ಯುವಕ, ಯುವತಿಯರ ಫೋಟೋ ಸಂಗ್ರಹಿಸಿ ಅಶ್ಲೀಲ ಪೋಸ್ಟರ್ ಎಡಿಟ್ : ಕಿಡಿಗೇಡಿಗಳ ಸೆರೆ
Team Udayavani, Feb 16, 2022, 1:27 PM IST
ವಿಜಯಪುರ: ಯುವಕ, ಯುವತಿಯರ, ಭಾವಚಿತ್ರಗಳನ್ನು ಸಂಗ್ರಹಿಸಿ, ಅವರ ಪೋಟೋಗಳನ್ನು ಬಳಕೆ ಮಾಡಿಕೊಂಡು, ಅಶ್ಲೀಲ ಸಂದೇಶಗಳನ್ನು ಸಿದ್ದಪಡಿಸಿ, ಯುವತಿಯರ ಬಗ್ಗೆ ಅವಹೇಳನಕಾರಿಯಾಗಿ ಸಾಮಾಜಿಕ ಜಾಲತಾಣಗಳಲ್ಲಿ ಪೋಸ್ಟ್ ಮಾಡುತ್ತಿದ್ದ ಆರೋಪದಡಿಯಲ್ಲಿ ಮೂರು ಮಂದಿ ಯುವಕರನ್ನು ಪೊಲೀಸರು ವಶಕ್ಕೆ ಪಡೆದು ವಿಚಾರಣೆ ನಡೆಸುತ್ತಿದ್ದಾರೆ.
ಚನ್ನರಾಯಪಟ್ಟಣ ಹೋಬಳಿ ಚೀಮಾಚನಹಳ್ಳಿ ಗ್ರಾಮದ 22 ವರ್ಷದ ನಿತಿನ್, 36 ವರ್ಷದ ಮುನಿರಾಜು, ನಲ್ಲಪನಹಳ್ಳಿ ಗ್ರಾಮದ 22 ವರ್ಷದ ಆಕಾಶ್ ಎಂಬುವವರನ್ನು ವಶಕ್ಕೆ ಪಡೆದು ವಿಚಾರಣೆ ನಡೆಸಲಾಗುತ್ತಿದೆ ಎಂದು ಸರ್ಕಲ್ ಇನ್ಸ್ಪೆಕ್ಟರ್ ಬಸವನಗೌಡ.ಕೆ.ಪಾಟೀಲ್ ತಿಳಿಸಿದ್ದಾರೆ.
ಗ್ರಾಮದ ಯುವಕ, ಯುವತಿಯರು ಹಾಗೂ ಸಮಾಜದಲ್ಲಿ ಉತ್ತಮ ಹೆಸರು ಗಳಿಸಿಕೊಂಡಿರುವವರ ಭಾವಚಿತ್ರಗಳನ್ನು ಸಂಗ್ರಹಿಸಿ, ಅವರ ಮುಖಗಳನ್ನು ಅಶ್ಲೀಲ ಪೋಟೊಗಳಿಗೆ ಅಳವಡಿಸುವುದು, ಹೆಣ್ಣು ಮಕ್ಕಳ ಬಗ್ಗೆ ಅಸಭ್ಯವಾದ ಮೆಸೇಜ್ಗಳನ್ನು ಇನ್ಸ್ಟಾ ಗ್ರಾಂ ನಲ್ಲಿ ಹರಿದುಬಿಟ್ಟಿದ್ದರು. ಈ ಕುರಿತು ಚನ್ನರಾಯಪಟ್ಟಣ ಠಾಣೆಯಲ್ಲಿ ದೂರು ದಾಖಲಾಗಿತ್ತು. ಇಂತಹ ಪ್ರಕರಣಗಳಿಗೆ ಸಂಬಂಧಿಸಿದಂತೆ ಯಲಹಂಕ ಠಾಣೆಯಲ್ಲೂ ದೂರು ದಾಖಲಾಗಿತ್ತು.
ಅಲ್ಲದೆ ಶಾಸಕ ನಿಸರ್ಗ ನಾರಾಯಣಸ್ವಾಮಿ ಅವರ ಬಗ್ಗೆಯೂ ಅವಹೇಳನಕಾರಿಯಾಗಿ ಪೋಸ್ಟ್ ಹಾಕಲಾಗಿದ್ದು, ಆರೋಪಿಗಳನ್ನು ಬಂಧಿಸಿ ವಿಚಾರಣೆ ನಡೆಸುತ್ತಿದ್ದೇವೆ ಎಂದು ಪೊಲೀಸರು ಹೇಳಿದರು.
ಟಾಪ್ ನ್ಯೂಸ್
ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು
MUST WATCH
ಹೊಸ ಸೇರ್ಪಡೆ
ಧಾರವಾಡ: “ಶ್ರೀರಾಮ-ಕೃಷ್ಣರ ಜೀವನ ಇಂದಿಗೂ ಆದರ್ಶ’
Kollywood: ಅಜಿತ್ ಹುಟ್ಟುಹಬ್ಬಕ್ಕೆ ಸೂಪರ್ ಹಿಟ್ ʼಬಿಲ್ಲಾʼ ರೀ ರಿಲೀಸ್; ಫ್ಯಾನ್ಸ್ ಖುಷ್
Kaup: ಎ.25ರಿಂದ ಕಳತ್ತೂರು ಶ್ರೀ ಮಹಾಲಿಂಗೇಶ್ವರ ದೇವಸ್ಥಾನದಲ್ಲಿ ಬ್ರಹ್ಮಕಲಶೋತ್ಸವ, ನಾಗಮಂಡಲ
Malicious Calls; ಜ್ಞಾನವ್ಯಾಪಿ ಮಸೀದಿ ಸರ್ವೆ ತೀರ್ಪು ನೀಡಿದ್ದ ಜಡ್ಜ್ ಗೆ ಬೆದರಿಕೆ ಕರೆ
ಬಂಟರು ಹಾಗೂ ಬಿಲ್ಲವರು ಮೊಗವೀರರ ಎರಡು ಕಣ್ಣುಗಳಿದ್ದಂತೆ: ಕಿರಣ್ ಕುಮಾರ್ ಉದ್ಯಾವರ