ಮಕ್ಕಳ ಹಕ್ಕುಗಳ ಜಾಗೃತಿ ಸಪ್ತಾಹ ಉದ್ಘಾಟನೆ


Team Udayavani, Nov 15, 2019, 2:44 PM IST

br-tdy-1

ದೊಡ್ಡಬಳ್ಳಾಪುರ; ದೇಶದಲ್ಲಿ ಇಂದಿಗೂ ಗಣನೀಯ ಸಂಖ್ಯೆಯಲ್ಲಿ ಮಕ್ಕಳ ಹಕ್ಕುಗಳ ಉಲ್ಲಂಘನೆ ಪ್ರಕರಣಗಳು ವರದಿಯಾಗುತ್ತಿದ್ದು, ಸಮಾಜದ ಅತ್ಯಂತ ಕೆಳಸ್ತರದಲ್ಲಿ ಒತ್ತಾಯಪೂರ್ವಕವಾಗಿ, ಕಾನೂನು ಬಾಹಿರವಾಗಿ ದುಡಿಯುತ್ತಿರುವ ಮಕ್ಕಳ ರಕ್ಷಣೆಗೂ ನೀಡಬೇಕಿದೆ ಎಂದು ಹಿರಿಯ ಸಿವಿಲ್‌ ನ್ಯಾಯಾಧೀಶ ಮತ್ತು ಜಿಲ್ಲಾ ಕಾನೂನು ಸೇವಾ ಪ್ರಾಧಿಕಾರದ ಸದಸ್ಯ ಕಾರ್ಯದರ್ಶಿ ನ್ಯಾ. ಆರ್‌.ನಟೇಶ್‌ ತಿಳಿಸಿದರು.

ಬೆಂಗಳೂರು ಗ್ರಾಮಾಂತರ ಜಿಲ್ಲಾಡಳಿತ, ಜಿಲ್ಲಾ ಕಾನೂನು ಸೇವೆಗಳ ಪ್ರಾಧಧಿಕಾರ, ಮಕ್ಕಳ ಸಹಾಯವಾಣಿ, ಜಿಲ್ಲಾ ಮಕ್ಕಳ ರಕ್ಷಣಾ ಘಟಕ ಹಾಗೂ ತಾಲೂಕು ಕಾನೂನು ಸೇವಾ ಸಮಿತಿಯ ಸಹಯೋಗದಲ್ಲಿ ಇಲ್ಲಿನ ಶ್ರೀದೇವರಾಜ ಅರಸ್‌ ವ್ಯವಹಾರ ನಿರ್ವಹಣಾ ಮಹಾವಿದ್ಯಾಲಯದ ಸಭಾಂಗಣದಲ್ಲಿ ನಡೆದ ಮಕ್ಕಳ ದಿನಾಚರಣೆ-2019, ಚೈಲ್ಡ್ ಲೈನ್ಸೇ  ದೋಸ್ತಿ  ಜಿಲ್ಲಾ ಮಕ್ಕಳ ಹಕ್ಕುಗಳ ಜಾಗೃತಿ  ಸಪ್ತಾಹದ ಉದ್ಘಾಟನಾ ಸಮಾರಂಭದಲ್ಲಿ ಅವರು ಮಾತನಾಡಿದರು. ಮಕ್ಕಳ ಹಕ್ಕುಗಳ ರಕ್ಷಣೆಗೆ ಸಾಂವಿಧಾನಿಕ ನಿಯಮಾವಳಿಗಳ ಪಾಲನೆ ಅಗತ್ಯವಾಗಿದೆ. ಉತ್ತಮ ಸಮಾಜ ನಿರ್ಮಾಣಕ್ಕಾಗಿ ಅಸುರಕ್ಷಿತ ವಲಯದ ಮಕ್ಕಳ ರಕ್ಷಣೆ ಅತ್ಯಗತ್ಯ. ಮುಕ್ತ ಅಭಿಪ್ರಾಯಗಳ ವಿನಿಮಯ ಪ್ರಯತ್ನ ಅತ್ಯಗತ್ಯವಾಗಿದ್ದು, ಎಲ್ಲ ಮಕ್ಕಳಿಗೂ ಸಾಂವಿಧಾನಿಕವಾಗಿ ಶಿಕ್ಷಣ, ಸಾಮಾಜಿಕ ನ್ಯಾಯ, ಸಾಂಸ್ಕೃತಿಕ ಅವಕಾಶಗಳು ದೊರೆಯಬೇಕು.

ಇವುಗಳಿಂದ ತಡೆಯುವ ಅಥವಾ ವಂಚಿಸುವ ಪ್ರಕರಣಗಳು ನಡೆದರೆ ಅದು ಶಿಕ್ಷಾರ್ಹ. ಅವಕಾಶ ಮತ್ತು ಸೌಲಭ್ಯ ವಂಚಿತ ಮಕ್ಕಳು ಸಮಾಜದ ಮುಖ್ಯವಾಹಿನಿಗೆ ಬರಬೇಕು ಎಂದ ಅವರು, ಹಲವು ಸಂದರ್ಭದಲ್ಲಿ ಸಮಾಜದಿಂದ ವಂಚನೆಗೊಳಗಾದ ಮಕ್ಕಳು ಭವಿಷ್ಯದಲ್ಲಿ ಸಮಾಜ ಕಂಟಕ ಶಕ್ತಿಗಳಾಗಿ ಬೆಳೆಯುವ ಸಾಧ್ಯತೆಗಳಿರುತ್ತವೆ. ಅದನ್ನು ನಿಗ್ರಹಿಸುವ ನಿಟ್ಟಿನಲ್ಲಿ ಸಮಾನ ಅವಕಾಶಗಳು ಅಗತ್ಯ ಎಂದರು.

ಸಹಾಯವಾಣಿ ನೆರವು ಪಡೆಯಿರಿ: ವಿವೇಚನಾ ಬದ್ದವಾಗಿ ಕಾನೂನುಗಳನ್ನು ಬಳಕೆ ಮಾಡಿಕೊಳ್ಳಬೇಕು. ಸೂಕ್ಷ್ಮಒಳನೋಟಗಳೊಂದಿಗೆ ಸ್ಪಂದಿಸುವ ಕಾನೂನುಗಳನ್ನು ಪಾಲನೆ ಮಾಡಬೇಕಾದ ಅನಿವಾರ್ಯತೆ ಇದೆ. ಕಾನೂನು ಪ್ರಕಾರ ತಂದೆ-ತಾಯಿ ಇದ್ದರೂ, ಅವರು ಅಗತ್ಯ ಕಾಳಜಿ ವಹಿಸದೇ ಹೋದಾಗ ಮಕ್ಕಳ ರಕ್ಷಣಾ ಘಟಕಕ್ಕೆ ದೂರು ನೀಡಬಹುದು. ಅಂತಹ ಮಕ್ಕಳನ್ನು ರಕ್ಷಿಸಿ ಅಗತ್ಯ ನೆರವನ್ನೂ ಒದಗಿಸುವ ಅವಕಾಶ ಇದೆ. ಯಾವುದೇ ದೌರ್ಜನ್ಯ ಇತ್ಯಾದಿ ಪ್ರಕರಣಗಳಿಗೆ ಸಂಬಂಧಿಸಿದಂತೆ ಸಹಾಯವಾಣಿ 1098ಕ್ಕೆ ಕರೆ ಮಾಡಬಹುದು ಎಂದರು.

ಜಿಲ್ಲಾ ಮಕ್ಕಳ ಕಲ್ಯಾಣ ಸಮಿತಿ ಅಧ್ಯಕ್ಷ ರಾಮು ಜೋಗಿಹಳ್ಳಿ ಮಾತನಾಡಿ, ಮಕ್ಕಳ ಹಕ್ಕುಗಳ ರಕ್ಷಣೆ ಎಲ್ಲ ಇಲಾಖೆಗಳ ಜವಾಬ್ದಾರಿ. ಆದರೆ ಈ ವಿಚಾರ ಬಂದಾಗ ಕೆಲ ಆಯ್ದ ಇಲಾಖೆಗಳು ಕಾಳಜಿ ತೋರುವುದನ್ನು ಬಿಟ್ಟರೆ ಉಳಿದ ಹಲವು ಇಲಾಖೆಗಳು ಈ ಬಗ್ಗೆ ಕನಿಷ್ಠ ಕಾಳಜಿಯನ್ನೂ ಹೊಂದಿಲ್ಲ. ಮಕ್ಕಳ ವಿಚಾರದಲ್ಲಿ ಅನಾಥ ಎಂಬ ಪದ ಬಳಕೆ ಬಗ್ಗೆ ಆಕ್ಷೇಪವಿದೆ. ಕಾನೂನಿನ ಪ್ರಕಾರ ಯಾರೂ ಅನಾಥರಲ್ಲ. ತಂದೆ-ತಾಯಿ ಇಲ್ಲದಿರುವ ಮಕ್ಕಳಿಗೆ ಸಮಾಜವೇ ತಂದೆ- ತಾಯಿಯಾಗಿರುತ್ತದೆ ಎಂದರು.

ಕಾರ್ಯಕ್ರಮಕ್ಕೆ ಚಾಲನೆ ನೀಡಿದಶ್ರೀದೇವರಾಜ ಅರಸ್‌ ಶಿಕ್ಷಣ ಸಂಸ್ಥೆ ನಿರ್ದೇಶಕ ಜೆ.ರಾಜೇಂದ್ರ, ಮಕ್ಕಳನ್ನು ಅಸುರಕ್ಷಿತ ಪ್ರದೇಶಗಳಿಂದ ರಕ್ಷಿಸಿ ಸುಭದ್ರ ಬದುಕನ್ನು ನೀಡುವುದು ಎಲ್ಲರ ಕರ್ತವ್ಯವಾಗಬೇಕು. ದೇಶ ಸ್ವಾತಂತ್ರ್ಯ ಪಡೆದು 72 ವರ್ಷಗಳಾದರೂ ಎಲ್ಲ ಮಕ್ಕಳು ಸಮರ್ಥನೀಯ ಹಾಗೂ ಸಮಾನ ಅವಕಾಶದ ಬದುಕನ್ನು ಪಡೆಯುವುದು ಸಾಧ್ಯವಾಗಿಲ್ಲ ಎಂಬುದು ವಿಷಾದನೀಯ ಎಂದರು.

ಶ್ರೀ ದೇವರಾಜ ಅರಸ್‌ ವ್ಯವಹಾರ ನಿರ್ವಹಣಾ ಮಹಾವಿದ್ಯಾಲಯದ ಪ್ರಾಂಶು ಪಾಲ .ಕೆ.ಆರ್‌.ರವಿಕಿರಣ್‌ ಅಧ್ಯಕ್ಷತೆ ವಹಿಸಿ ಮಾತನಾಡಿದರು. ಗ್ರಾಮೀಣ ಅಭ್ಯುದಯ ಸೇವಾ ಸಂಸ್ಥೆಯ ಮಕ್ಕಳ ಸಹಾಯವಾಣಿ ಉಪಕೇಂದ್ರದ ನಿರ್ದೇಶಕಿ ಅಮಲಿ ನಾಯ್ಕ, ಜಿಲ್ಲಾ ಬಾಲಕಾರ್ಮಿಕ ಯೋಜನಾ ಸೊಸೆ„ಟಿ ಯೋಜನಾ ನಿರ್ದೇಶಕ ಸುಬ್ಬರಾವ್‌, ಸಮಾಜ ಕಲ್ಯಾಣ ಇಲಾಖೆ ಸಹಾಯಕ ನಿರ್ದೇಶಕ ಸೋಮಶೇಖರ್‌, ಶಿಶು ಅಭಿವೃದ್ದಿ ಯೋಜನಾಧಿಕಾರಿ ಅನಿತಾ ಲಕ್ಷ್ಮೀ ಮಕ್ಕಳ ಸಹಾಯವಾಣಿ ಕೋಲಾಬ್‌ ಸಂಸ್ಥೆ ನಿರ್ದೇಶಕ ಗೋಪಿನಾಥ್‌,ಜಿಲ್ಲಾ ಸಂಯೋಜಕ ಎಸ್‌.ಪಿ.ಮಂಜುನಾಥ್‌, ಸಂಯೋಜಕ ಶ್ರೀನಿವಾಸ್‌, ದಿನೇಶ್‌, ಪ್ರೌ ಢಶಾಲೆ ಮುಖ್ಯಶಿಕ್ಷಕ ಜಿಯಾವುಲ್ಲಾಖಾನ್‌ ಮತ್ತಿತರರು ಪಾಲ್ಗೊಂಡಿದ್ದರು. ಅತಿಥಿಗಳಿಗೆ ಮಕ್ಕಳು ಚೈಲ್ಡ್ ಲೈನ್  ಸೇ ದೋಸ್ತಿ ಬರಹದ ಸಂಕಲ್ಪ ಕಂಕಣ ತೊಡಿಸಿದರು.

ಟಾಪ್ ನ್ಯೂಸ್

Arunachal Village: ಕೇವಲ ಒಂದು ಮತಕ್ಕಾಗಿ ಚುನಾವಣಾ ಅಧಿಕಾರಿಗಳ 40 ಕಿ.ಮೀ ಕಾಲ್ನಡಿಗೆ!

Arunachal Village: ಕೇವಲ ಒಂದು ಮತಕ್ಕಾಗಿ ಚುನಾವಣಾ ಅಧಿಕಾರಿಗಳ 40 ಕಿ.ಮೀ ಕಾಲ್ನಡಿಗೆ!

SSLC ಪರೀಕ್ಷೆ ವೇಳೆ ಉತ್ತರ ತೋರಿಸಲಿಲ್ಲ ಎಂದು ಸಹಪಾಠಿಗೆ ಚಾಕು ಇರಿದ ವಿದ್ಯಾರ್ಥಿಗಳು

SSLC ಪರೀಕ್ಷೆ ವೇಳೆ ಉತ್ತರ ತೋರಿಸಲಿಲ್ಲ ಎಂದು ಸಹಪಾಠಿಗೆ ಚಾಕು ಇರಿದ ವಿದ್ಯಾರ್ಥಿಗಳು

Shocking: ಮುಸುಧಾರಿಗಳಿಂದ ಗುರುದ್ವಾರದ ಸಿಬಂದಿಯ ಗುಂಡಿಕ್ಕಿ ಹತ್ಯೆ… ಭಯಾನಕ ದೃಶ್ಯ ಸೆರೆ

Shocking: ಮುಸುಧಾರಿಗಳಿಂದ ಗುರುದ್ವಾರದ ಸಿಬ್ಬಂದಿಯ ಗುಂಡಿಕ್ಕಿ ಹತ್ಯೆ.. ಭಯಾನಕ ದೃಶ್ಯ ಸೆರೆ

6-bng

Bengaluru: ಪೇಂಟರ್‌ ಕೊಂದು ಪೊಲೀಸ್‌ ಠಾಣೆಗೆ ಬಂದು ಸಿಕ್ಕಿಬಿದ್ದ ಸ್ನೇಹಿತರು

Loksabha Poll: ತಮಿಳುನಾಡು ಮಾಜಿ ಕಾಂಗ್ರೆಸ್‌ ನಾಯಕ ಈಗ ಬಿಜೆಪಿ ರಾಷ್ಟ್ರೀಯ ವಕ್ತಾರ

Loksabha Poll: ತಮಿಳುನಾಡು ಮಾಜಿ ಕಾಂಗ್ರೆಸ್‌ ನಾಯಕ ಈಗ ಬಿಜೆಪಿ ರಾಷ್ಟ್ರೀಯ ವಕ್ತಾರ

5-bng

Bengaluru: ಪ್ರೀತಿಸಿ ಮದುವೆ ಆಗುವುದಾಗಿ ಅಂಗವಿಕಲ ಯುವತಿಗೆ ವಂಚನೆ

ಕಾಂಗ್ರೆಸ್ ನವರು ಕೇಸರಿ ಶಾಲು ಹಾಕಿದಾಕ್ಷಣ ಮನಸ್ಥಿತಿ ಬದಲಾಗಲ್ಲ… ಶೆಟ್ಟರ್ ಆರೋಪ

ಕಾಂಗ್ರೆಸ್ ನವರು ಕೇಸರಿ ಶಾಲು ಹಾಕಿದಾಕ್ಷಣ ಮನಸ್ಥಿತಿ ಬದಲಾಗಲ್ಲ… ಶೆಟ್ಟರ್ ಆರೋಪ


ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು

10

Electricity problem: ಬೇಸಿಗೆ ಬೆನ್ನಲ್ಲೇ ಕಾಡುತ್ತಿದೆ ವಿದ್ಯುತ್‌ ಸಮಸ್ಯೆ

Kanakapura ಚುನಾವಣೆ ಉಸ್ತುವಾರಿ ಹೊಣೆ ನಾನೇ ಹೊತ್ತುಕೊಳ್ಳುವೆ: ಸಿಪಿವೈ

Kanakapura ಚುನಾವಣೆ ಉಸ್ತುವಾರಿ ಹೊಣೆ ನಾನೇ ಹೊತ್ತುಕೊಳ್ಳುವೆ: ಸಿಪಿವೈ

Lok sabha polls: ಬೆಂ. ಗ್ರಾಮಾಂತರ; ಡಾ.ಮಂಜುನಾಥ್‌ ಸ್ಪರ್ಧೆ

Lok sabha polls: ಬೆಂ. ಗ್ರಾಮಾಂತರ; ಡಾ.ಮಂಜುನಾಥ್‌ ಸ್ಪರ್ಧೆ

Bannerghatta Biological Park: ಚಿರತೆ ಮರಿಗಳಿಗೆ ಉದ್ಯಾನವನದ ಸಿಬ್ಬಂದಿ ಆಸರೆ

Bannerghatta Biological Park: ಚಿರತೆ ಮರಿಗಳಿಗೆ ಉದ್ಯಾನವನದ ಸಿಬ್ಬಂದಿ ಆಸರೆ

Road Dispute: ರಸ್ತೆ ವಿವಾದ; ಪೊಲೀಸ್‌ ಠಾಣೆ ಮೆಟ್ಟಿಲೇರಿದ ಪ್ರಕರಣ

Road Dispute: ರಸ್ತೆ ವಿವಾದ; ಪೊಲೀಸ್‌ ಠಾಣೆ ಮೆಟ್ಟಿಲೇರಿದ ಪ್ರಕರಣ

MUST WATCH

udayavani youtube

ಟೌನಶಿಪ್’ನ ಬಾಡಿಗೆ ಮನೆಯೊಂದರಲ್ಲಿ ಕಳ್ಳತನ ರೂ: 47 ಸಾವಿರ ಕಳವು

udayavani youtube

ವಿಶ್ವ ಗುಬ್ಬಚ್ಚಿಗಳ ದಿನ | ಈ ಮನೆ ನೂರಾರು ಗುಬ್ಬಚ್ಚಿಗಳ ತವರು

udayavani youtube

ಬಡವರ ಸೇವೆಯೇ ಶ್ರೀರಾಮ ದೇವರ ಸೇವೆ : ಪೇಜಾವರಶ್ರೀ

udayavani youtube

ಕೆಂಪು ಹರಿವೆ ಸೊಪ್ಪು ಬೆಳೆಯುವ ಸೂಕ್ತ ವಿಧಾನ

udayavani youtube

ರಾಜಕೀಯದತ್ತ ಒಲವು ತೋರಿದ್ರಾ ಚಕ್ರವರ್ತಿ ಸೂಲಿಬೆಲೆ ?

ಹೊಸ ಸೇರ್ಪಡೆ

Arunachal Village: ಕೇವಲ ಒಂದು ಮತಕ್ಕಾಗಿ ಚುನಾವಣಾ ಅಧಿಕಾರಿಗಳ 40 ಕಿ.ಮೀ ಕಾಲ್ನಡಿಗೆ!

Arunachal Village: ಕೇವಲ ಒಂದು ಮತಕ್ಕಾಗಿ ಚುನಾವಣಾ ಅಧಿಕಾರಿಗಳ 40 ಕಿ.ಮೀ ಕಾಲ್ನಡಿಗೆ!

SSLC ಪರೀಕ್ಷೆ ವೇಳೆ ಉತ್ತರ ತೋರಿಸಲಿಲ್ಲ ಎಂದು ಸಹಪಾಠಿಗೆ ಚಾಕು ಇರಿದ ವಿದ್ಯಾರ್ಥಿಗಳು

SSLC ಪರೀಕ್ಷೆ ವೇಳೆ ಉತ್ತರ ತೋರಿಸಲಿಲ್ಲ ಎಂದು ಸಹಪಾಠಿಗೆ ಚಾಕು ಇರಿದ ವಿದ್ಯಾರ್ಥಿಗಳು

7-bng

Bengaluru: ಸಾಲ ವಸೂಲಿ ಹೆಸರಲ್ಲಿ ಆಟೋ ವಶ, ಧರ್ಮ ನಿಂದನೆ: ಬಂಧನ

Shocking: ಮುಸುಧಾರಿಗಳಿಂದ ಗುರುದ್ವಾರದ ಸಿಬಂದಿಯ ಗುಂಡಿಕ್ಕಿ ಹತ್ಯೆ… ಭಯಾನಕ ದೃಶ್ಯ ಸೆರೆ

Shocking: ಮುಸುಧಾರಿಗಳಿಂದ ಗುರುದ್ವಾರದ ಸಿಬ್ಬಂದಿಯ ಗುಂಡಿಕ್ಕಿ ಹತ್ಯೆ.. ಭಯಾನಕ ದೃಶ್ಯ ಸೆರೆ

6-bng

Bengaluru: ಪೇಂಟರ್‌ ಕೊಂದು ಪೊಲೀಸ್‌ ಠಾಣೆಗೆ ಬಂದು ಸಿಕ್ಕಿಬಿದ್ದ ಸ್ನೇಹಿತರು

Thanks for visiting Udayavani

You seem to have an Ad Blocker on.
To continue reading, please turn it off or whitelist Udayavani.