಛಾಯಾ ಚಿತ್ರ ವೀಕ್ಷಿಸಬಹುದು, ಜಮೀನಿನ ಬೆಳೆ ಸಮೀಕ್ಷೆ ಮಾಡಿದವರ ಹೆಸರು, ಮೊಬೈಲ್‌ ಸಂಖ್ಯೆ ವಿವರ ಪಡೆಯಬಹುದು, ಅಲ್ಲದೇ, ಬೆಳೆ ಸಮೀಕ್ಷೆ ಪ್ರಕಾರ ದಾಖಲಿಸಿದ ಮಾಹಿತಿಯನ್ನು ಮೇಲ್ವಿಚಾರಣೆ ಮಾಡುವ ಅಧಿಕಾರಿಗಳು ದಾಖಲಾಗಿರುವ ಎಲ್ಲಾ ಆಕ್ಷೇಪಣೆ ಸಂಬಂಧಪಟ್ಟ ಮೇಲ್ವಿಚಾರಕರಿಗೆ ತಂತ್ರಾಂಶದಲ್ಲಿ ಗುರುತಿಸಲಿದ್ದಾರೆ.

ಮೇಲ್ವಿಚಾರಕರು ಆಕ್ಷೇಪಣೆಗಳನ್ನು ಪರಿಶೀಲಿಸಿ, ಅವುಗಳನ್ನು ತುರ್ತಾಗಿ ಇತ್ಯರ್ಥಪಡಿಸುವರು. ಮೇಲ್ವಿಚಾರಕರು ಸ್ವೀಕೃತವಾಗಿರುವ ಪ್ರತಿಯೊಂದು ಆಕ್ಷೇಪಣೆಯನ್ನು ಕೂಲಂಕಶವಾಗಿ ಪರಿಶೀಲಿಸಿ, ಈಗಾಗಲೇ ಬೆಳೆ ಸಮೀಕ್ಷೆ ದತ್ತಾಂಶದಲ್ಲಿ ಲಭ್ಯವಿರುವ ಬೆಳೆ ಮಾಹಿತಿಯೊಂದಿಗೆ ಹೋಲಿಸಿ ಆಕ್ಷೇಪಣೆ ಇತ್ಯರ್ಥಪಡಿಸುವರು. ಬೆಳೆ ಸಮೀಕ್ಷೆ ದತ್ತಾಂಶದಲ್ಲಿ ಲಭ್ಯವಿರುವ ಬೆಳೆ ಮಾಹಿತಿ ಆಧಾರದ ಮೇರೆಗೆ ಇತ್ಯರ್ಥಪಡಿಸಲು ಸಾಧ್ಯವಿಲ್ಲದ ಸನ್ನಿವೇಶದಲ್ಲಿ ಮೇಲ್ವಿಚಾರಕರೇ ಖುದ್ದಾಗಿ ಮಹಜರು ದಾಖಲಿಸುವ ಮೂಲಕ ಆಕ್ಷೇಪಣೆ ಇತ್ಯರ್ಥಪಡಿಸಲಾಗುವುದು ಎಂದು ಕೃಷಿ ಇಲಾಖೆ ಬೆಂಗಳೂರು ಗ್ರಾಮಾಂತರ ಜಿಲ್ಲಾ ಜಂಟಿ ಕೃಷಿ ನಿರ್ದೇಶಕ ಜಯಸ್ವಾಮಿ ತಿಳಿಸಿದ್ದಾರೆ.

ರೈತರು ತಮ್ಮ ಜಮೀನುಗಳಲ್ಲಿ ಬೆಳೆದಿರುವ ಬೆಳೆಗಳನ್ನು ಸರಿಯಾಗಿ ನಮೂದಿಸಲಾಗಿದೆಯೇ ಎಂಬುದನ್ನು ಬೆಳೆ ದರ್ಶಕ 2020 ಎಂಬ ಆ್ಯಪ್‌ನ್ನು ಪ್ಲೇಸ್ಟೋರ್‌ನಲ್ಲಿಡೌನ್‌ಲೋಡ್‌ ಮಾಡಿಕೊಂಡು ಬೆಳೆಗಳ ಫೋಟೋ ಅಪ್‌ಲೋಡ್‌ ಮಾಡಿರುವುದರಲ್ಲಿಯಾವುದೇ ಲೋಪದೋಷಗಳಿದ್ದಲ್ಲಿ ಆಕ್ಷೇಪಣೆ ಸಲ್ಲಿಸಲು ಅ.15 ಕೊನೇ ದಿನವಾಗಿದೆ. –ಜಯಸ್ವಾಮಿ, ಕೃಷಿ ಇಲಾಖೆ ಬೆಂಗಳೂರು ಗ್ರಾಮಾಂತರ ಜಿಲ್ಲಾ ಜಂಟಿಕೃಷಿ ನಿರ್ದೇಶಕ

ಟಾಪ್ ನ್ಯೂಸ್

1-wqeqewqe

Muslim ಆದ್ಯತೆ ಹೇಳಿಕೆ ನೀಡಿಲ್ಲವೆಂದು ಸಾಬೀತುಪಡಿಸಿ: ‘ಕೈ’ಗೆ ಮೋದಿ ಸವಾಲು

1-qweqewqe

IPL;ಮುಂಬೈ ಇಂಡಿಯನ್ಸ್‌ ಎದುರಾಳಿ: ಸೇಡಿನ ತವಕದಲ್ಲಿ ಡೆಲ್ಲಿ

Akki

Report; 2023ರಲ್ಲಿ 28.2 ಕೋಟಿ ಜನರಿಗೆ ತೀವ್ರ ಆಹಾರ ಬಿಕ್ಕಟ್ಟು

SHriramulu (2)

BJP ಶ್ರೀರಾಮುಲುಗೆ ಗೆಲುವು ಅನಿವಾರ್ಯ; ಕ್ಷೇತ್ರ ವಶಕ್ಕೆ ಕೈ ತವಕ

1—ewqewqe

IPL; ಅಗ್ರಸ್ಥಾನಿ ರಾಜಸ್ಥಾನ್‌-ಲಕ್ನೋ: ಬಲಿಷ್ಠರ ಸೆಣಸಾಟ

congress

BJP ಅಭ್ಯರ್ಥಿ ಅವಿರೋಧ ಆಯ್ಕೆ: ಸೂರತ್‌ನ ಕಾಂಗ್ರೆಸ್‌ ಅಭ್ಯರ್ಥಿ ಉಚ್ಚಾಟನೆ

1-visa

India VISA ನೀತಿ ಬಗ್ಗೆ ಅಲ್ಲಿನ ಸರಕಾರ ಮಾತನಾಡಲಿ: ಅಮೆರಿಕ


ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು

ಬೇಸಿಗೆ ಬಿಸಿಯೂಟ: 32,173 ಮಕ್ಕಳ ನೋಂದಣಿ

ಬೇಸಿಗೆ ಬಿಸಿಯೂಟ: 32,173 ಮಕ್ಕಳ ನೋಂದಣಿ

Devanahalli: ಬೇಸಿಗೆ ತಾಪಮಾನ ಹೆಚ್ಚಳ, ಇರಲಿ ಎಚ್ಚರ

Devanahalli: ಬೇಸಿಗೆ ತಾಪಮಾನ ಹೆಚ್ಚಳ, ಇರಲಿ ಎಚ್ಚರ

Doddaballapur: ಜಾತೀಯತೆಗೆ ಮಣೆ ಹಾಕದ ಕ್ಷೇತ್ರದ ‌ಮತದಾರರು

Doddaballapur: ಜಾತೀಯತೆಗೆ ಮಣೆ ಹಾಕದ ಕ್ಷೇತ್ರದ ‌ಮತದಾರರು

Lok Sabha polls: ಲೋಕಸಭೆ ಚುನಾವಣೆಯಲ್ಲಿ ಇಂದಿರಾಗಾಂಧಿ ನೆನಪು

Lok Sabha polls: ಲೋಕಸಭೆ ಚುನಾವಣೆಯಲ್ಲಿ ಇಂದಿರಾಗಾಂಧಿ ನೆನಪು

10

Electricity problem: ಬೇಸಿಗೆ ಬೆನ್ನಲ್ಲೇ ಕಾಡುತ್ತಿದೆ ವಿದ್ಯುತ್‌ ಸಮಸ್ಯೆ

MUST WATCH

udayavani youtube

ವೈಭವದ ಹಿರಿಯಡ್ಕ ಸಿರಿಜಾತ್ರೆ ಸಂಪನ್ನ

udayavani youtube

ಯಾವೆಲ್ಲಾ ಚರ್ಮದ ಕಾಯಿಲೆಗಳಿವೆ ಹಾಗೂ ಪರಿಹಾರಗಳೇನು?

udayavani youtube

Mangaluru ಹೆಬ್ಬಾವಿನ ದೇಹದಲ್ಲಿ ಬರೋಬ್ಬರಿ 11 ಬುಲೆಟ್‌ ಪತ್ತೆ!

udayavani youtube

ನನ್ನ ಕಥೆ ನಿಮ್ಮ ಜೊತೆ

udayavani youtube

‘ಕಸಿ’ ಕಟ್ಟುವ ಸುಲಭ ವಿಧಾನ

ಹೊಸ ಸೇರ್ಪಡೆ

1-wqeqewqe

Muslim ಆದ್ಯತೆ ಹೇಳಿಕೆ ನೀಡಿಲ್ಲವೆಂದು ಸಾಬೀತುಪಡಿಸಿ: ‘ಕೈ’ಗೆ ಮೋದಿ ಸವಾಲು

1-qweqewqe

IPL;ಮುಂಬೈ ಇಂಡಿಯನ್ಸ್‌ ಎದುರಾಳಿ: ಸೇಡಿನ ತವಕದಲ್ಲಿ ಡೆಲ್ಲಿ

Akki

Report; 2023ರಲ್ಲಿ 28.2 ಕೋಟಿ ಜನರಿಗೆ ತೀವ್ರ ಆಹಾರ ಬಿಕ್ಕಟ್ಟು

SHriramulu (2)

BJP ಶ್ರೀರಾಮುಲುಗೆ ಗೆಲುವು ಅನಿವಾರ್ಯ; ಕ್ಷೇತ್ರ ವಶಕ್ಕೆ ಕೈ ತವಕ

1—ewqewqe

IPL; ಅಗ್ರಸ್ಥಾನಿ ರಾಜಸ್ಥಾನ್‌-ಲಕ್ನೋ: ಬಲಿಷ್ಠರ ಸೆಣಸಾಟ

Thanks for visiting Udayavani

You seem to have an Ad Blocker on.
To continue reading, please turn it off or whitelist Udayavani.